Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bellary

ಕೋವಿಡ್ ನಿರ್ವಹಣೆಯಲ್ಲಿ ಲೋಪವಾದರೆ ಜಿಲ್ಲಾಧಿಕಾರಿಗಳೇ ಸಂಪೂರ್ಣ ಹೊಣೆ

Public TV
Last updated: April 28, 2021 8:11 pm
Public TV
Share
3 Min Read
ashwath narayana e1619620660259
SHARE

– ಬಳ್ಳಾರಿ ಜಿಲ್ಲೆ ಪರಿಸ್ಥಿತಿ ಅವಲೋಕನ ಮಾಡಿದ ಡಿಸಿಎಂ
– ಸಚಿವ ಆನಂದ್ ಸಿಂಗ್‍ಗೆ ಪರಿಸ್ಥಿತಿಯ ತೀವ್ರತೆ ಮನವರಿಕೆ

ಬೆಂಗಳೂರು: ಜಿಲ್ಲೆಗಳ ಕೋವಿಡ್ ಪರಿಸ್ಥಿತಿ ನಿಯಂತ್ರಣ ಹಾಗೂ ವ್ಯವಸ್ಥೆ ನಿರ್ವಹಣೆ ಸಂಪೂರ್ಣ, ನೇರ ಹೊಣೆಗಾರಿಕೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳದ್ದೇ ಆಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ವರ್ಚುವಲ್ ವೇದಿಕೆಯ ಮೂಲಕ ಬುಧವಾರ ಬೆಂಗಳೂರಿನಿಂದಲೇ ಬಳ್ಳಾರಿ ಜಿಲ್ಲೆಯ ಕೋವಿಡ್ ಪರಿಸ್ಥಿತಿಯನ್ನು ಅವಲೋಕನ ಮಾಡಿದ ವೇಳೆ ಮಾತನಾಡಿದ ಡಿಸಿಎಂ, ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಕಂಡುಬಂದಿರುವ ಲೋಪದೋಷಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.

ashwath narayana meeting

ಬಳ್ಳಾರಿ ಜಿಲ್ಲಾ ಕೇಂದ್ರದಿಂದಲೇ ವರ್ಚುಯಲ್ ಸಭೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಎಲ್ಲ ತಾಲೂಕುಗಳ ತಹಸೀಲ್ದಾರ್‍ಗಳೊಂದಿಗೆ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರ ಜತೆ ಮಾತನಾಡಿದ ಡಿಸಿಎಂ, ಕೋವಿಡ್ ನಿರ್ವಹಣೆ ಏನೇ ಲೋಪವಾದರೂ ಜಿಲ್ಲಾಧಿಕಾರಿಯೇ ಹೊಣೆ ಎಂದರು.

ಪರೀಕ್ಷೆ-ಫಲಿತಾಂಶದ ಬಗ್ಗೆಯೂ ಅತೃಪ್ತಿ
ನಿರೀಕ್ಷಿತ ಪ್ರಮಾಣದಲ್ಲಿ ಕೋವಿಡ್ ಪರೀಕ್ಷೆ ನಡೆಯುತ್ತಿಲ್ಲ. ಇದರಲ್ಲಿ ಬಹಳ ಲೋಪ ಕಂಡುಬರುತ್ತಿದೆ. ರಿಸಲ್ಟ್ ಕೂಡ ತುಂಬಾ ತಡವಾಗಿ ನೀಡಲಾಗುತ್ತಿದೆ. ರಿಸಲ್ಟ್ ಎಷ್ಟು ತಡವಾಗುತ್ತೋ ರೋಗವು ಅಷ್ಟು ಉಲ್ಬಣವಾಗುತ್ತದೆ. ಹೀಗಾಗಿ ಸಾವುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗುತ್ತಿದೆ ಎಂದು ಡಿಸಿಎಂ ಹೇಳಿದರಲ್ಲದೆ, ಬಳ್ಳಾರಿ ಜಿಲ್ಲೆಗೆ ಸಂಬಂಧಿಸಿ ತಮ್ಮ ಕೈಯ್ಯಲ್ಲಿದ್ದ ಮಾಹಿತಿಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರಲ್ಲದೆ ಈ ಬಗ್ಗೆ ಕೂಡಲೇ ಎಚ್ಚರಿಕೆ ವಹಿಸದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುತ್ತದೆ ಎಂದು ಆನಂದ್ ಸಿಂಗ್ ಅವರಿಗೆ ವಿವರಿಸಿದರು.

DSC 0839

ಯಾವ ಕಾರಣಕ್ಕೂ ರೋಗ ಉಲ್ಬಣವಾಗುವ ಹಂತಕ್ಕೆ ಬಿಡಲೇಬಾರದು. ವ್ಯಕ್ತಿಯಿಂದ ಸ್ಯಾಂಪಲ್ ಸ್ವೀಕರಿಸಿದ 24 ಗಂಟೆಯೊಳಗೆ ಫಲಿತಾಂಶ ಕೊಡಬೇಕು. ಒಂದು ಫಲಿತಾಂಶ ಪಾಸಿಟೀವ್ ಬಂದರೆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡುವುದೋ ಅಥವಾ ಅವರವ ಮನೆಯಲ್ಲೇ ಐಸೋಲೇಷನ್ ಮಾಡಿ ಸೂಕ್ತ ಔಷಧಗಳನ್ನು ಫೂರೈಕೆ ಮಾಡಬೇಕು. ಈ ಪ್ರಕ್ರಿಯೆ ಅತ್ಯಂತ ತ್ವರಿತವಾಗಿ ಆಗಬೇಕು ಹಾಗೂ ಸಮಯಕ್ಕೆ ಹೆಚ್ಚು ಮಹತ್ವ ನೀಡಬೇಕು. ರೋಗ ನಿರೋಧಕ ಚಿಕಿತ್ಸೆ ತ್ವರಿತವಾಗಿ ಆರಂಭಿಸದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುತ್ತದೆ ಎಂದು ಡಿಸಿಎಂ ಅವರು ಸಚಿವ ಆನಂದ ಸಿಂಗ್ ಹಾಗೂ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಟ್ಟಿ ಅವರಿಗೆ ತಿಳಿಸಿದರು.

ಈಗ ಬಳ್ಳಾರಿ ಜಿಲ್ಲೆಯಲ್ಲಿ ತುರ್ತಾಗಿ ಆಗಬೇಕಿರುವ ಕೆಲಸವೆಂದರೆ, ರಿಸಲ್ಟ್ ಕೊಡುವ ಲ್ಯಾಬ್‍ಗಳನ್ನು ಹೆಚ್ಚಿಸಬೇಕು ಹಾಗೂ ಇರುವ ಲ್ಯಾಬ್‍ಗಳಿಗೆ ಶಕ್ತಿ ತುಂಬಬೇಕು. ಒಂದು ಸ್ಯಾಂಪಲ್‍ಗಳು ಹೋಗುತ್ತಿದ್ದರೆ, ಇನ್ನೊಂದೆಡೆ ರಿಸಲ್ಟ್ ಬರುತ್ತಿರಬೇಕು. ಅಗತ್ಯವಾದರೆ ರಿಸಲ್ಟ್ ನೀಡುವ ಎಕ್ಸ್‍ಟ್ರಾಕ್ಸಿನ್ ಯಂತ್ರವನ್ನು ಇನ್ನಷ್ಟು ಖರೀದಿ ಮಾಡಿ. ಈ ಬಗ್ಗೆ ಜಿಲ್ಲಾಧಿಕಾರಿ ಕೂಡಲೇ ಕ್ರಮ ಕೈಗೊಳ್ಳಬೇಕು. ಯಾವುದಕ್ಕೂ ಕೊರತೆ ಆಗಬಾರದು, ಬಳ್ಳಾರಿ ಮಾತ್ರವಲ್ಲ, ಎಲ್ಲ ಜಿಲ್ಲೆಗಳಿಗೂ ನಾನು ಇದೇ ಸಲಹೆಯನ್ನೇ ಮಾಡುತ್ತೇನೆಂದು ಡಾ.ಅಶ್ವತ್ಥನಾರಾಯಣ ಹೇಳಿದರು.

corona virus 3

ಔಷಧ ಕೊರತೆ ಆಗಬಾರದು
ಇದೇ ವೇಳೆ ಸಭೆಯಲ್ಲಿ ಉಪಸ್ಥಿತರಿದ್ದ ವೈದ್ಯಾಧಿಕಾರಿಗಳ ಜತೆಯೂ ಸಂವಾದ ನಡೆಸಿದ ಡಿಸಿಎಂ ಅವರು, ರೋಗ ಲಕ್ಷಣ ಇರುವವರಿಗೆ ಯಾವ ಔಷಧ ನೀಡಬೇಕು ಎಂಬುದನ್ನು ತಿಳಿಸಿದರಲ್ಲದೆ ಯಾವುದೇ ಕಾರಣಕ್ಕೂ ಔಷಧಿ ಕೊರತೆ ಆಗದಂತೆ ನೋಡಿಕೊಳ್ಳಿ. ಎಲ್ಲಿಯೂ ಆಮ್ಲಜನಕ, ವೆಂಟಿಲೇಟರ್, ರೆಮಿಡಿಸವರ್ ಕೊರತೆ ಆಗದಂತೆ ಎಚ್ಚರ ವಹಿಸಿ. ಯಾವುದೇ ಸಮಸ್ಯೆ ಇದ್ದರೂ ಜಿಲ್ಲಾಧಿಕಾರಿ ಗಮನಕ್ಕೆ ತಂದು ಕೊರತೆ ಆಗದಂತೆ ನೋಡಿಕೊಳ್ಳಿ. ಸಮಸ್ಯೆ ಎದುರಾದಾಗ ಒದ್ದಾಡುವುದು ಬೇಡ ಎಂದು ಸೂಚಿಸಿದರು.

ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆಗೆ ಪರಿಣಾಮಕಾರಿ ಸೌಲಭ್ಯಗಳ ಕೊರತೆ ಇದೆ ಎಂದು ಆನಂದ ಸಿಂಗ್ ಅವರ ಗಮನ ಸೆಳೆದ ಡಿಸಿಎಂ, ರೋಗ ಲಕ್ಷಣಗಳಿರುವ ಜನರಿಗೆ ತತ್‍ಕ್ಷಣದಿಂದಲೇ ಚಿಕಿತ್ಸೆ ಆಗತ್ಯವಿರುತ್ತದೆ ಎಂದು ಡಿಸಿಎಂ ಒತ್ತಿ ಹೇಳಿದರು.

ಆನಂದ್ ಸಿಂಗ್ ಸ್ಪಂದನೆ
ಡಿಸಿಎಂ ಸಲಹೆಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಆನಂದ್ ಸಿಂಗ್ ಅವರು, ತಮ್ಮ ಎಲ್ಲ ಸಲಹೆಗಳನ್ನು ಈ ಕೂಡಲೇ ಜಾರಿಗೆ ತರುತ್ತೇವೆ. ಈ ಸಭೆಯ ನಂತರ ಸಭೆ ನಡೆಸಿ ಎಲ್ಲ ಕೊರತೆಗಳನ್ನು ನೀಗಿಸಲಾಗುವುದು ಎಂದು ಭರವಸೆ ನೀಡಿದರು.

 

TAGGED:Anand Singhashwath narayanaCoronaCovid19ಅಶ್ವತ್ಥನಾರಾಯಣಆನಂದ್ ಸಿಂಗ್ಕರ್ನಾಟಕಕೊರೊನಾಕೋವಿಡ್ 19ಬಳ್ಳಾರಿ
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

Belgavi DCC Bank elections Jarkiholi Brothers checkmate for Lingayat leaders meeting 2
Belgaum

DCC Bank Election| ಲಿಂಗಾಯತ ನಾಯಕರ ಸಭೆಗೆ ಜಾರಕಿಹೊಳಿ ಬ್ರದರ್ಸ್‌ ಚೆಕ್‌ಮೇಟ್!

Public TV
By Public TV
13 minutes ago
Rameshwaram Cafe
Bengaluru City

ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಜಿರಳೆ ಪತ್ತೆ ಕೇಸ್ – ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಆರೋಪದಡಿ ಗ್ರಾಹಕನ ವಿರುದ್ಧ ದೂರು

Public TV
By Public TV
23 minutes ago
Chikkamagaluru Pickup Falls Into Bhadra River
Chikkamagaluru

Kalasa | ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದ ಪಿಕಪ್ – ಯುವಕ ಸಾವು

Public TV
By Public TV
37 minutes ago
Rahul Gandhi 4
Latest

ಕರ್ನಾಟಕದಲ್ಲಿ ವಂಚನೆ | ರಾಹುಲ್‌ ಆರೋಪಕ್ಕೆ ಹೈಕೋರ್ಟ್ ತೀರ್ಪಿಗಾಗಿ ಕಾಯಿರಿ ಎಂದ ಚುನಾವಣಾ ಆಯೋಗ

Public TV
By Public TV
1 hour ago
Mysuru Dasara Eshwar Khandre
Bengaluru City

ಆ.4ರಂದು ವೀರನಹೊಸಳ್ಳಿಯಲ್ಲಿ ದಸರಾ ಗಜಪಯಣ – ಈ ಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು

Public TV
By Public TV
1 hour ago
DK Shivakumar 9
Bengaluru City

ರಾಹುಲ್ ಗಾಂಧಿ ಆರೋಪ ನಿಜ, ಬೆಂ.ಗ್ರಾಮಾಂತರ ಕ್ಷೇತ್ರದ ಮತದಾನದಲ್ಲೂ ಗೋಲ್ಮಾಲ್ ನಡೆದಿದೆ – ಡಿಕೆಶಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?