Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿರ್ಣಾಯಕ ‘ಪಂಚಮ’ ಕಹಳೆಗೆ ತತ್ತರಿಸಿದ ಸರ್ಕಾರ – ಯತ್ನಾಳ್ ರಾಜಕೀಯ ದಾಳ, ಫಲಕೊಡದ ಸಿಎಂ ಸಂಧಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿರ್ಣಾಯಕ ‘ಪಂಚಮ’ ಕಹಳೆಗೆ ತತ್ತರಿಸಿದ ಸರ್ಕಾರ – ಯತ್ನಾಳ್ ರಾಜಕೀಯ ದಾಳ, ಫಲಕೊಡದ ಸಿಎಂ ಸಂಧಾನ

Bengaluru City

ನಿರ್ಣಾಯಕ ‘ಪಂಚಮ’ ಕಹಳೆಗೆ ತತ್ತರಿಸಿದ ಸರ್ಕಾರ – ಯತ್ನಾಳ್ ರಾಜಕೀಯ ದಾಳ, ಫಲಕೊಡದ ಸಿಎಂ ಸಂಧಾನ

Public TV
Last updated: February 21, 2021 7:49 pm
Public TV
Share
3 Min Read
Panchamasali 1 2
SHARE

– ಸರ್ಕಾರಕ್ಕೆ ಮಾರ್ಚ್ 4ರವರೆಗೂ ಡೆಡ್‍ಲೈನ್
– ಇಕ್ಕಟ್ಟಿನಲ್ಲಿ ಸಿಎಂ ಬಿಎಸ್‍ವೈ

ಬೆಂಗಳೂರು: 2ಎ ಮೀಸಲಾತಿಗೆ ಆಗ್ರಹಿಸಿ ಏಳುನೂರಕ್ಕೂ ಹೆಚ್ಚು ಕಿಲೋಮೀಟರ್ ದೂರವನ್ನು ಪಾದಯಾತ್ರೆ ಮೂಲಕ ಕ್ರಮಿಸಿದ ಪಂಚಮಸಾಲಿ ಸಮುದಾಯದ ಲಕ್ಷಾಂತರ ಮಂದಿ ಬೆಂಗಳೂರಿನಲ್ಲಿ ಪಂಚಮ ಪಾಂಚಜನ್ಯ ಮೊಳಗಿಸಿದ್ದಾರೆ. ಪಂಚಮಸಾಲಿ ಸಮುದಾಯದ ಹೋರಾಟವನ್ನು ನಿಲ್ಲಿಸಬೇಕೆಂದು ಸಚಿವರ ಮೂಲಕ ಸಿಎಂ ಯಡಿಯೂರಪ್ಪ ಮಾಡಿದ ಒಂದೇ ಒಂದು ತಂತ್ರವೂ ಫಲ ಕೊಡಲಿಲ್ಲ. ಬದಲಿಗೆ ಮೀಸಲು ಹೋರಾಟ ಇನ್ನಷ್ಟು ತೀವ್ರವಾಯ್ತು. ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಇಡೀ ಸಮುದಾಯ ಯತ್ನಿಸಿತು. ಅಧಿವೇಶನದಲ್ಲಿ ಅಂತಿಮ ನಿರ್ಣಯ ಆಗಲೇಬೇಕು. ಎಂಬ ಒಕ್ಕೊರಲ ನಿರ್ಣಯವನ್ನು ಸಮಾವೇಶ ತೆಗೆದುಕೊಂಡಿದೆ. ಇದರಿಂದಾಗಿ ಸಿಎಂ ಯಡಿಯೂರಪ್ಪ ಅಕ್ಷರಷಃ ಅಡಕತ್ತರಿಗೆ ಸಿಲುಕಿದ್ದಾರೆ.

