Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮೈಸೂರು ಮೇಯರ್‌ ಚುನಾವಣೆ – ಒಂದೇ ಕಲ್ಲಲ್ಲಿ ಮೂರು ಹಕ್ಕಿ ಹೊಡೆದ ಹೆಚ್‍ಡಿಡಿ

Public TV
Last updated: February 24, 2021 8:43 pm
Public TV
Share
3 Min Read
DEVEGOWDA
SHARE

– ಮೇಯರ್ ಚುನಾವಣೆಯಲ್ಲಿ ಬಿಗ್ ಟ್ವಿಸ್ಟ್
– ಜೆಡಿಎಸ್ ಕೇಳದಿದ್ರೂ ಕಾಂಗ್ರೆಸ್ ಬೆಂಬಲ
– ಗದ್ದುಗೆ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಶಾಕ್

ಬೆಂಗಳೂರು/ಮೈಸೂರು: ರಾಜಕೀಯ ಚದುರಂಗದಾಟದಲ್ಲಿ ಯಾವಾಗ ಯಾರು ಯಾವ ಪಾನ್ ಮೂವ್ ಮಾಡಿ, ಯಾರನ್ನು ಕಟ್ಟಿ ಹಾಕುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಕೊನೆ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು ಎನ್ನುವುದಕ್ಕೆ ಇಂದು ಮೈಸೂರಿನಲ್ಲಿ ನಡೆದ ಪಾಲಿಕೆಯ ಮೇಯರ್, ಉಪ ಮೇಯರ್ ಚುನಾವಣೆಯೇ ಸಾಕ್ಷಿ.

ಕ್ಷಣ ಕ್ಷಣಕ್ಕೂ ಟ್ವಿಸ್ಟ್‌ಗಳನ್ನು ಪಡೆದುಕೊಂಡ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಮತದಾನ ನಡೆಯುವಾಗ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಬಿಜೆಪಿಗೆ ಬಿಗ್ ಶಾಕ್ ನೀಡಿವೆ.

Mysuru Mayor Election 3

ಮೇಯರ್ ಆಗಿ ಜೆಡಿಎಸ್‍ನ ರುಕ್ಮಿಣಿ ಮಾದೇಗೌಡ, ಉಪಮೇಯರ್ ಆಗಿ ಕಾಂಗ್ರೆಸ್‍ನ ಅನ್ವರ್ ಬೇಗ್ ಆಯ್ಕೆ ಆಗಿದ್ದಾರೆ. ಬೆಳಗ್ಗೆಯಿಂದಲೂ ಬಿಜೆಪಿಗೆ ಜೆಡಿಎಸ್ ಬೆಂಬಲಿಸಬಹುದು, ಮೇಯರ್ ಸ್ಥಾನ ಬಿಜೆಪಿ ಪಾಲಾಗಬಹುದು, ಉಪಮೇಯರ್ ಸ್ಥಾನ ಜೆಡಿಎಸ್ ತೆಗೆದುಕೊಳ್ಳಬಹುದು ಎಂಬ ವಾತಾವರಣ ಇತ್ತು. ಮಾಜಿ ಸಿಎಂ ಕುಮಾರಸ್ವಾಮಿ ನಡೆಯೂ ಇದಕ್ಕೆ ಇಂಬು ನೀಡುವಂತೆ ಇತ್ತು.

ತಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಸ್ವತಂತ್ರವಾಗಿ ಕಣಕ್ಕಿಳಿಯುತ್ತೇವೆ ಎನ್ನುತ್ತಲೇ, ಕಾಂಗ್ರೆಸ್ ಸಹವಾಸ ಬೇಡ ಎಂದು ಕುಮಾರಸ್ವಾಮಿ ಗರಂ ಆಗಿ ಹೇಳಿದ್ದರು. ಈ ಹೇಳಿಕೆಯಿಂದ ಕುಮಾರಸ್ವಾಮಿ ಬಿಜೆಪಿಯನ್ನು ಬೆಂಬಲಿಸಬಹುದು ಎನ್ನಲಾಗಿತ್ತು.

ಮೂರು ಪಕ್ಷಗಳು ಸಹ ಮೇಯರ್, ಉಪಮೇಯರ್ ಸ್ಥಾನಕ್ಕೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು. ಇತ್ತ ಕೊನೆ ಕ್ಷಣದವರೆಗೂ ಮೇಯರ್‌ ಗಿರಿಗೆ ಪ್ರಯತ್ನಿಸಿದ್ದ ಕಾಂಗ್ರೆಸ್, ಇದು ಸಾಧ್ಯವಿಲ್ಲ ಎಂದು ಅರಿತೊಡನೆ ತನ್ನ ಕಾರ್ಯತಂತ್ರವನ್ನು ಏಕಾಏಕಿ ಬದಲು ಮಾಡಿತು. ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಏಕೈಕ ಉದ್ದೇಶದಿಂದ ಜೆಡಿಎಸ್ ಬೆಂಬಲ ಕೇಳದೇ ಇದ್ದರೂ ಆ ಪಕ್ಷದ ಮೇಯರ್ ಅಭ್ಯರ್ಥಿಗೆ ಕಾಂಗ್ರೆಸ್ ತನ್ನೆಲ್ಲಾ ಮತಗಳನ್ನು ಹಾಕಿತು.

ಅದರಲ್ಲೂ ಅಚ್ಚರಿ ಏನೆಂದರೆ ಕಾಂಗ್ರೆಸ್, ತನ್ನ ಅಭ್ಯರ್ಥಿಗೆ ಮತ ಹಾಕಲಿಲ್ಲ. ಕಾಂಗ್ರೆಸ್ ಮೇಯರ್ ಅಭ್ಯರ್ಥಿ ಕೂಡ ಜೆಡಿಎಸ್‍ಗೆ ವೋಟ್ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಜೆಡಿಎಸ್ ಸದಸ್ಯರು, ಕಾಂಗ್ರೆಸ್‍ನ ಉಪಮೇಯರ್ ಅಭ್ಯರ್ಥಿ ಅನ್ವರ್ ಬೇಗ್‍ಗೆ ಮತ ಹಾಕಿದರು. ಈ ರೀತಿ ಚುನಾವಣೆ ನಡೆಯುತ್ತದೆ ಎಂದು ಬಿಜೆಪಿ ಊಹಿಸಿಯೇ ಇರಲಿಲ್ಲ. ಮೇಯರ್, ಉಪಮೇಯರ್ ಇಬ್ಬರಿಗೂ ತಲಾ 43 ಮತಗಳು ಬಿದ್ದವು. ಬಿಜೆಪಿ ಮೇಯರ್ ಅಭ್ಯರ್ಥಿಗೆ ಸುನಂದಾಗೆ 26 ಮತಗಳಷ್ಟೇ ಬಿತ್ತು.

ಎಚ್‌ಡಿಡಿ ತಂತ್ರಗಾರಿಕೆ:
ಒಂದು ಕಡೆ ಜೆಡಿಎಸ್ ಸದಸ್ಯರನ್ನು ಸೆಳೆಯಲು ಸಿದ್ದರಾಮಯ್ಯ ವಿಫಲರಾದರು ಎಂಬ ಮಾತುಗಳು ಕೇಳಿ ಬರುತ್ತಿದ್ದರೆ ಇನ್ನೊಂದು ಕಡೆ ಮಾಜಿ ಪ್ರಧಾನಿ ದೇವೇಗೌಡರ ಜೊತೆ ಕೆಪಿಸಿಸಿ ಅಧ್ಯಕ್ಷ ಒಳ ಒಪ್ಪಂದ ಮಾಡಿಕೊಂಡು ಸಿದ್ದರಾಮಯ್ಯಗೆ ಬಿಗ್ ಶಾಕ್ ಕೊಟ್ಟಿದ್ದಾರೆ ಎಂಬ ಸುದ್ದಿಯೂ ರಾಜಕೀಯ ವಲಯದಿಂದ ಬರುತ್ತಿದೆ.

ನಿನ್ನೆ ರಾತ್ರಿಯಿಂದಲೇ ದೇವೇಗೌಡರ ಜೊತೆಗೆ ಡಿ.ಕೆ. ಶಿವಕುಮಾರ್ ಸಂಪರ್ಕ ಹೊಂದಿದ್ದರೆಂದು ಹೇಳಲಾಗುತ್ತಿದೆ. ಮೈಸೂರಿನಲ್ಲೇ ಬೀಡು ಬಿಟ್ಟಿದ್ದ ಕುಮಾರಸ್ವಾಮಿ, ಬಿಜೆಪಿಗೆ ಬೆಂಬಲ ಕೊಡಲು ಮುಕ್ತ ಮನಸ್ಸು ಮಾಡಿದ್ದರು ಎನ್ನಲಾಗಿತ್ತು. ಆದರೆ ಇವತ್ತು ಬೆಳ್ಳಂಬೆಳಗ್ಗೆ ಕುಮಾರಸ್ವಾಮಿಗೆ ದೇವೇಗೌಡರು ಸಂದೇಶವೊಂದನ್ನು ರವಾನಿಸಿದ್ದರು. ಅದರನ್ವಯ ಎರಡು ಪಕ್ಷಗಳಿಂದ ಅಂತರ ಕಾಯ್ದುಕೊಂಡು, ಅಭ್ಯರ್ಥಿ ಕಣಕ್ಕಿಳಿಸಿ ಅಂತಿಮವಾಗಿ ಕಾಂಗ್ರೆಸ್ ಬೆಂಬಲ ಪಡೆದುಕೊಂಡರು. ದೇವೇಗೌಡರ ಈ ತಂತ್ರಗಾರಿಕೆಯಿಂದ ಇವತ್ತು ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಗೆದ್ದು ಬೀಗಿದೆ.

ಈ ತಂತ್ರಗಾರಿಕೆಯಿಂದ ಮೇಯರ್ ಸ್ಥಾನವೂ ಸಿಕ್ಕಿತು. ಜಾತ್ಯಾತೀತ ಪಟ್ಟವೂ ಉಳಿಯಿತು. ಸಿದ್ದರಾಮಯ್ಯಗೆ ಪಾಠವೂ ಕಲಿಸಿದಂತಾಯ್ತು. ಈ ಮೂಲಕ ಒಂದೇ ಕಲ್ಲಿಗೆ ಮೂರು ಹಕ್ಕಿಗಳನ್ನು ಎಚ್‌ಡಿಡಿ ಹೊಡೆದಿದ್ದಾರೆ ಎಂಬ ವಿಶ್ಲೇಷಣೆ ರಾಜಕೀಯ ವಲಯದಿಂದ ಕೇಳಿ ಬರುತ್ತಿದೆ.

ಬಿಜೆಪಿ ಜೊತೆ ಹೋದ್ರೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ಪಕ್ಷಕ್ಕೆ ಹೊಡೆತ ಬೀಳುವ ಸಾಧ್ಯತೆಯಿತ್ತು. ಹೀಗಾಗಿ ಬಿಜೆಪಿ ಬೆಂಬಲಿಸಲು ಮುಂದಾಗಿದ್ದ ಹೆಚ್‍ಡಿಕೆಗೆ ಹೆಚ್‍ಡಿಡಿ ಬ್ರೇಕ್ ಹಾಕಿದ್ದಾರೆ. ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಬೆಂಬಲ ಪಡೆಯಲು ಹೆಚ್‍ಡಿಡಿ ಗ್ರೀನ್ ಸಿಗ್ನಲ್ ನೀಡಿದ್ದರು.

