Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಾಕ್‍ಡೌನ್‍ನಿಂದ ಸೋಂಕು ನಿಯಂತ್ರಣ, 3 ಕೋಟಿ ಲಸಿಕೆ ಬುಕ್ – ಸಿಎಂ ಬಿಎಸ್‍ವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಲಾಕ್‍ಡೌನ್‍ನಿಂದ ಸೋಂಕು ನಿಯಂತ್ರಣ, 3 ಕೋಟಿ ಲಸಿಕೆ ಬುಕ್ – ಸಿಎಂ ಬಿಎಸ್‍ವೈ

Bengaluru City

ಲಾಕ್‍ಡೌನ್‍ನಿಂದ ಸೋಂಕು ನಿಯಂತ್ರಣ, 3 ಕೋಟಿ ಲಸಿಕೆ ಬುಕ್ – ಸಿಎಂ ಬಿಎಸ್‍ವೈ

Public TV
Last updated: May 13, 2021 6:23 pm
Public TV
Share
7 Min Read
YEDIYURAPPA PRESSMIT
SHARE

ಬೆಂಗಳೂರು: ನಾವು ರಾಜ್ಯದಲ್ಲಿ ಕೈಗೊಂಡ ಕಠಿಣ ಕ್ರಮದಿಂದಾಗಿ ಸೋಂಕು ನಿಯಂತ್ರಣಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ

ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯಡಿಯೂರಪ್ಪ, ಮೇ 10 ರಿಂದ ಕಠಿಣ ಕ್ರಮ ಜಾರಿ ಮಾಡಲಾಗಿದೆ. ಏಪ್ರಿಲ್ 24 ರಿಂದ ಕೆಲವು ನಿರ್ಬಂಧ ಹೇರಲಾಗಿತ್ತು. ಮೇ 10 ರಿಂದ ಕಠಿಣ ಕ್ರಮ ಜಾರಿ ಮಾಡಲಾಗಿದೆ. ಮೇ 5 ರಂದು 50,112 ಕೇಸ್ ದಾಖಲಾಗಿತ್ತು, ಕಠಿಣ ಕ್ರಮದಿಂದ ನಿನ್ನೆ ರಾಜ್ಯದಲ್ಲಿ 39,900 ಕೇಸ್ ದಾಖಲಾಗಿ ಇಳಿಕೆ ಕಂಡಿದೆ. ಇದು ಸಮಾಧಾನ ಸಂಗತಿಯಾಗಿದ್ದು, ಲಾಕ್‍ಡೌನ್ ನಿಂದ ಈ ಪರಿಸ್ಥಿತಿ ಬಂದಿದೆ. ಪರಿಸ್ಥಿತಿ ಸುಧಾರಿಸುತ್ತಿದೆ. ಬೆಂಗಳೂರಿನಲ್ಲಿ 16 ಸಾವಿರಕ್ಕೆ ಇಳಿಕೆ ಆಗಿದೆ. ಪ್ರಾರಂಭದಲ್ಲಿ ಕೇಸ್ ಹೆಚ್ಚಳ ಇದ್ದ ಬೀದರ್, ಕಲಬುರಗಿ, ಬೆಂಗಳೂರಿನಲ್ಲಿ ಕೇಸ್ ಕಡಿಮೆ ಆಗುತ್ತಿದೆ ಎಂದು ಮಾಹಿತಿ ನೀಡಿದರು.

Corona 5

ಸುದ್ದಿಗೋಷ್ಠಿಯ ಮುಖ್ಯಾಂಶಗಳು
1. ಕೋವಿಡ್ 19 ಸೋಂಕು ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಏಪ್ರಿಲ್ 24 ರಿಂದ ಕೆಲವು ನಿರ್ಬಂಧಗಳನ್ನು ಹೇರಲಾಗಿತ್ತು. ಅಲ್ಲದೆ, ಮೇ 10 ರಿಂದ ಇನ್ನಷ್ಟು ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಯಿತು.
2. ರಾಜ್ಯದಲ್ಲಿ ಮೇ 5 ರಂದು ಗರಿಷ್ಠ 50,112 ಪ್ರಕರಣಗಳು ವರದಿಯಾಗಿದ್ದು, ಈ ಕಠಿಣ ಕ್ರಮಗಳಿಂದಾಗಿ ವರದಿಯಾಗುತ್ತಿರುವ ಪ್ರಕರಣಗಳ ಸಂಖ್ಯೆ ನಿನ್ನೆ 39,900ಕ್ಕೆ ಇಳಿದಿದೆ ಎಂಬುದು ಸಮಾಧಾನಕರ ಸಂಗತಿ. ಇದು ನಿರ್ಬಂಧಗಳ ಜಾರಿ ನಂತರ ಪರಿಸ್ಥಿತಿ ಸುಧಾರಿಸುತ್ತಿರುವುದಕ್ಕೆ ನಿದರ್ಶನ.
3. ಬೆಂಗಳೂರಿನಲ್ಲಿ ಮೇ 5 ರಂದು 23,106 ಪ್ರಕರಣಗಳಿದ್ದಿದ್ದು, ನಿನ್ನೆಗೆ 16,286 ಸಂಖ್ಯೆಗೆ ಇಳಿಕೆಯಾಗಿದೆ.
4. ಪ್ರಾರಂಭದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರ ಏರುಗತಿಯಲ್ಲ್ಲಿದ್ದ ಬೆಂಗಳೂರು, ಬೀದರ್ ಮತ್ತು ಕಲಬುರಗಿಯಲ್ಲಿ ಪ್ರಕರಣಗಳ ಸಂಖ್ಯೆ ಹಾಗೂ ಪಾಸಿಟಿವಿಟಿ ದರ ಕಡಿಮೆಯಾಗುತ್ತಿದೆ.

CORONA VIRUS 2
ಹಾಸಿಗೆಗಳ ಹೆಚ್ಚಳ
5. ಕಳೆದ ವರ್ಷ ಮಾರ್ಚ್‍ನಲ್ಲಿ ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ 1970 ಆಕ್ಸಿಜನೇಟೆಡ್ ಬೆಡ್‍ಗಳು, 444 ಐಸಿಯು ಗಳು ಹಾಗೂ 610 ವೆಂಟಿಲೇಟರ್ ಸಹಿತ ಐಸಿಯು ಗಳ ಸೌಲಭ್ಯವಿತ್ತು. ಈ ಎಲ್ಲ ಸೌಲಭ್ಯಗಳನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಪ್ರಸ್ತುತ ಇಲಾಖೆಯ ವ್ಯಾಪ್ತಿಯ ಆರೋಗ್ಯ ಸಂಸ್ಥೆಗಳಲ್ಲಿ 24 ಸಾವಿರ ಆಕ್ಸಿಜನೇಟೆಡ್ ಬೆಡ್‍ಗಳು, 1145 ಐಸಿಯು ಬೆಡ್‍ಗಳು, 2059 ವೆಂಟಿಲೇಟರ್ ಬೆಡ್‍ಗಳು ಹಾಗೂ 1248 ಹೆಚ್‍ಎಫ್‍ಎನ್‍ಸಿ ಸೌಲಭ್ಯಗಳು ಲಭ್ಯವಿದೆ.
6. ಅಂತೆಯೇ ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಆಕ್ಸಿಜನೇಟೆಡ್ ಬೆಡ್‍ಗಳ ಸಂಖ್ಯೆಯನ್ನು ದ್ವಿಗುಣಗೊಳಿಸಿ, 4700 ರಿಂದ 9405 ಕ್ಕೆ ಹೆಚ್ಚಿಸಲಾಗಿದೆ. ವೆಂಟೆಲೇಟೆಡ್ ಬೆಡ್‍ಗಳ ಸಂಖ್ಯೆಯನ್ನು 341 ರಿಂದ 646ಕ್ಕೆ ಹೆಚ್ಚಿಸಲಾಗಿದೆ. ಎಚ್‍ಎಫ್‍ಎನ್‍ಸಿಗಳ ಸಂಖ್ಯೆಯನ್ನು 15 ರಿಂದ 570ಕ್ಕೆ ಹೆಚ್ಚಿಸಲಾಗಿದೆ.
7. ಆಸ್ಪತ್ರೆಗಳ ಮೂಲಸೌಕರ್ಯ ಬಲಪಡಿಸುವ ಪ್ರಕ್ರಿಯೆ ಇನ್ನೂ ಮುಂದುವರೆದಿದೆ. ಹೆಚ್ಚುವರಿ ವೆಂಟೆಲೇಟರುಗಳು ಮತ್ತಿತರ ಸೌಲಭ್ಯಗಳು ನಿರಂತರವಾಗಿ ಸೇರ್ಪಡೆಯಾಗುತ್ತಿವೆ. ಖಾಸಗಿ ಆಸ್ಪತ್ರೆಗಳಿಗೆ ಸುಮಾರು 200 ವೆಂಟಿಲೇಟರುಗಳನ್ನು ನೀಡಿದ್ದೇವೆ.
8. ಖಾಸಗಿ ವೈದ್ಯಕೀಯ ಕಾಲೇಜುಗಳು ಆಕ್ಸಿಜನ್ ಬೆಡ್‍ಗಳನ್ನು ಹೆಚ್ಚಿಸಲು ಹಾಗೂ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಸಹಾಯಧನ ನೀಡುತ್ತಿದ್ದೇವೆ. ಇಂತಹ ಆಸ್ಪತ್ರೆಗಳಿಗೆ ಸರ್ಕಾರ ಶೇ. 70ರ ಸಹಾಯ ಧನ ನೀಡಲಿದ್ದು, ಉಳಿದ ಶೇ. 30ರ ಮೊತ್ತವನ್ನು ಆಯಾ ಆಸ್ಪತ್ರೆಗಳು ಭರಿಸಬೇಕು.

Oxygen express Train bengaluru 3

ಆಮ್ಲಜನಕ ಪೂರೈಕೆ
9. ರಾಜ್ಯದಲ್ಲಿ ಹೆಚ್ಚುತ್ತಿರುವ ಆಮ್ಲಜನಕದ ಬೇಡಿಕೆಯನ್ನು ಸರಿದೂಗಿಸಲು ಮೂರು ಅಂಶಗಳ ಕಾರ್ಯತಂತ್ರವನ್ನು ರೂಪಿಸಿದೆ. ಅದರಂತೆ ಲಿಕ್ವಿಡ್ ಆಕ್ಸಿಜನ್ ಪೂರೈಕೆ ಹೆಚ್ಚಳ, ಆಕ್ಸಿಜನ್ ಜನರೇಟರುಗಳ ಮೂಲಕ ಸ್ಥಳೀಯವಾಗಿ ಆಮ್ಲಜನಕ ಉತ್ಪಾದನೆ ಹೆಚ್ಚಳ ಹಾಗೂ ಆಕ್ಸಿಜನ್ ಕಾನ್ಸಂಟ್ರೇಟರುಗಳು ಹಾಗೂ ಸಿಲಿಂಡರುಗಳನ್ನು ಹೆಚ್ಚಾಗಿ ಖರೀದಿಸುವ ಮೂಲಕ ಆಮ್ಲಜನಕ ಕೊರತೆ ನೀಗಿಸಲು ಪ್ರಯತ್ನಿಸಲಾಗುತ್ತಿದೆ.
10. ಭಾರತ ಸರ್ಕಾರವು ರಾಜ್ಯಕ್ಕೆ ಆಮ್ಲಜನಕ ಹಂಚಿಕೆಯನ್ನು 965 ಮೆಟ್ರಿಕ್ ಟನ್ ನಿಂದ 1015 ಮೆಟ್ರಿಕ್ ಟನ್ ಗೆ ಹೆಚ್ಚಿಸಿದೆ. ಇದರಲ್ಲಿ 765 ಮೆಟ್ರಿಕ್ ಟನ್ ಆಮ್ಲಜನಕವು ರಾಜ್ಯದಲ್ಲಿಯೇ ದೊರೆಯುತ್ತಿದೆ. 60 ಟನ್ ಪಿಎಸ್‍ಎ ಪ್ಲಾಂಟ್‍ಗಳಿಂದ ಹಾಗೂ 160 ಟನ್ ಒಡಿಶಾ ಹಾಗೂ 30 ಟನ್ ವಿಶಾಖಪಟ್ಟಣದಿಂದ ದೊರೆಯುತ್ತಿದೆ.
11. ನಮಗೆ ಹಂಚಿಕೆಯಾಗಿರುವ, ರಾಜ್ಯದೊಳಗೇ ಲಭ್ಯವಿರುವ ಆಮ್ಲಜನಕವನ್ನು ಸಂಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಇತರ ರಾಜ್ಯಗಳಿಂದ ಆಮ್ಲಜನಕ ಪಡೆಯಲು ಸಹ ಎಲ್ಲ ಪ್ರಯತ್ನಗಳನ್ನೂ ಮಾಡಲಾಗುತ್ತಿದೆ.
12. ಮೇ 11 ರಂದು ನಾವು 1050 ಮೆಟ್ರಿಕ್ ಟನ್ ಹಾಗೂ ಮೇ 12ರಂದು 800 ಮೆಟ್ರಿಕ್ ಟನ್ ಆಮ್ಲಜನಕ ಪಡೆದಿದ್ದೇವೆ.
13. ಬಹರೇನ್ ನಿಂದ 40 ಟನ್ ಹಾಗೂ ಕುವೈಟ್ ನಿಂದ 100 ಟನ್ ಆಮ್ಲಜನಕ ಪಡೆಯಲಾಗಿದೆ. ಜಮ್‍ಷೆಡ್‍ಪುರದಿಂದ ಟ್ರೇನ್ ಮೂಲಕ 120 ಟನ್ ಆಮ್ಲಜನಕ ತರಲಾಗಿದೆ.

FotoJet 7 3
14. ರಾಜ್ಯದಲ್ಲಿಯೂ ಆಮ್ಲಜನಕ ಉತ್ಪಾದನಾ ಸಾಮಥ್ರ್ಯ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳು, ಜಿಲ್ಲಾ ಆಸ್ಪತ್ರೆಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳು ಸೇರಿದಂತೆ ಒಟ್ಟು 127 ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ.
• ಅದರಲ್ಲಿ 62 ಆಮ್ಲಜನಕ ಉತ್ಪಾದನಾ ಘಟಕಗಳನ್ನು ರಾಜ್ಯ ಸರ್ಕಾರದ ಅನುದಾನದಲ್ಲಿ ಸ್ಥಾಪಿಸಲಾಗುತ್ತಿದೆ.
• 28 ಘಟಕಗಳು ಭಾರತ ಸರ್ಕಾರದಿಂದ ಹಂಚಿಕೆಯಾಗಿವೆ.
• 24 ಘಟಕಗಳನ್ನು ಎನ್‍ಎಚ್‍ಎಐ ಸ್ಥಾಪಿಸುತ್ತಿದೆ.
• 11 ಘಟಕಗಳನ್ನು ವಿವಿಧ ಕಂಪೆನಿಗಳ ಸಿಎಸ್‍ಆರ್ ನೆರವಿನಡಿ ಸ್ಥಾಪಿಸಲಾಗುತ್ತಿದೆ.
• 2 ಘಟಕಗಳನ್ನು ವಿದೇಶಗಳು ಒದಗಿಸಿವೆ.

oxygen tanker
15. ಹೋಂ ಐಸೋಲೇಷನ್ ನಲ್ಲಿರುವ ಸೋಂಕಿತರ ಅನುಕೂಲಕ್ಕಾಗಿ ಓಲಾ ಮತ್ತು ಗಿವ್‍ಇಂಡಿಯಾ ಸಂಸ್ಥೆಯವರು ಒಂದು ಸಾವಿರ ಆಕ್ಸಿಜನ್ ಕಾನ್ಸಂಟ್ರೇಟರುಗಳನ್ನು ಉಚಿತವಾಗಿ ಎರವಲು ನೀಡಲು ಮುಂದಾಗಿರುವುದು ಹರ್ಷದಾಯಕ ಸಂಗತಿ. ಇದೇ ರೀತಿ ಸಂಚಾರಿ ಆಕ್ಸಿಜನ್ ಸೇವೆ ಒದಗಿಸುವ ಆಕ್ಸಿಬಸ್‍ಗಳಿಗೆ ಚಾಲನೆ ನೀಡಲಾಗಿದ್ದು, ಸರ್ಕಾರಿ ಆಸ್ಪತ್ರೆಗಳು ಮತ್ತು ಟ್ರಯೇಜ್ ಸೆಂಟರುಗಳ ಬಳಿ ತುರ್ತು ಅಗತ್ಯವಿರುವವರಿಗೆ ನೆರವಾಗುತ್ತಿವೆ.
16. ಜಿಲ್ಲೆಗಳಲ್ಲಿರುವ ಆಮ್ಲಜನಕ ಬೇಡಿಕೆಯ ಒತ್ತಡವನ್ನು ನಿವಾರಿಸಲು 10 ಸಾವಿರದ ವರೆಗೆ ಆಕ್ಸಿಜನ್ ಸಿಲಿಂಡರುಗಳನ್ನು ಪಡೆಯಲು ತೀರ್ಮಾನಿಸಲಾಗಿದೆ. ಕಳೆದ 15-20 ದಿನಗಳಲ್ಲಿ 730 ಆಮ್ಲಜನಕ ಸಿಲಿಂಡರುಗಳನ್ನು ತರಿಸಿದ್ದೇವೆ. 380 ಸಿಲಿಂಡರುಗಳನ್ನು ಭಾರತ ಸರ್ಕಾರ ಒದಗಿಸಿದ್ದು, 350 ಸಿಲಿಂಡರುಗಳನ್ನು ವಿದೇಶಗಳಿಂದ ಪಡೆಯಲಾಗಿದೆ. ಈ ಸಿಲಿಂಡರುಗಳನ್ನು ಅಗತ್ಯವಿರುವ ಜಿಲ್ಲೆಗಳಿಗೆ ಹಂಚಿಕೆ ಮಾಡಲಾಗಿದೆ.
17. ಮೂರು ಸಾವಿರ ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಈಗಾಗಲೇ ರಾಜ್ಯದೆಲ್ಲೆಡೆ ಹಂಚಿಕೆ ಮಾಡಲಾಗಿದೆ. ಸರ್ಕಾರ ಹಾಗೂ ವಿವಿಧ ಕಂಪೆನಿಗಳ ಸಿಎಸ್‍ಆರ್ ನೆರವಿನೊಂದಿಗೆ ಇನ್ನೂ ಏಳು ಸಾವಿರ ಕಾನ್ಸಂಟ್ರೇಟರ್‍ಗಳನ್ನು ಹಂಚಿಕೆ ಮಾಡಲಾಗುವುದು.

VACCINE 4
ಲಸಿಕೆ :
18. ಭಾರತ ಸರ್ಕಾರವು 45 ವರ್ಷ ಮೇಲ್ಪಟ್ಟ ನಾಗರಿಕರಿಗೆ, ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಮುಂಚೂಣಿಯ ಕಾರ್ಯಕರ್ತರಿಗೆ ಲಸಿಕೆ ಪೂರೈಕೆ ಮಾಡುತ್ತಿದೆ. ಈ ವರೆಗೆ 1.10 ಕೋಟಿ ಡೋಸ್‍ಗಳನ್ನು ಭಾರತ ಸರ್ಕಾರ ಒದಗಿಸಿದ್ದು, ಅದರಲ್ಲಿ 99.5 ಲಕ್ಷ ಕೋವಿಶೀಲ್ಡ್ ಹಾಗೂ 10.9 ಲಕ್ಷ ಕೋವ್ಯಾಕ್ಸಿನ್ ಲಸಿಕೆಗಳು.
19. ರಾಜ್ಯ ಸರ್ಕಾರವು 18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡಲು 3 ಕೋಟಿ ಡೋಸ್ ಲಸಿಕೆಗಳ ಖರೀದಿಗೆ ಆದೇಶ ನೀಡಿದೆ. ಅದರಲ್ಲಿ 2 ಕೋಟಿ ಡೋಸ್ ಕೋವಿಶೀಲ್ಡ್ ಹಾಗೂ 1 ಕೋಟಿ ಡೋಸ್ ಕೊವ್ಯಾಕ್ಸಿನ್ ಸೇರಿದೆ. ಅಲ್ಲದೆ ಹೆಚ್ಚುವರಿಯಾಗಿ 2 ಕೋಟಿ ಡೋಸ್ ಇಂಜೆಕ್ಷನ್ ಸರಬರಾಜು ಮಾಡಲು ಜಾಗತಿಕ ಟೆಂಡರು ಕರೆಯಲಾಗಿದೆ.
20. ಈ ವರೆಗೆ 7.5 ಲಕ್ಷ ಕೋವಿಶೀಲ್ಡ್ ಹಾಗೂ 1.44 ಲಕ್ಷ ಕೊವ್ಯಾಕ್ಸಿನ್ ಸೇರಿದಂತೆ 8.94 ಲಕ್ಷ ಡೋಸ್‍ಗಳು ಲಭ್ಯವಾಗಿದೆ.
21. ಕೋವಿಶೀಲ್ಡ್ ಲಸಿಕೆ ಪಡೆದ 14.87 ಲಕ್ಷ ಫಲಾನುಭವಿಗಳು ಆರು ವಾರ ಪೂರೈಸಿದ್ದು, ಎರಡನೇ ಡೋಸ್‍ಗೆ ಅರ್ಹತೆ ಹೊಂದಿದ್ದಾರೆ. ಕೊ-ವ್ಯಾಕ್ಸಿನ್ ಮೊದಲ ಡೋಸ್ ಪಡೆದ 5.10 ಲಕ್ಷ ಫಲಾನುಭವಿಗಳು 4 ವಾರ ಪೂರೈಸಿದ್ದು, ಎರಡನೇ ಡೋಸ್ ಪಡೆಯಲು ಅರ್ಹತೆ ಹೊಂದಿದ್ದಾರೆ. ಅಂದರೆ ಇಂದಿನ ಅಂಕಿ ಅಂಶಗಳ ಪ್ರಕಾರ 19.97 ಲಕ್ಷ ಮಂದಿ ಎರಡನೇ ಡೋಸ್ ಲಸಿಕೆ ಪಡೆಯಲು ಅರ್ಹತೆ ಹೊಂದಿದ್ದಾರೆ.

mdk vaccine 1
22. ಮೊದಲ ಡೋಸ್ ಪಡೆದವರು ಸಂಪೂರ್ಣ ಸುರಕ್ಷತೆ ಹೊಂದಲು ಎರಡನೇ ಡೋಸ್ ಲಸಿಕೆ ನೀಡುವುದು ಅತಿ ಅಗತ್ಯ. ಆದ್ದರಿಂದ ಲಭ್ಯವಿರುವ ಲಸಿಕೆಯ ದಾಸ್ತಾನನ್ನು ಎರಡನೇ ಡೋಸ್ ಪಡೆಯಲು ಅರ್ಹತೆ ಹೊಂದಿರುವವರಿಗೆ ನೀಡಲು ನಿರ್ಧರಿಸಿದ್ದೇವೆ. ಈ ಕಾರಣಕ್ಕಾಗಿ 18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡುವ ಕಾರ್ಯಕ್ರಮವನ್ನು ನಾವು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದೇವೆ.
23. ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನಲ್ಲಿ ಮೈಕ್ರೋ ಬಯಾಲಜಿ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರೊ. ಗಗನ್‍ದೀಪ್ ಕಾಂಗ್ ಅವರನ್ನು ರಾಜ್ಯದ ವ್ಯಾಕ್ಸಿನೇಷನ್ ಕಾರ್ಯತಂತ್ರದ ಸಲಹೆಗಾರರಾಗಿ ರಾಜ್ಯ ಸರ್ಕಾರವು ನೇಮಕ ಮಾಡುತ್ತಿದೆ. ಇವರು ವ್ಯಾಕ್ಸಿನ್‍ಗಳ ಸಂಶೋಧನೆ ಮತ್ತು ಅವುಗಳ ಬಳಕೆ ಕುರಿತಂತೆ ವಿಶ್ವ ಆರೋಗ್ಯ ಸಂಸ್ಥೆಯು ರಚಿಸಿರುವ ಸಲಹಾ ಸಮಿತಿಗಳ ಸದಸ್ಯರಾಗಿರುತ್ತಾರೆ.

REMDESIVIR 2

ರೆಮ್‍ಡಿಸಿವಿರ್ ಇಂಜೆಕ್ಷನ್
24. ಭಾರತ ಸರ್ಕಾರವು ರಾಜ್ಯಕ್ಕೆ ಏಪ್ರಿಲ್ 21 ರಿಂದ ಮೇ 9 ರ ಅವಧಿಗೆ 3.01 ಲಕ್ಷ ರೆಮ್‍ಡಿಸಿವಿರ್ ಹಂಚಿಕೆ ಮಾಡಿದ್ದು, ಈ ಅವಧಿಯಲ್ಲಿ 2.72 ಲಕ್ಷ ಡೋಸ್ ರೆಮ್‍ಡಿಸಿವಿರ್ ಪೂರೈಕೆಯಾಗಿದೆ. ಇಂಜೆಕ್ಷನ್ ಪೂರೈಕೆಯಲ್ಲಿ ವಿಳಂಬ ಮಾಡಿದ ಕಂಪೆನಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮೇ 10 ರಿಂದ 16ರ ಅವಧಿಗೆ 2.74 ಲಕ್ಷ ಇಂಜೆಕ್ಷನ್‍ಗಳು ಹಂಚಿಕೆಯಾಗಿದೆ. ಇವು ಸಕಾಲದಲ್ಲಿ ಪೂರೈಕೆಯಾಗುವ ಕುರಿತು ನಿರಂತರ ಪರಿಶೀಲನೆ ಹಾಗೂ ಸಮನ್ವಯ ನಡೆಸಲಾಗುತ್ತಿದೆ.
25. ರಾಜ್ಯದಲ್ಲಿ ರೆಮ್‍ಡಿಸಿವಿರ್ ಬೇಡಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ ಇತರ ರಾಜ್ಯಗಳ ಕೋಟಾದಲ್ಲಿ ಬಳಕೆಯಾಗದೆ ಉಳಿದ ಇಂಜೆಕ್ಷನ್‍ಗಳನ್ನು ಪೂರೈಸುವಂತೆಯೂ ಭಾರತ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

cm meeting
26. ಖಾಸಗಿ ಆಸ್ಪತ್ರೆಗಳ ಬೇಡಿಕೆ ಪರಿಶೀಲಿಸಿ, ಸಮಾನವಾಗಿ ಹಂಚಿಕೆ ಮಾಡಲು ಪಾರದರ್ಶಕ ವ್ಯವಸ್ಥೆಯನ್ನು ರೂಪಿಸಲಾಗಿದೆ.
27. ರಾಜ್ಯದಲ್ಲಿ ಕೋವಿಡ್ 19ರ ಸಂಭವನೀಯ ಮೂರನೇ ಅಲೆಯನ್ನು ಎದುರಿಸಲು ಸಿದ್ಧತೆಗಾಗಿ ನಾರಾಯಣ ಹೆಲ್ತ್‍ನ ಛೇರ್‍ಮನ್ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಪಡೆಯನ್ನು ರಚಿಸಲಾಗುವುದು.
28. ಕಠಿಣ ನಿಯಮಾವಳಿಗಳನ್ನು ಜಾರಿಗೆ ತಂದ ನಂತರ ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸಿದೆ. ಯಾರೂ ಆತಂಕ ಪಡಬೇಕಾದ ಅಗತ್ಯವಿಲ್ಲ.
29. ಜನತೆ ಎಲ್ಲ ನಿರ್ಬಂಧಗಳನ್ನೂ ಮುಕ್ತವಾಗಿ ಸ್ವೀಕರಿಸಿ ಅನುಸರಿಸಿದಾಗ ಮಾತ್ರ ನಿರೀಕ್ಷಿತ ಫಲಿತಾಂಶ ಪಡೆಯಲು ಸಾಧ್ಯ. ಆದ್ದರಿಂದ ರಾಜ್ಯದ ಜನತೆ ಸಹಕರಿಸಲು ಕೋರಿದೆ.

TAGGED:B. S.YediyurappaCoronaCovid 19karnatakaPublic TVಕರ್ನಾಟಕಕೊರೊನಾಕೋವಿಡ್ 19ಪಬ್ಲಿಕ್ ಟಿವಿಬಿಎಸ್ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
1 hour ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
2 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
2 hours ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
2 hours ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
3 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?