Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನೆರೆ ಮನೆ ಬೆಂಕಿಯಲ್ಲಿ ಬೇಳೆ ಬೇಯಿಸುವುದು ಕಾಂಗ್ರೆಸ್‍ನ ಜಾಡ್ಯ: ಹೆಚ್‍ಡಿಕೆ

Public TV
Last updated: May 20, 2021 1:33 pm
Public TV
Share
7 Min Read
HDK SIDDU
SHARE

ಬೆಂಗಳೂರು: ಮಾಜಿ ಸಿಎಂಗಳಾದ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ನಡುವೆ ಮತ್ತೊಮ್ಮೆ ಟ್ವೀಟ್ ವಾರ್ ಶುರುವಾಗಿದೆ. ಲಸಿಕೆ ಕುರಿತು ಸಿದ್ದರಾಮಯ್ಯ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ಸರಣಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಮತ್ತು ಮಾಜಿ ಸಿಎಂ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

Kumaraswamy1

ಶಾಂತಿ ಕಾಲದಲ್ಲಿ ಕಲಹಕ್ಕೆ ಬರುವುದು, ನೆರೆ ಮನೆ ಬೆಂಕಿಯಲ್ಲಿ ಬೇಳೆ ಬೇಯಿಸುವುದು ಕಾಂಗ್ರೆಸ್ಸಿನ ಜಾಡ್ಯ. ಈ ಅಂಟುರೋಗಕ್ಕೆ ಒಳಗಾದವರು ಸಿದ್ದರಾಮಯ್ಯ. ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ಸಿನ ಆತ್ಮವಂಚನೆ ನೆನಪಿಸಿದ್ದಕ್ಕೆ ಸಿದ್ದರಾಮಯ್ಯ ನನ್ನ ವಿರುದ್ಧ ಕಾಲು ಕೆರೆದುಕೊಂಡು ಬಂದಿದ್ದಾರೆ. ಅವರ ಪ್ರತಿ ಎಸೆತಕ್ಕೆ ಸಿಕ್ಸರ್ ಕೊಡಬೇಕೆನಿಸಿದೆ.

ಶಾಂತಿ ಕಾಲದಲ್ಲಿ ಕಲಹಕ್ಕೆ ಬರುವುದು, ನೆರೆ ಮನೆ ಬೆಂಕಿಯಲ್ಲಿ ಬೇಳೆ ಬೇಯಿಸುವುದು ಕಾಂಗ್ರೆಸ್‌ನ ಜಾಡ್ಯ. ಈ ಅಂಟುರೋಗಕ್ಕೆ ಒಳಗಾದವರು ಸಿದ್ದರಾಮಯ್ಯ. ಲಸಿಕೆ ವಿಚಾರದಲ್ಲಿ ಕಾಂಗ್ರೆಸ್‌ನ ಆತ್ಮವಂಚನೆ ನೆನಪಿಸಿದ್ದಕ್ಕೆ ಸಿದ್ದರಾಮಯ್ಯ ನನ್ನ ವಿರುದ್ಧ ಕಾಲು ಕೆರೆದುಕೊಂಡು ಬಂದಿದ್ದಾರೆ. ಅವರ ಪ್ರತಿ ಎಸೆತಕ್ಕೆ ಸಿಕ್ಸರ್‌ ಕೊಡಬೇಕೆನಿಸಿದೆ!
1/11

— H D Kumaraswamy (@hd_kumaraswamy) May 20, 2021

ಕೋವಿಡ್ ಲಸಿಕೆ ವಿಚಾರದಲ್ಲಿನ ಕಾಂಗ್ರೆಸ್ಸಿನ ಆತ್ಮವಂಚನೆಯನ್ನು ಪ್ರಸ್ತಾಪಿಸಿದ್ದಕ್ಕೆ ನಾನು ಸ್ವಯಂ ಗೋಲು ಹೊಡೆದುಕೊಂಡಿರುವುದಾಗಿ ನೀವು ಹೇಳಿದ್ದೀರಿ. ಸಿದ್ದರಾಮಯ್ಯನವರೇ ಲಸಿಕೆ ವಿಚಾರದಲ್ಲಿ ರಾಷ್ಟ್ರದ ಎದುರು ಬೆತ್ತಲಾಗಿ, ನಿಂತಿರುವುದು ಕಾಂಗ್ರೆಸ್. ಈ ವಿಚಾರದಲ್ಲಿ ನನ್ನನ್ನು ಟೀಕಿಸಲು ಬಂದು ನೀವು ಹಿಟ್ ವಿಕೆಟ್ ಆಗಿದ್ದೀರಿ.

ಕೋವಿಡ್‌ ಲಸಿಕೆ ವಿಚಾರದಲ್ಲಿನ ಕಾಂಗ್ರೆಸ್‌ನ ಆತ್ಮವಂಚನೆಯನ್ನು ಪ್ರಸ್ತಾಪಿಸಿದ್ದಕ್ಕೆ ನಾನು ಸ್ವಯಂ ಗೋಲು ಹೊಡೆದುಕೊಂಡಿರುವುದಾಗಿ ನೀವು ಹೇಳಿದ್ದೀರಿ. ಸಿದ್ದರಾಮಯ್ಯನವರೇ ಲಸಿಕೆ ವಿಚಾರದಲ್ಲಿ ರಾಷ್ಟ್ರದ ಎದುರು ಬೆತ್ತಲಾಗಿ, ನಿಂತಿರುವುದು ಕಾಂಗ್ರೆಸ್‌. ಈ ವಿಚಾರದಲ್ಲಿ ನನ್ನನ್ನು ಟೀಕಿಸಲು ಬಂದು ನೀವು ಹಿಟ್‌ ವಿಕೆಟ್‌ ಆಗಿದ್ದೀರಿ.
2/11

— H D Kumaraswamy (@hd_kumaraswamy) May 20, 2021

ಲಸಿಕೆ ವಿಚಾರವಾಗಿ ಕಾಂಗ್ರೆಸ್ ಅನುಮಾನದ ಮಾತುಗಳನ್ನು ಆಡಲಿಲ್ಲವೇ? ಭಾರತದ್ದೇ ಕೋವ್ಯಾಕ್ಸಿನ್‍ನ ಬಗ್ಗೆ ಅಪಪ್ರಚಾರ ಮಾಡಲಿಲ್ಲವೇ? ನಮ್ಮದೇ ಲಸಿಕೆಯನ್ನು ನೀವು ಪ್ರೋತ್ಸಾಹಿಸಬೇಕಿತ್ತೋ ಇಲ್ಲವೋ? ಅದು ಬಿಟ್ಟು ನೀವು ಮಾಡಿದ್ದೇನು? ಅಡಿಗಡಿಗೆ ಲಸಿಕೆ ಮೇಲೆ ಅನುಮಾನ. ಈ ಮೂಲಕ ಭಾರತೀಯ ವಿಜ್ಞಾನಿಗಳ ಅಪಮಾನ. ಇದನ್ನೇ ಅಲ್ಲವೇ ನಾನು ಹೇಳಿದ್ದು? ಎಂದು ಪ್ರಶ್ನಿಸಿದರು.

ಲಸಿಕೆ ವಿಚಾರವಾಗಿ ಕಾಂಗ್ರೆಸ್ ಅನುಮಾನದ ಮಾತುಗಳನ್ನು ಆಡಲಿಲ್ಲವೇ? ಭಾರತದ್ದೇ ಕೋವ್ಯಾಕ್ಸಿನ್‌ನ ಬಗ್ಗೆ ಅಪಪ್ರಚಾರ ಮಾಡಲಿಲ್ಲವೇ? ನಮ್ಮದೇ ಲಸಿಕೆಯನ್ನು ನೀವು ಪ್ರೋತ್ಸಾಹಿಸಬೇಕಿತ್ತೋ ಇಲ್ಲವೋ? ಅದು ಬಿಟ್ಟು ನೀವು ಮಾಡಿದ್ದೇನು? ಅಡಿಗಡಿಗೆ ಲಸಿಕೆ ಮೇಲೆ ಅನುಮಾನ. ಈ ಮೂಲಕ ಭಾರತೀಯ ವಿಜ್ಞಾನಿಗಳ ಅಪಮಾನ. ಇದನ್ನೇ ಅಲ್ಲವೇ ನಾನು ಹೇಳಿದ್ದು?
3/11

— H D Kumaraswamy (@hd_kumaraswamy) May 20, 2021

ಕಾಂಗ್ರೆಸ್ಸಿನ ಲಸಿಕೆ ರಾಜಕಾರಣವನ್ನು ನಾನು ವಿವರಿಸಿದ್ದೇನೆ. ಕಾಂಗ್ರೆಸ್ಸಿನ ಅಪಪ್ರಚಾರದಿಂದ ಜನ ಲಸಿಕೆ ಹಾಕಿಸಿಕೊಳ್ಳುತ್ತಿಲ್ಲ ಎಂದು ನಾನು ಹೇಳಿಲ್ಲ. ಲಸಿಕೆಗಾಗಿ ಜನರು ಸಿದ್ಧರಾಗಿಯೇ ಇದ್ದಾರೆ. ಕಾಂಗ್ರೆಸ್ ಹೇಳಿದ ಮಾತ್ರಕ್ಕೆ ಜನ ಲಸಿಕೆಯಿಂದ ವಿಮುಖರಾಗಿಲ್ಲ. ಜನ ಕಾಂಗ್ರೆಸ್ ಮಾತು ಕೇಳುತ್ತಾರೆ ಎಂಬ ಭ್ರಮೆ ಸಿದ್ದರಾಮಯ್ಯನವರಿಗೆ ಬೇಡ ಎಂದರು.

ಕಾಂಗ್ರೆಸ್‌ನ ಲಸಿಕೆ ರಾಜಕಾರಣವನ್ನು ನಾನು ವಿವರಿಸಿದ್ದೇನೆ. ಕಾಂಗ್ರೆಸ್‌ನ ಅಪಪ್ರಚಾರದಿಂದ ಜನ ಲಸಿಕೆ ಹಾಕಿಸಿಕೊಳ್ಳುತ್ತಿಲ್ಲ ಎಂದು ನಾನು ಹೇಳಿಲ್ಲ. ಲಸಿಕೆಗಾಗಿ ಜನರು ಸಿದ್ದರಾಗಿಯೇ ಇದ್ದಾರೆ. ಕಾಂಗ್ರೆಸ್‌ ಹೇಳಿದ ಮಾತ್ರಕ್ಕೆ ಜನ ಲಸಿಕೆಯಿಂದ ವಿಮುಖರಾಗಿಲ್ಲ.ಜನ ಕಾಂಗ್ರೆಸ್‌ ಮಾತು ಕೇಳುತ್ತಾರೆ ಎಂಬ ಭ್ರಮೆ ಸಿದ್ದರಾಮಯ್ಯನವರಿಗೆ ಬೇಡ.
4/11

— H D Kumaraswamy (@hd_kumaraswamy) May 20, 2021

ಲಸಿಕೆಯೊಂದು ಸಿಕ್ಕಾಗ ಅದನ್ನು ಮೊದಲಿಗೆ ಮುಂಚೂಣಿ ಹೋರಾಟಗಾರರಿಗೆ ನೀಡಲಾಗುತ್ತದೆ.ಇದು ನಿಮಗೆ ತಿಳಿದಿರಲಿ.ದೇಶದಲ್ಲಿ ಮೊದಲು ಕೋವಿಡ್ ವಾರಿಯರ್‍ಗಳಿಗೆ ಲಸಿಕೆ ನೀಡಲಾಯಿತು. ನನ್ನ ಸರದಿ ಬಂದಾಗ ನಾನು ಲಸಿಕೆ ಪಡೆದೆ. ಇಲ್ಲಿ ಕಾಂಗ್ರೆಸ್ ಮಾತು ನಂಬಿ ಕೂರುವಂಥದ್ದೇನಿತ್ತು. ಕಾಂಗ್ರೆಸ್ ಮಾತನ್ನು 50 ವರ್ಷದಿಂದಲೂ ಕೇಳದ ಕುಟುಂಬ ನಮ್ಮದು ಎಂದು ಕೆಂಡಕಾರಿದ್ದಾರೆ.

ಲಸಿಕೆಯೊಂದು ಸಿಕ್ಕಾಗ ಅದನ್ನು ಮೊದಲಿಗೆ ಮುಂಚೂಣಿ ಹೋರಾಟಗಾರರಿಗೆ ನೀಡಲಾಗುತ್ತದೆ.ಇದು ನಿಮಗೆ ತಿಳಿದಿರಲಿ. ದೇಶದಲ್ಲಿ ಮೊದಲು ಕೋವಿಡ್‌ ವಾರಿಯರ್‌ಗಳಿಗೆ ಲಸಿಕೆ ನೀಡಲಾಯಿತು. ನನ್ನ ಸರದಿ ಬಂದಾಗ ನಾನು ಲಸಿಕೆ ಪಡೆದೆ. ಇಲ್ಲಿ ಕಾಂಗ್ರೆಸ್‌ ಮಾತು ನಂಬಿ ಕೂರುವಂಥದ್ದೇನಿತ್ತು. ಕಾಂಗ್ರೆಸ್‌ ಮಾತನ್ನು 50 ವರ್ಷದಿಂದಲೂ ಕೇಳದ ಕುಟುಂಬ ನಮ್ಮದು!
5/11

— H D Kumaraswamy (@hd_kumaraswamy) May 20, 2021

ದೇಶದಲ್ಲಿ ಸರ್ವರಿಗೂ ಉಚಿತ ಲಸಿಕೆ ಹಾಕುವಂತೆ ಸೋನಿಯಾ ಗಾಂಧಿ ಅವರ ಜೊತೆಗೂಡಿ ಎಚ್.ಡಿ ದೇವೇಗೌಡರು ಪ್ರಧಾನಿಗೆ ಪತ್ರ ಬರೆದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯನವರೇ, ದೇಶದ ಹಲವು ವಿರೋಧಪಕ್ಷಗಳ ನಾಯಕರ ಜೊತೆಗೂಡಿ ದೇವೇಗೌಡರು ಪ್ರಧಾನಿಗೆ ಪತ್ರ ಬರೆದರೇ ಹೊರತು, ಸೋನಿಯಾ ಗಾಂಧಿ ಅವರ ಜೊತೆಗೂಡಿ ಪತ್ರ ಬರೆಯಲಿಲ್ಲ ನೆನಪಿರಲಿ ಎಂದು ಹೇಳಿದರು.

ದೇಶದಲ್ಲಿ ಸರ್ವರಿಗೂ ಉಚಿತ ಲಸಿಕೆ ಹಾಕುವಂತೆ ಸೋನಿಯಾ ಗಾಂಧಿ ಅವರ ಜೊತೆಗೂಡಿ ಎಚ್‌.ಡಿ ದೇವೇಗೌಡರು ಪ್ರಧಾನಿಗೆ ಪತ್ರ ಬರೆದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯನವರೇ, ದೇಶದ ಹಲವು ವಿರೋಧಪಕ್ಷಗಳ ನಾಯಕರ ಜೊತೆಗೂಡಿ ದೇವೇಗೌಡರು ಪ್ರಧಾನಿಗೆ ಪತ್ರ ಬರೆದರೇ ಹೊರತು,ಸೋನಿಯಾ ಗಾಂಧಿ ಅವರ ಜೊತೆಗೂಡಿ ಪತ್ರ ಬರೆಯಲಿಲ್ಲ ನೆನಪಿರಲಿ.
6/11

— H D Kumaraswamy (@hd_kumaraswamy) May 20, 2021

ಅಷ್ಟಕ್ಕೂ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರಕ್ಕೆ ಸಹಿ ಮಾಡುವಂತೆ ದೇವೇಗೌಡರಿಗೆ ಯಾರೆಲ್ಲ ವಿನಂತಿಸಿದ್ದರು, ಎಷ್ಟು ಬೇಡಾಡಿದರು ಎಂಬುದು ಸಿದ್ದರಾಮಯ್ಯನವರಿಗೆ ಗೊತ್ತಿದೆಯೇ? ದೆಹಲಿಗೆ ಹೋಗಿ ಈ ವಿಚಾರವಾಗಿ ಸಿದ್ದರಾಮಯ್ಯನವರು ಮಾಹಿತಿ ಪಡೆದು ಬರಲಿ. ಮಾಹಿತಿ ಇಲ್ಲದೇ ಮಾತಾಡುವುದು ಸಿದ್ದರಾಮಯ್ಯನವರಿಗಿರುವ ದೊಡ್ಡ ಸಮಸ್ಯೆ ಎಂದು ನುಡಿದರು.

ಅಷ್ಟಕ್ಕೂ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರಕ್ಕೆ ಸಹಿ ಮಾಡುವಂತೆ ದೇವೇಗೌಡರಿಗೆ ಯಾರೆಲ್ಲ ವಿನಂತಿಸಿದ್ದರು, ಎಷ್ಟು ಬೇಡಾಡಿದರು ಎಂಬುದು ಸಿದ್ದರಾಮಯ್ಯನವರಿಗೆ ಗೊತ್ತಿದೆಯೇ? ದೆಹಲಿಗೆ ಹೋಗಿ ಈ ವಿಚಾರವಾಗಿ ಸಿದ್ದರಾಮಯ್ಯನವರು ಮಾಹಿತಿ ಪಡೆದು ಬರಲಿ. ಮಾಹಿತಿ ಇಲ್ಲದೇ ಮಾತಾಡುವುದು ಸಿದ್ದರಾಮಯ್ಯನವರಿಗಿರುವ ದೊಡ್ಡ ಸಮಸ್ಯೆ.
7/11

— H D Kumaraswamy (@hd_kumaraswamy) May 20, 2021

ಅಸಮರ್ಪಕ ಲಸಿಕೆ ಅಭಿಯಾನ ವಿರುದ್ಧ ನಮ್ಮದೂ ಆಕ್ಷೇಪಣೆಗಳಿವೆ. ಆದರೆ ಲಸಿಕೆ ವಿರುದ್ಧ ನಮ್ಮ ನಿಲುವು ಇಲ್ಲ. ಲಸಿಕೆ ಅಭಿಯಾನ ಸಮರ್ಪಕವಾಗಿ ನಡೆಯಬೇಕೆಂದು ಒತ್ತಾಯಿಸಿ ನಾನು ಸರ್ಕಾರಗಳಿಗೆ ಹಲವು ಸಲಹೆ ನೀಡಿದ್ದೇನೆ. ಆದರೆ, ಕಾಂಗ್ರೆಸ್ ಲಸಿಕೆ ವಿರುದ್ಧವೇ ಮಾತಾಡಿತು. ಈಗ ಲಸಿಕೆ, ಲಸಿಕೆ ಎನ್ನುತ್ತಿದೆ. ಇದು ಕಾಂಗ್ರೆಸ್ಸಿನ ಇಬ್ಬಗೆ ನೀತಿ ಎಂದು ವಾಗ್ದಾಳಿ ನಡೆಸಿದರು.

ಅಸಮರ್ಪಕ ಲಸಿಕೆ ಅಭಿಯಾನ ವಿರುದ್ಧ ನಮ್ಮದೂ ಆಕ್ಷೇಪಣೆಗಳಿವೆ. ಆದರೆ, ಲಸಿಕೆ ವಿರುದ್ಧ ನಮ್ಮ ನಿಲುವು ಇಲ್ಲ. ಲಸಿಕೆ ಅಭಿಯಾನ ಸಮರ್ಪಕವಾಗಿ ನಡೆಯಬೇಕೆಂದು ಒತ್ತಾಯಿಸಿ ನಾನು ಸರ್ಕಾರಗಳಿಗೆ ಹಲವು ಸಲಹೆ ನೀಡಿದ್ದೇನೆ. ಆದರೆ, ಕಾಂಗ್ರೆಸ್‌ ಲಸಿಕೆ ವಿರುದ್ಧವೇ ಮಾತಾಡಿತು. ಈಗ ಲಸಿಕೆ, ಲಸಿಕೆ ಎನ್ನುತ್ತಿದೆ. ಇದು ಕಾಂಗ್ರೆಸ್‌ನ ಇಬ್ಬಗೆ ನೀತಿ.
8/11

— H D Kumaraswamy (@hd_kumaraswamy) May 20, 2021

ಸೋಂಕು ಹೆಚ್ಚುತ್ತಿದ್ದರೂ, ಲಾಕ್‍ಡೌನ್ ಜಾರಿಯಲ್ಲಿ ಇದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಬೀದಿಗೆ ಬಿದ್ದಿದ್ದಾರೆ. ಜನರಿಗೆ ನೆರವಾಗುವುದು ಇವರ ಉದ್ದೇಶವಲ್ಲ. ರಾಜಕೀಯ ಮೈಲೇಜ್ ಪಡೆಯುವುದು ಇವರ ಉದ್ದೇಶ. ಜೊತೆಗೆ ಸಿಎಂ ಆಗುವ ಕನಸುಗಳು. ಶಾಂತಿ ಕಾಲದಲ್ಲಿ ಕಾಂಗ್ರೆಸ್ ಕಲಹಕ್ಕೆ ಇಳಿದು ಲಾಭ ಪಡೆಯುತ್ತದೆ ಎಂಬುದಕ್ಕೆ ಇದು ಸಾಕ್ಷಿ ಎಂದು ಹರಿಹಾಯ್ದಿದ್ದಾರೆ.

ಸೋಂಕು ಹೆಚ್ಚುತ್ತಿದ್ದರೂ, ಲಾಕ್‌ಡೌನ್‌ ಜಾರಿಯಲ್ಲಿ ಇದ್ದರೂ ರಾಜ್ಯದಲ್ಲಿ ಕಾಂಗ್ರೆಸ್‌ ನಾಯಕರು ಬೀದಿಗೆ ಬಿದ್ದಿದ್ದಾರೆ. ಜನರಿಗೆ ನೆರವಾಗುವುದು ಇವರ ಉದ್ದೇಶವಲ್ಲ. ರಾಜಕೀಯ ಮೈಲೇಜ್‌ ಪಡೆಯುವುದು ಇವರ ಉದ್ದೇಶ. ಜೊತೆಗೆ ಸಿಎಂ ಆಗುವ ಕನಸುಗಳು. ಶಾಂತಿ ಕಾಲದಲ್ಲಿ ಕಾಂಗ್ರೆಸ್‌ ಕಲಹಕ್ಕೆ ಇಳಿದು ಲಾಭ ಪಡೆಯುತ್ತದೆ ಎಂಬುದಕ್ಕೆ ಇದು ಸಾಕ್ಷಿ.
9/11

— H D Kumaraswamy (@hd_kumaraswamy) May 20, 2021

ಲಸಿಕೆಗಾಗಿ 100 ಕೋಟಿ ಕೊಟ್ಟಿದ್ದಾಗಿ ಕಾಂಗ್ರೆಸ್ ಹೇಳುತ್ತಿದೆ. ಇದೇನು ಸಿದ್ದರಾಮಯ್ಯನವರ ಮನೆ ಗಂಟೇ? ಕಾಂಗ್ರೆಸ್ ಜನಪ್ರತಿನಿಧಿಗಳ ಕ್ಷೇತ್ರಾಭಿವೃದ್ಧಿ ನಿಧಿಯಲ್ಲವೇ? ಕ್ಷೇತ್ರಾಭಿವೃದ್ಧಿ ನಿಧಿಯನ್ನು ಸರ್ಕಾರಕ್ಕೇ ನೀಡಿರುವುದಾಗಿ ಹೇಳಬೇಕಿದ್ದ ಕಾಂಗ್ರೆಸ್, ಲಸಿಕೆಗಾಗಿ ಕೈಯಿಂದ 100 ಕೋಟಿ ಕೊಟ್ಟಂತೆ ಹೇಳಿದೆ. ಎಂಥ ವಂಚಕ ನಡೆ? ಎಂದು ಪ್ರಶ್ನಿಸಿದ್ದಾರೆ.

ಲಸಿಕೆಗಾಗಿ ₹100 ಕೋಟಿ ಕೊಟ್ಟಿದ್ದಾಗಿ ಕಾಂಗ್ರೆಸ್‌ ಹೇಳುತ್ತಿದೆ. ಇದೇನು ಸಿದ್ದರಾಮಯ್ಯನವರ ಮನೆ ಗಂಟೇ? ಕಾಂಗ್ರೆಸ್‌ ಜನಪ್ರತಿನಿಧಿಗಳ ಕ್ಷೇತ್ರಾಭಿವೃದ್ಧಿ ನಿಧಿಯಲ್ಲವೇ? ಕ್ಷೇತ್ರಾಭಿವೃದ್ಧಿ ನಿಧಿಯನ್ನು ಸರ್ಕಾರಕ್ಕೇ ನೀಡಿರುವುದಾಗಿ ಹೇಳಬೇಕಿದ್ದ ಕಾಂಗ್ರೆಸ್‌, ಲಸಿಕೆಗಾಗಿ ಕೈಯಿಂದ 100 ಕೋಟಿ ಕೊಟ್ಟಂತೆ ಹೇಳಿದೆ. ಎಂಥ ವಂಚಕ ನಡೆ?
10/11

