Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾ ವಿರುದ್ಧ ಯುದ್ಧ ಮಾಡಲು ವಿಎಚ್‍ಪಿ ಕಾರ್ಯಕರ್ತರು ಪೂರ್ಣವಾಗಿ ಸಜ್ಜಾಗಬೇಕು: ಮಿಲಿಂದ್ ಪರಾಂಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೊರೊನಾ ವಿರುದ್ಧ ಯುದ್ಧ ಮಾಡಲು ವಿಎಚ್‍ಪಿ ಕಾರ್ಯಕರ್ತರು ಪೂರ್ಣವಾಗಿ ಸಜ್ಜಾಗಬೇಕು: ಮಿಲಿಂದ್ ಪರಾಂಡೆ

Latest

ಕೊರೊನಾ ವಿರುದ್ಧ ಯುದ್ಧ ಮಾಡಲು ವಿಎಚ್‍ಪಿ ಕಾರ್ಯಕರ್ತರು ಪೂರ್ಣವಾಗಿ ಸಜ್ಜಾಗಬೇಕು: ಮಿಲಿಂದ್ ಪರಾಂಡೆ

Public TV
Last updated: April 28, 2021 9:40 pm
Public TV
Share
3 Min Read
FotoJet 5 51
SHARE

ನವದೆಹಲಿ: ವಿಶ್ವ ಹಿಂದೂ ಪರಿಷತ್ (ವಿಎಚ್‍ಪಿ), ಶ್ರೀರಾಮ ದೇವರ ಸೇವೆ ಜೊತೆಯಲ್ಲಿ ರಾಷ್ಟ್ರ ಸೇವೆಯಲ್ಲೂ ತೊಡಗಿದೆ. ಕೋವಿಡ್-19ನ ಜಾಗತಿಕ ಸಾಂಕ್ರಾಮಿಕ ರೋಗದ ದಾಳಿಗೆ ಸಿಕ್ಕಿರುವ ಭಾರತೀಯರಿಗೆ ಸೇವೆ ಸಲ್ಲಿಸಲು ಸಮಗ್ರ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿದೆ. ಹಲವು ಕಾರ್ಯಗಳನ್ನು ಈಗಾಗಲೇ ವಿಎಚ್‍ಪಿ ಕಾರ್ಯಕರ್ತರು ಆಯಾ ರಾಜ್ಯಗಳ ಪ್ರಾದೇಶಿಕ ಮಟ್ಟದಲ್ಲಿ ಪ್ರಾರಂಭಿಸಿದ್ದಾರೆ. ಆದರೆ ಅದನ್ನು ಪೂರ್ಣ ಭಾರತ ಮಟ್ಟದಲ್ಲಿ ವೇಗಗೊಳಿಸಲು, ವಿಎಚ್‍ಪಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಕೊರೊನಾ ವಿರುದ್ಧ ಯುದ್ಧ ಘೋಷಿಸಿ ಕರೆ ನೀಡಿದರು.

ಈ ಸಾಂಕ್ರಾಮಿಕ ರೋಗದ ವಿರುದ್ಧ ಯುದ್ಧ ಮಾಡಲು ಕಾರ್ಯಕರ್ತರು ಪೂರ್ಣ ಪ್ರಮಾಣದಲ್ಲಿ ಸಜ್ಜಾಗಬೇಕು ಮತ್ತು ಎಲ್ಲಾ ಮಠಗಳು ಮತ್ತು ದೇವಾಲಯಗಳು, ಗುರುದ್ವಾರಗಳು, ಸಂತರು, ಧರ್ಮಚಾರ್ಯರು ಮತ್ತು ಸ್ವಯಂಸೇವಾ ಸಂಸ್ಥೆಗಳನ್ನು ಸೇವೆಗೆ ಸಿದ್ಧಪಡಿಸಬೇಕು. ಅದೇನೇ ಇದ್ದರೂ, 2020ರಲ್ಲಿ ಕೊರೊನಾದ ಮೊದಲ ಅಲೆಯ ಸಮಯದಲ್ಲಿ ವಿಎಚ್‍ಪಿ ಕಾರ್ಯಕರ್ತರು ಇಡೀ ದೇಶದಲ್ಲಿ ಕೊರೊನಾ ಪೀಡಿತರಿಗೆ ಸೇವೆಯನ್ನು ಅರ್ಪಿಸಿದರು, ಆದರೆ ಈ ಬಾರಿ ಪರಿಸ್ಥಿತಿಯು ಹೆಚ್ಚು ಅಪಾಯಕಾರಿ ಪ್ರಮಾಣವನ್ನು ತಲುಪಿರುವುದನ್ನು ಗಮನದಲ್ಲಿಟ್ಟುಕೊಂಡು, ಅವರ ಸೇವಾ ಚಟುವಟಿಕೆಗಳನ್ನು ಏರಿಸಿದ್ದಾರೆ.

ವಿಎಚ್‍ಪಿ ತನ್ನ ಸೇವಾ ತಂತ್ರಗಳನ್ನು ನಾಲ್ಕು ಭಾಗಗಳಾಗಿ ಮಾಡಿದೆ. ಮೊದಲನೆಯದು ಗುಣಪಡಿಸುವುದಕ್ಕಿಂತ ತಡೆಗಟ್ಟುವುದು ಉತ್ತಮ. ಎರಡನೇಯದು ಸೋಂಕಿತರಿಗೆ ಸೇವೆ ನೀಡುವುದು ಮತ್ತು ಅವರ ಜೀವ ಉಳಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುವುದು. ಮೂರನೇಯದು ಪೀಡಿತ ಕುಟುಂಬಗಳಿಗೆ ಬೆಂಬಲ ಮತ್ತು ನೆರವು ನೀಡುವುದು. ಮತ್ತು ನಾಲ್ಕನೆಯದು ಕೊರೊನಾ ಸಂತ್ರಸ್ತರ ಕೊನೆಯ ಪ್ರಯಾಣ ಮತ್ತು ಅವರ ವಿಮೋಚನೆಗಾಗಿ ಅಗತ್ಯ ಕ್ರಮಗಳನ್ನು ಏರ್ಪಡಿಸುವುದು. ಎಲ್ಲಾ ನಾಲ್ಕು ರಂಗಗಳನ್ನು ನಿಭಾಯಿಸುವ ಸಲುವಾಗಿ, ವಿಎಚ್‍ಪಿ ತನ್ನ ಕಾರ್ಯಕರ್ತರು ಮತ್ತು ಸಾಂಸ್ಥಿಕ ಬಲವನ್ನು ನಿಯೋಜಿಸಲು ಸಿದ್ಧಪಡಿಸಿದೆ.

