ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಚಾರ್ಮಾಡಿಯಲ್ಲಿ ಕೆಂಪು ಬಸ್ ಸಂಚಾರ ಆರಂಭ

Public TV
2 Min Read
ksrtc red bus

– ಮೂರು ದಿನಗಳ ಹಿಂದೆ ವರದಿ ಮಾಡಿದ್ದ ಪಬ್ಲಿಕ್ ಟಿವಿ

ಚಿಕ್ಕಮಗಳೂರು: ಕಳೆದ ಒಂದೂವರೆ ವರ್ಷದಿಂದ ಬಂದ್ ಆಗಿದ್ದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕೆಂಪು ಬಸ್ ಸಂಚಾರ ಆರಂಭಗೊಂಡಿದ್ದು ಜನರಲ್ಲಿ ಸಂತೋಷ ಮನೆ ಮಾಡಿದೆ.

2019ರ ಮಳೆಗಾಲದಲ್ಲಿ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆ ಸುರಿದಿತ್ತು. ಇದರಿಂದ 22 ಕಿ.ಮೀ‌ ವ್ಯಾಪ್ತಿಯ ದಕ್ಷಿಣ ಕನ್ನಡ ಜಿಲ್ಲೆ-ಚಿಕ್ಕಮಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ಸುಮಾರು 20ಕ್ಕೂ ಹೆಚ್ಚು ಕಡೆ ರಸ್ತೆ ಕುಸಿದಿತ್ತು. ಬೆಟ್ಟಗುಡ್ಡಗಳು ಧರೆಗುರುಳಿದ್ದವು. ರಸ್ತೆ ಸಂಪೂರ್ಣ ಹಾಳಾಗಿದ್ದರಿಂದ ಸುಮಾರು ಮೂರು ತಿಂಗಳ ಕಾಲ ಈ ಭಾಗದಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು  ನಿಷೇಧಿಸಲಾಗಿತ್ತು.

Charmadi Ghat 3

 

ದುರಸ್ಥಿಯಾದ ಮೂರು ತಿಂಗಳ ಬಳಿಕ ಮಿನಿ ಬಸ್, ಕಾರು, ಬೈಕ್ಗಳ ಸಂಚಾರಕ್ಕೆ ಮಾತ್ರ ಅವಕಾಶವಿತ್ತು. ಕಳೆದ ಒಂದೂವರೆ ವರ್ಷದಿಂದ ಕೆಂಪು ಬಸ್ ಸಂಚಾರಕ್ಕೆ ಅವಕಾಶವಿರಲಿಲ್ಲ. ಈಗ ರಸ್ತೆ ದುರಸ್ಥಿ ಕಾರ್ಯ ಬಹುತೇಕ ಮುಗಿದಿದ್ದು ಜಿಲ್ಲಾಧಿಕಾರಿ ರಮೇಶ್ ಆರು ಚಕ್ರದ ಲಾರಿ ಹಾಗೂ ಕೆಂಪು ಬಸ್ಸಿನ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇದನ್ನೂ ಓದಿ: ಮುಗಿಯದ ಚಾರ್ಮಾಡಿ ಕಾಮಗಾರಿ- ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ

ಈ ಮಾರ್ಗದಲ್ಲಿ ಅಗತ್ಯವಿರುವ ಕಡೆ ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಹಾಕಬೇಕು. ಯಾವುದೇ ರೀತಿಯ ಅಪಘಾತಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಚಾರ್ಮಾಡಿಯ ಬಹಳಷ್ಟು ಕಡೆ ಭೂಕುಸಿತದಿಂದ ರಸ್ತೆಗೆ ತೀವ್ರವಾದ ಧಕ್ಕೆಯಾಗಿದೆ. ಅತ್ಯಂತ ಜಾಗರೂಕತೆಯಿಂದ ನಿಗದಿತ ವೇಗದ ಮಿತಿಯೊಂದಿಗೆ ವಾಹನಗಳು ಸಂಚರಿಸುವಂತೆ ಸೂಚಿಸಲಾಗಿದೆ.

Charmadi Ghat 2

ಜನರ ಬದುಕಿನ ದಾರಿ :
ಜಿಲ್ಲೆ ಸೇರಿದಂತೆ ರಾಜ್ಯದ ಜನ ಚಾರ್ಮಾಡಿ ಘಾಟ್ ಮೇಲೆ ಅವಲಂಬಿತರಾಗಿದ್ದಾರೆ. ಆರೋಗ್ಯ ಸಂಬಂಧಿಸಿದಂತೆ ತುರ್ತು ಸಂದರ್ಭದಲ್ಲಿ ಮಂಗಳೂರು-ಉಡುಪಿ ಹೋಗಲು ಚಾರ್ಮಾಡಿ ಅತ್ಯಂತ ಸಹಾಯಕಾರಿ. ಆದರೆ ಈ ಬಹುಪಯೋಗಿ ರಸ್ತೆ ಸಂಚಾರ ಮುಕ್ತವಾಗದ ಕಾರಣ ಜನರ ಬದುಕಿಗೂ ತೊಂದರೆಯಾಗಿತ್ತು.

ckm charmadi ghat

 

ತುರ್ತು ಆರೋಗ್ಯದ ಸಂದರ್ಭದಲ್ಲಿ ಮಂಗಳೂರು, ಉಡುಪಿಗೆ ಹೋಗಲು ಜನ ತೀವ್ರ ತೊದರೆ ಅನುಭವಿಸುತ್ತಿದ್ದರು. ಖಾಸಗಿ ವಾಹನಗಳಿಗೆ ಸಾವಿರಾರು ರೂಪಾಯಿ ಹಣ ನೀಡಿ ಹೋಗಬೇಕಿತ್ತು. ಹಾಗಾಗಿ ಜನ ಕೆಂಪು ಬಸ್ ಗಳ ಸಂಚಾರವನ್ನ ಎದುರು ನೋಡುತ್ತಿದ್ದರು. ಈಗ ಜಿಲ್ಲಾಡಳಿತ ಕೆಂಪು ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಿರುವುದು ಜನಸಾಮಾನ್ಯರಿಗೆ ಅನುಕೂಲವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *