Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾಗತಿಕ ಆವಿಷ್ಕಾರ ಮೈತ್ರಿಕೂಟದ 11ಕ್ಕೂ ಹೆಚ್ಚು ದೇಶಗಳ ರಾಜತಾಂತ್ರಿಕರ ಜೊತೆ ಡಿಸಿಎಂ ಮಾತುಕತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಾಗತಿಕ ಆವಿಷ್ಕಾರ ಮೈತ್ರಿಕೂಟದ 11ಕ್ಕೂ ಹೆಚ್ಚು ದೇಶಗಳ ರಾಜತಾಂತ್ರಿಕರ ಜೊತೆ ಡಿಸಿಎಂ ಮಾತುಕತೆ

Bengaluru City

ಜಾಗತಿಕ ಆವಿಷ್ಕಾರ ಮೈತ್ರಿಕೂಟದ 11ಕ್ಕೂ ಹೆಚ್ಚು ದೇಶಗಳ ರಾಜತಾಂತ್ರಿಕರ ಜೊತೆ ಡಿಸಿಎಂ ಮಾತುಕತೆ

Public TV
Last updated: May 17, 2021 9:26 pm
Public TV
Share
4 Min Read
ashwathnarayan 3
SHARE

– ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಪಿಎಚ್‍ಸಿಗೊಂದು ಕೋವಿಡ್ ಕಾರ್ಯಪಡೆ

ಬೆಂಗಳೂರು: ಕೋವಿಡ್-19 ಎರಡನೇ ಅಲೆಯನ್ನು ಸಮರ್ಥವಾಗಿ ಎದುರಿಸುವ ಹಾಗೂ ಪರಸ್ಪರ, ಸಹಕಾರ, ನೆರವು ಇತ್ಯಾದಿಗಳ ಬಗ್ಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಇಂದು ಜಾಗತಿಕ ಆವಿಷ್ಕಾರ ಮೈತ್ರಿಕೂಟ (GIA) ದೇಶಗಳ ರಾಜತಾಂತ್ರಿಕರ ಜೊತೆ ಮಹತ್ವದ ಮಾತುಕತೆ ನಡೆಸಿದರು.

ashwathnarayan 3 1

ಡಿಸಿಎಂ ಅಧ್ಯಕ್ಷತೆಯಲ್ಲಿ ನಡೆದ ಈ ವರ್ಚುಯಲ್ ಸಭೆಯಲ್ಲಿ ಕೋವಿಡ್ ಎದುರಿಸಲು ಕೈಗೊಳ್ಳಲಾಗಿರುವ ಕಾರ್ಯತಂತ್ರ, ವ್ಯಾಕ್ಸಿನೇಷನ್, ವೈದ್ಯಕೀಯ ಸೌಲಭ್ಯ, ಪರಸ್ಪರ ಸಹಕಾರ ಇತ್ಯಾದಿಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅಮೆರಿಕ, ಕೆನಡಾ, ನೆದರ್‍ಲ್ಯಾಂಡ್ಸ್, ಬ್ರಿಟನ್, ಜರ್ಮನಿ, ಇಸ್ರೇಲ್, ಆಸ್ಟ್ರೇಲಿಯಾ, ಡೆನ್ಮಾರ್ಕ್, ದಕ್ಷಿಣ ಕೊರಿಯಾ, ಸ್ವಿಡ್ಜರ್ಲೆಂಡ್, ಜಪಾನ್ ಮುಂತಾದ ದೇಶಗಳ ದಕ್ಷಿಣ ಭಾರತ್ ಕಾನ್ಸುಲೇಟ್ ಜನರಲ್‍ಗಳ ಜತೆ ಡಿಸಿಎಂ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ.ಅಶ್ವತ್ಥನಾರಾಯಣ, ಕೋವಿಡ್‍ನಂಥ ಸೋಂಕಿನ ವಿರುದ್ಧ ಹೋರಾಟ ನಡೆಸಲು ಜಾಗತಿಕ ಆವಿಷ್ಕಾರ ಮೈತ್ರಿಕೂಟದ ದೇಶಗಳ ಜತೆಗೆ ಎಲ್ಲ ರೀತಿಯ ಸಹಕಾರ ಸಂಬಂಧ ಹೊಂದಲು ಕರ್ನಾಟಕ ಸಿದ್ಧವಿದೆ. 3 ವಾರಗಳ ಹಿಂದೆ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅಪ್ಪಳಿಸಿದೆ. ಸರ್ಕಾರವು ಸೋಂಕು ಹರಡುವುದಕ್ಕಿಂತ ವೇಗವಾಗಿ ಹಾಸಿಗೆ ನಿರ್ವಹಣೆ, ಆಮ್ಲಜನಕ ಪೂರೈಕೆ, ಔಷಧಿ ಲಭ್ಯತೆ, ಹೋಮ್ ಐಸೋಲೇಷನ್‍ನಂಥ ಪರಿಹಾರ ಕಾರ್ಯಗಳನ್ನು ಕೈಗೊಂಡು ಆಸ್ಪತ್ರೆಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಯತ್ನಿಸುತ್ತಿದೆ ಎಂದರು.

