Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನಗರ ಜಿಲ್ಲಾಸ್ಪತ್ರೆಯಲ್ಲಿ 300 ಆಕ್ಸಿಜನ್ ಬೆಡ್ ವ್ಯವಸ್ಥೆ: ಡಿಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ರಾಮನಗರ ಜಿಲ್ಲಾಸ್ಪತ್ರೆಯಲ್ಲಿ 300 ಆಕ್ಸಿಜನ್ ಬೆಡ್ ವ್ಯವಸ್ಥೆ: ಡಿಸಿಎಂ

Corona

ರಾಮನಗರ ಜಿಲ್ಲಾಸ್ಪತ್ರೆಯಲ್ಲಿ 300 ಆಕ್ಸಿಜನ್ ಬೆಡ್ ವ್ಯವಸ್ಥೆ: ಡಿಸಿಎಂ

Public TV
Last updated: May 18, 2021 11:30 pm
Public TV
Share
3 Min Read
rmg dcm
SHARE

– ಆಕ್ಸಿಜನ್, ರೆಮ್‍ಡಿಸಿವರ್ ಕೊರತೆ ಇಲ್ಲ

ರಾಮನಗರ: ನೂತನ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗಾಗಿ ಮೊದಲ ಹಂತದಲ್ಲಿ 150 ಆಕ್ಸಿಜನ್ ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ. ನಾಳೆಯಿಂದಲೇ ಈ ಬೆಡ್ ಗಳ ಬಳಕೆಯನ್ನು ಹಂತ ಹಂತವಾಗಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.

ಜಿಲ್ಲಾಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈಗ 150 ಹಾಸಿಗೆ ವ್ಯವಸ್ಥೆ ಮಾಡಲಾಗಿದ್ದು, ಎರಡನೇ ಹಂತದಲ್ಲಿ, ಅಂದರೆ 15 ದಿನಗಳಲ್ಲಿ ಇನ್ನೂ 150 ಹಾಸಿಗೆಗಳ ವ್ಯವಸ್ಥೆ ಮಾಡಲಾಗುವುದು. ಅಲ್ಲಿಗೆ ಒಟ್ಟು 300 ಆಕ್ಸಿಜನ್ ಬೆಡ್‍ಗಳಾಗುತ್ತವೆ ಎಂದರು.

corona virus 3

ಈಗಾಗಲೇ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ತಡೆಗೆ ಎಲ್ಲ ಕ್ರಮ ವಹಿಸಲಾಗಿದೆ. ಎರಡನೇ ಅಲೆ ಹಾಗೂ ಸಂಭವನೀಯ ಮೂರನೇ ಅಲೆ ಬಂದರೂ ಸಮಸ್ಯೆಯಾಗದಂತೆ ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ ಆಕ್ಸಿಜನ್ ಬೆಡ್‍ಗಳನ್ನು ಹಾಕಲಾಗುತ್ತಿದೆ. ಕಂದಾಯ ಭವನದಲ್ಲಿ ಈಗ 35 ಆಕ್ಸಿಜನ್ ಬೆಡ್ ಇದ್ದು, ಅಲ್ಲಿ ಹೆಚ್ಚುವರಿ ಬೆಡ್ ವ್ಯವಸ್ಥೆ ಮಾಡಲು ಉದ್ದೇಶಿಸಲಾಗಿದೆ. ಯಾವುದೇ ತುರ್ತು ಸಂದರ್ಭ ಎದುರಾದರೂ ಜಿಲ್ಲಾ ಕೇಂದ್ರದಲ್ಲೇ ಚಿಕಿತ್ಸೆ ನೀಡಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.

ಹೋಮ್ ಐಸೋಲೇಷನ್ ಇಲ್ಲ
ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಇನ್ನು ಮುಂದೆ ಕೋವಿಡ್ ಸೋಂಕಿತರನ್ನು ಮನೆಯಲ್ಲಿ ಕ್ವಾರಂಟೈನ್ ಮಾಡುವುದಿಲ್ಲ. ಸೋಂಕು ಪತ್ತೆಯಾದ ತಕ್ಷಣ ಅವರನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಶಿಫ್ಟ್ ಮಾಡಿ ಆರೈಕೆ ಮಾಡಲಾಗುವುದು. ಅಲ್ಲಿ ವೈದ್ಯರು, ನರ್ಸ್‍ಗಳು ಹಾಗೂ ಪ್ಯಾರಾ ಮೆಡಿಕಲ್ ಸಿಬ್ಬಂದಿ ಇರುತ್ತಾರೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

corona virus 1

ಜಿಲ್ಲಾ ಕೇಂದ್ರದಲ್ಲಿ ಆಮ್ಲಜನಕದ ಕೊರತೆ ಇಲ್ಲ. ಈಗಾಗಲೇ 6.8 ಟನ್ ಸಾಮಥ್ರ್ಯದ ಆಕ್ಸಿಜನ್ ಘಟಕ ಮಂಜೂರಾಗಿದೆ. ಸದ್ಯಕ್ಕೆ 3.5 ಕೆ.ಎಲ್‍ನಷ್ಟು ಆಮ್ಲಜನಕ ಬಳಕೆಯಾಗುತ್ತಿದೆ. ಇದರ ಜೊತೆಗೆ ಆಮ್ಲಜನಕ ಸಾಂದ್ರಕಗಳು, ಹೆಚ್ಚುವರಿ ಸಿಲಿಂಡರ್‍ಗಳೂ ನಮ್ಮಲ್ಲಿವೆ. ಹೀಗಾಗಿ ಎಲ್ಲೂ ಕೊರತೆ ಎಂಬುದಿಲ್ಲ ಎಂದರು ಅವರು.

ರಾಜ್ಯದಲ್ಲಿ ಒಟ್ಟು 60,000 ಆಕ್ಸಿಜನ್ ಬೆಡ್‍ಗಳಿದ್ದು, ಅದರಲ್ಲಿ ಅರ್ಧದಷ್ಟು ಬೆಡ್‍ಗಳು ಬೆಂಗಳೂರು ನಗರದಲ್ಲೇ ಇವೆ. ಇನ್ನೂ ಎಲ್ಲ ತಾಲೂಕು, ಜಿಲ್ಲಾ ಆಸ್ಪತ್ರೆ ಸೇರಿ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲೂ ಆಮ್ಲಜನಕ ಕೊರತೆಯಾಗದಂತೆ ನೋಡಿಕೊಳ್ಳಲಾಗಿದೆ. ರಾಮನಗರ ಜಿಲ್ಲೆಯಲ್ಲೂ ಯಾವುದೇ ಸಮಸ್ಯೆ ಇಲ್ಲ. ಅದೇ ರೀತಿ ರೆಮ್‍ಡಿಸಿವರ್ ಸೇರಿ ಯಾವ ಔಷಧದ ಕೊರತೆಯೂ ಇಲ್ಲ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

corona 2 1

ಪಿಎಚ್ ಸಿಗಳಿಗೆ ಭೇಟಿ
ರಾಮನಗರದ ಕಂದಾಯ ಭವನದಲ್ಲಿನ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿದ ಡಿಸಿಎಂ ಅವರು ಅಲ್ಲಿನ ಚಿಕಿತ್ಸೆ ಬಗ್ಗೆ ಸಿಬ್ಬಂದಿ ಜೊತೆ ಮಾತನಾಡಿ ಚಿಕಿತ್ಸಾ ವ್ಯವಸ್ಥೆ, ಔಷಧಿ ಇತ್ಯಾದಿ ಬಗ್ಗೆ ಮಾಹಿತಿ ಪಡೆದರು. ಪಿಪಿಇ ಕಿಟ್, ಮಾಸ್ಕ್, ಸ್ಯಾನಿಟೈಸರ್ ಲಭ್ಯತೆ ಬಗ್ಗೆಯೂ ಮಾಹಿತಿ ಪಡೆದರು. ಬಳಿಕ ರಾಮನಗರ ತಾಲೂಕಿನ ಕಣ್ವ ಪ್ರಾಥಮಿಕ ಆರೋಗ್ಯ ಹಾಗೂ ಸುಗ್ಗನಹಳ್ಳಿಯಲ್ಲಿ ಇರುವ ಆಯುಷ್ ತರಬೇತಿ ಕೇಂದ್ರಕ್ಕೂ ಭೇಟಿ ನೀಡಿ ಪರಿಶೀಲಿಸಿದರು. ಸುಗ್ಗನಹಳ್ಳಿಯಲ್ಲಿ ಕೋವಿಡ್ ಸೋಂಕಿತರಿದ್ದು, ಅವರು ಚಿಕಿತ್ಸೆ ಬಗ್ಗೆ ಸ್ಥಳೀಯ ವೈದ್ಯರಿಂದ ಮಾಹಿತಿ ಪಡೆದರು. ರೋಗಿಗಳ ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ಜತೆಯೂ ಮಾತನಾಡಿದರು.

corona

ಸುಗ್ಗನಹಳ್ಳಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಸೋಂಕಿತರ ಜತೆಗೂ ಮಾತನಾಡಿದ ಡಿಸಿಎಂ, ಊಟ- ಉಪಚಾರದ ಬಗ್ಗೆ ವಿಚಾರಿಸಿದರು. ಎಲ್ಲರೂ ಚೆನ್ನಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಸಿಇಒ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್, ಉಪ ಮುಖ್ಯಮಂತ್ರಿ ಅವರ ಆಪ್ತ ಕಾರ್ಯದರ್ಶಿ ಸತೀಶ್ ಕುಮಾರ್, ಡಿಎಚ್‍ಒ ಡಾ.ನಿರಂಜನ್ ಹಾಗೂ ಇತರರು ಇದ್ದರು.

TAGGED:Corona VirusDCM Ashwath NarayanhospitalPublic TVramanagaraಆಸ್ಪತ್ರೆಕೊರೊನಾ ವೈರಸ್ಡಿಸಿಎಂ ಅಶ್ವಥ್ ನಾರಾಯಣ್ಪಬ್ಲಿಕ್ ಟಿವಿರಾಮನಗರ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
31 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
33 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
1 hour ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
1 hour ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?