Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋವಿಡ್ ಸಂಕಷ್ಟದಿಂದ ಹೊರಬರಲು ರಾಜ್ಯದಲ್ಲಿ 1 ಕೋಟಿ ಉದ್ಯೋಗ ಸೃಷ್ಟಿ: ಡಿಸಿಎಂ ಅಶ್ವತ್ಥನಾರಾಯಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೋವಿಡ್ ಸಂಕಷ್ಟದಿಂದ ಹೊರಬರಲು ರಾಜ್ಯದಲ್ಲಿ 1 ಕೋಟಿ ಉದ್ಯೋಗ ಸೃಷ್ಟಿ: ಡಿಸಿಎಂ ಅಶ್ವತ್ಥನಾರಾಯಣ

Bengaluru City

ಕೋವಿಡ್ ಸಂಕಷ್ಟದಿಂದ ಹೊರಬರಲು ರಾಜ್ಯದಲ್ಲಿ 1 ಕೋಟಿ ಉದ್ಯೋಗ ಸೃಷ್ಟಿ: ಡಿಸಿಎಂ ಅಶ್ವತ್ಥನಾರಾಯಣ

Public TV
Last updated: May 1, 2021 11:13 pm
Public TV
Share
3 Min Read
ASHWATH NARAYAN
SHARE

-ಸಾಗರೋತ್ತರ ಕನ್ನಡಿಗರೊಂದಿಗೆ ಸಂವಾದದಲ್ಲಿ ಡಿಸಿಎಂ ಹೇಳಿಕೆ

ಬೆಂಗಳೂರು: ಕೋವಿಡ್ ಸೇರಿದಂತೆ ಇತರ ಸಮಸ್ಯೆಗಳಿಂದ ನಿಂದ ಉಂಟಾಗಿರುವ ಉದ್ಯೋಗ ಮತ್ತು ಆರ್ಥಿಕ ನಷ್ಟವನ್ನು ಭರ್ತಿ ಮಾಡಲು ಇನ್ನು ಕೆಲ ವರ್ಷಗಳಲ್ಲಿ ಹಂತ ಹಂತವಾಗಿ ಒಂದು ಕೋಟಿ ಉದ್ಯೋಗ ಸೃಷ್ಟಿ ಮಾಡಲಾಗುವುದು ಎಂದು ಕೌಶಲ್ಯಾಭಿವೃದ್ಧಿ & ಉದ್ಯಮಶೀಲತಾ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಸ್ವ ಉದ್ಯೋಗಕ್ಕೆ ಶಕ್ತಿ ನೀಡುವ ಹಿನ್ನೆಲೆಯಲ್ಲಿ ಶನಿವಾರ ಸಾಗರೋತ್ತರ ಕನ್ನಡಿಗರೊಂದಿಗೆ ಕರಕುಶಲ ಕಾಯಕ, ಕನ್ನಡ ಮತ್ತು ನಾವು ಎಂಬ ವಿಷಯದ ಕುರಿತು ಸಂವಾದ ನಡೆಸಿದ ಅವರು, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಇಲಾಖೆಗಳ ಮೂಲಕ ಇಷ್ಟು ಪ್ರಮಾಣದ ಉದ್ಯೋಗಾವಕಾಶಗಳನ್ನು ನಗರ, ಗ್ರಾಮೀಣ ಪ್ರದೇಶದಲ್ಲಿ ಸೃಷ್ಟಿ ಮಾಡುವ ಗುರಿ ಹೊಂದಲಾಗಿದೆ ಎಂದರು.