ರಾಜ್ಯದಲ್ಲಿ ಈಗ ಆಕ್ಸಿಜನ್, ಔಷಧಿ, ಬೆಡ್‍ಗಳ ಕೊರತೆಯನ್ನು ಬಹುತೇಕ ನೀಗಿಸಲಾಗಿದೆ. ಮತ್ತೊಂದೆಡೆ ಸಂಭನೀಯ 3ನೇ ಅಲೆಯನ್ನು ಎದುರಿಸಲು ಸರ್ಕಾರ ಸಜ್ಜಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸೋಂಕನ್ನು ಪರಿಣಾಮಕಾರಿಯಾಗಿ ಹತ್ತಿಕ್ಕಲು ಹೋಮ್ ಐಸೋಲೇಷನ್ ಅನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಪ್ರತಿಯೊಬ್ಬ ಸೋಂಕಿತರಿಗೂ ಕೋವಿಡ್ ಕೇರ್‍ನಲ್ಲಿಯೇ ಚಿಕಿತ್ಸೆ ಕೊಡಲಾಗುತ್ತಿದೆ. ಪ್ರತಿ ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರದ ಮಟ್ಟದಲ್ಲಿ ಒಂದು ಕಾರ್ಯಪಡೆಯನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದರು.

ashwathnarayan 2 1

ವಿವಿಧ ದೇಶಗಳ ನೆರವು ಹೀಗಿದೆ:
ಜಾಗತಿಕ ಆವಿಷ್ಕಾರ ಮೈತ್ರಿಕೂಟ (GIA) ದೇಶಗಳ ರಾಜತಾಂತ್ರಿಕರು ಸಭೆಯಲ್ಲಿ ನೀಡಿದ ನೆರವಿನ ಮಾಹಿತಿ ಇಲ್ಲಿದೆ.

ಜಪಾನ್ :
ದಕ್ಷಿಣ ಭಾರತದ ಜಪಾನ್ ಕಾನ್ಸುಲೇಟ್ ಜನರಲ್ ಅಕಿಕೊ ಸುಗಿತಾ ಅವರು ಭಾರತ ಮತ್ತು ಕರ್ನಾಟಕಕ್ಕೆ ನೀಡಿರುವ ನೆರವಿನ ಮಾಹಿತಿ ನೀಡಿದರು. ಈಗಾಗಲೇ ರಾಜ್ಯದಲ್ಲಿದ್ದ ಬಹತೇಕ ಜಪಾನಿಯರನ್ನು ಸ್ವದೇಶಕ್ಕೆ ಸ್ಥಳಾಂತರಿಸಲಾಗಿದೆ. ಇದುವರೆಗೆ ಜಪಾನ್ ಸರ್ಕಾರ ಭಾರತಕ್ಕೆ 50 ದಶಲಕ್ಷ ಡಾಲರ್ ಅನುದಾನ ಘೋಷಿಸಿದೆ. 800 ವೆಂಟಿಲೇಟರ್‍ ಗಳು ಮತ್ತು ಆಮ್ಲಜನಕ ಸಿಲಿಂಡರ್‍ ಗಳನ್ನು ಒದಗಿಸಲಾಗಿದೆ ಎಂದ ಅಕಿಕೊ ಸುಗಿತಾ ಅವರು, ಉತ್ಪಾದನಾ ಮತ್ತು ಅತ್ಯಗತ್ಯ ಕೈಗಾರಿಕೆಗಳ ಕಾರ್ಯಚಟುವಟಿಕೆ ಮೇಲಿನ ನಿರ್ಬಂಧವನ್ನು ತೆಗೆದುಹಾಕಲು ಮನವಿ ಮಾಡಿದರು. ಜಪಾನಿನ ಅನೇಕ ಕಂಪನಿಗಳು ಶೀಘ್ರದಲ್ಲೇ ಕಾರ್ಯಾಚರಣೆಯನ್ನು ಪುನಾರಂಭಿಸುವ ಆಶಯ ಹೊಂದಿದ್ದು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ನಿರಂತರ ಸಂಪರ್ಕ ಇಟ್ಟುಕೊಳ್ಳಲಾಗಿದೆ ಎಂದರು.

ದಕ್ಷಿಣ ಕೊರಿಯಾ:
ದಕ್ಷಿಣ ಕೊರಿಯಾದ ಕಾನ್ಸುಲೇಟ್ ಜನರಲ್ ಯಂಗ್ ಸೀಪ್ ಕ್ವಾನ್ ಅವರು ಮಾತನಾಡಿ, ಈಗಾಗಲೇ 1,500 ಕೊರಿಯನ್ ಪ್ರಜೆಗಳು ಕರ್ನಾಟಕದಲ್ಲಿ ವಾಸಿಸುತ್ತಿದ್ದಾರೆ. ಅವರಿಗೆ ಆಸ್ಪತ್ರೆಯ ಹಾಸಿಗೆಗಳನ್ನು ಹುಡುಕುವುದು ತುಂಬಾ ಕಷ್ಟಕರವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅವರಿಗೆ ನೆರವಾಗಬೇಕು ಎಂದು ವಿನಂತಿ ಮಾಡಿದರು. ಜಾಗತಿಕ ಮಟ್ಟದಲ್ಲಿರುವ ಲಸಿಕೆಗಳ ಕೊರತೆಯನ್ನು ನೀಗಿಸಲು ವ್ಯಾಕ್ಸಿನ್ ತಯಾರಿಕೆ ಘಟಕಗಳನ್ನು ಸ್ಥಾಪನೆ ಮಾಡಲು ದಕ್ಷಿಣ ಕೊರಿಯಾ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಭಾರತವೂ ಸೇರಿ ಜಗತ್ತಿನ ಎಲ್ಲ ದೇಶಗಳ ಜೊತೆ ನಿಕಟವಾಗಿ ಕೆಲಸ ಮಾಡಲು ಸಿದ್ಧವಿದೆ ಎಂದ ಅವರು, ಭಾರತಕ್ಕೆ ಐದು ವಿಮಾನಗಳಲ್ಲಿ ವೈದ್ಯಕೀಯ ಸರಂಜಾಮುಗಳ ಪೂರೈಕೆ, ಆಮ್ಲಜನಕ ಸಿಲಿಂಡರ್‍ ಗಳು, ವೈದ್ಯಕೀಯ ಮತ್ತು ತಪಾಸಣೆ ಕಿಟ್‍ಗಳನ್ನು ಒದಗಿಸಲಾಗುತ್ತಿದೆ. ಈಗಾಗಲೇ ಸಾಕಷ್ಟು ವಸ್ತುಗಳು ಭಾರತಕ್ಕೆ ಬಂದಿವೆ. ಅಲ್ಲದೆ, ಇಲ್ಲಿ ಉತ್ಪಾದನಾ ಘಟಕಗಳನ್ನು ಹೊಂದಿರುವ ಕೊರಿಯಾದ ಎಲ್‍ಜಿ, ಸ್ಯಾಮ್‍ಸಂಗ್ ಮುಂತಾದವು ರಾಜ್ಯಕ್ಕೆ ಆರ್ಥಿಕ ನೆರವು ನೀಡುತ್ತಿವೆ ಎಂದರು.

ಸ್ವಿಡ್ಜರ್ಲೆಂಡ್:
ಸ್ವಿಡ್ಜರ್ಲೆಂಡ್ ದೇಶದ ಕಾನ್ಸುಲೇಟ್ ಜನರಲ್ ಸೆಬಾಸ್ಟಿಯನ್ ಹಗ್ ಅವರು ಮಾತನಾಡಿ, ಭಾರತಕ್ಕೆ ಎಲ್ಲ ರೀತಿಯ ನೆರವು ಮತ್ತು ತಾಂತ್ರಿಕ ಮಾಹಿತಿ ಹಂಚಿಕೊಳ್ಳಲು ನಮ್ಮ ದೇಶ ಸಿದ್ಧವಿದೆ. ಭಾರತಕ್ಕೆ 13 ಟನ್ ವೈದ್ಯಕೀಯ ವಸ್ತುಗಳ ನೆರವು ನೀಡಲಾಗಿದೆ. 600 ಆಮ್ಲಜನಕ ಸಾಂದ್ರಕಗಳನ್ನು ಕಳಿಸಿಕೊಡಲಾಗಿದೆ. 40ಕ್ಕೂ ಹೆಚ್ಚು ಸ್ವಿಸ್ ಕಂಪನಿಗಳು ಭಾರತಕ್ಕೆ 7 ದಶಲಕ್ಷ ಸ್ವಿಸ್ ಫ್ರಾಂಕ್‍ಗಳಷ್ಟು ನೆರವು ಕೊಟ್ಟಿದೆ. ಅಲ್ಲದೆ, ಜಾಗತಿಕ ಆವಿಷ್ಕಾರ ಪಾಲುದಾರ ಕೂಟದ ಸದಸ್ಯರು ಹೆಚ್ಚು ಹೆಚ್ಚು ಸಭೆಗಳನ್ನು ನಡೆಸುವ ಮೂಲಕ ನೆರವು ಮತ್ತು ಮಾಹಿತಿ ಹಂಚಿಕೆಗೆ ಹೆಚ್ಚು ಸಹಾಯಕವಾಗುತ್ತದೆ ಎಂದು ಸೆಬಾಸ್ಟಿಯನ್ ಹಗ್ ಸಲಹೆ ಮಾಡಿದರು. ಇದಕ್ಕೆ ಡಿಸಿಎಂ ಅವರು ಒಪ್ಪಿಗೆ ಸೂಚಿಸಿದರು.

ನೆದರ್‍ ಲ್ಯಾಂಡ್ಸ್:
ಯಾವುದೇ ಸಂದರ್ಭದಲ್ಲೂ ನೆದರ್‍ ಲ್ಯಾಂಡ್ಸ್ ಭಾರತದ ಜೊತೆ ಇರುತ್ತದೆ ಎಂದು ಆ ದೇಶದ ಕಾನ್ಸುಲೇಟ್ ಜನರಲ್ ಆದ ಗೆರ್ಟ್ ಹೈಜ್ಕೂಪ್ ಅವರು ಭರವಸೆ ನೀಡಿದರು. ಇಂತಹ ಸಭೆಗಳನ್ನು ಹೆಚ್ಚೆಚ್ಚು ನಡೆಸಬೇಕು ಎಂದು ಸಲಹೆ ನೀಡಿದರಲ್ಲದೆ ನೆರೆಯ ಮಹಾರಾಷ್ಟ್ರದಲ್ಲಿ ರಾಯಭಾರ ಕಚೇರಿ ಮತ್ತು ದೂತಾವಾಸದ ಸಿಬ್ಬಂದಿಯನ್ನು ಅಗತ್ಯ ಸಿಬ್ಬಂದಿ ಎಂದು ಪರಿಗಣಿಸಲಾಗುತ್ತದೆ. ಕರ್ನಾಟಕವು ಹಾಗೆ ಪರಿಗಣಿಸಬೇಕು ಎಂದು ಕೋರಿದರು. ಈಗಾಗಲೇ ನೆದರ್‍ ಲ್ಯಾಂಡ್ಸ್ 3 ವಿಮಾನಗಳಷ್ಟು ವೈದ್ಯಕೀಯ ಸರಂಜಾಮುಗಳನ್ನು ಭಾರತಕ್ಕೆ ತಲುಪಿಸಿದೆ. ಫಿಲಿಪ್ಸ್ ಕಂಪನಿ ತಯಾರಿಸಿದ 10,000 ಆಮ್ಲಜನಕ ಸಾಂದ್ರಕಗಳನ್ನೂ ಕೂಡ ಒದಗಿಸಿದೆ ಎಂದು ಹೈಜ್ಕೂಪ್ ಮಾಹಿತಿ ನೀಡಿದರು.

