Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಡ್ ಬ್ಲಾಕ್ ದಂಧೆಗೆ ಕೋಮು ಬಣ್ಣ – ಬೇಸರ ತೋಡಿಕೊಂಡ ಸರ್ಫರಾಜ್ ಖಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬೆಡ್ ಬ್ಲಾಕ್ ದಂಧೆಗೆ ಕೋಮು ಬಣ್ಣ – ಬೇಸರ ತೋಡಿಕೊಂಡ ಸರ್ಫರಾಜ್ ಖಾನ್

Districts

ಬೆಡ್ ಬ್ಲಾಕ್ ದಂಧೆಗೆ ಕೋಮು ಬಣ್ಣ – ಬೇಸರ ತೋಡಿಕೊಂಡ ಸರ್ಫರಾಜ್ ಖಾನ್

Public TV
Last updated: May 5, 2021 11:58 am
Public TV
Share
3 Min Read
Sarfaraz Khan BBMP 1
SHARE

ಬೆಂಗಳೂರು: ಬಿಬಿಎಂಪಿ ಬೆಡ್ ಬ್ಲಾಕ್ ದಂಧೆಗೆ ಕೋಮು ಬಣ್ಣ ಬಳಿದು ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬೇಸರ ವ್ಯಕ್ತಪಡಿಸಿದ್ದಾರೆ.

ಕೊವಿಡ್ ಪೀಡಿತರಿಗೆ ಬೆಡ್ ಹಂಚುವ ಬಿಬಿಎಂಪಿ ವಾರ್ ರೂಮಿನಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ನನ್ನ ಹೆಸರನ್ನು ಸೇರಿಸಿಕೊಂಡ ಒಂದು ಸಂದೇಶ ಓಡಾಡುತ್ತಿರುವುದು ನನಗೆ ಅಪಾರವಾದ ನೋವು ತಂದಿದೆ ಎಂದು ಹೇಳಿ ಬಹಿರಂಗ ಪತ್ರ ಬರೆದ್ದಾರೆ.

Tejasvi surya 5

ಪತ್ರದಲ್ಲಿ ಏನಿದೆ?
ಕೋವಿಡ್ ಪೀಡಿತರಿಗೆ ಬೆಡ್ ಹಂಚುವ ಬಿವಿಎಂಪಿ ವಾರ್ ರೂಮಿನಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ನನ್ನ ಹೆಸರನ್ನು ಸೇರಿಸಿಕೊಂಡ ಒಂದು ಸಂದೇಶ ಓಡಾಡುತ್ತಿರುವುದು ನನಗೆ ಅಪಾರವಾದ ನೋವು ತಂದಿದೆ.

ವಾರ್ ರೂಮಿನಲ್ಲಿ ನನ್ನ ಯಾವುದೇ ಪಾತ್ರವಿಲ್ಲ ಮಾತ್ರವಲ್ಲ ಅಲ್ಲಿ ಯಾವುದೇ ವೈದ್ಯರೂ ನನಗೆ ಗೊತ್ತಿಲ್ಲ. ಹೀಗಿದ್ದರೂ ನನ್ನನ್ನೂ ಆರೋಪಿಯನ್ನಾಗಿಸಿರುವುದು ನನಗೆ ಆಘಾತ ತಂದಿದೆ. ವಾರ್ ರೂಮನ್ನು ನಡೆಸುತ್ತಿರುವುದು ವಿಶೇಷ ಆರೋಗ್ಯ ಆಯುಕ್ತರು. ನನ್ನ ಕಾರ್ಯವೇನಿದ್ದರೂ ಬಿಬಿಎಂಪಿ ಕೋವಿಡ್ ಕೇರ್ ಸೆಂಟರ್ ಗಳ ಉಸ್ತುವಾರಿ ಮತ್ತು ಘನ ತ್ಯಾಜ್ಯ ಇಲಾಖೆಯ ನಿರ್ವಹಣೆ. ವಾರ್ ರೂಮ್ ಗೆ ಬೇಕಾದ ವೈದ್ಯರು ಅಥವಾ ಸಿಬ್ಬಂದಿಯ ನೇಮಕ ಮಾಡಿಕೊಳ್ಳುವುದು ಕೆಲಸ ಆರೋಗ್ಯ ಇಲಾಖೆಯ ಮತ್ತು ಆಯಾ ಬಿಬಿಎಂಪಿ ವಲಯಗಳ ಕೆಲಸವಾಗಿದೆ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ.

BBMP JC Sarfaraz Khan bed scam

ಈ ವಿಷಯಕ್ಕೆ ಕೋಮು ಬಣ್ಣ ಹಚ್ಚಿರುವುದು ಮತ್ತು ಅದರಲ್ಲಿ ಆ ಇಲಾಖೆಗೆ ಯಾವ ರೀತಿಯಲ್ಲಿಯೂ ಸಂಬಂಧವೇ ಇರದ ನನ್ನ ಹೆಸರು ಸೇರಿಸಿರುವುದು ನನಗೆ ನಿಜಕ್ಕೂ ನೋವು ತಂದಿದೆ.

ಎಲ್ಲಾ ಕೊವಿಡ್ ಕೇರ್ ಕೇಂದ್ರಗಳಿಗೆ ಆಕ್ಸಿಜನ್, ಆಕ್ಸಿಜನ್ ಕಾನ್ಸಂಟ್ರೇಟರುಗಳನ್ನು ವ್ಯವಸ್ಥೆ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಲು ನಾನು ಹಗಲು ರಾತ್ರಿ ಎನ್ನದೇ ಕೆಲಸ ಮಾಡುತ್ತಿದ್ದೇನೆ.

ಹಜ್ ಭವನವನ್ನು 140 ಬೆಡ್ ವ್ಯವಸ್ಥೆಯುಳ್ಳ ಆಕ್ಸಿಜನ್ ಸೌಲಭ್ಯವುಳ್ಳ ಕೊವಿಡ್ ಕೇರ್ ಕೇಂದ್ರವಾಗಿ ನಾನು ಪರಿವರ್ತಿಸಿದ್ದೇನೆ. ಅಷ್ಟಲ್ಲದೇ ಹಜ್ ಕಮಿಟಿ ನಿಧಿಯಿಂದಲೇ 50 ಐಸಿಯು ಗಳನ್ನು ಇಲ್ಲಿ ಹಾಕಿಸಿದ್ದೇನೆ. ನಾನು ಹೇಳಬಯಸುವುದೇನೆಂದರೆ ಈ ಹಜ್ ಭವನದಲ್ಲಿ ಸೇರಿಸಿಕೊಂಡು ಆರೈಕೆ ಮಾಡುತ್ತಿರುವ ಕೋವಿಡ್ ರೋಗಿಗಳಲ್ಲಿ 90% ರೋಗಿಗಳು ಇತರೆ ಧರ್ಮದ ನನ್ನ ಸಹೋದರರಾಗಿದ್ದಾರೆ, ಕೇವಲ 10% ರೋಗಿಗಳು ಮಾತ್ರ ಮುಸ್ಲಿಮರಾಗಿದ್ದಾರೆ.

bbmp bed block accused

ನಾನು ನಂಬಿಕೊಂಡು ಬಂದ ಮತ್ತು ಈಗಲೂ ನಂಬಿರುವ ತತ್ವ ಏನೆಂದರೆ ಅಲ್ಲಾಹ್ ಇರಲಿ, ಈಶ್ವರನಿರಲಿ, ಜೀಸಸ್ ಇರಲಿ ದೇವರೆಂಬುವನು ಎಲ್ಲರಿಗೂ ಒಬ್ಬನೇ. ನಾಮ ಹಲವು. ಮತ್ತು ನಾವೆಲ್ಲರೂ ಅವನ ಮಕ್ಕಳು.

ಕಳೆದ ವರ್ಷ ನಾನು ಬಡವರಿಗೆ ಮತ್ತು ಅಗತ್ಯವಿರುವ ಜನರಿಗೆ ಆಹಾರದ ಕಿಟ್ ಗಳನ್ನು ಒದಗಿಸಲು ಕೆಲಸ ಮಾಡಿದ್ದೆ. ಆಗ ಅವರೆಲ್ಲಾ ಯಾವ ಧರ್ಮದವರು ಯಾವ ಪ್ರದೇಶದವರು ಎಂದು ನಾನು ನೋಡಲಿಲ್ಲ. ಸಾವಿರಾರು ವಲಸೆ ಕಾರ್ಮಿಕರೊಂದಿಗೆ ನಿಂತು ಅವರಿಗೆ ಅಗತ್ಯ ಆಹಾರ ನೀಡಿ ಧೈರ್ಯ ಹೇಳುವ ಕೆಲಸ ಮಾಡಿದೆ. ಅವರಿಗೆ ತಂತಮ್ಮ ಊರುಗಳಿಗೆ ತಲುಪುವಂತೆ ರೈಲು ಪ್ರಯಾಣ ಮಾಡಲು ಸಹಕರಿಸಿದೆ. ಇದೆಲ್ಲಾ ಮಾಡುವಾಗಲೂ ನಾನು ಅವರು ಯಾವ ಧರ್ಮದವರು ಎಂದಾಗಲೀ ಯಾವ ಊರೆಂದಾಲೀ ನೋಡಲಿಲ್ಲ. ನನ್ನ ದೃಷ್ಟಿಯಲ್ಲಿ ಅವರೆಲ್ಲರೂ ಬಹಳ ಕಷ್ಟದಲ್ಲಿರುವ ನನ್ನ ಸಹೋದರ ಸಹೋದರಿಯರಾಗಿದ್ದರು. ಅವರು ಆದಷ್ಟು ಬೇಗ ತಮ್ಮ ಊರುಗಳಿಗೆ ಮರಳಿ ತಮ್ಮ ಪ್ರೀತಿಪಾತ್ರರನ್ನು ಸೇರಿಕೊಳ್ಳಲಿ ಎನ್ನುವುದಷ್ಟೇ ನನ್ನ ಕಾಳಜಿಯಾಗಿತ್ತು. ಇದರ ಪರಿಣಾಮವಾಗಿ ನನ್ನ ಇಡೀ ಕುಟುಂಬದವರಿಗೆ ನನ್ನಿಂದಾಗಿ ಕೊವಿಡ್ ಸೋಂಕು ತಗುಲಿತ್ತು.

ನಾನೂ ಸಹ ನಿಮ್ಮಲ್ಲಿ ಒಬ್ಬನಾಗಿರುವುದಕ್ಕೆ ಮತ್ತು ಯಾರೋ ಹೊರಗಿನ ವ್ಯಕ್ತಿ ಅಲ್ಲ ಎನ್ನುವುದಕ್ಕೆ ಇಷ್ಟು ಸಾಕ್ಷಿ ಸಾಲದೆ? ಯಾವತ್ತಿಗೂ ನನ್ನ ಬದ್ಧತೆ ನನ್ನ ದೇಶ, ನನ್ನ ಸರ್ಕಾರ ಮತ್ತು ಈ ದೇಶದ ಸಂವಿಧಾನಕ್ಕೆ. ಕೆಲವು ಜನರ ಅಜ್ಞಾನ ಮತ್ತು ಮೂರ್ಖತನ ನಿಜಕ್ಕೂ ನನಗೆ ನೋವುಂಟುಮಾಡಿದೆ. ಇದರ ಕುರಿತು ಕಾನೂನು ಪ್ರಕಾರ ತನಿಖೆ ನಡೆದು, ಇಂತಹ ಕಷ್ಟದ ಸಮಯದಲ್ಲಿ ಸಹ ವಿಷವನ್ನು ಹರಡುತ್ತಿರುವವರ ಮೇಲೆ ಕ್ರಮ ಜರುಗಿಸಲಿ ಎಂದು ಆಶಿಸುತ್ತೇನೆ.

TAGGED:bbmpbed scamCoronaCovid 19Sarfaraz Khanಕೊರೊನಾಕೊರೊನಾ ವೈರಸ್ಕೋವಿಡ್ 19ಬಿಬಿಎಂಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
4 hours ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
5 hours ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
5 hours ago
DK Shivakumar Rahul Gandhi Sonia Gandhi 1 1
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
5 hours ago
Chikkamagaluru
Chikkamagaluru

2 ದಿನಗಳ ಬಳಿಕ ಮತ್ತೆ ಕಾಫಿನಾಡಲ್ಲಿ ಅಪರಿಚಿತ ಲಘು ವಿಮಾನ ಹಾರಾಟ

Public TV
By Public TV
5 hours ago
RCB 3
Bengaluru City

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?