Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮೃತದೇಹ ಕೂಡಲೇ ಹಸ್ತಾಂತರಿಸಿ, ವಿಳಂಬವಾದರೆ ಆಸ್ಪತ್ರೆಗಳ ವಿರುದ್ಧ ಕ್ರಮ: ಡಿಸಿಎಂ

Public TV
Last updated: April 23, 2021 9:46 pm
Public TV
Share
3 Min Read
dcm ashwath narayan
SHARE

– ಮೆಡಿಕಲ್ ಕಿಟ್, ಚಿತಾಗಾರ ಸಮಸ್ಯೆ, ರೆಮ್‍ಡಿಸಿವಿರ್ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ

ಬೆಂಗಳೂರು: ನಗರದ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಅಥವಾ ಕೋವಿಡ್‍ಯೇತರ ಕಾರಣದಿಂದ ಯಾರೇ ಮೃತಪಟ್ಟರೂ ಕೂಡಲೇ ಮೃತ ದೇಹವನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಬೇಕು. ಮೃತದೇಹ ನೀಡುವುದು ತಡವಾದರೆ ಆಸ್ಪತ್ರೆ ವಿರುದ್ಧ ಕ್ರಮ ಜರುಗಿಸಿ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದರು.

WhatsApp Image 2021 04 23 at 7.25.58 PM e1619194377916

ಶುಕ್ರವಾರ ಕೋವಿಡ್ ನಿರ್ವಹಣೆ ಸಂಬಂಧ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಆಸ್ಪತ್ರೆಯಿಂದ ಮೃತದೇಹವನ್ನು ಸಂಬಂಧಿಕರಿಗೆ ತಡವಾಗಿ ನೀಡುತ್ತಿರುವುದರಿಂದ ಚಿತಾಗಾರಗಳಲ್ಲಿ ಸಮಸ್ಯೆ ಹೆಚ್ಚಾಗುತ್ತಿದೆ. ಒಮ್ಮೆಗೇ ಮೃತದೇಹಗಳನ್ನು ತರುತ್ತಿರುವುದರಿಂದ ಅವುಗಳ ನಿರ್ವಹಣೆ ಕಷ್ಟವಾಗುತ್ತಿದೆ. ಹೀಗಾಗಿ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರಿಗೆ ಸೂಚಿಸಿದರು.

ಮೃತರ ಸಂಬಂಧಿಕರು ಮೊದಲೇ ದುಃಖದಲ್ಲಿರುತ್ತಾರೆ. ಅವರ ನೋವನ್ನು ಮತ್ತಷ್ಟು ಹೆಚ್ಚಿಸುವ ಕೆಲಸ ಆಗಬಾರದು. ಕೂಡಲೇ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ ಮೃತದೇಹವನ್ನು ಹಸ್ತಾಂತರ ಮಾಡಬೇಕು ಎಂದರು.

corona ambulence

ಗ್ಯಾಸ್ ಚಿತಾಗಾರ:
ನಗರದ 13 ವಿದ್ಯುತ್ ಚಿತಾಗಾರಗಳಲ್ಲಿ ಅಂತ್ಯಕ್ರಿಯೆ ನಡೆಯುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗಿರುವ ಕಾರಣ ಶವಸಂಸ್ಕಾರ ತಡ ಆಗುತ್ತಿದೆ. ಹೀಗಾಗಿ ಪ್ರಾಯೋಗಿಕವಾಗಿ ಸುಮ್ಮನಹಳ್ಳಿ ಮತ್ತು ಗಿಡ್ಡ ಹಳ್ಳಿಯಲ್ಲಿ ಗ್ಯಾಸ್ ಚಿತಾಗಾರಗಳನ್ನು ತುರ್ತಾಗಿ ತೆರೆಯಲು ಉದ್ದೇಶಿಸಲಾಗಿದೆ. ಇದು ಯಶಸ್ವಿಯಾದರೆ ಇತರೆಡೆಯೂ ಆ ವ್ಯವಸ್ಥೆ ಮಾಡಲಾಗುವುದು. ಪ್ರತಿ ಚಿತಾಗಾರಕ್ಕೂ 15 ಸ್ಟ್ರೆಚರ್‍ಗಳನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ. ಪ್ರತಿ ಚಿತಾಗಾರಕ್ಕೂ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ ಸಮಸ್ಯೆಗಳಿದ್ದರೆ ಬಗೆಹರಿಸುವಂತೆ ತಿಳಿಸಲಾಗಿದೆ ಎಂದು ವಿವರಿಸಿದರು.

