ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕಾಗಿ ಬೃಹತ್ ಮರಗಳಿಗೆ ಕೊಡಲಿ ಏಟು

Public TV
1 Min Read
blg trees

– ಸ್ಥಳಾವಕಾಶವಿದ್ದರೂ ಮರಗಳ ಕಡಿದರು

ಬೆಳಗಾವಿ/ಚಿಕ್ಕೋಡಿ: ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲು ಎರಡು ಬೃಹತ್ ಮರಗಳಿಗೆ ಅರಣ್ಯ ಇಲಾಖೆ ಕೊಡಲಿ ಏಟು ಹಾಕಿರುವ ಘಟನೆ ಜಿಲ್ಲೆಯ ಅಥಣಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಡೆದಿದೆ.

ಒಂದು ಕಡೆ ಉಸಿರಾಟಕ್ಕೆ ಜನರು ಆಕ್ಸಿಜನ್ ಸಿಲಿಂಡರ್ ಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇನ್ನೊಂದು ಕಡೆ ಇದ್ದ ಎರಡು ಬೃಹತ್ ಮರಗಳನ್ನು ಅರಣ್ಯ ಇಲಾಖೆ ಕತ್ತರಿಸಿದ್ದಕ್ಕೆ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. ಅಥಣಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಸಾಕಷ್ಟು ಸ್ಥಳವಾಕಾಶ ಇದ್ದರೂ ಆಸ್ಪತ್ರೆ ವೈದ್ಯಾಧಿಕಾರಿಗಳ ಸಮನ್ವಯದ ಕೊರತೆಯಿಂದ ಎರಡು ಮರಗಳಿಗೆ ಕೊಡಲಿ ಏಟು ಹಾಕಲಾಗಿದೆ.

vlcsnap 2021 05 11 15h08m06s912

ಒಟ್ಟು 390 ಲೀಟರ್ ನಷ್ಟು ಆಕ್ಸಿಜನ್ ಸಾಮರ್ಥ್ಯದ ಪ್ಲಾಂಟ್ ನಿರ್ಮಾಣಕ್ಕಾಗಿ ಮರಗಳ ಮಾರಣ ಹೋಮ ತಡೆದಿದೆ. ಅರಣ್ಯ ಇಲಾಖೆಯ ಸಿಬ್ಬಂದಿಯೇ ಮುಂದೆ ನಿಂತು ಮರಗಳನ್ನು ಕಡಿದು ಹಾಕಿದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *