ಗಾಂಧಿನಗರ: ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲು ಪ್ರಧಾನಿ ನರೇಂದ್ರ ಮೋದಿಯವರು ಇಂದು ಗುಜರಾತ್ಗೆ ಭೇಟಿ ನೀಡಲಿದ್ದಾರೆ.
ಗುಜರಾತ್, ಮುಂಬೈ, ಕರ್ನಾಟಕದ ಕೆಲವು ಭಾಗಗಳಲ್ಲಿ ಅಬ್ಬರಿಸಿದ ತೌಕ್ತೆ ಚಂಡಮಾರುತದಿಂದ ಹಾನಿಗೊಂಡ ಪ್ರದೇಶಗಳನ್ನು ಪರಿಶೀಲಿಸಲು ಪ್ರಧಾನಿ ಮೋದಿಯವರು ಡಿಯುಗೆ ಭೇಟಿ ನೀಡಲಿದ್ದಾರೆ.
ಬೆಳಗ್ಗೆ 9.30ರ ಸುಮಾರಿಗೆ ಮೋದಿಯವರು ದೆಹಲಿಯಿಂದ ಹೊರಡಲಿದ್ದು ಭಾವನಗರದಲ್ಲಿ ತಲುಪಿ, ಅಲ್ಲಿಂದ ಉನಾ, ಡಿಯು, ಜಫರಾಬಾದ್ ಮತ್ತು ಮಾಹುವಾಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಲಿದ್ದಾರೆ. ಸಮೀಕ್ಷೆಯ ನಂತರ ಮೋದಿಯವರು ಅಹಮದಾಬಾದ್ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ತೌಕ್ತೆ ಚಂಡಮಾರುತದಿಂದ ಸೋಮವಾರ ರಾತ್ರಿ ಡಿಯು ಮತ್ತು ಉನಾ ನಡುವಿನ ಸೌರಾಷ್ಟ್ರ ಪ್ರದೇಶದ ಗುಜರಾತ್ ಕರಾವಳಿಯಲ್ಲಿ ಭೂ ಕುಸಿತ ಉಂಟಾಗಿದೆ ಹಾಗೂ ಚಂಡಮಾರುತದಿಂದ 13 ಜನರು ಮೃತಪಟ್ಟಿದ್ದಾರೆ.