Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈಶ್ವರಪ್ಪ ರಾಜೀನಾಮೆಗೆ ಬಿಎಸ್‍ವೈ ಆಪ್ತ ಶಾಸಕರ ಪಟ್ಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಈಶ್ವರಪ್ಪ ರಾಜೀನಾಮೆಗೆ ಬಿಎಸ್‍ವೈ ಆಪ್ತ ಶಾಸಕರ ಪಟ್ಟು

Bengaluru City

ಈಶ್ವರಪ್ಪ ರಾಜೀನಾಮೆಗೆ ಬಿಎಸ್‍ವೈ ಆಪ್ತ ಶಾಸಕರ ಪಟ್ಟು

Public TV
Last updated: April 1, 2021 3:47 pm
Public TV
Share
3 Min Read
bsy eshwarappa 1 web
SHARE

– ಬಿಎಸ್‍ವೈಯನ್ನು ಭೇಟಿಯಾದ 7 ಶಾಸಕರು
– ಸರ್ಕಾರದ ವಿರುದ್ಧ ಹೇಳಿಕೆ ನೀಡುವುದು ಎಷ್ಟು ಸರಿ?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯಪಾಲ ವಿ.ಆರ್.ವಾಲಾ ಅವರಿಗೆ ಪತ್ರ ಬರೆದ ಬೆನ್ನಲ್ಲೇ ಸಚಿವ ಈಶ್ವರಪ್ಪ ರಾಜೀನಾಮೆಗೆ ಬಿಎಸ್‍ವೈ ಆಪ್ತ ಶಾಸಕರು ಆಗ್ರಹಿಸಿದ್ದಾರೆ.

ಬಿಎಸ್ ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ಮಧ್ಯೆ ನಡೆಯುತ್ತಿದ್ದ ಶೀತಲ ಸಮರ ಈಗ ಸ್ಫೋಟಗೊಂಡಿದೆ. ಗ್ರಾಮೀಣಾಭಿವೃದ್ಧಿ ಸಚಿವರಾಗಿರುವ ಈಶ್ವರಪ್ಪ ಬರೆದಿರುವ ಪತ್ರ ಬೆಳಕಿಗೆ ಬಂದ ಬೆನ್ನಲ್ಲೇ ಇಲ್ಲಿಯವರೆಗೆ ತೆರೆ ಹಿಂದೆ ನಡೆಯುತ್ತಿದ್ದ ಕಿತ್ತಾಟ ಈಗ ಬಹಿರಂಗವಾಗಿದೆ.

ಸಿಎಂ ಆಪ್ತ ಶಾಸಕರಾದ ರೇಣುಕಾಚಾರ್ಯ, ಮಾಡಾಳ್ ವಿರೂಪಾಕ್ಷಪ್ಪ, ಅರುಣ್ ಕುಮಾರ್ ಪೂಜಾರ್, ಮಹದೇವಪ್ಪ ಯಾದವಾಡ, ಮಹೇಶ್ ಕುಮಟಹಳ್ಳಿ, ಪರಣ್ಣ ಮುನವಳ್ಳಿ, ದಿನಕರ್ ಶೆಟ್ಟಿ ಇಂದು ಬೆಳಗ್ಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪನವರನ್ನು ಭೇಟಿ ಮಾಡಿ ಮಾತುಕತೆ ನಡೆದಿದ್ದಾರೆ. ಈ ವೇಳೆ ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿ ತಮ್ಮದೇ ಸರ್ಕಾರವನ್ನು ಪ್ರಶ್ನಿಸುವುದು ಎಷ್ಟು ಸರಿ ಎಂದು ಕೇಳಿದ್ದಾರೆ. ಅಷ್ಟೇ ಅಲ್ಲದೇ ಕೂಡಲೇ ಅವರ ರಾಜೀನಾಮೆಯನ್ನು ಪಡೆಯಬೇಕು ಎಂದು ಸಿಎಂಗೆ ಒತ್ತಾಯಿಸಿದ್ದಾರೆ.

BSY ESHWARAPPA copy

ಸಭೆಯಲ್ಲಿ ಸಹಿ ಸಂಗ್ರಹ: ಕೆಲ ದಿನಗಳ ಹಿಂದೆ ಸಿಎಂ ಸಹಿ ಹಾಕಿದ್ರೂ ಈಶ್ವರಪ್ಪ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ರೇಣುಕಾಚಾರ್ಯ ದೂರು ನೀಡಿದ್ದರು. ರೇಣುಕಾಚಾರ್ಯ ನೇತೃತ್ವದ ದೂರಿನ ಮೇರೆಗೆ ಯಡಿಯೂರಪ್ಪ ಮಾರ್ಚ್ 18 ರಂದು ಸಭೆ ಕರೆದಿದ್ದರು. ಈ ಸಭೆಯ ಬಳಿಕ ಒಟ್ಟು 48 ಜನರ ಸಹಿ ಸಂಗ್ರಹವಾಗಿದ್ದು, ಇದೇ ಸಹಿ ಸಂಗ್ರಹವನ್ನು ಹೈಕಮಾಂಡ್‍ಗೆ ಕಳುಹಿಸಲು ಯಡಿಯೂರಪ್ಪ ಬಣ ಮುಂದಾಗಿತ್ತು. ಈ ಸಭೆಯ ಬಳಿಕ ಇಬ್ಬರ ನಡುವೆ ನಡೆಯುತ್ತಿದ್ದ ಶೀತಲ ಸಮರ ಜೋರಾಗಿ ಈಗ ಸ್ಫೋಟಗೊಂಡಿದೆ.

ಸಿಎಂ ಭೇಟಿಯಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರೇಣುಕಾಚಾರ್ಯ, ಗ್ರಾಮೀಣಾಭಿವೃದ್ಧಿ ಸಚಿವರು ಹಿರಿಯರಾಗಿರುವ ಈಶ್ವರಪ್ಪ ಅರ್ಥ ಮಾಡಿಕೊಳ್ಳಬೇಕು. ರಾಜ್ಯಪಾಲರಿಗೆ ದೂರು ಕೊಡುವುದು ಎಷ್ಟರಮಟ್ಟಿಗೆ ಸರಿ? ಸರ್ಕಾರದ ವಿರುದ್ಧ ಹೇಳಿಕೆಗಳನ್ನ ಕೊಡುವುದು ಸರಿ ಅಲ್ಲ ಎಂದು ಹೇಳಿದರು.

karnataka budget CM Yediyurappa 3

ಜೆಪಿ ನಡ್ಡಾ, ಅಮಿತ್ ಶಾ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ದಾಖಲೆಯನ್ನು ಬಿಡುಗಡೆ ಮಾಡುತ್ತೇವೆ. ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಬೇಕಾಬಿಟ್ಟಿ ಈ ಹಿಂದೆ ಬಿಡುಗಡೆ ಮಾಡಿದ್ದು ಇದನ್ನು ಪ್ರಶ್ನೆ ಮಾಡುತ್ತೇವೆ. ಮರಿಸ್ವಾಮಿ ಮನೆಗೆ ಹಣ ಬಿಡುಗಡೆ ಮಾಡಿಲ್ಲ. ಬೆಂಗಳೂರು ಜಿಲ್ಲಾ ಪಂಚಾಯತ್‍ಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಈಶ್ವರಪ್ಪ ಆರೋಪಕ್ಕೆ ತಿರುಗೇಟು ನೀಡಿ ಸಿಎಂ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಯಾರಿಗೆಲ್ಲ ದೂರು?
ಲಿಖಿತ ರೂಪದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‍ಸಿಂಗ್, ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಗೆ ಈಶ್ವರಪ್ಪ 2 ಪುಟಗಳ ಪತ್ರ ಬರೆದಿದ್ದಾರೆ. ಜೊತೆಗೆ ಬುಧವಾರ ಮಧ್ಯಾಹ್ನ ರಾಜ್ಯಪಾಲರನ್ನೂ ಭೇಟಿಯಾಗಿ ಈಶ್ವರಪ್ಪ ದೂರು ಕೊಟ್ಟಿದ್ದಾರೆ.

ಆರ್ಥಿಕ ಇಲಾಖೆ ಮುಖ್ಯಮಂತ್ರಿಗಳ ಬಳಿಯೇ ಇದೆ. ಆದರೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಮಹತ್ವದ ಯೋಜನೆಗಳಿಗೆ ಒಪ್ಪಿಗೆ ನೀಡುತ್ತಿಲ್ಲ. ಬದಲಿಗೆ ನಮ್ಮ ಗಮನಕ್ಕೆ ತರದೇ ಬೇರೆ ಶಾಸಕರಿಗೆ ಅನುದಾನ ರಿಲೀಸ್ ಮಾಡಿದ್ದಾರೆ ಎಂದು ದೂರಿದ್ದಾರೆ.

ಆರೋಪಗಳು ಏನು?
1. ಗ್ರಾಮೀಣ ಸುಮಾರ್ಗ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಕೊಟ್ಟಿಲ್ಲ.
2. 32 ಬಿಜೆಪಿ ಶಾಸಕರಿಗೆ ತಲಾ 20ರಿಂದ 23 ಕೋಟಿ, 42 ಬಿಜೆಪಿ ಶಾಸಕರಿಗೆ ತಲಾ 10 ಕೋಟಿ ರೂ. ಬಿಡುಗಡೆಗೆ ಸೂಚನೆ.
3. ಕಾಂಗ್ರೆಸ್‍ನ 30 ಶಾಸಕರಿಗೆ 5 ಕೋಟಿ ರೂ. ಜೆಡಿಎಸ್‍ನ 18 ಶಾಸಕರಿಗೆ ತಲಾ 5 ಕೋಟಿ ರೂ. ಬಿಡುಗಡೆಗೆ ಆದೇಶ.
4: ಬಿಎಸ್‍ವೈ ಬೀಗರೂ ಆಗಿರುವ ಬೆಂಗಳೂರು ನಗರ ಜಿ.ಪಂ ಅಧ್ಯಕ್ಷ ಮರಿಸ್ವಾಮಿ ಪ್ರತಿನಿಧಿಸುವ ದಾಸರಹಳ್ಳಿ ಜಿ.ಪಂ.ಗೆ 65 ಕೋಟಿ ರೂ. ಅನುದಾನ.
5. ಜಿ.ಪಂ.ಗಳಿಗೆ 2019-20ರಲ್ಲಿ 1 ಅಥವಾ 2 ಕೋಟಿ ಅನುದಾನ ಬಿಡುಗಡೆಗೆಯಾಗಿತ್ತು. ಆದರೆ ಈಗ ದಾಸರಹಳ್ಳಿ ಜಿ.ಪಂ.ಗೆ ಇಷ್ಟೊಂದು ದೊಡ್ಡ ಅನುದಾನ ಬಿಡುಗಡೆಯಾಗಿದೆ.
6. ತಮ್ಮ ಇಲಾಖೆಗೆ ನೀಡಿದ ಅನುದಾನದಲ್ಲಿ, ತಮ್ಮ ಗಮನಕ್ಕೆ ಬಾರದೇ ಅನುದಾನ ಹಂಚಿಕೆ.

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಮ್ಮ ಕ್ಷೇತ್ರದ ಕೆಲಸಗಳು ಆಗುತ್ತಿಲ್ಲ. ಸಚಿವ ಈಶ್ವರಪ್ಪ ಅವರು ಅನುದಾನಗಳನ್ನು ಬಿಡುಗಡೆ ಮಾಡದೇ ಎಲ್ಲದಕ್ಕೂ ಕೊಕ್ಕೆ ಹಾಕ್ತಿದ್ದಾರೆ ಎಂದು ಬಜೆಟ್ ಅಧಿವೇಶನದ ಹೊತ್ತಲ್ಲಿ ಸುಮಾರು 40ಕ್ಕೂ ಹೆಚ್ಚು ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪಗೆ ದೂರಿದ್ದರು. ಶಾಸಕರ ದೂರು ಆಲಿಸಿದ್ದ ಸಿಎಂ ಬಿಎಸ್‍ವೈ, ಎರಡು ದಿನಗಳ ಬಳಿಕ ವಿಧಾನಸೌಧದಲ್ಲಿ ಸಚಿವರು, ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ್ದರು.

TAGGED:bjpeshwarappakannadanewskarnatakapoliticsYediyurppaಈಶ್ವರಪ್ಪಕನ್ನಡ ನ್ಯೂಸ್ಕರ್ನಾಟಕನರೇಂದ್ರ ಮೋದಿಬಿಜೆಪಿಯಡಿಯೂರಪ್ಪರೇಣುಕಾಚಾರ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Leopard 1
Mysuru

ಮೈಸೂರು | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮನೆ ಹೊಕ್ಕಿದ್ದ ಚಿರತೆ ಸೆರೆ

Public TV
By Public TV
43 seconds ago
Mandya Youth Death
Districts

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು

Public TV
By Public TV
4 minutes ago
Fruits
Bengaluru City

ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ

Public TV
By Public TV
25 minutes ago
Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
1 hour ago
Rahul Gandhi 3
Latest

ದ್ವಿಪೌರತ್ವ ಪ್ರಕರಣ – ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

Public TV
By Public TV
1 hour ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?