ರಥ ಸಪ್ತಮಿ – ಕೋಟೆ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿದ ಯದುವೀರ್

Public TV
0 Min Read
yaduveer 2

ಮೈಸೂರು: ಇಂದು ರಥ ಸಪ್ತಮಿ ಹಿನ್ನೆಲೆಯಲ್ಲಿ ಮೈಸೂರು ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಉತ್ಸವ ಮೂರ್ತಿಗೆ ರಾಜವಂಶಸ್ಥ ಯದುವೀರ್ ವಿಶೇಷ ಪೂಜೆ ಸಲ್ಲಿಸಿದರು.

yaduveer

ಕೋಟೆ ಆಂಜನೇಯ ದೇವಾಲಯ ಮುಂಭಾಗ ಮೈಸೂರು ಯೋಗ ಒಕ್ಕೂಟ ಪ್ರತಿ ವರ್ಷದಂತೆ ಈ ವರ್ಷವೂ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಆಯೋಜಿಸಿತ್ತು. ಇದರಲ್ಲಿ ನೂರಾರು ಯೋಗ ಪಟುಗಳು ಭಾಗವಹಿಸಿ 108 ಸೂರ್ಯ ವಂದನೆ ಮಾಡಿದರು.

yaduveer 1

ಈ ಸಂದರ್ಭದಲ್ಲಿ ಭಗವಾನ್ ಸೂರ್ಯ ನಾರಾಯಣ ಭಾವ ಚಿತ್ರವನ್ನು ಇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

Share This Article
Leave a Comment

Leave a Reply

Your email address will not be published. Required fields are marked *