Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚರ್ಚೆ ನಡೆಸಿ ಲಾಕ್‍ಡೌನ್ ವಿಸ್ತರಣೆ – ಸಿಎಂ ಸಭೆಯ ಮುಖ್ಯಾಂಶಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚರ್ಚೆ ನಡೆಸಿ ಲಾಕ್‍ಡೌನ್ ವಿಸ್ತರಣೆ – ಸಿಎಂ ಸಭೆಯ ಮುಖ್ಯಾಂಶಗಳು

Bengaluru City

ಚರ್ಚೆ ನಡೆಸಿ ಲಾಕ್‍ಡೌನ್ ವಿಸ್ತರಣೆ – ಸಿಎಂ ಸಭೆಯ ಮುಖ್ಯಾಂಶಗಳು

Public TV
Last updated: May 17, 2021 7:47 pm
Public TV
Share
4 Min Read
cm bs yediyurappa corona meeting
SHARE

ಬೆಂಗಳೂರು: ಲಾಕೌಡೌನ್ ಬಗ್ಗೆ ಇದುವರೆಗೆ ಯಾವುದೇ ತೀರ್ಮಾನ ತಗೊಂಡಿಲ್ಲ. ಇನ್ನು ಎರಡು ಮೂರು ದಿನಗಳಲ್ಲಿ ಲಾಕ್‍ಡೌನ್ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಕೋವಿಡ್-19ಗೆ ವಿಷಯಕ್ಕೆ ಸಂಬಂಧಿಸಿದಂತೆ – ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕರುಗಳೊಂದಿಗೆ ಸಿಎಂ ವಿಡಿಯೋ ಸಂವಾದ ನಡೆಸಿದರು.

bs yediyurppa corona meeting 3

ಸಂವಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ಸದ್ಯ 24 ರವರೆಗೆ ಲಾಕ್‍ಡೌನ್ ಘೋಷಣೆಯಾಗಿದೆ. ಎಷ್ಟು ದಿನ ವಿಸ್ತರಣೆ ಮಾಡಬೇಕು ಅಂತ ಚರ್ಚಿಸಿ ನಿರ್ಧಾರ ಮಾಡುತ್ತೇವೆ. ವಿಶೇಷ ಪ್ಯಾಕೇಜ್ ಬಗ್ಗೆಯೂ ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದರು.

ಸಭೆಯ ಮುಖ್ಯಾಂಶಗಳು
– ಜಿಲ್ಲೆಗಳಲ್ಲಿ ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಯಿತು.

– ಮನೆ ಮನೆ ಭೇಟಿ ಹಾಗೂ ಫೋನ್ ಟ್ರಯಾಜಿಂಗ್ ಮೂಲಕ ಸೋಂಕಿತ ವರ್ಗೀಕರಣವನ್ನು ತ್ವರಿತವಾಗಿ ನಡೆಸಬೇಕು ಎಂದು ಸೂಚನೆ ನೀಡಲಾಯಿತು.

– ಕೊರೊನಾ ಪರೀಕ್ಷಾ ವರದಿಗಳನ್ನು 24 ಗಂಟೆಯೊಳಗೆ ನೀಡಲು ಕ್ರಮ ವಹಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಹೋಮ್ ಐಸೋಲೇಷನ್ ಪ್ರಕ್ರಿಯೆಯನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಸಿಎಂ ಯಡಿಯೂರಪ್ಪ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

bs yediyurppa corona meeting 2

– ಹೋಮ್ ಐಸೊಲೇಷನ್‍ನಲ್ಲಿ ಇರುವವರಿಗೆ ಮೆಡಿಕಲ್ ಕಿಟ್ ಒದಗಿಸಲು ಔಷಧಿ ಕೊರತೆಯಾದಲ್ಲಿ ಸ್ಥಳೀಯವಾಗಿ ಖರೀದಿಸಿ, ಒದಗಿಸಲು ಸೂಚನೆ ನೀಡಲಾಯಿತು.

– ಗ್ರಾಮೀಣ ಮತ್ತು ಅರೆ ನಗರ ಪ್ರದೇಶಗಳಲ್ಲಿ ಕೋವಿಡ್ ನಿರ್ವಹಣೆಗೆ ಭಾರತ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಯಿತು.

– ಹೆಚ್ಚುತ್ತಿರುವ ಸೋಂಕಿತರನ್ನು ರೋಗಲಕ್ಷಣದ ತೀವ್ರತೆಗೆ ಅನುಗುಣವಾಗಿ ಚಿಕಿತ್ಸಾ ವಿಧಾನವನ್ನು ನಿರ್ಧರಿಸುವ ಮೂಲಕ ಸಂಪನ್ಮೂಲಗಳ ಸದ್ಬಳಕೆ ಮಾಡಿಕೊಳ್ಳಬೇಕಾಗಿದೆ. ತುರ್ತು ಚಿಕಿತ್ಸೆ ಅಗತ್ಯವಿರುವವರಿಗೆ ಸಕಾಲದಲ್ಲಿ ಚಿಕಿತ್ಸೆಯನ್ನು ಖಾತರಿ ಪಡಿಸುವಂತೆ ಸೂಚಿಸಲಾಯಿತು.

Nelamangala Corona Vaccine Center 4

– ಇದಕ್ಕೆ ಪೂರಕ ವ್ಯವಸ್ಥೆಗಳನ್ನು ನೀವು ಮಾಡಿಕೊಳ್ಳಬೇಕು. ಅಗತ್ಯಕ್ಕೆ ತಕ್ಕಂತೆ ಕೋವಿಡ್ ಕೇರ್ ಸೆಂಟರುಗಳು, ತಾತ್ಕಾಲಿಕ ಆಸ್ಪತ್ರೆಗಳನ್ನು ಸ್ಥಾಪಿಸಲು ಸಹ ಸ್ಥಳ ಗುರುತಿಸಿ, ಅಗತ್ಯ ಸೌಲಭ್ಯ ಒದಗಿಸಲು ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಲಾಯಿತು.

– ಎಲ್ಲ ಜಿಲ್ಲೆಗಳಿಗೆ ಅಗತ್ಯವಿರುವಷ್ಟು ಆಕ್ಸಿಜನ್ ಕಾನ್ಸಂಟ್ರೇಟರ್‍ಗಳನ್ನು ಆರೋಗ್ಯ ಇಲಾಖೆಯಿಂದ ಒದಗಿಸಲಾಗುತ್ತಿದೆ.

– ಆಮ್ಲಜನಕ ಪೂರೈಕೆಯನ್ನು ಮುಂಚಿತವಾಗಿಯೇ ಅಂದಾಜಿಸಿ, ಸಕಾಲದಲ್ಲಿ ಪೂರೈಕೆಯಾಗುವುದನ್ನು ಖಾತರಿ ಪಡಿಸಬೇಕು. ತುರ್ತು ಸಂದರ್ಭಗಳಲ್ಲಿ ನೆರೆಯ ಜಿಲ್ಲೆಗಳೊಂದಿಗೆ ಸಮನ್ವಯ ವಹಿಸಿ, ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಬೇಕು.

Corona 1 2

 

– ಚಿಕಿತ್ಸಾ ಸೌಲಭ್ಯ, ಔಷಧ, ಆಮ್ಲಜನಕ ಮತ್ತಿತರ ಸಂಪನ್ಮೂಲಗಳನ್ನು ವಿವೇಚನೆಯಿಂದ ಬಳಕೆ ಮಾಡಿಕೊಂಡು, ಹೆಚ್ಚು ಜನರಿಗೆ ಅನುಕೂಲ ಕಲ್ಪಿಸಬೇಕು. ಹೋಮ್-ಐಸೋಲೇಷನ್ ನಲ್ಲಿರುವವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ, ಅವರಿಗೆ ಮೆಡಿಸಿನ್‍ಗಳನ್ನು ಸರಿಯಾದ ರೀತಿಯಲ್ಲಿ ಒದಗಿಸಿಬೇಕು ಹಾಗೂ ಅವರ ಆರೋಗ್ಯ ಸ್ಥಿತಿಗಳ ಕುರಿತು ಪ್ರತಿದಿನ ಮಾಹಿತಿ ಪಡೆದುಕೊಳ್ಳಬೇಕು.

– ಪರಿಸ್ಥಿತಿಯ ತೀವ್ರತೆಗೆ ಅನುಗುಣವಾಗಿ ನಿಬರ್ಂಧಗಳನ್ನು ಇನ್ನಷ್ಟು ಕಠಿಣಗೊಳಿಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಯಿತು.

– ವಿವಿಧ ಜಿಲ್ಲೆಗಳಲ್ಲಿ ಪತ್ತೆಯಾಗುತ್ತಿರುವ ಬ್ಲಾಕ್ ಫಂಗಸ್ ಪ್ರಕರಣಗಳ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿಗಳು, ಪ್ರಸ್ತುತ ಬೌರಿಂಗ್ ಆಸ್ಪತ್ರೆಯಲ್ಲಿ ಇದಕ್ಕೆ ಚಿಕಿತ್ಸಾ ಸೌಲಭ್ಯ ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ವಿಭಾಗ ಮಟ್ಟದಲ್ಲಿ ಈ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

corona virus 4

– ಚಿಕ್ಕಮಗಳೂರು ಜಿಲ್ಲೆಗೆ ಆದ್ಯತೆಯ ಮೇರೆಗೆ ಪಿಎಸ್‍ಎ ಜನರೇಟರ್ ಒದಗಿಸಲಾಗುವುದು.

– ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪರೀಕ್ಷಾ ಕೇಂದ್ರ ಶೀಘ್ರವೇ ಕಾರ್ಯಾರಂಭ ಮಾಡಲಿದೆ.

– ಭದ್ರಾವತಿಯ ವಿಐಎಸ್‍ಎಲ್ ನಲ್ಲಿ ಆಮ್ಲಜನಕ ಉತ್ಪಾದನೆ ಹಾಗೂ ಬಾಟ್ಲಿಂಗ್ ಸಾಮರ್ಥ್ಯ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಯಿತು.

– ಗ್ರಾಮೀಣ ಪ್ರದೇಶದಲ್ಲಿ ಹೋಮ್ ಐಸೋಲೇಷನ್ ಗೆ ಸೂಕ್ತ ಸೌಲಭ್ಯ ಇಲ್ಲದ ಕಾರಣ, ಪಿಎಚ್ ಸಿ ಮಟ್ಟದಲ್ಲಿ, ಹೋಬಳಿಗಳಲ್ಲಿ ವಸತಿ ಶಾಲೆ, ಸಮುದಾಯ ಭವನಗಳನ್ನು ಕೋವಿಡ್ ಕೇರ್ ಸೆಂಟರುಗಳನ್ನು ತೆರೆಯ ಬೇಕು.

corona virus

– ಕೇಂದ್ರ ಮತ್ತು ರಾಜ್ಯ ಸರ್ಕಾರ ಆಕ್ಸಿಜನ್ ಪ್ಲಾಂಟ್ ಮತ್ತು ಜನರೇಟರುಗಳನ್ನು ಅಗತ್ಯವಿರುವ ಕಡೆ ನೀಡಲಾಗುತ್ತಿದೆ.

– ಮೂರು ತಿಂಗಳಿಗಾಗುವಷ್ಟು ಔಷಧಿ ಖರೀದಿಸಲಾಗುತ್ತಿದೆ. ಆದ್ದರಿಂದ ಮೆಡಿಕಲ್ ಕಿಟ್ ಗೆ ಔಷಧಿ ಕೊರತೆಯಾಗದು.

– ಬ್ಲ್ಯಾಕ್ ಫಂಗಸ್ ಹೊಸ ಕಾಯಿಲೆ ಅಲ್ಲ. ಐಸಿಯು, ವೆಂಟಿಲೇಟರುಗಳು, ಹ್ಯುಮಿಡಿಫೈಯರ್ ಬಳಕೆಯಿಂದ ಹೆಚ್ಚಾಗುತ್ತಿದೆ. ಐದು ವಿಭಾಗೀಯ ವೈದ್ಯಕೀಯ ಕಾಲೇಜುಗಳಲ್ಲಿ ಚಿಕಿತ್ಸಾ ವ್ಯವಸ್ಥೆ- ಶಿವಮೊಗ್ಗ, ಕಲಬುರಗಿ, ಮೈಸೂರು, ಹುಬ್ಬಳ್ಳಿ, ಮಂಗಳೂರಿನಲ್ಲಿ ಪ್ರಾರಂಭವಾಗಲಿದೆ.

