Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೇ ಅಂತ್ಯದೊಳಗೆ ವಿದ್ಯಾರ್ಥಿಗಳಿಗೆ ಪೂರ್ಣ ಆಹಾರ ಧಾನ್ಯ ವಿತರಣೆ -ಸುರೇಶ್ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೇ ಅಂತ್ಯದೊಳಗೆ ವಿದ್ಯಾರ್ಥಿಗಳಿಗೆ ಪೂರ್ಣ ಆಹಾರ ಧಾನ್ಯ ವಿತರಣೆ -ಸುರೇಶ್ ಕುಮಾರ್

Bengaluru City

ಮೇ ಅಂತ್ಯದೊಳಗೆ ವಿದ್ಯಾರ್ಥಿಗಳಿಗೆ ಪೂರ್ಣ ಆಹಾರ ಧಾನ್ಯ ವಿತರಣೆ -ಸುರೇಶ್ ಕುಮಾರ್

Public TV
Last updated: May 12, 2021 7:20 pm
Public TV
Share
3 Min Read
SURESH KUMAR 1
SHARE

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ನೀಡಬೇಕಾದ ಬಾಕಿ ಉಳಿದಿರುವ ಅಹಾರ ಧಾನ್ಯಗಳನ್ನು ಮೇ ತಿಂಗಳ ಅಂತ್ಯದೊಳಗೆ ಪೂರ್ಣವಾಗಿ ವಿತರಿಸಲು ಸೂಚನೆ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

SURESH KUMAR 3

ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸುರೇಶ್ ಕುಮಾರ್ ಅವರು, ಶಾಲಾ ಮಕ್ಕಳಿಗೆ ಮಧ್ಯಾಹ್ನದ ಉಪಹಾರದ ಬದಲಿಗೆ ನೀಡಲಾಗುತ್ತಿದ್ದ ಬಾಕಿ ಉಳಿದಿರುವ ಅಡುಗೆ ಎಣ್ಣೆ ಸೇರಿದಂತೆ ಆಹಾರ ಧಾನ್ಯಗಳನ್ನು ಲಾಕ್‍ಡೌನ್ ಅವಧಿ ಮುಗಿದ ತಕ್ಷಣವೇ ವಿತರಿಸಬೇಕೆಂದು ನಿರ್ದೇಶನ ನೀಡಲಾಗಿದೆ. ಈ ಆಹಾರ ಧಾನ್ಯಗಳಿಗೆ ಈಗಾಗಲೇ ಹಣ ಬಿಡುಗಡೆ ಮಾಡಲಾಗಿದ್ದು, ಪೂರ್ಣ ದಿನಗಳಿಗೆ ವಿತರಣೆ ಮಾಡಲು ಅಗತ್ಯವಿರುವ ಆಹಾರ ಧಾನ್ಯ ಕೆಎಸ್‍ಎಫ್‍ಸಿ ಗೋದಾಮುಗಳಲ್ಲಿ ಏಕ ಕಾಲದಲ್ಲಿ ಸಂಗ್ರಹಣೆ ಮಾಡಿ ವಿತರಿಸಲು ಕಷ್ಟಸಾಧ್ಯವಾಗಿರುವುದರಿಂದ ಎರಡು ಹಂತಗಳಲ್ಲಿ ವಿತರಿಸಲು ತೀರ್ಮಾನಿಸಿ ಈಗಾಗಲೇ ಒಂದು ಹಂತದ ವಿತರಣೆ ಪೂರ್ಣಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮೊದಲ ಹಂತದ 108 ದಿನಗಳ ಆಹಾರ ಧಾನ್ಯಗಳನ್ನು ಎಲ್ಲ ಶಾಲೆಗಳಿಗೆ ವಿತರಿಸಲಾಗಿದೆ. ಉಳಿದ ಅವಧಿಯಾದ 2021ರ ನವೆಂಬರ್ ನಿಂದ 2021ಮಾರ್ಚ್ ವರೆಗಿನ 132 ದಿನಗಳಿಗೆ ಸಂಬಂಧಿಸಿದ ಆಹಾರ ಧಾನ್ಯಗಳನ್ನು ಕೆಲವು ಶಾಲೆಗಳಿಗೆ ವಿತರಿಸಲಾಗಿದೆ. ಲಾಕ್‍ಡೌನ್ ಘೋಷಣೆಯಾದ್ದರಿಂದ ಕೆಲವು ಶಾಲೆಗಳಿಗೆ ಎರಡನೇ ಹಂತದ ಆಹಾರ ಧಾನ್ಯಗಳನ್ನು ವಿತರಿಸಲು ಸಾಧ್ಯವಾಗಿಲ್ಲ. ಲಾಕ್‍ಡೌನ್ ಮುಗಿದ ಕೂಡಲೇ ಪ್ರಕ್ರಿಯೆ ಪ್ರಾರಂಭಿಸಿ ಉಳಿದ ಶಾಲೆಗಳಿಗೆ ಮೇ ಅಂತ್ಯದೊಳಗೆ ವಿತರಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

