ಮಡಿಕೇರಿ: ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಪಿಪಿಇ ಕಿಟ್ ಧರಿಸಿ ಕೋವಿಡ್ ಕೇರ್ ಸೆಂಟರ್ ಗಳಿಗೆ ಭೇಟಿ ನೀಡಿ ಸೋಂಕಿತರ ಆರೋಗ್ಯ ವಿಚಾರಿಸಿ, ಮಾನಸಿಕ ಧೈರ್ಯ ತುಂಬಿದರು.
ಕೊಡಗಿನ ಗಡಿ ಭಾಗಗಳಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆಯಲ್ಲಿ ಚರ್ಚೆ ನಡೆಸಿ ನಂತರ ಅಗತ್ಯ ಮುನ್ನಚರಿಕೆ ಕ್ರಮಗಳ ಕೈಗೊಳ್ಳುವಂತೆ ಸೂಚನೆ ನೀಡಿದರಿ. ಬಳಿಕ ಕುಶಾಲನಗರದ ಸಮೀಪದ ಕೂಡಿಗೆಯ ಮೊರಾರ್ಜಿ ವಸತಿ ಶಾಲೆಯಲ್ಲಿ ತೆರೆದಿರುವ ಕೋವಿಡ್ ಕೇಂದ್ರಕ್ಕೆ ಭೇಟಿ ನೀಡಿದರು.
ಈ ಬಾರಿ ಕೊಡಗಿನಲ್ಲಿ ಕೋವಿಡ್ 19 ಅತಿಯಾಗಿದೆ. ಕೆಲಸದ ನಿಮಿತ್ತವಾಗಿ ನಗರದಲ್ಲಿ ವಾಸಿಸುತ್ತಿದ್ದ ಜನರು ಲಾಕ್ಡೌನ್ ಘೋಷಣೆ ಆದ ಕೂಡಲೇ ಬಹಳಷ್ಟು ಮಂದಿ ಆಗಮಿಸಿ ಕೊರೊನಾ ಹೆಚ್ಚಾಗಲು ಪ್ರಮುಖ ಕಾರಣವಾಗಿದೆ. ಕೊಡಗಿನಲ್ಲಿ ಬಹಳಷ್ಟು ಕೊರೋನ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಲ್ಲಿನ ವೈದ್ಯರು ಉತ್ತಮವಾದ ಚಿಕಿತ್ಸೆ ನೀಡುತ್ತಿದ್ದಾರೆ. ಆಹಾರ ಪದಾರ್ಥಗಳು ಗುಣಮಟ್ಟದಾಗಿದೆ. ಯಾರು ಭಯ ಪಡುವ ಅವಶ್ಯಕತೆ ಇಲ್ಲ. ಸೋಂಕಿತರು ತಮ್ಮ ಮನೆಗಳಲ್ಲಿರುವಂತೆ ಕೇಂದ್ರದಲ್ಲಿಯೂ ಖುಷಿಯಲ್ಲಿ ಇದ್ದಾರೆ. ಎಂದು ತಿಳಿಸಿದ್ರು.
ಕೊಡಗು ಜಿಲ್ಲೆಯಲ್ಲಿ ಕೊರೊನ ಮಹಾಮಾರಿ ರುದ್ರ ನರ್ತನ ದಿನದಿಂದ ದಿನಕ್ಕೆ ತಾಂಡವವಾಡುತ್ತಿದೆ. ಸಾವು ನೋವಿನ ಸಂಖ್ಯೆ ದಿನ ಕಳೆದಂತೆ ಮಿತಿಮೀರುತ್ತಿದೆ ಇಂದು ಕೋಡ ಜಿಲ್ಲೆಯಲ್ಲಿ 681 ಪಾಸಿಟಿವ್ ಪ್ರಕರಣಗಳು ದಾಖಲಾಗಿದು 24 ಗಂಟೆಗಳಲ್ಲಿ 12 ಜನರು ಮೃತ ಪಟ್ಟಿದ್ದಾರೆ. ಹೀಗಾಗಿ ಕೊರೋನ ಸೋಂಕು ತಡೆಗಟ್ಟಲು ಕೊಡಗು ಜಿಲ್ಲಾಡಳಿತ ಬಿಗಿ ಕ್ರಮದ ಮೊರೆ ಹೋಗಿದೆ. ಮಂಗಳವಾರ ಮತ್ತು ಶುಕ್ರವಾರ ಬೆಳಗ್ಗೆ 6 ರಿಂದ 12 ರ ತನಕ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಕಲ್ಪಿಸಲಾಗಿದ್ದು, ಬಾಕಿ ದಿನಗಳು ಕೊಡಗು ಜಿಲ್ಲೆ ಸಂಪೂರ್ಣ ಬಂದ್ ಆಗಿದೆ.