– 13 ಸಾವಿರ ದಾಟಿದ ಒಟ್ಟು ಸಾವನ್ನಪ್ಪಿದವರ ಸಂಖ್ಯೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 8,778 ಜನರಿಗೆ ಕೊರೊನಾ ಸೋಂಕು ತಗುಲಿದೆ. 67 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 5,500 ಜನರಿಗೆ ಸೋಂಕು ತಗುಲಿದ್ದು, ಸಿಲಿಕಾನ್ ಸಿಟಿಯಲ್ಲಿ 55 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 78,617ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,83,647ಕ್ಕೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ಇಂದು 6,079 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ವರೆಗೆ ಒಟ್ಟು 9,92,003 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇಂದಿನ 13/04/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/5xFLiXbZZ8 @mla_sudhakar @PriyankKharge @BelladArvind @kiranshaw @WFRising @BangaloreBuzz @RCBTweets @NammaKarnataka_@ADinfodeptBIDAR @MangaloreCity pic.twitter.com/zZ5dCoPdME
— K’taka Health Dept (@DHFWKA) April 13, 2021
ಈ ವರೆಗೆ ಒಟ್ಟು 13,008 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 474 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 10,883 ಆಂಟಿಜನ್ ಟೆಸ್ಟ್, 1,11,016 ಆರ್ ಟಿಪಿಸಿಆರ್ ಸೇರಿದಂತೆ ಒಟ್ಟು 1,21,899 ಕೊರೊನಾ ಪರೀಕ್ಷೆ ಮಾಡಲಾಗಿದೆ. ಇಂದು ರಾಜ್ಯದಲ್ಲಿ ಒಟ್ಟು 9,195 ಮಂದಿಗೆ ಲಸಿಕೆ ನೀಡಲಾಗಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 73, ಬಳ್ಳಾರಿ 168, ಬೆಳಗಾವಿ 42, ಬೆಂಗಳೂರು ಗ್ರಾಮಾಂತರ 163, ಬೆಂಗಳೂರು ನಗರ 5,500, ಬೀದರ್ 198, ಚಾಮರಾಜನಗರ 51, ಚಿಕ್ಕಬಳ್ಳಾಪುರ 114, ಚಿಕ್ಕಮಗಳೂರು 19, ಚಿತ್ರದುರ್ಗ 45, ದಕ್ಷಿಣ ಕನ್ನಡ 142, ದಾವಣಗೆರೆ 66, ಧಾರವಾಡ 132, ಗದಗ 30, ಹಾಸನ 150, ಹಾವೇರಿ 17, ಕಲಬುರಗಿ 290, ಕೊಡಗು 14, ಕೋಲಾರ 67, ಕೊಪ್ಪಳ 29, ಮಂಡ್ಯ 114, ಮೈಸೂರು 492, ರಾಯಚೂರು 80, ರಾಮನಗರ 37, ಶಿವಮೊಗ್ಗ 95, ತುಮಕೂರು 350, ಉಡುಪಿ 75, ಉತ್ತರ ಕನ್ನಡ 75, ವಿಜಯಪುರ 105 ಹಾಗೂ ಯಾದಗಿರಿಯಲ್ಲಿ 45 ಪ್ರಕರಣಗಳು ವರದಿಯಾಗಿವೆ.
ಬೆಂಗಳೂರು ನಗರ 172, ಕಲಬುರಗಿ 44, ಕೋಲಾರ 39, ಮೈಸೂರು 31, ಧಾರವಾಡ 21, ಬೀದರ್ 21 ಹಾಗೂ ತುಮಕೂರಿನಲ್ಲಿ 20 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.