ಅರ್ಧ ಲಾಕ್‍ಡೌನ್ ಪ್ರಯೋಜನವಿಲ್ಲ, ಮುಖ್ಯಮಂತ್ರಿಗಳೇ ಫುಲ್ ಲಾಕ್ ಮಾಡಿ: ವಿಶ್ವನಾಥ್

Public TV
1 Min Read
h vishwanath

ಮೈಸೂರು: ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ, ನಿಯಂತ್ರಣಕ್ಕೆ ಸಿಗುತ್ತಿಲ್ಲ. ಅರ್ಧ ಲಾಕ್‍ಡೌನ್ ಮಾಡಿರುವುದರಿಂದ ಕೊರೊನಾ ಕಂಟ್ರೋಲ್ ಮಾಡಲು ಸಾಧ್ಯವಿಲ್ಲ. ಹೀಗಾಗಿ ಪೂರ್ತಿ ಲಾಕ್‍ಡೌನ್ ಮಾಡಿ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸಲಹೆ ನೀಡಿದ್ದಾರೆ.

NIGHT CURFEW 5 1

ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ತಡೆಗಟ್ಟುವ ಬದಲು ಹೆಚ್ಚಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸಂಪೂರ್ಣ ಲಾಕ್‍ಡೌನ್ ಮಾಡಿ. ಬೆಳಗ್ಗೆ 6 ರಿಂದ 10 ಗಂಟೆ ವರೆಗೆ ಅಗತ್ಯ ವಸ್ತುಗಳು, ಮದ್ಯಕೊಳ್ಳಲು ಅವಕಾಶ ನೀಡಲಾಗಿದೆ. ಇದರಿಂದ ಜನರು ಗುಂಪು ಗುಂಪಾಗಿ ಹೊರ ಬರುತ್ತಿದ್ದಾರೆ. ಇದು ಕೊರೊನಾ ಹರಡಲು ಕಾರಣವಾಗುತ್ತಿದೆ. ಕೊರೊನಾ ಕಡಿವಾಣ ಹಾಕಲು ರಾಜ್ಯದಲ್ಲಿ ಸಂಪೂರ್ಣ ಲಾಕ್‍ಡೌನ್ ಜಾರಿಯಾಗಲೇಬೇಕು. ಲಾಕ್‍ಡೌನ್ ಆದರೆ ರೋಗಿಗಳಿಗೆ ಬೇಕಾದ ಅಗತ್ಯ ಸೌಲಭ್ಯ ಮಾಡಿಕೊಂಡು ಕಂಟ್ರೋಲ್ ಮಾಡಬಹುದು ಎಂದರು.

Curfew Police Check 3

ಭಾರತದ ಕೊರೊನಾ ಪರಿಸ್ಥಿತಿಯನ್ನು ವಿದೇಶಿ ಮಾಧ್ಯಮಗಳು ಅಣಕು ಮಾಡುತ್ತಿವೆ. ಡಬ್ಲ್ಯೂಎಚ್‍ಓ ಸೇರಿ ವಿವಿಧ ಸಂಸ್ಥೆಗಳು ಭಾರತಕ್ಕೆ ಸಹಾಯ ಮಾಡಲು ಮುಂದೆ ಬಂದಿರುವುದು ಸ್ವಾಗತಾರ್ಹ ವಿಚಾರ. ಆದರೆ ಪರಿಸ್ಥಿತಿ ಹೀಗೆ ಬಿಟ್ಟರೆ ಮುಂದೆ ತೊಂದರೆ ಆಗಲಿದೆ. ಮುಖ್ಯಮಂತ್ರಿಗಳೇ ಕೂಡಲೇ ಕರ್ನಾಟಕದಲ್ಲಿ ಲಾಕ್‍ಡೌನ್ ಜಾರಿ ಮಾಡಿ ಎಂದು ವಿಶ್ವನಾಥ್ ಒತ್ತಾಯಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *