Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಬೆಂಗಳೂರು ಪಶ್ಚಿಮ ವಲಯದ ಕೋವಿಡ್ ಪರಿಸ್ಥಿತಿ ಅವಲೋಕಿಸಿದ ಡಿಸಿಎಂ

Public TV
Last updated: April 12, 2021 6:07 pm
Public TV
Share
4 Min Read
ASHWATHNARAYAN 1 1
SHARE

– ದಿನಕ್ಕೆ 10,000 ಜನರಿಗೆ ಪರೀಕ್ಷೆ
– ದಿನದ 24 ಗಂಟೆಯೂ ಕೋವಿಡ್ ಹೆಲ್ಪ್ ಲೈನ್

ಬೆಂಗಳೂರು: ಕೋವಿಡ್ ಸೋಂಕಿತರು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪಶ್ಚಿಮ ವಲಯದಲ್ಲಿ ದಿನಕ್ಕೆ 10,000 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲು ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ASHWATHNARAYAN 4

ಮಲ್ಲೇಶ್ವರದ ಬಿಬಿಎಂಪಿ ಜಂಟಿ ಆಯುಕ್ತರ ಕಚೇರಿಯಲ್ಲಿ ನಗರದ ಪಶ್ಚಿಮ ವಲಯದ ಕೋವಿಡ್ ಸ್ಥಿತಿಗತಿಯ ಬಗ್ಗೆ ಅವಲೋಕನ ನಡೆಸಿದ ಅಶ್ವತ್ಥನಾರಾಯಣ ಅವರು, ಸದ್ಯಕ್ಕೆ ದಿನಕ್ಕೆ 6,000 ಜನರಿಗೆ ಪರೀಕ್ಷೆ ಮಾಡಲಾಗುತ್ತಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ದಿನಕ್ಕೆ 8,000 ಜನರನ್ನು ತಪಾಸಣೆಗೆ ಒಳಪಡಿಸಲಾಗುವುದು. ಈ ಪ್ರಮಾಣವನ್ನು 10,000ಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.

ಏಪ್ರಿಲ್ 1ರಿಂದ 10ನೇ ತಾರೀಖಿನೊಳಗೆ ಇದ್ದಕ್ಕಿದ್ದ ಹಾಗೆ ಪಶ್ಚಿಮ ವಲಯವೂ ಸೇರಿ ಇಡೀ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಲು ಕಾರಣವೇನು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಅದಕ್ಕಾಗಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯವಾಗಿ, ಯಾರೇ ಓರ್ವ ಸೋಂಕಿತ ಪತ್ತೆಯಾದ ಮೇಲೆ ಆತನ ಪ್ರೈಮರಿ ಮತ್ತು ಸೆಕೆಂಡರಿ ಕಾಂಟ್ಯಾಕ್ಟ್ ನಲ್ಲಿರುವ ಕನಿಷ್ಠ 20 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಈ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು ಎಂದು ಮಾಹಿತಿ ಹಂಚಿಕೊಂಡರು.

ASHWATH NARAYAN

ಸೋಂಕಿತರಿಗೆ ಅತ್ಯುತ್ತಮ ಚಿಕಿತ್ಸೆ ನೀಡಲಾಗುವುದು. ಅವರು ಆಸ್ಪತ್ರೆ ಅಥವಾ ತಮ್ಮ ಮನೆಯಲೇ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯಬಹುದು. ಅವರಿಗೆ ಎಲ್ಲ ರೀತಿಯ ಔಷಧೋಪಚಾರ ಮಾಡಲಾಗುವುದು. ಈಗಾಗಲೇ ಈ ವಲಯದಲ್ಲಿ 4,500ಕ್ಕೂ ಹೆಚ್ಚು ಸೋಂಕಿತರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ಅವರಿಗೆ ಕೋವಿಡ್ ಮಾರ್ಗಸೂಚಿಯಂತೆ ಮೆಡಿಕಲ್ ಕಿಟ್ ನೀಡಲಾಗಿದ್ದು ಕಾಲಕಾಲಕ್ಕೆ ಅವರ ಮೇಲೆ ನಿಗಾ ಇರಿಸಲಾಗಿದೆ. ಇನ್ನೂ 700 ಜನ ಮಾತ್ರ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಡಿಸಿಎಂ ತಿಳಿಸಿದರು.

ಹೆಲ್ಪ್ ಲೈನ್
ಈ ವಲಯದಲ್ಲಿ ಎಲ್ಲೆಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತದೆ ಎಂಬ ಮಾಹಿತಿಯನ್ನು ಪ್ರತಿಯೊಬ್ಬ ವ್ಯಕ್ತಿಗೂ ನೀಡಲಾಗುತ್ತದೆ. ನವ ಮಾಧ್ಯಮಗಳ ಮೂಲಕ, ಮಾಧ್ಯಮಗಳ ಮೂಲಕ ಹಾಗೂ ಕರಪತ್ರಗಳ ಮೂಲಕ ಮಾಹಿತಿ ಕೊಡಲಾಗುತ್ತಿದೆ. ಕೋವಿಡ್ ಹೆಲ್ಪ್‍ಲೈನ್ 080-68248454 ಸಂಖ್ಯೆಗೆ ದಿನದ 24 ಗಂಟೆಯೂ ಕರೆ ಮಾಡಬಹುದು. ಜೊತೆಗೆ, ವಲಯದಲ್ಲಿ 84 ಮೊಬೈಲ್ ತಂಡಗಳಿವೆ. ಕೂಡಲೇ ಈ ತಂಡಗಳ ಸಂಖ್ಯೆಯನ್ನು 100ಕ್ಕೇರಿಸಲಾಗುವುದು. ಇನ್ನು ಸೋಂಕಿತರಿಗೆ ಯಾವ ರೀತಿಯ ಚಿಕಿತ್ಸೆ ನೀಡಬೇಕು ಎಂಬುದನ್ನು ಬಹಳ ವೈಜ್ಞಾನಿಕವಾಗಿ ಲೈನಪ್ ಮಾಡಲಾಗಿದೆ. ಇದರೊಂದಿಗೆ ಜನರಿಂದ ಸ್ಯಾಂಪಲ್ ಕಲೆಕ್ಟ್ ಮಾಡಿದ 24 ಗಂಟೆಯೊಳಗೇ ರಿಸಲ್ಟ್ ಕೊಡಲಾಗುತ್ತಿದೆ ಎಂದು ಹೇಳಿದರು.

ಹಾಸಿಗೆಗಳ ಕೊರತೆ ಇಲ್ಲ
ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿದ್ದರೂ ಪಶ್ಚಿಮ ವಲಯದ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆಗಳ ಕೊರತೆ ಇಲ್ಲ. ಹೀಗಾಗಿ ಜನರು ಆತಂಕಗೊಳ್ಳಬೇಕಾದ ಅಗತ್ಯವಿಲ್ಲ. ಸರ್ಕರ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆಗಳ ಕೊರತೆ ಇಲ್ಲ. ಎಲ್ಲಡೆ ವ್ಯಾಪಕ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಳೆದ ವರ್ಷ ಈ ಸೋಂಕು ಬಂದಾಗ ಇದರ ತೀವ್ರತೆ ಹೆಚ್ಚಾಗಿತ್ತು. ಆದರೆ, ಎರಡನೇ ಅಲೆ ಸಂದರ್ಭದಲ್ಲಿ ಸೋಂಕು ವೇಗವಾಗಿ ಹರಡುತ್ತಿದ್ದರೂ ಆದರ ತೀವ್ರತೆ, ಅಂದರೆ ಜೀವಕ್ಕೆ ಅಪಾಯವಾಗುವ ಪ್ರಮಾಣ ಕಡಿಮೆಯಾಗಿದೆ. ಜೀವಕ್ಕೆ ಅಪಾಯವಿಲ್ಲ. ಹೆದರುವ ಅಗತ್ಯ ಇಲ್ಲ ಎಂದು ತಿಳಿಸಿದರು.

ASHWATHNARAYAN 3

ಮಲ್ಲೇಶ್ವರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗಾಗಿ ಈಗಾಗಲೇ 50 ಐಸಿಯು ಬೆಡ್‍ಗಳಿವೆ. ಇದನ್ನು 100ಕ್ಕೆ ಹೆಚ್ಚಿಸಲಾಗುವುದು. ಈ ಭಾಗದ ಜನರಿಗೆ ಸ್ಥಳೀಯ ಆಸ್ಪತ್ರೆಗಳಲ್ಲೇ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಲಾಗುತ್ತಿದೆ. ಕೋವಿಡ್ ಅಲ್ಲದ ರೋಗಿಗಳಿಗೂ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲಾಗಿದ್ದು, ಇತರ ರೋಗಿಗಳಿಗೆ 350 ಬೆಡ್‍ಗಳನ್ನು ಮೀಸಲಿರಿಸಲಾಗಿದೆ. ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ 500 ಬೆಡ್‍ಗಳನ್ನು ಕೋವಿಡ್ ಸೋಂಕಿತರಿಗಾಗಿಯೇ ನೀಡಲು ಸಿದ್ಧರಿದ್ದಾರೆ. ಅಲ್ಲಿ ಸದ್ಯಕ್ಕೆ 300 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ 100 ಹಾಸಿಗೆ ಖಾಲಿ ಇದೆ. ಹೆಚ್ಚುವರಿಯಾಗಿ 100 ಹಾಸಿಗೆ ನೀಡಲು ಅವರು ಸಿದ್ಧರಿದ್ದಾರೆ. ಅದೇ ರೀತಿ ಗಾಂಧೀನಗರದ ಆಯುರ್ವೇದ ಆಸ್ಪತ್ರೆ, ಗೋವಿಂದರಾಜ ನಗರದ ಆಸ್ಪತ್ರೆಯಲ್ಲೂ ಕೋವಿಡ್ ಹಾಸಿಗೆಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ವ್ಯಾಕ್ಸಿನೇಷನ್‍ಗೆ ಉತ್ತಮ ಪ್ರತಿಕ್ರಿಯೆ
ಪಶ್ಚಿಮ ವಿಭಾಗದಲ್ಲಿ ನಿಗದಿ ಮಾಡಿದಂತೆ ಶೇ.45ರಷ್ಟು ವ್ಯಾಕ್ಸಿನೇಷನ್ ಗುರಿ ತಲುಪಲಾಗಿದೆ. ಲಸಿಕೆ ಲಭ್ಯವಿದ್ದು, 45 ವರ್ಷ ಮೇಲ್ಪಟ್ಟವರಿಗೆ ಎಲ್ಲಡೆ ವ್ಯಾಕ್ಸಿನ್ ಕೊಡಲಾಗುತ್ತಿದೆ. ಪ್ರತಿಯೊಬ್ಬರೂ ತಮಗೆ ಸಮೀಪ ಇರುವ ಲಸಿಕಾ ಕೇಂದ್ರಕ್ಕೆ ಹೋಗಿ ವ್ಯಾಕ್ಸಿನ್ ಪಡೆಯಬೇಕು. ವ್ಯಾಕ್ಸಿನ್ ಪಡೆದರೆ ಸೋಂಕಿನ ಸಂಪರ್ಕ ಕೊಂಡಿಯನ್ನು ತುಂಡರಿಸಬಹುದು. ಹೀಗಾಗಿ ಲಸಿಕೆ ಹಾಕುವುದನ್ನು ಮತ್ತಷ್ಟು ವೇಗಗೊಳಿಸಲಾಗುವುದು. ಇದಕ್ಕೆ ಬೇಕಾದ ಎಲ್ಲ ಮಾಹಿತಿಯನ್ನು ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ASHWATHNARAYAN 2 1

ಲಾಕ್‍ಡೌನ್ ಮಾಡುವುದಿಲ್ಲ
ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಸಾಧ್ಯತೆ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಲಾಕ್‍ಡೌನ್ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಈಗಾಗಲೇ ಸ್ಪಷ್ಟ ಪಡಿಸಿದ್ದಾರೆ. ಜೀವವು ಉಳಿಯಬೇಕು, ಜೀವನವೂ ನಡೆಯಬೇಕು ಎಂಬುದು ಸರಕಾರದ ನಿಲುವು. ಹೀಗಾಗಿ ಕೆಲ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಜನರು ಸರ್ಕಾರ ಕೈಗೊಳ್ಳುವ ಕ್ರಮಗಳನ್ನು, ಕೊಡುವ ಸೂಚನೆಗಳನ್ನು ಪಾಲಿಸಬೇಕು. ಈಗ ವಿಧಿಸಲಾಗಿರುವ ನೈಟ್ ಕಫ್ರ್ಯೂವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

ಆರೋಗ್ಯ ಇಲಾಖೆ ಆಯುಕ್ತ ಡಾ.ತ್ರಿಲೋಕಚಂದ್ರ, ಬಿಬಿಎಂಪಿ ಪಶ್ಚಿಮ ವಲಯದ ಕೋವಿಡ್ ಉಸ್ತುವಾರಿ ಐಎಎಸ್ ಅಧಿಕಾರಿ ಪ್ರಜ್ವಲ್ ಘೋಷ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

TAGGED:Ashwath NarayanbengaluruCoronaCovid 19Public TVYediyurappaಅಶ್ವತ್ಥನಾರಾಯಣಕೊರೊನಾಕೋವಿಡ್ 19ಪಬ್ಲಿಕ್ ಟಿವಿಬೆಂಗಳೂರುಯಡಿಯೂರಪ್ಪಲಾಕ್‍ಡೌನ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Dhanush
ಧನುಷ್ ನನ್ನ ಗೆಳೆಯ – ಡೇಟಿಂಗ್ ವದಂತಿಗೆ ತೆರೆ ಎಳೆದ ಮೃಣಾಲ್ ಠಾಕೂರ್
Cinema Latest South cinema Top Stories
Love me like you do forever to go Yash Radhika Pandit Engagement 9th anniversary
ಉಂಗುರಕ್ಕೆ 9ನೇ ವರ್ಷದ ಸಂಭ್ರಮ – ವಿಶೇಷ ನೆನಪು ಹಂಚಿಕೊಂಡ ರಾಧಿಕಾ
Cinema Latest Sandalwood Top Stories
rajinikanth upendra
`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood
Darshan 11
ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್
Bengaluru City Cinema Court Latest Sandalwood Top Stories

You Might Also Like

Dharmasthala Protest 4
Belgaum

ಧರ್ಮಸ್ಥಳದ ವಿರುದ್ಧ ಅಪಪ್ರಚಾರ | ರಾಜ್ಯಾದ್ಯಂತ ಪ್ರತಿಭಟನೆ – ವಿಧಾನಸೌಧದಲ್ಲಿ ಹೆಣ ಇದೆ ಅಂದ್ರೆ ಅಗೆಯುತ್ತಾರಾ? ಭಕ್ತರ ಆಕ್ರೋಶ

Public TV
By Public TV
6 minutes ago
indian soldier
Latest

ಎಲ್‌ಓಸಿಯಲ್ಲಿ ಪಾಕ್ ಒಳನುಸುಳುಕೋರರ ತಡೆದ ಸೇನೆ; ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ ಹುತಾತ್ಮ

Public TV
By Public TV
19 minutes ago
CRIME
Bengaluru City

Bengaluru | ಲೇಡಿಸ್ ಪಿಜಿಗೆ ನುಗ್ಗಿ ಎಂಜಿನಿಯರ್ ಕುತ್ತಿಗೆಗೆ ಚಾಕು ಇಟ್ಟು ಚಿನ್ನಾಭರಣ ದರೋಡೆ

Public TV
By Public TV
37 minutes ago
Suresh Raina
Cricket

ಆನ್‌ಲೈನ್ ಬೆಟ್ಟಿಂಗ್ – ಇಡಿ ವಿಚಾರಣೆಗೆ ಹಾಜರಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ

Public TV
By Public TV
49 minutes ago
Vijayanagara ED Raid
Bellary

ಬೆಳ್ಳಂಬೆಳಗ್ಗೆ ಇಬ್ಬರು ಗಣಿ ಉದ್ಯಮಿಗಳಿಗೆ ಇ.ಡಿ ಶಾಕ್ – ಮನೆ, ಕಚೇರಿ, ಸ್ಟೀಲ್ ಅಂಗಡಿ ಮೇಲೆ ದಾಳಿ

Public TV
By Public TV
58 minutes ago
Dharmasthala SIT
Dakshina Kannada

ಧರ್ಮಸ್ಥಳ ಕೇಸ್; 16 ಸ್ಪಾಟ್‌ಗಳಲ್ಲಿ ಸಿಗದ ಕುರುಹು – ದೂರುದಾರನ ಮಂಪರು ಪರೀಕ್ಷೆಗೆ ಎಸ್‌ಐಟಿ ಚಿಂತನೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?