ಕಬ್ಬಿಣದ ಏಣಿಗೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವು

Public TV
1 Min Read
mdk electric wire

ಮಡಿಕೇರಿ: ಕಾಫಿ ತೋಟದಲ್ಲಿ ಕರಿಮೆಣಸು ಕೊಯ್ಯುವ ಸಂದರ್ಭ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಕಬ್ಬಿಣದ ಏಣಿ ತಗುಲಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ನಡೆದಿದೆ.

mdk electric 1ಕೊಡಗಿನ ಆರ್ಜಿ ಗ್ರಾಮದ ನಿವಾಸಿ ಸಬಾಸ್ಟಿನ್ ಲೋಬೋ(60) ಮೃತ ದುರ್ದೈವಿ. ಪ್ರತಿ ದಿನದಂತೆ ಬೆಳಗ್ಗೆ ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯಕ್ಕೆ ಸೇರಿದ ಕಾಫಿ ತೋಟದಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ಇಂದು ಸಬಾಸ್ಟಿನ್ ಲೋಬೋ ಕಾಳು ಮೆಣಸು ಕೊಯ್ಯುವ ವೇಳೆ ತೋಟದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ವಿದ್ಯುತ್ ಕಂಬಕ್ಕೆ ಕಬ್ಬಿಣದ ಏಣಿ ಇಡುವ ಸಂದರ್ಭ ಅಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿದೆ.

mdk electric 2

ವಿದ್ಯುತ್ ತಂತಿಯಿಂದ ಏಣಿ ಮೂಲಕ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಬಾಸ್ಟಿನ್ ಸಾವನಪ್ಪಿದ್ದಾರೆ. ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಬಂದು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *