Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಬೆಡ್ ಬ್ಲಾಕ್ ದಂಧೆಗೆ ಕೋಮು ಬಣ್ಣ – ಬೇಸರ ತೋಡಿಕೊಂಡ ಸರ್ಫರಾಜ್ ಖಾನ್

Public TV
Last updated: May 5, 2021 11:58 am
Public TV
Share
3 Min Read
Sarfaraz Khan BBMP 1
SHARE

ಬೆಂಗಳೂರು: ಬಿಬಿಎಂಪಿ ಬೆಡ್ ಬ್ಲಾಕ್ ದಂಧೆಗೆ ಕೋಮು ಬಣ್ಣ ಬಳಿದು ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬೇಸರ ವ್ಯಕ್ತಪಡಿಸಿದ್ದಾರೆ.

ಕೊವಿಡ್ ಪೀಡಿತರಿಗೆ ಬೆಡ್ ಹಂಚುವ ಬಿಬಿಎಂಪಿ ವಾರ್ ರೂಮಿನಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ನನ್ನ ಹೆಸರನ್ನು ಸೇರಿಸಿಕೊಂಡ ಒಂದು ಸಂದೇಶ ಓಡಾಡುತ್ತಿರುವುದು ನನಗೆ ಅಪಾರವಾದ ನೋವು ತಂದಿದೆ ಎಂದು ಹೇಳಿ ಬಹಿರಂಗ ಪತ್ರ ಬರೆದ್ದಾರೆ.

Tejasvi surya 5

ಪತ್ರದಲ್ಲಿ ಏನಿದೆ?
ಕೋವಿಡ್ ಪೀಡಿತರಿಗೆ ಬೆಡ್ ಹಂಚುವ ಬಿವಿಎಂಪಿ ವಾರ್ ರೂಮಿನಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ನನ್ನ ಹೆಸರನ್ನು ಸೇರಿಸಿಕೊಂಡ ಒಂದು ಸಂದೇಶ ಓಡಾಡುತ್ತಿರುವುದು ನನಗೆ ಅಪಾರವಾದ ನೋವು ತಂದಿದೆ.

ವಾರ್ ರೂಮಿನಲ್ಲಿ ನನ್ನ ಯಾವುದೇ ಪಾತ್ರವಿಲ್ಲ ಮಾತ್ರವಲ್ಲ ಅಲ್ಲಿ ಯಾವುದೇ ವೈದ್ಯರೂ ನನಗೆ ಗೊತ್ತಿಲ್ಲ. ಹೀಗಿದ್ದರೂ ನನ್ನನ್ನೂ ಆರೋಪಿಯನ್ನಾಗಿಸಿರುವುದು ನನಗೆ ಆಘಾತ ತಂದಿದೆ. ವಾರ್ ರೂಮನ್ನು ನಡೆಸುತ್ತಿರುವುದು ವಿಶೇಷ ಆರೋಗ್ಯ ಆಯುಕ್ತರು. ನನ್ನ ಕಾರ್ಯವೇನಿದ್ದರೂ ಬಿಬಿಎಂಪಿ ಕೋವಿಡ್ ಕೇರ್ ಸೆಂಟರ್ ಗಳ ಉಸ್ತುವಾರಿ ಮತ್ತು ಘನ ತ್ಯಾಜ್ಯ ಇಲಾಖೆಯ ನಿರ್ವಹಣೆ. ವಾರ್ ರೂಮ್ ಗೆ ಬೇಕಾದ ವೈದ್ಯರು ಅಥವಾ ಸಿಬ್ಬಂದಿಯ ನೇಮಕ ಮಾಡಿಕೊಳ್ಳುವುದು ಕೆಲಸ ಆರೋಗ್ಯ ಇಲಾಖೆಯ ಮತ್ತು ಆಯಾ ಬಿಬಿಎಂಪಿ ವಲಯಗಳ ಕೆಲಸವಾಗಿದೆ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ.

BBMP JC Sarfaraz Khan bed scam

ಈ ವಿಷಯಕ್ಕೆ ಕೋಮು ಬಣ್ಣ ಹಚ್ಚಿರುವುದು ಮತ್ತು ಅದರಲ್ಲಿ ಆ ಇಲಾಖೆಗೆ ಯಾವ ರೀತಿಯಲ್ಲಿಯೂ ಸಂಬಂಧವೇ ಇರದ ನನ್ನ ಹೆಸರು ಸೇರಿಸಿರುವುದು ನನಗೆ ನಿಜಕ್ಕೂ ನೋವು ತಂದಿದೆ.

ಎಲ್ಲಾ ಕೊವಿಡ್ ಕೇರ್ ಕೇಂದ್ರಗಳಿಗೆ ಆಕ್ಸಿಜನ್, ಆಕ್ಸಿಜನ್ ಕಾನ್ಸಂಟ್ರೇಟರುಗಳನ್ನು ವ್ಯವಸ್ಥೆ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಲು ನಾನು ಹಗಲು ರಾತ್ರಿ ಎನ್ನದೇ ಕೆಲಸ ಮಾಡುತ್ತಿದ್ದೇನೆ.

ಹಜ್ ಭವನವನ್ನು 140 ಬೆಡ್ ವ್ಯವಸ್ಥೆಯುಳ್ಳ ಆಕ್ಸಿಜನ್ ಸೌಲಭ್ಯವುಳ್ಳ ಕೊವಿಡ್ ಕೇರ್ ಕೇಂದ್ರವಾಗಿ ನಾನು ಪರಿವರ್ತಿಸಿದ್ದೇನೆ. ಅಷ್ಟಲ್ಲದೇ ಹಜ್ ಕಮಿಟಿ ನಿಧಿಯಿಂದಲೇ 50 ಐಸಿಯು ಗಳನ್ನು ಇಲ್ಲಿ ಹಾಕಿಸಿದ್ದೇನೆ. ನಾನು ಹೇಳಬಯಸುವುದೇನೆಂದರೆ ಈ ಹಜ್ ಭವನದಲ್ಲಿ ಸೇರಿಸಿಕೊಂಡು ಆರೈಕೆ ಮಾಡುತ್ತಿರುವ ಕೋವಿಡ್ ರೋಗಿಗಳಲ್ಲಿ 90% ರೋಗಿಗಳು ಇತರೆ ಧರ್ಮದ ನನ್ನ ಸಹೋದರರಾಗಿದ್ದಾರೆ, ಕೇವಲ 10% ರೋಗಿಗಳು ಮಾತ್ರ ಮುಸ್ಲಿಮರಾಗಿದ್ದಾರೆ.

bbmp bed block accused

ನಾನು ನಂಬಿಕೊಂಡು ಬಂದ ಮತ್ತು ಈಗಲೂ ನಂಬಿರುವ ತತ್ವ ಏನೆಂದರೆ ಅಲ್ಲಾಹ್ ಇರಲಿ, ಈಶ್ವರನಿರಲಿ, ಜೀಸಸ್ ಇರಲಿ ದೇವರೆಂಬುವನು ಎಲ್ಲರಿಗೂ ಒಬ್ಬನೇ. ನಾಮ ಹಲವು. ಮತ್ತು ನಾವೆಲ್ಲರೂ ಅವನ ಮಕ್ಕಳು.

ಕಳೆದ ವರ್ಷ ನಾನು ಬಡವರಿಗೆ ಮತ್ತು ಅಗತ್ಯವಿರುವ ಜನರಿಗೆ ಆಹಾರದ ಕಿಟ್ ಗಳನ್ನು ಒದಗಿಸಲು ಕೆಲಸ ಮಾಡಿದ್ದೆ. ಆಗ ಅವರೆಲ್ಲಾ ಯಾವ ಧರ್ಮದವರು ಯಾವ ಪ್ರದೇಶದವರು ಎಂದು ನಾನು ನೋಡಲಿಲ್ಲ. ಸಾವಿರಾರು ವಲಸೆ ಕಾರ್ಮಿಕರೊಂದಿಗೆ ನಿಂತು ಅವರಿಗೆ ಅಗತ್ಯ ಆಹಾರ ನೀಡಿ ಧೈರ್ಯ ಹೇಳುವ ಕೆಲಸ ಮಾಡಿದೆ. ಅವರಿಗೆ ತಂತಮ್ಮ ಊರುಗಳಿಗೆ ತಲುಪುವಂತೆ ರೈಲು ಪ್ರಯಾಣ ಮಾಡಲು ಸಹಕರಿಸಿದೆ. ಇದೆಲ್ಲಾ ಮಾಡುವಾಗಲೂ ನಾನು ಅವರು ಯಾವ ಧರ್ಮದವರು ಎಂದಾಗಲೀ ಯಾವ ಊರೆಂದಾಲೀ ನೋಡಲಿಲ್ಲ. ನನ್ನ ದೃಷ್ಟಿಯಲ್ಲಿ ಅವರೆಲ್ಲರೂ ಬಹಳ ಕಷ್ಟದಲ್ಲಿರುವ ನನ್ನ ಸಹೋದರ ಸಹೋದರಿಯರಾಗಿದ್ದರು. ಅವರು ಆದಷ್ಟು ಬೇಗ ತಮ್ಮ ಊರುಗಳಿಗೆ ಮರಳಿ ತಮ್ಮ ಪ್ರೀತಿಪಾತ್ರರನ್ನು ಸೇರಿಕೊಳ್ಳಲಿ ಎನ್ನುವುದಷ್ಟೇ ನನ್ನ ಕಾಳಜಿಯಾಗಿತ್ತು. ಇದರ ಪರಿಣಾಮವಾಗಿ ನನ್ನ ಇಡೀ ಕುಟುಂಬದವರಿಗೆ ನನ್ನಿಂದಾಗಿ ಕೊವಿಡ್ ಸೋಂಕು ತಗುಲಿತ್ತು.

ನಾನೂ ಸಹ ನಿಮ್ಮಲ್ಲಿ ಒಬ್ಬನಾಗಿರುವುದಕ್ಕೆ ಮತ್ತು ಯಾರೋ ಹೊರಗಿನ ವ್ಯಕ್ತಿ ಅಲ್ಲ ಎನ್ನುವುದಕ್ಕೆ ಇಷ್ಟು ಸಾಕ್ಷಿ ಸಾಲದೆ? ಯಾವತ್ತಿಗೂ ನನ್ನ ಬದ್ಧತೆ ನನ್ನ ದೇಶ, ನನ್ನ ಸರ್ಕಾರ ಮತ್ತು ಈ ದೇಶದ ಸಂವಿಧಾನಕ್ಕೆ. ಕೆಲವು ಜನರ ಅಜ್ಞಾನ ಮತ್ತು ಮೂರ್ಖತನ ನಿಜಕ್ಕೂ ನನಗೆ ನೋವುಂಟುಮಾಡಿದೆ. ಇದರ ಕುರಿತು ಕಾನೂನು ಪ್ರಕಾರ ತನಿಖೆ ನಡೆದು, ಇಂತಹ ಕಷ್ಟದ ಸಮಯದಲ್ಲಿ ಸಹ ವಿಷವನ್ನು ಹರಡುತ್ತಿರುವವರ ಮೇಲೆ ಕ್ರಮ ಜರುಗಿಸಲಿ ಎಂದು ಆಶಿಸುತ್ತೇನೆ.

TAGGED:bbmpbed scamCoronaCovid 19Sarfaraz Khanಕೊರೊನಾಕೊರೊನಾ ವೈರಸ್ಕೋವಿಡ್ 19ಬಿಬಿಎಂಪಿಬೆಂಗಳೂರು
Share This Article
Facebook Whatsapp Whatsapp Telegram

Cinema Updates

Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
10 hours ago
Vikram Sugumaran
ನಿರ್ಮಾಪಕರಿಗೆ ಕತೆ ಹೇಳಿ ವಾಪಸ್ ಆಗುತ್ತಿದ್ದಾಗ ಹೃದಯಾಘಾತ – ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ
13 hours ago
Vaishnavi Gowda Seetha Rama Serial Anukool Mishra
ಸೀರಿಯಲ್ ನಟಿ ವೈಷ್ಣವಿ ಗೌಡ ಮದುವೆ ಶಾಸ್ತ್ರಗಳು ಆರಂಭ‌
14 hours ago
shivarame gowda
ಕಮಲ್ ಹೇಳಿಕೆ ನೋಡಿದ್ರೆ.. ಕನ್ನಡಿಗರೆಲ್ಲಾ ತಮಿಳಿಗೆ ಹುಟ್ಟಿದ್ದಾರೆ ಅನ್ನೋ ರೀತಿಯಿದೆ – ಶಿವರಾಮೇಗೌಡ ಲೇವಡಿ
16 hours ago

You Might Also Like

RCB vs PBKS
Cricket

ಸತತ 2ನೇ ವರ್ಷ ರಜತ್‌ Vs ಶ್ರೇಯಸ್‌ ತಂಡಗಳ ಮಧ್ಯೆ ಟಿ20 ಫೈನಲ್!‌

Public TV
By Public TV
2 minutes ago
pub party
Bengaluru City

ಐಪಿಎಲ್ ಫೈನಲ್ ಹಣಾಹಣಿ – ಬೆಂಗ್ಳೂರಲ್ಲಿ ಅವಧಿಗೂ ಮೀರಿ ಪಬ್ ಓಪನ್ ಮಾಡಿದ್ರೆ FIR

Public TV
By Public TV
6 minutes ago
RCB 6
Cricket

IPL Final: ಆರ್‌ಸಿಬಿ ಚಾಂಪಿಯನ್‌ ಆದ್ರೆ ಸಿಗಲಿದೆ 20 ಕೋಟಿ!

Public TV
By Public TV
40 minutes ago
virat kohli 6
Cricket

ಬಂದಿದ್ದು ಸಾಮಾನ್ಯ ಆಟಗಾರನಾಗಿ – ಕಟ್ಟಿದ್ದು RCB ಮಹಾ ಸಾಮ್ರಾಜ್ಯ!

Public TV
By Public TV
33 minutes ago
School Students
Bengaluru City

SSLC ಫೇಲ್ ಆದ್ರೂ ಶಾಲೆಗೆ ಹೋಗ್ಬೋದು – ರೂಲ್ಸ್ ಏನು?

Public TV
By Public TV
49 minutes ago
rajat patidar shreyas iyer
Cricket

IPL Final – ಮೀಸಲು ದಿನವೂ ಮಳೆಯಿಂದ ಪಂದ್ಯ ರದ್ದಾದ್ರೆ ಚಾಂಪಿಯನ್‌ ಯಾರು?

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?