ಕನ್ನಡ ಕಲಿಯದ ಬ್ಯಾಂಕ್ ಉದ್ಯೋಗಿಗಳ ವಿವರ ನೀಡಿ: ನಾಗಾಭರಣ

Public TV
1 Min Read
nagabharan

ಬೆಂಗಳೂರು: ಬ್ಯಾಂಕ್ ಗಳಲ್ಲಿ ಕನ್ನಡ ಬಳಕೆ ಅಭಿಯಾನದ ಭಾಗವಾಗಿ ಎಟಿಎಂ ಗಳಲ್ಲಿ ಕನ್ನಡ ಬಳಕೆಯಾಯಿತು. ಆದರೆ ಕನ್ನಡ ಕಲಿಯದ ಬ್ಯಾಂಕ್ ಉದ್ಯೋಗಿಗಳ ವಿವರವನ್ನು ಆಡಳಿತಾಧಿಕಾರಿಗಳು ನೀಡುತ್ತಿಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ವಿಷಾದ ವ್ಯಕ್ತಪಡಿಸಿದರು.

ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ಕನ್ನಡ ಕಾಯಕದ ವರುಷದ ಸರಿಗನ್ನಡ ಬಳಕೆ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎರಡನೇ ಅಭಿಯಾನ ನಾಮಫಲಕಗಳಲ್ಲಿ ಶುದ್ಧ ಕನ್ನಡ ಬಳಕೆ, ಮೂರನೇಯದಾಗಿ ಶಕ್ತಿ ಕೇಂದ್ರಗಳಲ್ಲಿ ಕನ್ನಡ ಬಳಕೆ, ನಾಲ್ಕನೇಯದಾಗಿ ಸರಿಗನ್ನಡ ಬಳಕೆ ಅಭಿಯಾನ ನಡೆಸಲಾಗುತ್ತಿದೆ. ಹಿರಿಯ ಪತ್ರಕರ್ತೆ ಆರ್.ಕಲ್ಯಾಣಮ್ಮ ಅವರ ಜನ್ಮ ದಿನದ ಅಂಗವಾಗಿ ಇಂದು ಮಾಧ್ಯಮಗಳಲ್ಲಿ ಸರಿಗನ್ನಡ ಬಳಕೆಗೆ ಚಾಲನೆ ನೀಡಲಾಗುತ್ತಿದೆ ಎಂದು ನಾಗಾಭರಣ ತಿಳಿಸಿದರು.

T S NAGABHARANA

ನಂತರ ಮಾತನಾಡಿದ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, 1980ರಲ್ಲಿ ನಾನು ಮೊದಲು ಸದಸ್ಯರಾಗಿ ಆಯ್ಕೆಯಾದೆ. ಅಂದಿನ ದಿನಗಳಲ್ಲಿ ಕಲಾವಿದರು, ಸಾಹಿತಿಗಳು ಆಯ್ಕೆಯಾಗಿ ಬರುತ್ತಿದ್ದರು. ಆದರೆ ಇಂದು ರಾಜಕಾರಣಿಗಳ ಬೆಂಬಲಿಗರು, ವಿಧಾನಸಭೆ ಚುನಾವಣೆಯಲ್ಲಿ ಸೋತವರು, ಬೇರೆ ಲಾಬಿಯಿಂದ ಅಯ್ಕೆಯಾಗುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ನಾನು ಸಭಾಪತಿಯಾದ ನಂತರ ಸದನದೊಳಗೆ ಮೊಬೈಲ್ ನಿಷೇಧಿಸಿದೆ. ಅದರೂ ಕೆಲ ಸದಸ್ಯರು ಮೊಬೈಲ್ ತರುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸದನದಲ್ಲಿ ಚರ್ಚೆಯೇ ಆಗುತ್ತಿಲ್ಲ. ಈ ಆಧಿವೇಶನದಲ್ಲಿ ಎಷ್ಟು ಗಂಟೆ ಚರ್ಚೆಯಾಗಿದೆ, ಎಷ್ಟು ಹಣ ಖರ್ಚಾಗಿದೆ. ಒಂದು ಪ್ರಶ್ನೆಗೆ ಸುಮಾರು 14 ಲಕ್ಷ ರೂ. ಖರ್ಚಾಗಿದೆ. ಇದನ್ನೆಲ್ಲ ಮಾಧ್ಯಮದವರು ಬರೆಯುತ್ತಲೇ ಇಲ್ಲ. ಶಬ್ದಗಳ ಬಳಕೆಯಲ್ಲಿ ಕನ್ನಡ ಬಳಕೆಯನ್ನು ಹೆಚ್ಚಾಗಿ ಬಳಸಬೇಕು ಎಂದರು.

WhatsApp Image 2021 03 30 at 2.28.19 PM

ಈ ಕಾರ್ಯಕ್ರಮದಲ್ಲಿ ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿಲೋಕೇಶ, ನಗರ ಜಿಲ್ಲಾ ಅಧ್ಯಕ್ಷ ಎಸ್.ಸೋಮಶೇಖರ ಗಾಂಧಿ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *