Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ಇಂದು 3,200ಕ್ಕೂ ಹೆಚ್ಚು ಬಸ್ಸುಗಳ ಸಂಚಾರ – ಸಾರಿಗೆ ಸಿಬ್ಬಂದಿಗೆ ಸವದಿ ಧನ್ಯವಾದ

Public TV
Last updated: April 12, 2021 7:02 pm
Public TV
Share
3 Min Read
Laxman Savadi 3
SHARE

ಬೆಂಗಳೂರು: ಇಂದು ಕರ್ನಾಟಕದಲ್ಲಿ 3,200ಕ್ಕೂ ಹೆಚ್ಚು ಬಸ್ಸುಗಳು ರಸ್ತೆಗೆ ಇಳಿದಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿ ಕರ್ತವ್ಯಕ್ಕೆ ಹಾಜರಾದ ಸಾರಿಗೆ ಸಿಬ್ಬಂದಿಗೆ ಧನ್ಯವಾದ ಹೇಳಿದ್ದಾರೆ.

ಮಾಧ್ಯಮ ಹೇಳಿಕೆಯಲ್ಲಿ ಏನಿದೆ?
ಹಲವಾರು ಅಡೆತಡೆಗಳನ್ನು ಎದುರಿಸಿಯೂ ನಮ್ಮ ನಿರೀಕ್ಷೆಯಂತೆ ಇಂದು ಮಧ್ಯಾಹ್ನದ ವೇಳೆಗೆ ನಮ್ಮ ಸಾರಿಗೆ ನಿಗಮಗಳ 3200ಕ್ಕೂ ಹೆಚ್ಚು ಬಸ್ಸುಗಳು ಸಂಚರಿಸಿ ಸಾರ್ವಜನಿಕರಿಗೆ ಅನುಕೂಲವಾಯಿತು. ನಮ್ಮ ಮನವಿಗೆ ಓಗುಟ್ಟು ಕರ್ತವ್ಯಕ್ಕೆ ಹಾಜರಾಗಿರುವ ನಮ್ಮ ಸಾರಿಗೆ ಸಿಬ್ಬಂದಿಗಳಿಗೆ ನಾನು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ.

mdk ksrtc bus

ಸಾರ್ವಜನಿಕ ಹಿತದೃಷ್ಟಿಯಿಂದ ಹಲವು ಕಡೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ನಮ್ಮ ನೌಕರರನ್ನು ತಡೆಗಟ್ಟುವ ಪ್ರಯತ್ನಕ್ಕೆ ಮತ್ತು ಅವರ ಮೇಲೆ ಹಲ್ಲೆ ನಡೆಸುವುದಕ್ಕೆ ಕೆಲವರು ಮುಂದಾಗಿದ್ದು, ಅಂಥವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕುರಿತು ಪೊಲೀಸ್ ಠಾಣೆಗಳಲ್ಲೂ ಪ್ರಕರಣ ದಾಖಲಾಗಿವೆ. ಮುಂದೆಯೂ ಇದೇ ರೀತಿ ಪ್ರಕರಣಗಳು ವರದಿಯಾದರೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಮತ್ತು ನಮ್ಮ ನಿಗಮಗಳ ಅಧಿಕಾರಿಗಳ ಗಮನಕ್ಕೆ ತರಲು ಕೋರುತ್ತೇನೆ ಹಾಗೂ ಕರ್ತವ್ಯಕ್ಕೆ ಹಾಜರಾದ ನಮ್ಮ ಸಿಬ್ಬಂದಿಗಳಿಗೆ ಜೀವಬೆದರಿಕೆ ಎದುರಾದಾಗಲೂ ಎದೆಗುಂದದೆ ಸಾರ್ವಜನಿಕರಿಗೆ ಸಾರಿಗೆ ಸೇವೆ ಕಲ್ಪಿಸುವಲ್ಲಿ ಬದ್ಧತೆ ತೋರಿದ ನೌಕರರ ಮತ್ತು ಅಧಿಕಾರಿಗಳ ಕರ್ತವ್ಯ ಪ್ರಜ್ಞೆಯನ್ನು ನಮ್ಮ ಸರ್ಕಾರ ಮುಕ್ತಕಂಠದಿಂದ ಪ್ರಶಂಸಿಸುತ್ತದೆ.

BMTC KSRTC Bus STRIKE 8

ತೆರಿಗೆ ಪಾವತಿಗೆ ಅವಧಿ ವಿಸ್ತರಣೆ
ಸಾರಿಗೆ ನೌಕರರ ಮುಷ್ಕರ ನಿರತರಾಗಿರುವುದರಿಂದ ಖಾಸಗಿ ವಾಹನ ಮಾಲೀಕರು ಸರಕಾರದ ಕೋರಿಕೆಗೆ ಸ್ಪಂದಿಸಿ ಜನಸಾಮಾನ್ಯರ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಪ್ರಯಾಣಿಕ ವಾಹನಗಳ ತೆರಿಗೆ ಪಾವತಿ ಅವಧಿಯನ್ನು ವಿಸ್ತರಿಸಲಾಗಿದೆ. ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯಿದೆ 1957ರ ಕಲಂ4(1) ನಿಯಮಗಳನ್ನು ಸಡಿಲಗೊಳಿಸಿ ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ 2021ರ ಏಪ್ರಿಲ್ 15ರ ಒಳಗಾಗಿ ಪಾವತಿಸಬೇಕಾಗಿದ್ದ ಮೋಟಾರು ವಾಹನ ತೆರಿಗೆಯನ್ನು ದಂಡರಹಿತವಾಗಿ ಪಾವತಿಸಲು ಏಪ್ರಿಲ್ 30 ರವರೆಗೆ ಅವಧಿಯನ್ನು ವಿಸ್ತರಿಸಿ ಇಂದು ಆದೇಶಿಸಲಾಗಿದೆ. ಇದರ ಸೂಕ್ತ ಪ್ರಯೋಜನವನ್ನು ಪಡೆದುಕೊಂಡು ಸಾರ್ವಜನಿಕ ಸೇವೆಗೆ ಮತ್ತಷ್ಟು ಸ್ಪಂದಿಸಬೇಕೆಂದು ವಾಹನ ಮಾಲೀಕರಲ್ಲಿ ನಾನು ವಿನಂತಿಸುತ್ತೇನೆ.

ಪ್ರಸ್ತುತ ಕೋವಿಡ್ 2ನೇ ಅಲೆಯ ಅಪಾಯದ ಸಂದರ್ಭ ಎದುರಾಗಿದೆ. ಅಷ್ಟೇಅಲ್ಲ ಯುಗಾದಿ ಪ್ರಯುಕ್ತ ನೌಕರ ವರ್ಗದವರು ಮತ್ತು ವಿದ್ಯಾರ್ಥಿಗಳು, ಮತ್ತಿತರರು ತಮ್ಮ ಊರುಗಳಿಗೆ ತೆರಳಬೇಕಾದ ಅನಿವಾರ್ಯತೆ ಇರುವ ಪ್ರಯುಕ್ತ ಅವರಿಗೆ ಅನುಕೂಲವಾಗಲು ನೌಕರರು ಕೂಡಲೇ ಕರ್ತವ್ಯಕ್ಕೆ ಮರಳಬೇಕು. ಚುನಾವಣಾ ನೀತಿ ಸಂಹಿತೆಯ ಅವಧಿ ಮುಕ್ತಾಯಗೊಂಡ ನಂತರ ನಮ್ಮ ನೌಕರ ಬಾಂಧವರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ನಾವು ಹಲವಾರು ಬಾರಿ ಮುಷ್ಕರ ನಿರತ ನೌಕರರಲ್ಲಿ ಈಗಾಗಲೇ ಮನವಿ ಮಾಡಿಕೊಂಡಿದ್ದೇವೆ. ಆದರೆ ಇದಕ್ಕೆ ಕೆಲವು ಹೊರಗಿನ ಪಟ್ಟಭದ್ರ ಹಿತಾಸಕ್ತಿಗಳು ಹುಳಿಹಿಂಡುತ್ತಾ ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸುತ್ತಿದ್ದಾರೆ. ಇದರಿಂದಾಗಿ ದಿನದಿಂದ ದಿನಕ್ಕೆ ಈ ಮುಷ್ಕರವು ಸಾರ್ವಜನಿಕರ ಸಹಾನುಭೂತಿಯನ್ನೂ ಕಳೆದುಕೊಳ್ಳುತ್ತಿದೆ.

KSRTC 1

ಇದರಿಂದ ಹತಾಶೆಗೊಂಡಿರುವ ಕೆಲವರು ದಿನದಿಂದ ದಿನಕ್ಕೆ ವಾಮಮಾರ್ಗದ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಾ ಸಾರ್ವಜನಿಕರ ದೃಷ್ಟಿಯಲ್ಲಿ ನಗೆಪಾಟಲಿಗೆ ಈಡಾಗುತ್ತಿದ್ದಾರೆ. ಇದು ಕಂಡವರ ಮಕ್ಕಳನ್ನು ಬಾವಿಗೆ ತಳ್ಳಿ ಖುಷಿಪಡುವ ಯತ್ನ ಎಂಬ ಕಟುಸತ್ಯವನ್ನು ಮುಷ್ಕರನಿರತ ಸಾರಿಗೆ ನೌಕರರು ಅರ್ಥ ಮಾಡಿಕೊಳ್ಳುವುದು ಅಗತ್ಯ. ಆದಷ್ಟೂ ಸಹನೆಯಿಂದ ಈ ಸಮಸ್ಯೆಯನ್ನು ಬಗೆಹರಿಸಲು ಅತ್ಯಂತ ವಿವೇಚನೆಯಿಂದ ಸರ್ಕಾರವು ಹೆಜ್ಜೆ ಇಡುತ್ತಿದೆ. ಆದರೆ ಇದನ್ನು ನಮ್ಮ ದೌರ್ಬಲ್ಯ ಎಂದು ಯಾರೂ ಪರಿಗಣಿಸಬಾರದು ಮತ್ತು ನಮ್ಮ ತಾಳ್ಮೆಯನ್ನು ಮತ್ತಷ್ಟು ಪರೀಕ್ಷಿಸಲು ಯಾರಾದರೂ ಮುಂದಾದರೆ ಅಂಥವರ ವಿರುದ್ಧ ಮುಂದಿನ ಕ್ರಮಗಳು ಮತ್ತಷ್ಟು ಗಂಭೀರವಾಗಿರುತ್ತದೆ ಎಂದು ಮತ್ತೊಮ್ಮೆ ಎಚ್ಚರಿಕೆ ನೀಡಲು ಬಯಸುತ್ತೇನೆ.

ಇದು ಬೇವು ಬೆಲ್ಲದ ಹಬ್ಬವಾದ ಯುಗಾದಿಯ ಪುಣ್ಯ ಸಂದರ್ಭ. ಈ ಸಂದರ್ಭದಲ್ಲಿ ನಮ್ಮ ಸಾರಿಗೆ ನೌಕರರ ಬದುಕಿನಲ್ಲಿ ಬೇವಿಗಿಂತ ಬೆಲ್ಲದ ಸಿಹಿಯೇ ಹೆಚ್ಚು ಸಿಗುವಂತಾಗಲಿ ಎಂದು ಶುಭ ಹಾರೈಸುತ್ತೇನೆ. ಆದ್ದರಿಂದ ಅವರ ಬದುಕಿನಲ್ಲಿ ಬೆಲ್ಲದ ಸವಿ ಹೆಚ್ಚಾಗಲು ಸಾರಿಗೆ ನೌಕರರು ಕೂಡಲೇ ತಮ್ಮ ಕರ್ತವ್ಯಕ್ಕೆ ಹಾಜರಾಗಿ ಜನರ ಪ್ರೀತಿ ವಿಶ್ವಾಸಕ್ಕೆ ಭಾಜನರಾಗಬೇಕೆಂದು ನಾನು ಪುನರುಚ್ಛರಿಸುತ್ತೇನೆ.

TAGGED:BMTCkannada newskarnatakaksrtcKSRTC StrikeLaxman Savadiಕರ್ನಾಟಕಕೆಎಸ್‍ಆರ್‍ಟಿಸಿಬಿಎಂಟಿಸಿಬೆಂಗಳೂರುಯುಗಾದಿಲಕ್ಷಣ ಸವದಿ
Share This Article
Facebook Whatsapp Whatsapp Telegram

Cinema Updates

sapthami gowda
ತೆಲುಗಿಗೆ ‘ಕಾಂತಾರ’ ಲೀಲಾ- ‘ಮೂಡ್ ಆಫ್ ತಮ್ಮುಡು’ ಚಿತ್ರದ ಟೀಸರ್ ಔಟ್
7 hours ago
aamir khan
ತಡವಾಗಿ ಆಮೀರ್ ಖಾನ್ ಪ್ರಶಂಸೆ- ಈಗ ಎಚ್ಚರವಾದ್ರಾ ಎಂದು ಪ್ರಶ್ನಿಸಿದ ನೆಟ್ಟಿಗರು
8 hours ago
nikki tamboli
ಬಾಯ್‌ಫ್ರೆಂಡ್ ಜೊತೆಗಿನ ಹಸಿಬಿಸಿ ಪ್ರಣಯದ ಫೋಟೋ ಹಂಚಿಕೊಂಡ ‘ಬಿಗ್ ಬಾಸ್’ ನಿಕ್ಕಿ
9 hours ago
Meenakshi Chaudhary Dhoni
ನಂಗೆ ಧೋನಿ ಮೇಲೆ ಸಕತ್ ಲವ್ – ಮೀನಾಕ್ಷಿ ಚೌಧರಿ ಮನದಾಳದ ಮಾತು‌
10 hours ago

You Might Also Like

War Historian Tom Cooper
Latest

ಪಾಕ್‌ ನ್ಯೂಕ್‌ ವೆಪನ್‌ ಫೆಸಿಲಿಟಿ ಮೇಲೆ ದಾಳಿಯಾಗಿದೆ, ಭಾರತಕ್ಕೆ ಜಯ ಸಿಕ್ಕಿದೆ: ಟಾಮ್‌ ಕೂಪರ್‌

Public TV
By Public TV
45 minutes ago
Weather 1
Bagalkot

17 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಜಾರಿ

Public TV
By Public TV
2 hours ago
Davanagere PC Death
Crime

ವಾಹನ ತಪಾಸಣೆ ವೇಳೆ ಲಾರಿ ಹರಿದು ಪೊಲೀಸ್ ಕಾನ್ಸ್‌ಟೇಬಲ್‌ ಸಾವು

Public TV
By Public TV
2 hours ago
Parameshwar
Districts

Tumakuru | ಗಣಿ ಬಾಧಿತ ಪ್ರದೇಶಕ್ಕೆ 1,200 ಕೋಟಿ ರೂ. ಹಂಚಿಕೆ: ಪರಮೇಶ್ವರ್

Public TV
By Public TV
2 hours ago
Donald Trump Special Flight From Qatar
Latest

ಟ್ರಂಪ್‌ಗೆ ಕತಾರ್‌ನಿಂದ 3,400 ಕೋಟಿ ಮೌಲ್ಯದ ಐಷಾರಾಮಿ ವಿಮಾನ ಗಿಫ್ಟ್ – ವಿಶೇಷತೆ ಏನು?

Public TV
By Public TV
2 hours ago
Rain In Bengaluru
Bengaluru City

ಬೆಂಗಳೂರಿನ ಹಲವೆಡೆ ಆಲಿಕಲ್ಲು ಮಳೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?