ಸಾರ್ವಜನಿಕರಿಗೆ ಕೊರೊನಾ ವ್ಯಾಕ್ಸಿನ್ – ಮಾಹಿತಿ ನೀಡಲು ಜನ ಹಿಂದೇಟು

Public TV
2 Min Read
Corona Vaccine Survery 1

– ಮಾಹಿತಿ ಸಿಗದೇ ಆಶಾ, ಹೆಲ್ತ್ ವರ್ಕರ್ಸ್ ಪರದಾಟ

ಬೆಂಗಳೂರು: ಎರಡನೇ ಅಲೆ ಆತಂಕದ ಮಧ್ಯೆ ಸಾರ್ವಜನಿಕರಿಗೆ ವ್ಯಾಕ್ಸಿನ್ ವಿತರಿಸಲು ಸಿದ್ಧತೆ ನಡೆದಿದೆ. ಹೈ ರಿಸ್ಕ್ ಕೇಸ್ ಮತ್ತೆ 50 ವರ್ಷ ಮೇಲ್ಪಟ್ಟವರ ಪಟ್ಟಿ ಸಿದ್ಧತೆಗೆ ಆರೋಗ್ಯ ಇಲಾಖೆ ಹರಸಾಹಸ ಪಡ್ತಿದೆ. ಮನೆ ಮನೆ ಸರ್ವೇ ವೇಳೆ ವ್ಯಾಕ್ಸಿನ್ ಡೇಟಾ ಎಂಟ್ರಿಗೆ ಸಾರ್ವಜನಿಕರು ಮಾಹಿತಿ ಕೊಡಲು ಹಿಂದೇಟು ಹಾಕುತ್ತಿದ್ದು, ಮಾಹಿತಿ ಸಿಗದೇ ಆಶಾ ಕಾರ್ಯಕರ್ತೆಯರು ಆರೋಗ್ಯಾಧಿಕಾರಿಗಳ ಪರದಾಟ ಪಬ್ಲಿಕ್ ರಿಯಾಲಿಟಿ ಚೆಕ್ ನಲ್ಲಿ ಬಯಲಾಗಿದೆ.

Corona Vaccine Survery 5

ಮಾರ್ಚ್ 1 ರಿಂದ ಸಾರ್ವಜನಿಕರಿಗೆ ಕೊರೊನಾ ಲಸಿಕೆ ವಿತರಣೆ ಮಾಡಲು ಆರೋಗ್ಯ ಇಲಾಖೆ ಸಜ್ಜಾಗಿದೆ. 60 ವರ್ಷ ಮೇಲ್ಪಟ್ಟವರಿಗೆ ಮತ್ತು ನಾನಾ ಕಾಯಿಲೆಗಳಿಂದ ಬಳಲುತ್ತಾ ಇರೋ 45 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಲಸಿಕೆ ನೀಡಲು ನಿರ್ಧಾರ ಮಾಡಿದ್ದಾರೆ. ಆದರೆ ರಾಜ್ಯದಲ್ಲಿ ಹೈರಿಸ್ಕ್ ಜನ, 50 ವರ್ಷ ಮೇಲ್ಪಟ್ಟವರು ಮತ್ತು ಬಹು ಕಾಯಿಲೆಯಿಂದ ಬಳಲುತ್ತಾ ಇರೋರು ಎಷ್ಟು ಜನ ಇದ್ದಾರೆ? ಎಷ್ಟು ವ್ಯಾಕ್ಸಿನ್ ಕೊಡಬೇಕು? ಫಲಾನುಭವಿಗಳು ಎಷ್ಟು ಆಗ್ತಾರೆ ಅಂತಾ ತಿಳಿಯಲು ಸರ್ಕಾರ ಸರ್ವೇ ನಡೆಸುತ್ತಿದೆ. ಈ ಸರ್ವೇಯನ್ನ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಮತ್ತು ಸ್ವಯಂ ಸೇವಕರು ನಡೆಸುತ್ತಿದ್ದಾರೆ. ಆದರೆ ಈ ಸರ್ವೇ ವೇಳೆ ಸಾರ್ವಜನಿಕರು ಸರಿಯಾಗಿ ನೀಡುತ್ತಿಲ್ಲ. ಸ್ವತಃ ಪಬ್ಲಿಕ್ ಟಿವಿ ಆರೋಗ್ಯ ಸಿಬ್ಬಂದಿ ಜೊತೆ ಸರ್ವೇಗೆ ಇಳಿದಾಗ ಅಲ್ಲಿನ ರಿಯಾಲಿಟಿ ಬಯಲಾಗಿದೆ.

