Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‍ನ ಮಹಾನಾಯಕ, ಬಿಜೆಪಿಯ ಯುವರಾಜರದ್ದು ಎರಡು ಸಿಡಿ ಫ್ಯಾಕ್ಟರಿಗಳಿವೆ: ಯತ್ನಾಳ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Haveri | ಕಾಂಗ್ರೆಸ್‍ನ ಮಹಾನಾಯಕ, ಬಿಜೆಪಿಯ ಯುವರಾಜರದ್ದು ಎರಡು ಸಿಡಿ ಫ್ಯಾಕ್ಟರಿಗಳಿವೆ: ಯತ್ನಾಳ್

Haveri

ಕಾಂಗ್ರೆಸ್‍ನ ಮಹಾನಾಯಕ, ಬಿಜೆಪಿಯ ಯುವರಾಜರದ್ದು ಎರಡು ಸಿಡಿ ಫ್ಯಾಕ್ಟರಿಗಳಿವೆ: ಯತ್ನಾಳ್

Public TV
Last updated: March 27, 2021 4:13 pm
Public TV
Share
3 Min Read
basangouda patil yatnal
SHARE

– ಕೆಲವೇ ದಿನಗಳಲ್ಲಿ ಯುವರಾಜನದ್ದೂ ಹೊರ ಬರಲಿದೆ

ಹಾವೇರಿ: ಕಾಂಗ್ರೆಸ್ ನ ಮಹಾನಾಯಕ ಮತ್ತು ಬಿಜೆಪಿಯ ಯುವರಾಜರದ್ದು ಸಿಡಿ ಉತ್ಪನ್ನ ಮಾಡುವ ಎರಡು ಫ್ಯಾಕ್ಟರಿಗಳಿವೆ. ಇದೀಗ ಹೆಸರು ಬಂದಿರುವ ಕಾಂಗ್ರೆಸ್ ನಾಯಕ ಇಂತಹ ಸಿಡಿಗಳನ್ನು ಖರೀದಿ ಮಾಡುತ್ತಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ಮಾತನಾಡಿದ ಅವರು, ಕೆಲ ಹೆಣ್ಣು ಮಕ್ಕಳನ್ನು ಬಿಟ್ಟು ಬ್ಲ್ಯಾಕ್ ಮೇಲ್ ಮಾಡಿ, ಸಿಡಿ ತೆಗೆದುಕೊಳ್ಳುತ್ತಾರೆ. ಒಂದು ವೇಳೆ ಸಪೋರ್ಟ್ ಮಾಡದಿದ್ದರೆ, ತೊಂದರೆ ಕೊಟ್ಟರೆ ಸಿಡಿ ಬಿಡುತ್ತೇವೆಂದು ಭಯಪಡಿಸುತ್ತಾರೆ. ಎಷ್ಟೋ ಜನ ಶಾಸಕರು ಈ ಭಯದ ವಾತಾವರಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿದ್ದಾರೆ. ನಿನ್ನೆ ಸಿಡಿ ಯುವತಿ ಹೆಸರು ಹೇಳಿದವರ ಡ್ರೈವರ್ ಅವರ ಜೊತೆ ಓಡಾಡಿರೋ ಬಗ್ಗೆ ಚರ್ಚೆ ಆಗುತ್ತಿದೆ. ಈ ಬಗ್ಗೆ ನಾನು ಮೊದಲೇ ಭವಿಷ್ಯ ನುಡಿದಿದ್ದೆ ಎಂದು ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ವಿರುದ್ಧ ಹರಿಹಾಯ್ದರು.

ಬಿಜೆಪಿಯಲ್ಲೊಬ್ಬ ಯುವರಾಜ ಮತ್ತು ಕಾಂಗ್ರೆಸ್ ಮಹಾನಾಯಕ ಇಬ್ಬರೂ ಇದ್ದಾರೆಂದು ಹೇಳಿದ್ದೆ. ಈಗ ಕಾಂಗ್ರೆಸ್ ಮಹಾನಾಯಕನದ್ದು ಹೊರಬಂದಿದೆ. ಕೆಲವೇ ದಿನಗಳಲ್ಲಿ ಬಿಜೆಪಿಯ ಯುವರಾಜನದ್ದೂ ಹೊರಬರಲಿದೆ. ಈ ಸಿಡಿ ಯುವರಾಜನ ರಕ್ಷಣೆ ಮಾಡಲು ಸಿಸಿಬಿಗೆ ಕೊಟ್ಟಿದ್ದು, ಸಿಬಿಐಗೆ ಕೊಟ್ಟರೆ ಎಲ್ಲ ಕಳ್ಳರನ್ನು ಒದ್ದು ಒಳಗೆ ಹಾಕುತ್ತಾರೆ. ಇಂತಹ ಬಹಳ ಮಂದಿಯ ಸಿಡಿ ಮಾಡಿದ್ದಾರೆ. ಐಪಿಎಸ್, ಐಎಎಸ್ ಅಧಿಕಾರಿಗಳು, ವ್ಯಾಪಾರಸ್ಥರು, ಶಾಸಕರು, ಸಂಸದರ ಸಿಡಿಗಳಿವೆ. ಇವರಿಬ್ಬರೂ ಸಿಡಿ ಖರೀದಿದಾರರು. ಮೆಕ್ಕೆಜೋಳ, ಮೆಣಸಿನಕಾಯಿ ಖರೀದಿ ಮಾಡೋರ ರೀತಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲೊಬ್ಬಬ್ಬರು ಸಿಡಿ ಖರೀದಿ ಮಾಡೋರಿದ್ದಾರೆ. ಬಿಜೆಪಿಯ ಉನ್ನತ ನಾಯಕನ ಸಿಡಿ ಕಾಂಗ್ರೆಸ್ ನ ಮಹಾನಾಯಕನ ಬಳಿ ಇದೆ. ಅವನನ್ನ ನೋಡಿದರೆ ಬಿಜೆಪಿ ನಾಯಕರು ಭಯಪಡ್ತಾರೆ. ಹಿಂದೆ ಆ ಮಹಾನಾಯಕನೇ ಸಿಡಿ ಇರೋ ಬಗ್ಗೆ ಹೇಳಿದ್ದಾನೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ರಾಜ್ಯದಲ್ಲಿ ಭ್ರಷ್ಟರದ್ದೊಂದು ಗುಂಪು, ಪ್ರಾಮಾಣಿಕ ರಾಜಕಾರಣಿಗಳದ್ದೊಂದು ಗುಂಪಿದೆ. ಎಲ್ಲ ಪಕ್ಷಗಳಲ್ಲೂ ಈ ಗುಂಪು ಇವೆ. ಸಿಎಂ ಬದಲಾವಣೆ ಆಗಲೇಬೇಕು, ಇದರ ಬಗ್ಗೆ ಬೇರೆ ಅಭಿಪ್ರಾಯವಿಲ್ಲ. ಮೇ 2 ನಂತರ ಪ್ರಧಾನಿ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ. ರಾಜ್ಯದಲ್ಲಿನ ಎಲ್ಲ ಬೆಳವಣಿಗೆಗಳನ್ನು ಪ್ರಧಾನಿ ನರೇಂದ್ರ ಮೋದಿ ಗಮನಿಸುತ್ತಿದ್ದಾರೆ. ಎಲ್ಲ ಮಾಹಿತಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿಯವರಿಗೆ ಇದೆ. ದೇಶಕ್ಕೆ, ಧರ್ಮಕ್ಕೆ ಕಷ್ಟ ಬಂದಾಗ ಭಗವಂತ ಹುಟ್ಟಿ ಬಂದಂತೆ ಮೇ 2ರ ನಂತರ ನರೇಂದ್ರ ಮೋದಿಯವರು ಕರ್ನಾಟಕದ ಬೆಳವಣಿಗೆ ನೋಡಿ ಗಟ್ಟಿಯಾದ ನಿರ್ಧಾರ ತಗೋತಾರೆ ಎಂದರು.

ಸಿಎಂ ಯಡಿಯೂರಪ್ಪ ಬಿಜೆಪಿ ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಸಿದ್ದರಾಮಯ್ಯ, ಕುಮಾರಸ್ವಾಮಿ, ಜಮೀರ ಅಹ್ಮದ್ ಅವರಿಗೆ ಅನುದಾನ ಕೊಡುತ್ತಾರೆ. ನಾವು ಅನುದಾನ ಕೇಳಿದರೆ ನಮಗೆ ವಿಷ ಕುಡಿಯೋಕೆ ಹಣ ಇಲ್ಲ ಅಂತಾರೆ. ಜಮೀರ್ ಅಹ್ಮದ್ ಹಿಂದೂಗಳನ್ನ ಬೈಯ್ಯುತ್ತಾ ಓಡಾಡ್ತಾರೆ, ಅವರಿಗೆ ಅನುದಾನ ಕೊಡ್ತಾರೆ. ಯಡಿಯೂರಪ್ಪ ಅವರ ಬೀಗ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮರೀಸ್ವಾಮಿಗೆ ಅನುದಾನ ಕೊಡುತ್ತಾರೆ ಎಂದು ಆರೋಪಿಸಿದರು.

