ಡೆಹರೂಡಾನ್: ಬೈರಗಿ ಕ್ಯಾಂಪ್ನಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಭಾನುವಾರ ಹರಿದ್ವಾರದ ಕುಂಭ ಮೇಳದಲ್ಲಿ ಹಲವಾರು ಗುಡಿಸಲುಗಳು ಸುಟ್ಟು ಕರಕಲಾಗಿವೆ.
ಜೋರಾಗಿ ಗಾಳಿ ಬೀಸಿದ್ದರಿಂದ ಬೆಂಕಿಯು ವೇಗವಾಗಿ ಹರಡಿ ಹಲವಾರು ಗುಡಿಸಲುಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಹೀಗಾಗಿ ಬೆಂಕಿ ನಂದಿಸಲು ಕೂಡಲೇ ಅಗ್ನಿ ಶಾಮಕ ದಳ ವಾಹನವನ್ನು ಸ್ಥಳಕ್ಕೆ ಕರೆಸಲಾಯಿತು ಎಂದು ವೃತ್ತ ಅಧಿಕಾರಿ ಅಭಯ್ ಪ್ರತಾಪ್ ಸಿಂಗ್ ಹೇಳಿದ್ದಾರೆ.
ಸದ್ಯ ಘಟನೆ ವೇಳೆ ಅದೃಷ್ಟವಶತ್ ಪ್ರಾಣ ಹಾನಿಯಾಗಿಲ್ಲ. ಅಲ್ಲದೆ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 10 ದಿನಗಳ ಹಿಂದೆ ಕೂಡ ಬೈರಗಿ ಕ್ಯಾಂಪ್ನಲ್ಲಿ ಬೆಂಕಿ ಕಾಣಿಸಿಕೊಂಡು ಹಲವಾರು ಗುಡಿಸಲುಗಳು ಸುಟ್ಟು ಹೋಗಿದ್ದವು. ಇದೀಗ ಮತ್ತೆ ಘಟನೆ ಮರುಕಳಿಸಿದೆ.