ಪಟ್ಟ ಸಾಧಿಸಿದ ಕುಮಾರಸ್ವಾಮಿಗೆ ಸಿದ್ದರಾಮಯ್ಯ ವಿರುದ್ಧ ಹಠ ಸಾಧಿಸಿದ ತೃಪ್ತಿ ಸಿಕ್ಕಿದೆ. ಆದರೆ ಪರಸ್ಪರ ತೊಡೆತಟ್ಟಿದ್ದರೂ ಸಿದ್ದು-ಹೆಚ್‍ಡಿಕೆಗೆ ಅವಕಾಶವಾದಿಗಳು ಎಂಬ ಹಣೆಪಟ್ಟಿ ಬಂದಿದೆ. ಮೈಸೂರು ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟದಿಂದ ಕಮಲಕ್ಕೆ ಮೇಯರ್‌ ಪಟ್ಟ ತಪ್ಪಿದರೂ ಭವಿಷ್ಯದಲ್ಲಿ ಇದನ್ನೇ ಪಕ್ಷದ ಲಾಭಕ್ಕೆ ಬಳಸಿಕೊಳ್ಳಲು ಬಿಜೆಪಿ ಪ್ಲಾನ್ ಮಾಡಿದೆ.

TAGGED:bjpcongressHD Devegowdajdskannada newsMysuru Mayor Electionಕಾಂಗ್ರೆಸ್ಕುಮಾರಸ್ವಾಮಿಜೆಡಿಎಸ್ದೇವೇಗೌಡಪ್ರತಾಪ್ ಸಿಂಹಬಿಜೆಪಿಮೇಯರ್ ಚುನಾವಣೆಮೈಸೂರು ಪಾಲಿಕೆ
Share This Article
Facebook Whatsapp Whatsapp Telegram

Cinema Updates

Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
13 hours ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
17 hours ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
1 day ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
2 days ago

You Might Also Like

Gopala Krishna Beluru
Bengaluru City

ರಾಜ್‌ಕುಮಾರ್‌ ತೀರಿಕೊಂಡಾಗ 4 ಜನಕ್ಕೆ ಗುಂಡು ಹೊಡೆಸಿದ್ರು, ಆಗ ಕುಮಾರಸ್ವಾಮಿ ರಾಜೀನಾಮೆ ಕೊಟ್ರಾ? – ಬೇಳೂರು ಗೋಪಾಲಕೃಷ್ಣ

Public TV
By Public TV
28 minutes ago
KSCA 3
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – KSCA ಕಾರ್ಯದರ್ಶಿ ಸೇರಿ ಇಬ್ಬರು ಪದಾಧಿಕಾರಿಗಳು ರಾಜೀನಾಮೆ

Public TV
By Public TV
1 hour ago
BRICS
Latest

ಪಹಲ್ಗಾಮ್‌ ದಾಳಿಗೆ ಖಂಡನೆ – ಭಯೋತ್ಪಾದನೆ ವಿರುದ್ಧ ಭಾರತದ ಹೋರಾಟಕ್ಕೆ ʻಬ್ರಿಕ್ಸ್‌ʼ ಸದಸ್ಯ ರಾಷ್ಟ್ರಗಳ ಬೆಂಬಲ

Public TV
By Public TV
2 hours ago
Haveri Bankapura POCSO Case Four arrested
Crime

ಹಾವೇರಿ | ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ನಾಲ್ವರು ಅರೆಸ್ಟ್‌

Public TV
By Public TV
2 hours ago
Anekal 2
Crime

ಪ್ರಿಯರಕನೊಂದಿಗೆ ಚಕ್ಕಂದವಾಡ್ತಾ ಸಿಕ್ಕಿಬಿದ್ದ ಪತ್ನಿ – ಆಕೆಯನ್ನ ಕೊಂದು ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದ ಪತಿ

Public TV
By Public TV
3 hours ago
Capture
Latest

ದೇಶಾದ್ಯಂತ ಬಕ್ರೀದ್‌ ಆಚರಣೆ ಸಂಭ್ರಮ; ಜಮ್ಮು-ಕಾಶ್ಮೀರದಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಸಲ್ಲಿಕೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?