Held an emergency meeting in Bengaluru with the Chief Minister’s Political Secretary, Shri @SRVishwanathBJP, @BBMPCOMM and senior officials on the current situation.

1/4 pic.twitter.com/5ig7OioeeL

— Dr. Ashwathnarayan C. N. (@drashwathcn) April 23, 2021

ಪ್ರತಿ ಆರೋಗ್ಯ ಸೇವಾ ಕೇಂದ್ರಕ್ಕೂ ಅನುದಾನ
ನಗರದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೋಂಕಿತರಿಗೆ, ಅದರಲ್ಲೂ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಕೊಡಮಾಡುವ ಮೆಡಿಕಲ್ ಕಿಟ್ ಕೊರತೆ ಉಂಟಾಗಿದೆ. ಕೂಡಲೇ ಈ ಕಿಟ್‍ಗಳನ್ನು ಖರೀದಿ ಮಾಡಲು ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ತಲಾ 2 ಲಕ್ಷ ರೂ. ನೀಡಲಾಗಿದೆ. ಇದು ಸಾಕಾಗುವುದಿಲ್ಲ, ಹೀಗಾಗಿ ವಿಧಾನಸಭಾ ಕ್ಷೇತ್ರವಾರು, ಬಿಬಿಎಂಪಿ ವಿಭಾಗವಾರು ಇನ್ನೂ ಹೆಚ್ಚಿನ ಅನುದಾನ ಅಗತ್ಯ ಇದೆ. ತಕ್ಷಣ ಒದಗಿಸಬೇಕು ಎಂದು ಗೌರವ್ ಗುಪ್ತಾ ಅವರಿಗೆ ಸೂಚಿಸಿದರು. ಹಣ ಒದಗಿಸುವ ಭರವಸೆಯನ್ನು ಗುಪ್ತಾ ನೀಡಿದರು.

corona ambulence 2

ಕೋವಿಡ್ ಸೋಂಕಿತರಿಗೆ ಎಲ್ಲಿಯೂ ರೆಮ್‍ಡಿಸಿವಿರ್ ಸೇರಿ ಯಾವುದೇ ಔಷಧ ಅಥವಾ ಕಿಟ್‍ಗಳ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಕೋವಿಡ್ ಸಹಾಯವಾಣಿ 1912 ಸಂಖ್ಯೆಗೆ ಕೆರೆಗಳು ಹೆಚ್ಚು ಬರುತ್ತಿವೆ. ಸಹಾಯವಾಣಿ ಕೇಂದ್ರದಲ್ಲಿ ಸದ್ಯಕ್ಕೆ ಕರೆ ಸ್ವೀಕರಿಸಲು 30 ಜನರಿದ್ದು, ಇನ್ನೂ 30 ಜನರನ್ನು ನಿಯೋಜಿಸುವಂತೆ ಸೂಚಿಸಿದ್ದೇನೆ. ಕರೆ ಮಾಡುವ ವ್ಯಕ್ತಿಗಳ ಸಮಸ್ಯೆಗಳನ್ನು ಆಲಿಸಿ ಕೂಡಲೇ ಸಂಬಂಧಪಟ್ಟ ವೈದ್ಯಾಧಿಕಾರಿಗಳಿಗೆ ತಿಳಿಸಲಾಗುವುದು ಎಂದರು.

ರಾಜ್ಯದಲ್ಲಿ 7 ಕಡೆ ಕೋವಿಡ್ ಲಸಿಕೆಯನ್ನು ತಯಾರಿಸಲಾಗುತ್ತಿದೆ. ಅಲ್ಲಿಂದ ಲಸಿಕೆ ಬಂದ ಮೇಲೆ ಅದನ್ನು ಸರಿಯಾದ ರೀತಿಯಲ್ಲಿ ಶೇಖರಿಸಿಟ್ಟು ಸಮರ್ಪಕವಾಗಿ ವಿತರಣೆ ಮಾಡಬೇಕು. ದೆಹಲಿಯಲ್ಲಿ ಆದಂತೆ ಯಾವುದೇ ರೀತಿಯಲ್ಲೂ ವ್ಯತ್ಯಯ ಆಗಬಾರದು. ರಾಜ್ಯದಲ್ಲಿ 280 ಆಸ್ಪತ್ರೆಗಳಿಂದ ರೆಮ್‍ಡಿಸಿವಿರ್ ಔಷಧಿಗೆ ಬೇಡಿಕೆ ಬಂದಿದೆ. ಬೇಡಿಕೆ ಅನುಸಾರ ಒದಗಿಸಲಾಗುವುದು ಎಂದು ಡಿಸಿಎಂ ತಿಳಿಸಿದರು.

corona virus 2 1

ಸಭೆಯಲ್ಲಿ ಗೌರವ್ ಗುಪ್ತಾ ಜೊತೆ ಬಿಡಿಎ ಅಧ್ಯಕ್ಷ ಹಾಗೂ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್, ಔಷಧ ನಿಯಂತ್ರಣ ಇಲಾಖೆಯ ಉಪ ನಿರ್ದೇಶಕ ಸುರೇಶ್ ಹಾಗೂ ಇತರರು ಇದ್ದರು.

TAGGED:bbmpCorona VirusDCM Ashwath NarayanPublic TVಕೊರೊನಾ ವೈರಸ್ಡಿಸಿಎಂ ಅಶ್ವಥ್ ನಾರಾಯಣ್ಪಬ್ಲಿಕ್ ಟಿವಿಬಿಬಿಎಂಪಿ
Share This Article
Facebook Whatsapp Whatsapp Telegram

Cinema Updates

Sydney Sweeney
ಸ್ನಾನ ಮಾಡಿದ ನೀರನ್ನು ಸೋಪ್ ಮಾಡಿ 8 ಡಾಲರ್‌ಗೆ ಮಾರಾಟ ಮಾಡ್ತಿದ್ದಾಳೆ ಸಿಡ್ನಿ ಸ್ವೀನಿ!
2 hours ago
Darshan
ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್
3 hours ago
sanjana anand
ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್
4 hours ago
dhruva sarja sudeep
ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?
5 hours ago

You Might Also Like

03 3
Big Bulletin

ಬಿಗ್‌ ಬುಲೆಟಿನ್‌ 30 May 2025 ಭಾಗ-3

Public TV
By Public TV
5 minutes ago
AI ಚಿತ್ರ
Dakshina Kannada

ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆ – ಶನಿವಾರ ಶಾಲೆಗಳಿಗೆ ರಜೆ ಘೋಷಣೆ

Public TV
By Public TV
13 minutes ago
Pramod Tiwari
Latest

ರಾಹುಲ್‌ ಗಾಂಧಿ ಪ್ರಧಾನಿಯಾದ ದಿನ ಪಿಒಕೆ ಭಾರತದ ಭಾಗವಾಗಲಿದೆ: ʻಕೈʼ ಸಂಸದ ಪ್ರಮೋದ್ ತಿವಾರಿ

Public TV
By Public TV
37 minutes ago
Dinesh Gundu Rao 2
Latest

ಮಂಗಳೂರಲ್ಲಿ ‘ಮರಣ ಮಳೆ’ಗೆ 5 ಬಲಿ – ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

Public TV
By Public TV
1 hour ago
rohit sharma 1
Cricket

ಐಪಿಎಲ್‌ನಲ್ಲಿ ಎರಡೆರಡು ದಾಖಲೆ ಬರೆದ ಹಿಟ್‌ಮ್ಯಾನ್‌

Public TV
By Public TV
2 hours ago
kerala rain
Latest

ಕೇರಳದಲ್ಲಿ ಭಾರೀ ಮಳೆಗೆ 5 ಸಾವು – 8 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?