Panchamasali 2 2

ಸ್ವಾಗತ ಸಮಿತಿ ಅಧ್ಯಕ್ಷ ಬಸನಗೌಡ ಪಾಟೀಲ್ ಯತ್ನಾಳ್, ಕತ್ತಿ ಝಳಪಿಸುವ ಮೂಲಕ, ವಿಜಯಾನಂದ ಕಾಶಪ್ಪನವರ್ ಕಹಳೆ ಊದುವ ಮೂಲಕ ಬೃಹತ್ ಸಮಾವೇಶಕ್ಕೆ ಚಾಲನೆ ನೀಡಿದರು. ಸಮಾವೇಶ ಉದ್ದೇಶಿಸಿ ಮಾತನಾಡಿದ ಜಯಮೃತ್ಯುಂಜಯ ಸ್ವಾಮೀಜಿ, ಇದು ಮುಕ್ತಾವಯಲ್ಲ, ಶಕ್ತಿ ಪ್ರದರ್ಶನ. ಯಾರೇನೇ ಒತ್ತಡ ಹೇರಿದರೂ ಮೀಸಲಾತಿ ಸಿಗೋವರೆಗೂ ಹೋರಾಟ ನಿಲ್ಲಿಸಲ್ಲ. ಮಾರ್ಚ್ 4ರವರೆಗೂ ಶಾಂತಿಯುತ ಧರಣಿ ಮಾಡೋದಾಗಿ ಘೋಷಿಸಿದರು.

Panchamasali 13

ಸಚಿವರ ಮನವೊಲಿಕೆ ಫುಲ್ ಫೇಲ್: ಸಿಎಂ ಸಂದೇಶ ತಂದಿದ್ದ ಸಚಿವ ಸಿಸಿ ಪಾಟೀಲ್ ಮಾತನಾಡಿ, ನಮ್ಮ ಹೋರಾಟಕ್ಕೆ ಸಿಎಂ ಬೆಂಬಲ ಸೂಚಿಸಿದ್ದಾರೆ. ಹಿಂದುಳಿದ ಆಯೋಗಕ್ಕೆ ವರದಿ ನೀಡುವಂತೆ ಸೂಚಿಸಿದ್ದಾರೆ. ಏಕಾಏಕಿ ತೀರ್ಮಾನ ಕೈಗೊಂದರೆ ಬೇರೆಯವರು ನ್ಯಾಯಾಲಯಕ್ಕೆ ಹೋಗಬಹುದು ಎನ್ನುತ್ತಲೇ ಸಭಿಕರು ಘೋಷಣೆ ಕೂಗಿದರು. ಆದ್ರೂ ಮಾತು ಮುಂದುವರೆಸಿದ ಸಿಸಿ ಪಾಟೀಲ್, ಸಮಾವೇಶದ ನಂತರ ಪ್ರತಿಭಟನೆ ಕೈಬಿಡಿ ಮನವಿ ಮಾಡಿದರು.

Panchamasali 5

ಸಚಿವ ಮುರುಗೇಶ್ ನಿರಾಣಿ ಮಾತನಾಡಿ, ಯಾರು ಚಿಂತೆ ಮಾಡುವ ಅಗತ್ಯವಿಲ್ಲ. ಮೀಸಲಾತಿ ಕೊಡಿಸುವ ಸಲುವಾಗೆ ಈ ಸಮಾವೇಶ ಮಾಡ್ತಿದ್ದೇವೆ. 70 ವರ್ಷ ಆಳಿದವರು ಏನು ಮಾಡಲಿಲ್ಲ ಅಂತಾ ಕಾಂಗ್ರೆಸ್ಸಿಗರ ಮೇಲೆ ಗೂಬೆ ಕೂರಿಸಲು ನೋಡಿದರು. ನಾವು ಕೊಟ್ಟೇ ಕೊಡ್ತೀವಿ ಸ್ವಲ್ಪ ಟೈಮ್ ಕೊಡಿ ಎಂದು ಮನವಿ ಮಾಡಿಕೊಂಡರು.

Panchamasali 4 1

ಸಚಿವರ ಭರವಸೆಯನ್ನು ಒಪ್ಪಲು ತಯಾರಿಲ್ಲದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್, ಮೂಗಿಗೆ ತುಪ್ಪ ಸವರೋ ಕೆಲಸ ಮಾಡಬೇಡಿ. ಇದು ಮಾಡು ಇಲ್ಲವೇ ಮಡಿ ಹೋರಾಟ. ಮೀಸಲಾತಿ ಸಿಗವರೆಗೂ ಮನೆಗೆ ಹೋಗಲ್ಲ. ನಾವು ವಿಧಾನಸೌಧಕ್ಕೆ ಮುತ್ತಿಗೆ ಹಾಕೇ ಹಾಕ್ತೀವಿ ಅಂತಾ ಗುಡುಗಿದರು.

Panchamasali 11

ಯತ್ನಾಳ್ ಸವಾಲ್:
ಸಚಿವರ ಭರವಸೆಯನ್ನು ನಂಬಲು ತಯಾರಿರದ ಜಯಮೃತ್ಯುಂಜಯ ಸ್ವಾಮೀಜಿ, ಮುಂದಿನ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವನ್ನು ಸ್ವಾಗತ ಸಮಿತಿ ಅಧ್ಯಕ್ಷ ಯತ್ನಾಳ್‍ಗೆ ನೀಡಿದ್ರು. ಈ ವೇಳೆ ಮಾತನಾಡಿದ ಯತ್ನಾಳ್, ನನ್ನ ಕೈಯಲ್ಲಿ ಕತ್ತಿ ಕೊಟ್ಟಿದ್ದಾರೆ. ಯಾಕೆ ಅಂದ್ರೆ ಮಾಡು ಇಲ್ಲವೇ ಮಡಿ ಅಂತಾ. ನಾವು ಬೆನ್ನಿಗೆ ಚೂರಿ ಹಾಕಲ್ಲ. ಎದುರು ಬಂದ್ರೆ ಹೊಡೆಯೋದೇ ಅಂತಾ ಅಬ್ಬರಿಸಿದರು. ಇಬ್ಬರು ಸಚಿವರು ಹೋಗಿ ಸಿಎಂಗೆ ಕೇಳಿ, ಇಲ್ಲವಾದ್ರೆ ರಾಜೀನಾಮೆ ಕೊಡ್ತಿನಿ ಅಂತಾ ಹೇಳಿರಿ.. ಅದ್ಯಾಕೆ ಮಾಡಲ್ಲ ನಾನು ನೋಡ್ತೀನಿ ಅಂತಾ ಓಪನ್ ವೇದಿಕೆಯಲ್ಲಿ ಸವಾಲು ಹಾಕಿದರು.

Panchamasali 1 1

ಶಾಸಕ ಯತ್ನಾಳ್ ಉರುಳಿಸಿದ ರಾಜಕೀಯ ದಾಳಕ್ಕೆ ಕಕ್ಕಾಬಿಕ್ಕಿಯಾದ ಸಚಿವರಿಬ್ಬರು ಕೋಪದಿಂದ ವೇದಿಕೆಯಿಂದ ಕೆಳಗಿಳಿದು ಹೊರ ನಡೆದರು. ನೇರವಾಗಿ ಸಿಎಂ ಮನೆಗೆ ಹೋಗಿ ಸಮಾವೇಶದ ವರದಿ ಒಪ್ಪಿಸಿದರು. ಇದಕ್ಕೂ ಮುನ್ನ ಜೈಲಲ್ಲಿರುವ ಮಾಜಿ ಮಂತ್ರಿ ವಿಜಯ್ ಕುಲಕರ್ಣಿ ಪತ್ನಿಯನ್ನು ವೇದಿಕೆಗೆ ಕರೆಯಿಸಿ ಸಮುದಾಯದ ಮುಖಂಡರು ಧೈರ್ಯ ತುಂಬುವ ಕೆಲಸ ಮಾಡಿದರು. ಈ ವೇಳೆ ಮಾತು ಬಾರದೇ ವಿನಯ್ ಕುಲಕರ್ಣಿ ಪತ್ನಿ ಗದ್ಗದಿತರಾದರು. ಸಮಾವೇಶದ ಮಧ್ಯೆ ಮಳೆ ಬಂದು ಕೆಲ ಕಾಲ ಜನ ಪರದಾಡಿದರು. ನಗರದಲ್ಲಿ ಟ್ರಾಫಿಕ್ ಜಾಮ್ ಕೂಡ ಕಂಡುಬಂತು.