Corona Vaccine Survery 4

ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿ ಜೊತೆ ಸರ್ಬೇಗೆ ಪಬ್ಲಿಕ್ ಟಿವಿ ಇಳಿಯಿತು. ಪ್ಯಾಲೇಸ್ ಗುಟ್ಟಹಳ್ಳಿಯ ಜಟಕಾಸ್ಟಾಂಡ್ ವಸತಿ ಗೃಹದ ಸಂಕೀರ್ಣದ ಬಳಿ ಸರ್ವೇಗೆ ಇಳಿದಾಗ ಅಲ್ಲಿನ ಮನೆ ಅವರು ಸ್ಪಂದಿಸಿದ್ರು. ಆರೋಗ್ಯ ಸಿಬ್ಬಂದಿ ಕೇಳಿದ ಪ್ರಶ್ನೆಗೆ ಉತ್ತರಿಸಿದ್ರು. ವ್ಯಾಕ್ಸಿನ್ ತೆಗೆದುಕೊಳ್ಳೋದು ಉತ್ತಮ ಅಂತಾ ಅಭಿಪ್ರಾಯ ವ್ಯಕ್ತಪಡಿಸಿದರು.

Corona Vaccine Survery 2

ಬಾಂಧವ್ಯ ನಗರದಲ್ಲಿ ಸರ್ವೆಗೆ ಅಂತಾ ಒಂದು ಮನೆಗೆ ತೆರಳಿದೆವು. ಅಲ್ಲಿನ ನಿವಾಸಿ ನಿಮಗೆ ಎಷ್ಟು ವಯಸ್ಸು ಅಂದರೆ ಒಂದು ಬಾರಿ 49 ವರ್ಷ ಅಂತಾರೆ. ಒಂದು ಬಾರಿ 51 ವರ್ಷ ಅಂತಾರೆ. ಮನೆಯಲ್ಲಿಯೇ ಇದ್ದು ಆಧಾರ್ ಕಾರ್ಡ್ ವೋಟರ್ ಐಡಿ ಕೇಳಿದ್ರೆ ಇಲ್ಲ ಅಂತಾರೆ. ವ್ಯಾಕ್ಸಿನ್ ಮಾತ್ರ ತೆಗೆದುಕೊಳ್ಳುತ್ತೇವೆ ಎಂದು ಹೇಳುತ್ತಾರೆ. ಕೆಲವರು ನಾವು ಆರೋಗ್ಯವಾಗಿದ್ದು, ಲಸಿಕೆ ಬೇಡ ಅಂತ ಹೇಳುತ್ತಾರೆ.

ಪಬ್ಲಿಕ್ ಟಿವಿ ದಿವಾನರ ಪಾಳ್ಯದಲ್ಲೂ ಈ ಬಗ್ಗೆ ರಿಯಾಲಿಟಿ ಚೆಕ್ ನಡೆಸಿತ್ತು. ದಿವಾನರ ಪಾಳ್ಯದಲ್ಲಿ ಮತ್ತಿಕೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾರ್ಯಕರ್ತರು, ಮನೆ ಮನೆಗೆ ಹೋಗಿ ಸರ್ವೇ ನಡೆಸಿದರು. ಆದರೆ ವಾರ್ಡ್ ನ ಮನೆ ಮನೆಗೆ ಹೋದಾಗ ಅಲ್ಲಿಯ ಬಹುತೇಕ ನಿವಾಸಿಗಳು ಆರೋಗ್ಯ ಸಿಬ್ಬಂದಿಗಳಿಗೆ ಸ್ಪಂದಿಸಲಿಲ್ಲ. ಇದರಿಂದ ಆರೋಗ್ಯ ಕಾರ್ಯಕರ್ತರು ಹಾಗೂ ಬಿಬಿಎಂಪಿ ಅಧಿಕಾರಿಗಳು ಹೈರಾಣಾದರು.

Share This Article
Leave a Comment

Leave a Reply

Your email address will not be published. Required fields are marked *