ಮಡಿಕೇರಿ: ಕಾಫಿ ತೋಟದಲ್ಲಿ ಕರಿಮೆಣಸು ಕೊಯ್ಯುವ ಸಂದರ್ಭ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಕಬ್ಬಿಣದ ಏಣಿ ತಗುಲಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ನಡೆದಿದೆ.

ವಿದ್ಯುತ್ ತಂತಿಯಿಂದ ಏಣಿ ಮೂಲಕ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಬಾಸ್ಟಿನ್ ಸಾವನಪ್ಪಿದ್ದಾರೆ. ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಬಂದು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