TAGGED:Basanagowda Patil YatnalbjpcongressMurugesh niraniPanchamsaliPublic TVReservation Fightvijayananda kashappanavarಕಾಂಗ್ರೆಸ್ಪಂಚಮಸಾಲಿಪಬ್ಲಿಕ್ ಟಿವಿಬಸನಗೌಡ ಪಾಟೀಲ್ ಯತ್ನಾಳ್ಬಿಜೆಪಿಮೀಸಲಾತಿ ಹೋರಾಟಮುರುಗೇಶ್ ನಿರಾಣಿವಿಜಯಾನಂದ ಕಾಶಪ್ಪನವರ್
Share This Article
Facebook Whatsapp Whatsapp Telegram

Cinema news

Karunya Ram Samrudhi Ram
25 ಲಕ್ಷ ವಂಚನೆ – ತಂಗಿ ವಿರುದ್ಧವೇ ನಟಿ ಕಾರುಣ್ಯಾ ರಾಮ್‌ ದೂರು
Cinema Crime Latest Main Post Sandalwood
Kavya
BBK 12 | ಧ್ರುವಂತ್‌ ಔಟ್‌ – Top 6 ಸ್ಪರ್ಧಿಯಾಗಿ ಕಾವ್ಯ ಸೇಫ್‌
Cinema Latest Main Post TV Shows
Shri Mahadev
ಅಮೂಲ್ಯ ನಟನೆಯ ಪೀಕಬೂ ಚಿತ್ರಕ್ಕೆ ಶ್ರೀರಾಮ್ ಹೀರೋ
Cinema Latest Sandalwood Top Stories
bigg boss 1
Bigg Boss: ಇಂದು ಮಿಡ್‌ ವೀಕ್‌ ಎಲಿಮಿನೇಷನ್‌ – ಮನೆಯಿಂದ ಹೊರ ಹೋಗೋದ್ಯಾರು?
Cinema Latest Top Stories TV Shows

You Might Also Like

boys drown in pond in mudhol bagalkote
Bagalkot

ತಂದೆ ಎದುರೇ ಕೊಳದಲ್ಲಿ ಮುಳುಗಿ ಪ್ರಾಣ ಬಿಟ್ಟ ಬಾಲಕರು!

Public TV
By Public TV
1 minute ago
Priyank Kharge 2
Bengaluru City

ಸರ್ವ ಧರ್ಮಗ್ರಂಥಗಳ ಹೆಸರಲ್ಲಿ ರಾಜಕೀಯ ಮಾಡುವ ಬಿಜೆಪಿ ಸಂಸ್ಕೃತಿ ಕಲಿತಿಲ್ಲ: ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

Public TV
By Public TV
7 minutes ago
KH Muniyappa
Bengaluru City

ಶಿಡ್ಲಘಟ್ಟ ಕೇಸ್ | ರಾಜೀವ್‌ಗೌಡ ಮಾತನಾಡಿದ್ದು ಸರಿಯಲ್ಲ, ಕರೆದು ಬುದ್ಧಿ ಹೇಳ್ತಿನಿ: ಕೆ.ಹೆಚ್.ಮುನಿಯಪ್ಪ

Public TV
By Public TV
18 minutes ago
stone pelting in front of Reddys house over banner issue police lathi charge Ballari
Bellary

ಬಳ್ಳಾರಿ ಬ್ಯಾನರ್‌ ಬಡಿದಾಟದ ವಿಡಿಯೋ ಇದ್ದಲ್ಲಿ ಸೆಂಡ್‌ ಮಾಡಿ – ಸಿಐಡಿ ಮನವಿ

Public TV
By Public TV
23 minutes ago
Mamata Banerjee 1
Latest

ಇ.ಡಿ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ತಡೆ – ಸಿಎಂ ಮಮತಾ ಬ್ಯಾನರ್ಜಿ, ಪೊಲೀಸರಿಗೆ ನೋಟಿಸ್‌

Public TV
By Public TV
24 minutes ago
Chandravva Bagalkote
Bagalkot

ಪ್ರಭುಲಿಂಗ ದೇವರಿಗೆ 16 ಲಕ್ಷ ಮೌಲ್ಯದ ಬೆಳ್ಳಿ ಬಾಗಿಲು ಮಾಡಿಸಿದ್ದ ಅಜ್ಜಿಯ ಹತ್ಯೆ!

Public TV
By Public TV
31 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?