Private School Students

ತೊಗರಿ ಬೇಳೆ ಸರಬರಾಜುದಾರರಿಗೆ ಏ. 27ರಂದು ಮತ್ತು ಅಡುಗೆ ಎಣ್ಣೆ ಸರಬರಾಜುದಾರರಿಗೆ ಮೇ 7ರಂದು ಸರಬರಾಜು ಕಾರ್ಯಾದೇಶ ನೀಡಲಾಗಿದೆ. ದಾಸ್ತಾನಿನಲ್ಲಿರುವ ಆಹಾರ ಧಾನ್ಯಗಳನ್ನು ಡಿಡಿಪಿಐ ಮತ್ತು ಜಿಪಂ ಸಿಇಒಗಳೊಂದಿಗೆ ಚರ್ಚಿಸಿ ತಕ್ಷಣವೇ ಕೂಡಲೇ ವಿತರಿಸಲು ಸೂಚನೆ ನೀಡಲಾಗಿದೆ. ಎಲ್ಲಾ ಶಾಲೆಗಳ ಮುಖ್ಯಸ್ಥರು ಶಾಲೆಗಳಲ್ಲಿ ಹಾಜರಿರುವಂತೆ ಸೂಚಿಸಿ, ಸೂಚಿತ ಅವಧಿಗೆ ಆಹಾರ ಧಾನ್ಯಗಳ ವಿತರಣೆಗೆ ಕ್ರಮ ವಹಿಸಲಾಗುತ್ತದೆ. ಶಾಲೆಗಳು ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ಪ್ರಸ್ತುತ ಆರು ತಿಂಗಳ ಅವಧಿಗೆ ಒಂದು ಬಾರಿ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದ್ದು, ಮುಂದಿನ ಶೈಕ್ಷಣಿಕ ಸಾಲಿನಿಂದ ಇದನ್ನು ಸರಿಪಡಿಸಲಾಗುತ್ತದೆ. ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರತಿ ತಿಂಗಳು ವಿದ್ಯಾರ್ಥಿಗಳ ಮನೆಗೆ ಆಹಾರ ಧಾನ್ಯ ವಿತರಣೆಗೆ ನೀಲನಕ್ಷೆ ತಯಾರಿಸಲು ಸೂಚಿಸಲಾಗಿದೆ ಎಂದೂ ಸಚಿವರು ಹೇಳಿದರು.

ಆರ್.ಟಿ.ಇ ಹಣ ಮರುಪಾವತಿಗೆ ಸೂಚನೆ:
ಈಗಾಗಲೇ ಬಹುತೇಕ ಶಾಲೆಗಳಿಗೆ ಆರ್.ಟಿ.ಇ ಅನುದಾನ ಮರುಪಾವತಿಸಲಾಗಿದೆ. ಉಳಿದ ಶಾಲೆಗಳಿಗೆ ತಕ್ಷಣವೇ ಹಣ ಬಿಡುಗಡೆಗೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಸೂಚನೆ ನೀಡಲಾಗಿದೆ. ಕೋವಿಡ್ ಸಂಕಷ್ಟದ ಸಮಯದಲ್ಲೂ ಮಕ್ಕಳಿಗೆ ಶಿಕ್ಷಣ ನೀಡಲು ಶಾಲೆಗಳು ಕ್ರಮ ವಹಿಸಿದ್ದು, ಬಾಕಿ ಆರ್.ಟಿ.ಇ ಹಣವನ್ನು ಮೇ ಅಂತ್ಯದೊಳಗೆ ಬಿಡುಗಡೆ ಮಾಡಬೇಕೆಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಬಾಕಿ ಹಣ ನೀಡದೇ ಬಾಕಿ ಉಳಿಸಿಕೊಂಡಿರುವ ಬಿಇಒ ಮತ್ತು ಡಿಡಿಪಿಐಗಳಿಗೆ ಎಚ್ಚರಿಕೆ ನೀಡಿ ತಕ್ಷಣವೇ ಹಣ ಬಿಡುಗಡೆಗೆ ಕ್ರಮ ವಹಿಸಬೇಕೇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸಚಿವರು ಸೂಚಿಸಿದರು.

ಶಿಸ್ತು ಕ್ರಮ: ಅನಗತ್ಯವಾಗಿ ಶಾಲೆಗಳಿಗೆ ನೀಡಬೇಕಾದ ಹಣವನ್ನು ತಮ್ಮ ಖಾತೆಯಲ್ಲೇ ಉಳಿಸಿಕೊಂಡಿರುವ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮಕ್ಕೆ ಕೂಡಲೇ ಪ್ರಸ್ತಾವನೆ ಮಂಡಿಸಲೂ ಸಹ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್, ಸಾಶಿಇ ಆಯುಕ್ತ ವಿ. ಅನ್ಬುಕುಮಾರ್, ಮಧ್ಯಾಹ್ನ ಉಪಹಾರ ಯೋಜನೆ ಅಧಿಕಾರಿಗಳು ಸೇರಿದಂತೆ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳ ಭಾಗವಹಿಸಿದ್ದರು.

mid day meal

ಖಾಸಗಿ ಪಿಯು ಆಡಳಿತ ಮಂಡಳಿಗಳೊಂದಿಗೆ ಚರ್ಚೆ:
ಇದೇ ಸಂದರ್ಭದಲ್ಲಿ ಬೆಂಗಳೂರು ವಿಭಾಗದ ದಾವಣಗೆರೆ, ಶಿವಮೊಗ್ಗ ಮತು ಚಿತ್ರದುರ್ಗ ಜಿಲ್ಲೆಗಳಿಗೆ ಸೇರಿದ ಖಾಸಗಿ ಅನುದಾನರಹಿತ ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸಚಿವ ಸುರೇಶ್ ಕುಮಾರ್ ಸಭೆ ನಡೆಸಿದರು. ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಕೋವಿಡ್ ಸಂಕಷ್ಟದ ಸಮಯದಲ್ಲಿ ಎದುರಿಸುತ್ತಿರುವ ಸವಾಲುಗಳು, ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗದ ರೀತಿಯಲ್ಲಿ ಅನುಸರಿಸಬೇಕಾದ ಕ್ರಮಗಳು, ಪರೀಕ್ಷಾ ಪ್ರಕ್ರಿಯೆ ಕುರಿತಂತೆ ಸಚಿವರ ಗಮನ ಸೆಳೆದರು.

ಸಭೆಯಲ್ಲಿ ಮಾಜಿ ವಿಧಾನಪರಿಷತ್ ಮುಖ್ಯ ಸಚೇತಕ ಶಿವಯೋಗಿ ಸ್ವಾಮಿ ಸೇರಿದಂತೆ ಆ ಭಾಗದ 45ಕ್ಕೂ ಹೆಚ್ಚು ವಿದ್ಯಾ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಪದವಿಪೂರ್ವ ಶಿಕ್ಷಣ ನಿರ್ದೇಶಕಿ ಸ್ನೇಹಲ್ ಹಾಜರಿದ್ದರು.

TAGGED:Coronaeducation departmentgovernmentPublic TVsuresh kumarಆರ್.ಟಿ.ಇಕೊರೊನಾಕೋವಿಡ್ 19ಪಬ್ಲಿಕ್ ಟಿವಿಶಿಕ್ಷಣ ಇಲಾಖೆಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
4 hours ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
4 hours ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
5 hours ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
5 hours ago
01 13
Big Bulletin

ಬಿಗ್‌ ಬುಲೆಟಿನ್‌ 18 April 2026 ಭಾಗ-1

Public TV
By Public TV
6 hours ago
02 13
Big Bulletin

ಬಿಗ್‌ ಬುಲೆಟಿನ್‌ 18 April 2026 ಭಾಗ-2

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?