Corona 6

– ಟ್ರಯಾಜಿಂಗ್ ಎರಡು ಹಂತದಲ್ಲಿ ಆಗಲೇ ಬೇಕು. ಪರೀಕ್ಷಾ ವರದಿ ಬಂದು ಎರಡು ಗಂಟೆಯೊಳಗೆ ಹಾಗೂ ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ಆಗಲೇ ಬೇಕು ಎಂದು ಸೂಚಿಸಲಾಯಿತು.

– ಎಲ್ಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವಾರಕ್ಕೆ ಎರಡು ಬಾರಿ ಜಿಲ್ಲಾಧಿಕಾರಿಗಳೊಂದಿಗೆ ಕೋವಿಡ್ ನಿರ್ವಹಣೆ ಕುರಿತು ಚರ್ಚಿಸಿ, ಸಮಸ್ಯೆಗಳನ್ನು ಬಗೆಹರಿಸಬೇಕು.

– ಲಸಿಕೆ ನೀಡುವ ಕುರಿತಂತೆ ಚರ್ಚೆ ನಡೆದ ಸಂದರ್ಭದಲ್ಲಿ, ಲಭ್ಯವಿರುವ ಲಸಿಕೆಯನ್ನು 45 ವರ್ಷ ಮೇಲ್ಪಟ್ಟ ಎರಡನೇ ಡೋಸ್ ಗೆ ಅರ್ಹ ವ್ಯಕ್ತಿಗಳಿಗೆ ಆದ್ಯತೆಯ ಮೇರೆಗೆ ನೀಡಬೇಕು. ನಂತರ 45 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಮೊದಲ ಡೋಸ್ ನೀಡಬೇಕು ಎಂದು ಸೂಚಿಸಲಾಯಿತು.

TAGGED:CoronaCorona VirusCovid 19karnatakaYediyurppaಕರ್ನಾಟಕಕೊರೊನಾಕೋವಿಡ್ 19ಬ್ಲ್ಯಾಕ್‌ ಫಂಗಸ್‌ಸಿಎಂ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Auto Gas Price Haveri
Haveri

ಆಟೋ ಗ್ಯಾಸ್ ದರ ದಿಢೀರ್ ಹೆಚ್ಚಳ; ಆಟೋ ಚಾಲಕರ ಪರದಾಟ

Public TV
By Public TV
4 minutes ago
Yogesh Doshi Dubai
Latest

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರೋ ಭಾರತೀಯರ ನೆರವಿಗೆ ನಿಂತ ಉದ್ಯಮಿ – 64 ಯೂನಿಟ್‌ ಅಪಾರ್ಟ್‌ಮೆಂಟ್‌ ತೆರೆದು ಸಹಾಯ

Public TV
By Public TV
28 minutes ago
lovers attempt suicide by jumping into tungabhadra river rescued
Crime

ತುಂಗಾಭದ್ರ ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು – ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

Public TV
By Public TV
56 minutes ago
TB Dam
Bellary

ತುಂಗಭದ್ರಾ ಜಲಾಶಯದ 15 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣ

Public TV
By Public TV
1 hour ago
T20 India Team India champion
Cricket

ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ ಬಂಪರ್‌; 131 ಕೋಟಿ ಬಹುಮಾನ ಘೋಷಿಸಿದ BCCI

Public TV
By Public TV
1 hour ago
Donald Trump 1
Latest

ಇರಾನ್ ಹಡಗುಗಳನ್ನು ವಶಪಡಿಸಿಕೊಳ್ಳೋದಕ್ಕಿಂತ ಮುಳುಗಿಸೋದೆ ನಮ್ಮ ಸೇನೆಗೆ ಮಜಾ: ಟ್ರಂಪ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?