ರೋಗ ತಡೆಗಟ್ಟುವ ಕ್ರಮಗಳ ಬ್ಯಾನರ್ ಅಡಿಯಲ್ಲಿ ವಿಎಚ್‍ಪಿ ಕಾರ್ಯಕರ್ತರು, ಎಲ್ಲಾ ಅರ್ಹ ಜನರು, ಸರ್ಕಾರದ ವ್ಯಾಕ್ಸಿನೇಷನ್ ಕಾರ್ಯಕ್ರಮದ ಲಾಭವನ್ನು ಪಡೆದುಕೊಳ್ಳುವುದನ್ನು ಖಚಿತಪಡಿಸಿಕೊಳ್ಳುತ್ತಾರೆ. ಕಾರ್ಯಕರ್ತರು, ಸಾಮಾಜಿಕ ಮಾಧ್ಯಮಗಳು, ಫೋನ್ ಕರೆಗಳು ಮತ್ತು ವೈಯಕ್ತಿಕ ಸಂಪರ್ಕಗಳ ಮೂಲಕ, ಲಸಿಕೆ ವಿರೋಧಿ ಪ್ರಚಾರ ಮತ್ತು ಗೊಂದಲಗಳನ್ನು ತೆಗೆದುಹಾಕಿ ಜನರನ್ನು ಪ್ರೇರೇಪಿಸುತ್ತಿದ್ದಾರೆ ಮತ್ತು ಅವರ ವ್ಯಾಕ್ಸಿನೇಷನ್‍ನನ್ನು ಸುಗಮಗೊಳಿಸುತ್ತಿದ್ದಾರೆ. 6 ಅಡಿ ವೈಯಕ್ತಿಕ ದೂರ, ಮುಖಗವಸು ಬಳಕೆ, ಕೈ ಮತ್ತು ಮುಖದ ನೈರ್ಮಲ್ಯೀಕರಣ ಮತ್ತು ನೈರ್ಮಲ್ಯದ ಇತರ ಪ್ರೋಟೋಕಾಲ್‍ಗಳ ಪ್ರಸ್ತುತ ಮಾನದಂಡಗಳ ಅನಿವಾರ್ಯತೆಯ ಬಗ್ಗೆ ಅವರು ಜನರನ್ನು ಸಂವೇದನಾಶೀಲಗೊಳಿಸುತ್ತಿದ್ದಾರೆ. ಅಲ್ಲದೇ ಅವರು ಆಯುರ್ವೇದ, ಹೋಮಿಯೋಪತಿ ಮತ್ತು ಅಗತ್ಯವಿರುವಂತ ಸಿದ್ಧ ಔಷಧಿಗಳನ್ನು ವಿತರಿಸುತ್ತಾ ಇದ್ದಾರೆ. ಸಾಮಾಜಿಕ ಶಿಸ್ತು, ತಾಳ್ಮೆ ಮತ್ತು ಸ್ಥೈರ್ಯವನ್ನು ಹೆಚ್ಚಿಸಲು ಯೋಗ ತರಗತಿಗಳನ್ನು ಆನ್‍ಲೈನ್ ಮೂಲಕ ನಡೆಸುತ್ತಿದ್ದಾರೆ ಮತ್ತು ಸಹಾಯವಾಣಿ ಸಂಖ್ಯೆಗಳ ಮೂಲಕ ಆಯಾ ಕ್ಷೇತ್ರಗಳ ತಜ್ಞರೊಂದಿಗೆ ಸಮಾಲೋಚನೆ ಮತ್ತು ಸಹಾಯವನ್ನು ಮಾಡುತ್ತಿದ್ದಾರೆ.

ಎರಡನೇ ಭಾಗಕ್ಕೆ ಸಂಬಂಧಿಸಿದ ಸೇವೆಗಳಲ್ಲಿ ವೈದ್ಯಾಧಿಕಾರಿ ಮತ್ತು ವೈದ್ಯರೊಂದಿಗೆ ಸಮಾಲೋಚನೆ, ಆಂಬುಲೆನ್ಸ್‍ಗಳ ವ್ಯವಸ್ಥೆ, ಆಮ್ಲಜನಕ ಸಿಲಿಂಡರ್‍ಗಳು, ಪ್ಲಾಸ್ಮಾ, ರಕ್ತ, ಆಮ್ಲಜನಕ ಸಾಂದ್ರಕ ಘಟಕಗಳು, ಔಷಧಿಗಳು ಮತ್ತು ಆಕ್ಸಿಮೀಟರ್‍ಗಳು ಇತ್ಯಾದಿಗಳ ವ್ಯವಸ್ಥೆ ಸೇರಿವೆ. ಇದರಲ್ಲಿ ಪ್ರತ್ಯೇಕತೆ (ಐಸೋಲೇಷನ್) ಕ್ವಾರಂಟೈನ್ ಕೇಂದ್ರಗಳು, ರೋಗಿಗಳಿಗೆ ಊಟದ ವ್ಯವಸ್ಥೆ ಮತ್ತು ಅವರ ಕುಟುಂಬ ಸದಸ್ಯರಿಗೆ ವ್ಯವಸ್ಥೆ, ಮನೆಗಳು ಮತ್ತು ಆಸ್ಪತ್ರೆಗಳಲ್ಲಿ ಒಂಟಿ ಕುಟುಂಬ ಸದಸ್ಯರಿಗೆ ಸಹಾಯ ಮತ್ತು ವೈದ್ಯಕೀಯ ಸಿಬ್ಬಂದಿಗೆ ಬೆಂಬಲ ಮತ್ತು ಸಹಕಾರ ಇತ್ಯಾದಿ.

ಮೂರನೇ ಭಾಗಕ್ಕೆ ಸಂಬಂಧಿಸಿದ ಸೇವೆಗಳಲ್ಲಿ ಆಹಾರ ಮತ್ತು ನೀರು, ಔಷಧಿಗಳು ಮತ್ತು ಪಡಿತರವನ್ನು ರೋಗ ಪೀಡಿತ ಕುಟುಂಬಗಳಿಗೆ ಮತ್ತು ಕಾರ್ಮಿಕರಿಗೆ, ಇತರ ಬಡ ಜನರಿಗೆ ವಿತರಿಸುವುದು. ಒಂಟಿ ಮನೆಯ ವೃದ್ಧರು, ವಿದ್ಯಾರ್ಥಿಗಳು ಮತ್ತು ಮಕ್ಕಳ ಆರೈಕೆ. ಹಸುವಿನ ಸಂತತಿ ಮತ್ತು ಇತರ ಪ್ರಾಣಿಗಳಿಗೆ ಮೇವು/ಆಹಾರ ಮತ್ತು ನೀರು, ಪ್ರಯಾಣಿಸುವ ಜನರಿಗೆ ಆಹಾರ, ನೀರು ಮತ್ತು ಔಷಧಿಗಳನ್ನು ಒದಗಿಸಲಾಗುತ್ತಿದೆ.

ನಾಲ್ಕನೇ ಭಾಗಕ್ಕೆ ಸಂಬಂಧಿಸಿದ ಸೇವೆ ಅತ್ಯಂತ ಕಷ್ಟಕರ ಮತ್ತು ಸವಾಲಿನದು. ಕೊರೊನಾದಿಂದ ಪ್ರಾಣ ಬಿಟ್ಟವರನ್ನು ಆಸ್ಪತ್ರೆಗಳು/ ಮನೆಗಳಿಂದ ವಿಮೋಚನೆಯ ಬಾಗಿಲುಗಳಿಗೆ ಸಾಗಿಸಲು ಮೋರ್ಚುರಿ ವ್ಯಾನ್‍ಗಳನ್ನು ವ್ಯವಸ್ಥೆ ಮಾಡುವುದು, ಅವರ ಅಂತ್ಯಕ್ರಿಯೆಯ ಸೇವೆಗಳು ಮತ್ತು ಶವಸಂಸ್ಕಾರದ ವ್ಯವಸ್ಥೆ, ಸಂಬಂಧಿತ ಸಾಮಾಗ್ರಿಗಳ ವ್ಯವಸ್ಥೆ ಮುಂತಾದ ಕಾರ್ಯಗಳನ್ನು ಮಾಡುವುದು ಮತ್ತು ಕೊರೊನಾ ಸಂತ್ರಸ್ತರ ಕುಟುಂಬ ಸದಸ್ಯರನ್ನು ಮನವೊಲಿಸುವುದು ಕಷ್ಟಕರವಾದ ಕೆಲಸ. ಯಾವಾಗಲೂ ಕೊರೊನಾ ಪೀಡಿತರ ಸೇವೆಗಳಲ್ಲಿ ತೊಡಗಿರುವ ಕಾರ್ಯಕರ್ತರ ಸ್ವರಕ್ಷಣೆ ಒಂದು ನಿರ್ಣಾಯಕ ಸವಾಲಾಗಿದೆ.

ವಿಎಚ್‍ಪಿಯ ಯುವ ವಿಭಾಗಗಳಾದ ಭಜರಂಗದಳ ಮತ್ತು ದುರ್ಗಾವಾಹಿನಿ – ಎಲ್ಲಾ ಅಪಾಯಗಳನ್ನು ತೆಗೆದುಕೊಳ್ಳುತ್ತಾ, ಈ ಸೇವಾ ಚಟುವಟಿಕೆಗಳಲ್ಲಿ ದೈಹಿಕವಾಗಿ, ಮಾನಸಿಕವಾಗಿ ಮತ್ತು ಸಂಪನ್ಮೂಲವಾರು ಬುದ್ಧಿವಂತಿಕೆಯಿಂದ ತೊಡಗಿಸಿಕೊಂಡಿದ್ದಾರೆ. ಮಿಲಿಂದ್ ಪರಾಂಡೆ ಅವರು ಸೇವಾಕಾರ್ಯದಲ್ಲಿ ಸಂಪನ್ಮೂಲದೊಂದಿಗೆ ಭಾಗವಹಿಸಲು ಕಾರ್ಪೊರೇಟ್ ಜಗತ್ತಿಗೆ ಕರೆ ನೀಡಿದರು. ಸಮಾಜದ ಸ್ಥೈರ್ಯವನ್ನು ದುರ್ಬಲಗೊಳಿಸುವ ಮೂಲಕ ನಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು ಮಾಧ್ಯಮಗಳ ಒಂದು ಭಾಗವು ಉದ್ದೇಶಪೂರ್ವಕವಾಗಿ ಅಥವಾ ಅಜಾಗರೂಕತೆಯಿಂದ ಪ್ರಯತ್ನಿಸಲಾಗುತ್ತಿದೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿದರು. ವಿಎಚ್‍ಪಿ ಕಾರ್ಯಕರ್ತರು ತಮ್ಮನ್ನು ತಾವು ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು ಸಹಕರಿಸುತ್ತಿದ್ದಾರೆ ಮತ್ತು ಉತ್ತಮ ಕಾರ್ಯಗಳು ಮತ್ತು ಪ್ರಯತ್ನಗಳನ್ನು ಪ್ರೋತ್ಸಾಹಿಸುತ್ತಿದ್ದಾರೆ.

TAGGED:Milind ParandeNew DelhiPublic TVservicevhpಕೊರೊನಾನವದೆಹಲಿಪಬ್ಲಿಕ್ ಟಿವಿ Coronaಮಿಲಿಂದ್ ಪರಾಂಡೆವಿಎಚ್‍ಪಿಸೇವೆ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

Traffic Rules Violation Chikkamagaluru Court
Chikkamagaluru

ಟ್ರಾಫಿಕ್ ರೂಲ್ಸ್ ಬ್ರೇಕ್ – ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ!

Public TV
By Public TV
4 minutes ago
LPG Cylinders Jagalur
Davanagere

ಜಗಳೂರು | ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ – 20 ಗೃಹ ಬಳಕೆ ಸಿಲಿಂಡರ್ ವಶಕ್ಕೆ

Public TV
By Public TV
29 minutes ago
kabul hospital pak strikes
Latest

ಅನಾಗರಿಕ, ಹೇಡಿತನದ ಕೃತ್ಯ: ಕಾಬೂಲ್‌ ಆಸ್ಪತ್ರೆ ಮೇಲಿನ ಪಾಕ್‌ ದಾಳಿ ಖಂಡಿಸಿದ ಭಾರತ

Public TV
By Public TV
53 minutes ago
Four workers fall ill due to chemical reaction in Hubballi
Dharwad

ಹುಬ್ಬಳ್ಳಿ | ಫ್ಲೈವುಡ್‌ ಕೆಲಸದ ವೇಳೆ ಕೆಮಿಕಲ್ ರಿಯಾಕ್ಷನ್ – ನಾಲ್ವರು ಕಾರ್ಮಿಕರು ಅಸ್ವಸ್ಥ

Public TV
By Public TV
1 hour ago
congress leader pm modi
Chikkamagaluru

ಸ್ವಪಕ್ಷದ ಮುಖಂಡನ ವಿರುದ್ಧವೇ ದೂರು – ನ್ಯಾಯಕ್ಕಾಗಿ ಪ್ರಧಾನಿ ಮೋದಿ ಕಚೇರಿ ಕದ ತಟ್ಟಿದ ಕಾಂಗ್ರೆಸ್ ನಾಯಕಿ

Public TV
By Public TV
1 hour ago
DK Shivakumar 9
Bengaluru City

ಬಾಕಿ ಇರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜೊತೆ ಚರ್ಚೆ: ಡಿಕೆಶಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?