jobs 2

ಈ ನಿಟ್ಟಿನಲ್ಲಿ ಯುವಜನರಿಗೆ ಕೌಶಲ್ಯ ತರಬೇತಿ ಕೊಡುವುದರ ಜತೆಗೆ, ಈಗಾಗಲೇ ಈ ವಲಯದಲ್ಲಿ ತೊಡಗಿಸಿಕೊಂಡಿರುವವರ ಕೌಶಲತೆಯನ್ನು ಉತ್ತಮಪಡಿಸುವ ಕೆಲಸವನ್ನೂ ಸರಕಾರ ಕೈಗೆತ್ತಿಕೊಂಡಿದೆ. ಅಲ್ಲದೆ, ಕರಕುಶಲ ವಲಯವೂ ಸೇರಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆಯ ದಾರಿಯಲ್ಲಿ ಸಾಗುತ್ತಿರುವವರಿಗೆ ತಾಂತ್ರಿಕವಾಗಿ ಬಲ ತುಂಬುವುದು ಹಾಗೂ ಆರ್ಥಿಕ, ಮಾರುಕಟ್ಟೆ ವಿಸ್ತಾರಕ್ಕೆ ಸಾಥ್ ಕೊಡುವುದು ಮಾಡಲಾಗುತ್ತಿದೆ. ಕ್ರಮೇಣವಾಗಿ ಅವರ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚೆಚ್ಚು ಉದ್ಯೋಗ ಸೃಷ್ಟಿಯಾಗುವಂತೆ ಕ್ರಮ ವಹಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

ಮಾರುಕಟ್ಟೆ ಮುಖ್ಯವಾಹಿನಿಗೆ: ರಾಜ್ಯದ ಉದ್ದಗಲಕ್ಕೂ ಕಾರ್ಯ ನಿರತವಾಗಿರುವ ಪ್ರತಿ ಸಣ್ಣ ವ್ಯಾಪಾರಿಯನ್ನೂ ಇ-ಕಾಮರ್ಸ್ ಮೂಲಕ ಮಾರುಕಟ್ಟೆಯ ಮುಖ್ಯವಾಹಿನಿಗೆ ತರುವ ಕೆಲಸವನ್ನು ಸರಕಾರ ಮಾಡುತ್ತಿದೆ. ಪ್ಲಿಪ್ಕಾರ್ಟ್, ಅಮೆಜಾನ್ನಂಥ ಇ-ಕಾಮರ್ಸ್ ಪೋರ್ಟಲ್ ಗಳ ಮೂಲಕ ಅವರು ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆ ಮಾಡುವ ರೀತಿಯಲ್ಲಿ ಅನುಕೂಲ ಮಾಡಿಕೊಡಲಾಗಿದೆ. ಈಗಾಗಲೇ ಇಂಥ ಅನೇಕ ದೈತ್ಯ ಕಂಪನಿಗಳ ಸರಕಾರ ಒಡಂಬಡಿಕೆ ಮಾಡಿಕೊಂಡಿದೆ ಎಂದು ಅವರು ಹೇಳಿದರು.

money

ಕರಕುಶಲ ಹಾಗೂ ಗ್ರಾಮೀಣ ಪ್ರದೇಶದಲ್ಲಿ ತಯಾರಾಗುವ ಅಥವಾ ಬೆಳೆಯುವ ಕೃಷಿ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ಮಾರಾಟ ಮಾಡುವುದಕ್ಕೆ ಪೂರಕವಾಗುವಂತೆ ಕೇಂದ್ರ ಸರಕಾರವು ಒಂದು ಜಿಲ್ಲೆ-ಒಂದು ಉತ್ಪನ್ನ ಎಂಬ ಯೋಜನೆಯನ್ನು ಪರಿಚಯಿಸಿದೆ. ಆ ಯೋಜನೆಯ ಮೂಲಕ ನಮ್ಮ ರಾಜ್ಯದಲ್ಲಿ ಹೆಚ್ಚೆಚ್ಚು ಉದ್ಯೋಗ ಸೃಷ್ಟಿಸಲಾಗುತ್ತಿದೆ. ಇದರ ವ್ಯಾಪ್ತಿಗೆ ಚನ್ನಪಟ್ಟಣದ ಗೊಂಬೆಗಳು ಸೇರಿದಂತೆ ರಾಜ್ಯದ ವಿವಿಧೆಡೆ ತಯಾರಾಗುತ್ತಿರುವ ಉತ್ಪನ್ನಗಳು ಸೇರಲಿವೆ. ಗ್ರಾಮೀಣ ಆರ್ಥಿಕತೆಗೆ ಬಲ ತುಂಬಲು ಈ ಯೋಜನೆ ಸಹಕಾರಿಯಾಗುತ್ತದೆ ಎಂದು ಡಿಸಿಎಂ ನುಡಿದರು.

ಮುಖ್ಯಮಂತ್ರಿ ಜತೆ ಚರ್ಚೆ: ಅನಿವಾಸಿ ಕರಕುಶಲ ವೇದಿಕೆಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ನೇಮಕ ಮಾಡುವ ಬಗ್ಗೆ ಮುಖ್ಯಮಂತ್ರಿಗಳ ಚರ್ಚೆ ನಡೆಸಲಾಗುವುದು. ಆದಷ್ಟು ಬೇಗ ಈ ನೇಮಕಾತಿಯನ್ನು ಮಾಡಲಾಗುವುದು. ಈ ಕ್ಷೇತ್ರಕ್ಕೆ ಅಗತ್ಯವಾದ ಎಲ್ಲ ಸಹಕಾರವನ್ನೂ ಕೊಡಲು ಸರಕಾರ ಸಿದ್ಧವಿದೆ ಎಂದು ಡಾ.ಅಶ್ವತ್ಥನಾರಾಯಣ ಭರವಸೆ ನೀಡಿದರು.

FotoJet 13 3

ವಿದೇಶಗಳಿಂದ ರಾಜ್ಯಕ್ಕೆ ವಾಪಸ್ಸಾಗಿ ಇಲ್ಲಿಯೇ ಕೌಶಲ್ಯ ಕ್ಷೇತ್ರದ ಉದ್ಯಮದಲ್ಲಿ ತೊಡಗಿಸಿಕೊಳ್ಳುವವರಿಗೆ ಎಲ್ಲ ಸಹಕಾರ ನೀಡಲಾಗುತ್ತಿದೆ. ಅದಕ್ಕೆ ಪ್ರತ್ಯೇಕವಾದ ಪೋರ್ಟಲ್ ಇದ್ದು, ಕಳೆದ ವರ್ಷ 10,000 ಜನ ನೋಂದಣಿ ಮಾಡಿಕೊಂಡಿದ್ದಾರೆ. ಇವರೆಲ್ಲರಿಗೂ ಸರಕಾರ ವಿವಿಧ ರೀತಿಯಲ್ಲಿ ನೆರವು ಕೊಡುತ್ತಿದೆಯಲ್ಲದೆ, ವಿವಿಧ ಕಂಪನಿಗಳ ಜತೆ ಸಂಪರ್ಕ ವ್ಯವಸ್ಥೆ ಮಾಡಿದೆ. ಮುಂದೆ ಕೂಡ ಯಾರಾದರೂ ಬಂದರೆ ನಮ್ಮ ನೆರವು ಇದ್ದೇ ಇರುತ್ತದೆ ಎಂದು ಅವರು ತಿಳಿಸಿದರು.

ಕೋವಿಡ್ ನಿಯಂತ್ರಣಕ್ಕೆ ಕ್ರಮ: ರಾಜ್ಯದ ಕೋವಿಡ್ ಪರಿಸ್ಥಿತಿಯ ಬಗ್ಗೆ ಕಳವಳ ಬೇಡ. ಈಗಾಗಲೇ ರಾಜ್ಯದಲ್ಲಿ ಕೋವಿಡ್ ಸೋಂಕಿತರಿಗೆ 55,000 ಬೆಡ್ ಗಳಿವೆ. 30,000 ಆಕ್ಸಿಜನ್ ಬೆಡ್‍ಗಳಿವೆ. ರಾಜ್ಯದಲ್ಲಿ ಶೇ.92ಕ್ಕೂ ಹೆಚ್ಚು ಸೋಂಕಿತರು ಮನೆಗಳಲ್ಲೇ ಕ್ವಾರಂಟೈನ್ ಆಗಿದ್ದಾರೆ. ಉಳಿದವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಕೆಲ ದಿನಗಳಲ್ಲೇ 10,000 ಆಕ್ಸಿಜನ್ ಬೆಡ್‍ಗಳನ್ನು ಹೊಸದಾಗಿ ಮಾಡಲಾಗುವುದು ಎಂದು ಡಿಸಿಎಂ ಹೇಳಿದರು.

corona virus 2 2

ರಾಜ್ಯ ಕರಕುಶಲ ನಿಗಮದ ಅಧ್ಯಕ್ಷ ಬೇಲೂರು ರಾಘವೇಂದ್ರ ಶೆಟ್ಟಿ, ಅನಿವಾಸಿ ಕನ್ನಡಿಗರಾದ ಚಂದ್ರಶೇಖರ ಲಿಂಗದಳ್ಳಿ (ಅಮೆರಿಕ), ಗೋಪಾಲ್ ಕುಲಕರ್ಣಿ (ಇಂಗ್ಲೆಂಡ್), ಹೇಮಗೌಡ ಮಧು (ಇಟಲಿ), ರವಿ ಮಹಾದೇವ (ಸೌದಿ ಅರೆಬಿಯಾ), ಬಸವ ಪಾಟೀಲ್ (ಇಂಗ್ಲೆಂಡ್) ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

TAGGED:bengaluruchief ministerDCM Ashwaththa NarayanaeconomyJob creationPublic TVಆರ್ಥಿಕಉದ್ಯೋಗ ಸೃಷ್ಟಿಕೋವಿಡ್ಡಿಸಿಎಂ ಅಶ್ವತ್ಥ ನಾರಾಯಣಪಬ್ಲಿಕ್ ಟಿವಿ covidಬೆಂಗಳೂರುಮುಖ್ಯಮಂತ್ರಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

bank loan
Hassan

9 ರೂಪಾಯಿ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್‌ – 10 ರೂ. ಲೋನ್ ಕಟ್ಟಿ 66 ಪೈಸೆ ವಾಪಸ್ ಕೊಡಿ ಅಂತ ಗ್ರಾಹಕ ಪಟ್ಟು

Public TV
By Public TV
13 minutes ago
DK Shivakumar 1 1
Districts

ಸರ್ಕಾರಕ್ಕೆ ಹೊರೆಯಾದ್ರೂ ನಿಲ್ಲಿಸಲ್ಲ, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯೂ ಇಲ್ಲ: ಡಿಕೆಶಿ

Public TV
By Public TV
1 hour ago
Bagalkot stone pelting Arrest the mosque members immediately 15 day deadline for government Hindu Organisation Protest 2
Bagalkot

ಬಾಗಲಕೋಟೆ ಕಲ್ಲು ತೂರಾಟ| ಮಸೀದಿ ಸದಸ್ಯರನ್ನು ಬಂಧಿಸಿ – ಸರ್ಕಾರಕ್ಕೆ 15 ದಿನಗಳ ಡೆಡ್‌ಲೈನ್‌

Public TV
By Public TV
1 hour ago
Anupama Singh
Latest

ಜಮ್ಮು-ಕಾಶ್ಮೀರದ ಬಜೆಟ್‌ ನಿಮ್ಮ ಐಎಂಎಫ್‌ ಸಾಲಕ್ಕಿಂತಲೂ 2 ಪಟ್ಟು ಹೆಚ್ಚಿದೆ: ಪಾಕ್‌ಗೆ ಭಾರತ ಗುದ್ದು

Public TV
By Public TV
1 hour ago
baby shower mangaluru
Dakshina Kannada

ಪತ್ನಿಯ ಸೀಮಂತಕ್ಕೆ ಹೆಲಿಕಾಪ್ಟರ್‌ನಿಂದ ಹೂಮಳೆ ಸುರಿಸಿ ಸರ್ಪ್ರೈಸ್‌ ಕೊಟ್ಟ ಉದ್ಯಮಿ

Public TV
By Public TV
1 hour ago
Aiden Markram
Cricket

ವಿಂಡೀಸ್‌ ವಿರುದ್ಧ ಆಫ್ರಿಕಾಗೆ 9 ವಿಕೆಟ್‌ಗಳ ಭರ್ಜರಿ ಜಯ – ಭಾರತದ ಸೆಮಿ ಆಸೆ ಜೀವಂತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?