ಅಮೆರಿಕ:
ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಚೆನ್ನೈನಲ್ಲಿರುವ ಅಮೆರಿಕನ್ ಕಾನ್ಸುಲೇಟ್ ಜನರಲ್ ಜುಡಿತ್ ರವಿನ್ ಅವರು, 100 ಮಿಲಿಯನ್ ಯುಎಸ್ ಡಾಲರ್‍ ನಷ್ಟು ನೆರವು ನೀಡಲು ಅಮೆರಿಕ ಬದ್ಧವಾಗಿದೆ. ಆಮ್ಲಜನಕ, ವೈದ್ಯಕೀಯ ಸರಂಜಾಮು ಸೇರಿದಂತೆ ಅಗತ್ಯ ವಸ್ತುಗಳನ್ನು ನೀಡಲಿದೆ. ಇದೆಲ್ಲವನ್ನೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮೂಲಕ ಕೊಡಲಾಗುತ್ತಿದೆ ಎಂದರು. ಅಲ್ಲದೆ, ಭಾರತ-ಅಮೆರಿಕ ಜಂಟಿಯಾಗಿ ಕೋವಿಡ್ ಪರಿಹಾರ ನಿಧಿಗಾಗಿ ಕೆಲಸ ಮಾಡಲಿವೆ. ಭಾರತದಲ್ಲಿ 20 ದಶಲಕ್ಷ ಡೋಸ್ ಲಸಿಕೆ ತಯಾರಿಸಲು ಕೈಜೋಡಿಸಲಿದೆ ಎಂದರು.

ಇದೇ ಸಭೆಯಲ್ಲಿ ಮಾತನಾಡಿದ ಜರ್ಮನಿ ಕಾನ್ಸುಲೇಟ್ ಜನರಲ್ ಆಶಿಮ್ ಬರ್ಕಾಟ್ ಅವರು, ಸೋಂಕು ತಡೆಗಟ್ಟಲು ಕರ್ನಾಟಕದಲ್ಲಿ ಜಾರಿಗೆ ತಂದಿರುವ ಲಾಕ್‍ಡೌನ್ ಕ್ರಮ ಸರಿ ಇದೆ ಎಂದರಲ್ಲದೆ, ಭಾರತಕ್ಕೆ ಎಲ್ಲ ರೀತಿಯ ನೆರವು ನೀಡಲು ಜರ್ಮನಿ ಸಿದ್ಧವಿದೆ ಎಂದರು. ಇಸ್ರೇಲ್ ಕಾನ್ಸುಲೇಟ್ ಜನರಲ್ ಜೋನಾಥನ್ ಝಡ್ಕಾ, ಕೆನಡಾದ ನಿಕೋಲಾಸ್ ಗೆರಾರ್ಡ್, ಡೆನ್ಮಾರ್ಕ್‍ನ ಜೆ ಬೆಜೂರಿಮ್ ಹಾಗೂ ಐಟಿ ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ರಮಣರೆಡ್ಡಿ ಮುಂತಾದವರು ಮಾತನಾಡಿದರು.

TAGGED:Ashwath NarayanCoronaCovid 19governmentPublic TVಅಶ್ವತ್ಥನಾರಾಯಣಕೊರೊನಾಕೋವಿಡ್ 19ಪಬ್ಲಿಕ್ ಟಿವಿಸರ್ಕಾರ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

WEB GFX
Karnataka

ಮಲೆನಾಡಲ್ಲಿ ಕೆರೆಬೇಟೆ ಸೀಸನ್‌ – ಈ ಜನಪದ ಸಂಭ್ರಮ ಹೇಗಿರುತ್ತೆ ಗೊತ್ತಾ?

Public TV
By Public TV
12 minutes ago
Weather
Bengaluru City

ಮೇನಲ್ಲಿ ಮತ್ತಷ್ಟು ಕೆಂಡವಾಗಲಿದೆ ಕರುನಾಡು; 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಳ ಸಾಧ್ಯತೆ

Public TV
By Public TV
20 minutes ago
KSRTC bus lost control and crashed into a roadside hill SalemTamil Nadu
Bengaluru City

ಸೇಲಂ ಬಳಿ ತಪ್ಪಿದ ಭಾರೀ ಅನಾಹುತ: ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿತು KSRTC ಬಸ್‌

Public TV
By Public TV
21 minutes ago
daily horoscope dina bhavishya
Astrology

ದಿನ ಭವಿಷ್ಯ 29-04-2026

Public TV
By Public TV
46 minutes ago
soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
8 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?