Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 20 ವರ್ಷ ದೂರವಿದ್ದ ಮಗನನ್ನ ಪೋಷಕರ ಬಳಿ ಕರೆತಂದ ಕೊರೊನಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | 20 ವರ್ಷ ದೂರವಿದ್ದ ಮಗನನ್ನ ಪೋಷಕರ ಬಳಿ ಕರೆತಂದ ಕೊರೊನಾ

Corona

20 ವರ್ಷ ದೂರವಿದ್ದ ಮಗನನ್ನ ಪೋಷಕರ ಬಳಿ ಕರೆತಂದ ಕೊರೊನಾ

Public TV
Last updated: April 28, 2021 3:40 pm
Public TV
Share
2 Min Read
Hassan Son Return 2
SHARE

– 16ನೇ ವಯಸ್ಸಿನಲ್ಲಿ ಮನೆ ತೊರೆದಿದ್ದ ಮಗ

ಹಾಸನ: ಮಹಾಮಾರಿ ಕೊರೊನಾ ನಾನಾ ರೀತಿಯ ನಷ್ಟ ತಂದೊಡ್ಡಿರುವುದರ ಜೊತೆಗೆ ಅದೆಷ್ಟೋ ಮಂದಿಯನ್ನು ಕುಟುಂಬ ಸದಸ್ಯರಿಂದ ಶಾಶ್ವತವಾಗಿ ದೂರ ಮಾಡಿ ಕಣ್ಣೀರಿಗೆ ಕಾರಣವಾಗಿದೆ. ಆದರೆ ಇದೇ ವೈರಸ್ ಕಳೆದ 20 ವರ್ಷದ ಹಿಂದೆ ಮನೆಬಿಟ್ಟು ಹೋಗಿದ್ದವರನ್ನು ಮತ್ತೆ ಮನೆಗೆ ಬರುವಂತೆ ಮಾಡಿದ್ದು, ಕುಟುಂಬ ಸದಸ್ಯರಲ್ಲಿ ಸಂತಸ, ಹಿಗ್ಗು ಮರಳುವಂತೆ ಮಾಡಿದೆ.

Hassan Son Return 3

ಹಾಸನದ ಹೊಂಗೆರೆ ಗ್ರಾಮದ ರಾಜೇಗೌಡ-ಅಕ್ಕಯ್ಯಮ್ಮ ದಂಪತಿಯ ಇಬ್ಬರು ಮಕ್ಕಳಲ್ಲಿ ಹಿರಿಯ ಮಗ ಶೇಖರ್. ಒಬ್ಬನೇ ಮಗ ಎಂದು ಅಕ್ಕರೆಯಿಂದ ಸಾಕಿ ಸಲಹಿದ್ದರು. ಶೇಖರ್ ನಿಗೆ ಏನಾಯಿತೋ ಏನೋ, 16 ವಯಸ್ಸಿನಲ್ಲಿ ಮನೆಯಿಂದ ದಿಢೀರ್ ಕಾಣೆಯಾದ. ಮಗನಿಗಾಗಿ ಹೆತ್ತವರು, ಸಂಬಂಧಿಕರು ಹುಡುಕದ ಜಾಗ, ವಿಚಾರಿಸದ ಜನ ಇಲ್ಲ. ಎಲ್ಲಿ ತಡಕಾಡಿದರೂ, ಶೇಖರ್ ಸುಳಿವೇ ಸಿಗಲಿಲ್ಲ. ಪುತ್ರಶೋಖಂ ನಿರಂತರಂ ಅನ್ನೋ ಹಾಗೆ, ಒಬ್ಬನೇ ಮಗ ತಮ್ಮಿಂದ ಇಲ್ಲವಾಗಿದ್ದನ್ನು ನೆನೆದು ಹೆತ್ತವರು ನಿತ್ಯವೂ ಕಣ್ಣೀರಿಡುತ್ತಿದ್ದರು. ಹೋದ ಮಗ ಬಂದರೆ ಸಾಕು ಎಂದು ಕಂಡ ಕಂಡ ದೇವರಿಗೆ ಕೈ ಮುಗಿದರು. ಹರಕೆ ಕಟ್ಟಿಕೊಟ್ಟರು. ಇಷ್ಟಾದರೂ ಶೇಖರ್ ಕಾಣಸಿಗಲೇ ಇಲ್ಲ.

Hassan Son Return 5

ಮಗನಿಗಾಗಿ ಕಾದು ಕಾದು ಹೈರಾಣಾದರೂ, ಆತ ಮರಳಿ ಬರದೇ ಇದ್ದಾಗ, ಸ್ಥಳೀಯರು ಮತ್ತು ಸಂಬಂಧಿಕರು ಶೇಖರ್ ಬಹುಶಃ ಸತ್ತು ಹೋಗಿದ್ದಾನೆ. ಒಂದು ವೇಳೆ ಆತ ಬದುಕಿದ್ದರೆ ಎಲ್ಲೇ ಇದ್ದರೂ ಇಷ್ಟೊತ್ತಿಗೆ ಊರಿಗೆ ಬರುತ್ತಿದ್ದ ಎಂದೆಲ್ಲಾ ಮಾತನಾಡಿಕೊಳ್ಳುತ್ತಿದ್ದರು. ಈ ನಡುವೆ ಶೇಖರ್ ಚಿಕ್ಕಪ್ಪ ತೀರಿಕೊಂಡರು, ಒಬ್ಬಳೇ ತಂಗಿಯ ಮದುವೆ ಇತ್ತೀಚಿಗೆ ನೆರವೇರಿತು. ಅದಕ್ಕೂ ಶೇಖರ್ ಆಗಮನ ಆಗಲಿಲ್ಲ. ಆತನನ್ನು ಕರೆಯೋಣ ಎಂದರೆ, ಎಲ್ಲಿದ್ದಾನೆ ಎಂಬ ಸುಳಿವಾಗಲೀ, ಫೋನ್ ಸಂಪರ್ಕವಾಗಲೀ ಮೊದಲೇ ಇರಲಿಲ್ಲ. ಹೀಗಾಗಿ ಪುತ್ರಭಾಗ್ಯ ನಮ್ಮ ಪಾಲಿಗೆ ಸಿಕ್ಕಿದ್ದೇ ಇಷ್ಟು ಎಂದುಕೊಂಡು ಹೆತ್ತವರು ಸುಮ್ಮನಾಗಿದ್ದರು.

Hassan Son Return 7

ಎಲ್ಲೋ ಇದ್ದ ಶೇಖರ್, ಮಂಗಳವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ದಿಢೀರ್ ಮನೆಗೆ ಬಂದಿದ್ದಾನೆ. 22 ವರ್ಷಗಳಿಂದ ಕಣ್ಮರೆಯಾಗಿದ್ದ ಮಗ ಒಮ್ಮೆಗೇ ಕಣ್ಣೆದುರು ಕಾಣಿಸಿಕೊಂಡಿದ್ದು ಹೆತ್ತವರ ಖುಷಿಗೆ ಪಾರವೇ ಇಲ್ಲದಂತಾಗಿದೆ. ನಮ್ಮ ಪಾಲಿಗೆ ಮಗ ನೆನಪು ಎಂದುಕೊಂಡಿದ್ದವರು ಈಗ ಸಂತಸದ ಅಲೆಯಲ್ಲಿ ಸಂಭ್ರಮಿಸುತ್ತಿದ್ದಾರೆ. ಅಷ್ಟೇ ಅಲ್ಲ ಊರಿನವರೂ ಸಂತೋಷಗೊಂಡಿದ್ದಾರೆ. ಶೇಖರ್ ಮನೆ ಬಿಟ್ಟು ಹೋದಾಗ ತಂದೆ-ತಾಯಿ ವಯಸ್ಸಿನ್ನೂ 40 ದಾಟಿತ್ತು. ಈಗ ಇಬ್ಬರೂ 60 ವರ್ಷ ಮೀರಿದ್ದಾರೆ. ಇಳಿವಯಸ್ಸಿನಲ್ಲಾದರೂ ಮಗ ಬಂದನಲ್ಲಾ ಅಷ್ಟೇ ಸಾಕು ಎಂಬುದು ಹೆತ್ತವರ ನಿರುಮ್ಮಳ ನುಡಿಯಾಗಿದೆ.

Hassan Son Return 1

ಮನೆ ಬಿಟ್ಟು ಹೋದ ಶೇಖರ್, ಜೀವನೋಪಾಯಕ್ಕಾಗಿ ಮುಂಬೈ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ಅಲೆದಾಡಿದ್ದಾನೆ. ದೊಡ್ಡವನಾದ ನಂತರ ತನ್ನದೇ ಬ್ಯುಸಿನೆಸ್ ಸಹ ಆರಂಭಿಸಿದ್ದಾನೆ. ಆದರೆ ಕೊರೊನಾ ಕಾರಣದಿಂದ ಇತ್ತೀಚೆಗೆ ಕೈ ಹಾಕಿದ್ದ ವ್ಯಾಪಾರ ನಷ್ಟವಾಗಿದೆ. ಅನೇಕ ಸಲ ಊರಿಗೆ ಬರುವ ಮನಸ್ಸಾಗಿತ್ತು. ಆದರೆ ಈವರೆಗೂ ಸಾಧ್ಯವಾಗಿರಲಿಲ್ಲ. ಇತ್ತೀಚೆಗೆ ಹಾಸನಕ್ಕೂ ಬಂದಿದ್ದೆ. ಆದರೆ ನನ್ನ ಕಷ್ಟವನ್ನು ಮನೆಯವರ ಜೊತೆ ಹಂಚಿಕೊಳ್ಳಲು ಹಿಂಜರಿಕೆಯಾಯಿತು. ಇದೇ ಬೇಸರದಿಂದ ವಾಪಸ್ ಹೋದೆ. 2ನೇ ಬಾರಿಗೆ ಲಾಕ್‍ಡೌನ್ ಆದಾಗ ಜೀವನ ನಡೆಸುವುದು ಕಷ್ಟವಾಯಿತು. ಕಡೆಗೆ ನಮ್ಮೂರೇ ನನಗೆ ಮೇಲು ಎಂದು ತಿಳಿದು ಮರಳಿ ಬಂದೆ ಎಂದು ಶೇಖರ್ ಹೇಳುತ್ತಾನೆ.

Hassan Son Return 8

ಕೊರೊನ ರಣಕೇಕೆಗೆ ಜನಜೀವನ ತತ್ತರಿಸಿ ಹೋಗಿದ್ದರೆ, ಹೊಟ್ಟೆಪಾಡಿಗಾಗಿ ಊರು ತೊರೆದಿದ್ದವರು ಪುನಃ ಹಿಂದಿರುಗುತ್ತಿದ್ದಾರೆ. ಆದರೆ 20 ವರ್ಷಗಳ ಹಿಂದೆ ಮನೆಬಿಟ್ಟು ಹೋಗಿದ್ದ ಮಗ ಕೊರೊನದಿಂದಾಗಿ ಮನೆಗೆ ವಾಪಾಸ್ ಆಗಿರುವುದು ಹೆತ್ತವರನ್ನು ಹಿರಿ ಹಿರಿ ಹಿಗ್ಗಿಸಿದೆ.

TAGGED:Corona VirusCovid 19hassanLockdownparentssonಕೊರೊನಾ ವೈರಸ್ಪಬ್ಲಿಕ್ ಟಿವಿಪೋಷಕರುಮಂಗಲಾಕ್‍ಡೌನ್ಹಾಸನ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

nicolas maduro
Latest

ಮಡುರೊ ಬಂಧನಕ್ಕೆ ಮನ್ನ ಪಾಲಿಮಾರ್ಕೆಟ್‌ನಲ್ಲಿ ಬೆಟ್ಟಿಂಗ್‌ – ಕೋಟಿ ಕೋಟಿ ದೋಚಿದ್ದ ಅಮೆರಿಕದ ಸೈನಿಕ ಅರೆಸ್ಟ್‌

Public TV
By Public TV
17 minutes ago
BJP MLA Suresh Gowda
Districts

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತೆ: ಸುರೇಶ್‌ ಗೌಡ ಭವಿಷ್ಯ

Public TV
By Public TV
1 hour ago
CET Exam Janiwara
Bengaluru City

CET Exam | ಜನಿವಾರ ತೆಗೆಸಿದ ಬೆಂಗಳೂರು ಕಾಲೇಜ್‌ – ಪೋಷಕರಿಂದ ದೂರು ದಾಖಲು

Public TV
By Public TV
2 hours ago
Amit Shah 3
Latest

West Bengal Election| 152ರ ಪೈಕಿ 110ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು -ಬಿಜೆಪಿಗೆ ಅಧಿಕಾರ: ಅಮಿತ್‌ ಶಾ ವಿಶ್ವಾಸ

Public TV
By Public TV
2 hours ago
Amit Shah 2
Latest

ಕ್ಷಮಿಸಿ, ಇನ್ನು 10 ನಿಮಿಷಗಳಲ್ಲಿ ತಲುಪುತ್ತೇನೆ: ಅಭಿಮಾನಿಯ ಮನವಿಗೆ ಅಮಿತ್‌ ಶಾ ಪ್ರತಿಕ್ರಿಯೆ

Public TV
By Public TV
3 hours ago
Mojtaba Khamenei
Latest

ಸುಟ್ಟು ಹೋಗಿದೆ ತುಟಿ, ಮುಖಕ್ಕೆ ಗಾಯ – ಶೀಘ್ರವೇ ಮೊಜ್ತಾಬಾ ಖಮೇನಿಗೆ ಪ್ಲಾಸ್ಟಿಕ್‌ ಸರ್ಜರಿ

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?