ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೊಟ್ಟೂರು ಆತ್ಮಹತ್ಯೆಗೆ ಯತ್ನ

Public TV
1 Min Read
chaitra 1

ಕೋಲಾರ: ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೊಟ್ಟೂರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮದುವೆಯಾದ ದಿನವೇ ಪೊಲೀಸ್ ಠಾಣೆ ಮಟ್ಟಿಲೇರಿದ್ದ ಇವರು, ಇದೀಗ ಕೋಲಾರ ನಗರದ ಕುರುಬರ ಪೇಟೆ ಮನೆಯಲ್ಲಿ ಆತ್ಮಹತ್ಯೆಗೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಸದ್ಯ ಚೈತ್ರಾ ಅವರು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮದುವೆ ವಿಚಾರವಾಗಿ ವಿವಾದದ ಹಿನ್ನೆಲೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

FotoJet 12 1

ಮಾರ್ಚ್-28 ರಂದು ಮಂಡ್ಯ ಮೂಲದ ನಾಗಾರ್ಜುನ್ ಎಂಬವರೊಂದಿಗೆ ಚೈತ್ರಾ ಮದುವೆಯಾಗಿದ್ದರು. ಆದರೆ ಮದುವೆಯಾದ ದಿನವೇ ವಿವಾದ ಎಬ್ಬಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ನಾಗಾರ್ಜುನ್ ನನಗೆ ಈ ವಿವಾಹ ಇಷ್ಟವಿಲ್ಲ ಎಂದು ಹೇಳಿದ್ದರು. ಆದರೆ ಚೈತ್ರಾ ಕೊಟ್ಟೂರು ಮಾತ್ರ ನನಗೆ ನಾಗಾರ್ಜುನ್ ತುಂಬಾ ಇಷ್ಟ. ಅವರ ಜೊತೆಯೇ ಹೋಗುತ್ತೇನೆ ಎಂದು ಪಟ್ಟು ಹಿಡಿದ್ದರು.

chaitra web

ನಾಗಾರ್ಜುನ್ ಗೆ ಚೈತ್ರಾ ಜೊತೆ ಮದುವೆಯಾಗುವುದು ಇಷ್ಟವಿರಲಿಲ್ಲ. ಸಂಘಟನೆಗಳ ಜೊತೆಗೂಡಿ ಬಲವಂತವಾಗಿ ನಾಗಾರ್ಜುನ್ ರನ್ನ ಕೂಡಿ ಹಾಕಿ ದೇಗುಲದಲ್ಲಿ ವಿವಾಹ ಮಾಡಿಸಲಾಗಿದೆ. ಸಂಘಟನೆಗಳ ಬೆದರಿಕೆಗೆ ಬಗ್ಗಿದ ನಾಗಾರ್ಜುನ್, ಬಲವಂತವಾಗಿ ಚೈತ್ರಾಗೆ ತಾಳಿ ಕಟ್ಟಿದ್ದಾರೆ. ನಾಗಾರ್ಜುನ್ ಸೇರಿ ಮನೆಯವರಿಗೆ ಚೈತ್ರಾ ಜೊತೆ ಮದುವೆ ಇಷ್ಟವಿರಲಿಲ್ಲ ಎಂದು ಕೋಲಾರದ ಕುರುಬರಪೇಟೆಯ ಚೈತ್ರಾ ಮನೆಗೆ ಬಂದು ನಾಗಾರ್ಜುನ್ ಕುಟುಂಬದವರು ತಗಾದೆ ತೆಗೆದಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಆ ಬಳಿಕ ಇಬ್ಬರ ಕುಟುಂಬಸ್ಥರು ಸೇರಿ ಸಮಸ್ಯೆ ಬಗೆಹರಿಸಿಕೊಳ್ಳಲು ನಿರ್ಧಾರ ಮಾಡಿದ್ದರು.

klr chaitra kottur

Share This Article
Leave a Comment

Leave a Reply

Your email address will not be published. Required fields are marked *