BSY 2

ಬಿಜೆಪಿಯ ಕೆಲವು ಶಾಸಕರಿಗೆ ಮಾತ್ರ ಅನುದಾನ ಕೊಡುತ್ತಾರೆ. ಬಿಜೆಪಿಯ ಒಂದೇ ಒಂದು ಶಾಸಕಾಂಗ ಪಕ್ಷದ ಸಭೆ ನಡೆದಿಲ್ಲ. ಸಿದ್ದರಾಮಯ್ಯ ಆಗಾಗ ಶಾಸಕಾಂಗ ಪಕ್ಷದ ಸಭೆ ಮಾಡುತ್ತಿದ್ದರು. ನಾವೆಲ್ಲ ಕೈ ಎತ್ತಿದ್ದಕ್ಕೆ ನೀವು ಸಿಎಂ ಆಗಿದ್ದೀರಿ, ಕಾಂಗ್ರೆಸ್, ಜೆಡಿಎಸ್ ನವರು ಕೈ ಎತ್ತಿದ್ದಕ್ಕಲ್ಲ. ಅವರ ಜೊತೆ ಇವರದು ಹೊಂದಾಣಿಕೆ ರಾಜಕಾರಣ ಇದೆ. ಶಾಸಕರು ನನ್ನ ವಿರುದ್ಧ ತಿರುಗಿ ಬಿದ್ದಿಲ್ಲ. ಒಬ್ಬ ಶಾಸಕರೂ ನನ್ನ ವಿರುದ್ಧ ಸಹಿ ಮಾಡಿಲ್ಲ. ಸಭೆಗೆ ತೆರಳಿದ ಒಬ್ಬ ಶಾಸಕರು ನನಗೆ ಹೇಳಿದ್ದಾರೆ. ಯತ್ನಾಳರು ನಮ್ಮ ಪರವಾಗಿದ್ದಾರೆ, ಅವರ ವಿರುದ್ಧ ಸಹಿ ಮಾಡೋದಿಲ್ಲ ಎಂದಿದ್ದಾರೆ. 31ರ ವರೆಗೆ ಅಧಿವೇಶವಿತ್ತು. ಸಿಡಿ ನೆಪದಲ್ಲಿ ಅಧಿವೇಶನ ಮೊಟಕು ಮಾಡಿದರು. ಇದೇನು ಒಂದು ಕುಟುಂಬದ ಸರ್ಕಾರವೇ? ಯಡಿಯೂರಪ್ಪ, ವಿಜಯೇಂದ್ರ, ರಾಘವೇಂದ್ರ ಮತ್ತು ಅವರ ಹೆಣ್ಣು ಮಕ್ಕಳ ಸರ್ಕಾರವೇ? ಹೀಗಾದರೆ ಪಕ್ಷ ಹೇಗೆ ಉಳಿಯಬೇಕು ಎಂದು ಖಾರವಾಗಿ ಪ್ರಶ್ನಿಸಿದರು.

 

TAGGED:Basangouda Patil YatnalBY VijayendraCD caseDK ShivakumarhaveriPublic TVಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಬಸನಗೌಡ ಪಾಟೀಲ್ ಯತ್ನಾಳ್ಬಿ.ವೈ.ವಿಜಯೇಂದ್ರಸಿಡಿ ಕೇಸ್ಹಾವೇರಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

ಸಾಂದರ್ಭಿಕ ಚಿತ್ರ
Bagalkot

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯ

Public TV
By Public TV
6 minutes ago
Karwar Car Acident
Crime

ಕಾರಿನಲ್ಲೇ ಸುಟ್ಟು ಕರಕಲಾದ ಚಾಲಕ – ಸಾವಿನ ಸುತ್ತ ಅನುಮಾನದ ಹುತ್ತ

Public TV
By Public TV
32 minutes ago
LPG refills 3
Latest

ಪ್ರಮುಖ ವಲಯಗಳಿಗೆ ಹೆಚ್ಚಿನ ಎಲ್‌ಪಿಜಿ ಹಂಚಿಕೆ ಮಾಡಿ: ರಾಜ್ಯಗಳಿಗೆ ಕೇಂದ್ರ ಸೂಚನೆ

Public TV
By Public TV
46 minutes ago
40 49 kg of Ganja worth Rs 20 24 lakh seized at Ballari railway station accused escape
Bellary

ಬಳ್ಳಾರಿ ರೈಲ್ವೇ ನಿಲ್ದಾಣದಲ್ಲಿ 20.24 ಲಕ್ಷ ಮೌಲ್ಯದ 40.49 ಕೆಜಿ ಗಾಂಜಾ ಜಪ್ತಿ – ಆರೋಪಿಗಳು ಎಸ್ಕೇಪ್

Public TV
By Public TV
48 minutes ago
Mohsina Kidwai
Latest

ಇಂದಿರಾ, ರಾಜೀವ್ ಗಾಂಧಿ ಸಂಪುಟದಲ್ಲಿ ಸಚಿವೆಯಾಗಿದ್ದ ಮೊಹ್ಸೀನಾ ಕಿದ್ವಾಯಿ ನಿಧನ

Public TV
By Public TV
55 minutes ago
indian flag
Latest

US-Iran Ceasefire | ಕದನ ವಿರಾಮ ಸ್ವಾಗತಿಸಿದ ಭಾರತ

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?