— H D Kumaraswamy (@hd_kumaraswamy) May 20, 2021

ನಾನು ದೇವೇಗೌಡರ ಸಲಹೆ ಪಡೆದುಕೊಳ್ಳುವುದು ಒಳ್ಳೆಯದು ಎಂದು ನೀವು ಹೇಳಿದ್ದೀರಿ. ದೇವೇಗೌಡರ ಸಲಹೆಯಂತೇ ನಾನು ಸೇರಿದಂತೆ ಪಕ್ಷ ನಡೆಯುತ್ತೇವೆ. ಅದನ್ನು ಹೇಳುತ್ತಿರುವ ತಾವು ಗೌಡರ ಸಲಹೆಯಂತೆ ನಡೆದುಕೊಂಡಿದ್ದೀರೇ ಸಿದ್ದರಾಮಯ್ಯನವರೇ ಹೇಳಲು ಬಹಳಷ್ಟಿದೆ. ನಾನು ಸುಳ್ಳಾಡಲಾರೆ. ಅದು ನಿಮಗೆ ಹೇಗೆ ಕಾಣುತ್ತದೆ ಎಂಬುದು ನನಗೆ ಅಪ್ರಸ್ತುತ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ನಾನು ದೇವೇಗೌಡರ ಸಲಹೆ ಪಡೆದುಕೊಳ್ಳುವುದು ಒಳ್ಳೆಯದು ಎಂದು ನೀವು ಹೇಳಿದ್ದೀರಿ. ದೇವೇಗೌಡರ ಸಲಹೆಯಂತೇ ನಾನು ಸೇರಿದಂತೆ ಪಕ್ಷ ನಡೆಯುತ್ತೇವೆ. ಅದನ್ನು ಹೇಳುತ್ತಿರುವ ತಾವು ಗೌಡರ ಸಲಹೆಯಂತೆ ನಡೆದುಕೊಂಡಿದ್ದೀರೇ? ಸಿದ್ದರಾಮಯ್ಯನವರೇ ಹೇಳಲು ಬಹಳಷ್ಟಿದೆ. ನಾನು ಸುಳ್ಳಾಡಲಾರೆ. ಅದು ನಿಮಗೆ ಹೇಗೆ ಕಾಣುತ್ತದೆ ಎಂಬುದು ನನಗೆ ಅಪ್ರಸ್ತುತ.
11/11

— H D Kumaraswamy (@hd_kumaraswamy) May 20, 2021

TAGGED:bengalurucongressPublic TVsiddaramaiahtweetಎಚ್.ಡಿ ಕುಮಾರ ಸ್ವಾಮಿಕಾಂಗ್ರೆಸ್ಟ್ವೀಟ್ಪಬ್ಲಿಕ್ ಟಿವಿ HD Kumaraswamyಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories
Kantara 2 1
ಕಾಂತಾರದಲ್ಲಿ ಕಾಣಿಸಲಿದ್ದಾರೆ ಸೂಪರ್‌ಸ್ಟಾರ್!
Cinema Latest
Coolie 2
ಸೂಪರ್‌ಸ್ಟಾರ್ ರಜನಿಕಾಂತ್ ಕೂಲಿಗೆ ಭಾರಿ ಡಿಮ್ಯಾಂಡ್
Bollywood Cinema Latest South cinema Top Stories
dulquer salmaan dq41
ದುಲ್ಕರ್ ಸಲ್ಮಾನ್ ಹೊಸ ಚಿತ್ರಕ್ಕೆ ಚಾಲನೆ : ನಟ ನಾನಿ ಸಾಥ್
Cinema Latest Top Stories

You Might Also Like

team india
Cricket

1 ಜಯ, 12 ಅಂಕ ಪಡೆದು ಮೂರನೇ ಸ್ಥಾನಕ್ಕೆ ಭಾರತ ಹೈಜಂಪ್‌!

Public TV
By Public TV
2 hours ago
big bulletin 04 August 2025 part 1
Big Bulletin

ಬಿಗ್‌ ಬುಲೆಟಿನ್‌ 04 August 2025 ಭಾಗ-1

Public TV
By Public TV
2 hours ago
Narendra Modi Donald Trump
Latest

ನೀವು ರಷ್ಯಾದಿಂದ ಆಮದು ಮಾಡಬಹುದು, ನಾವು ಮಾಡಿದ್ರೆ ಯುದ್ಧಕ್ಕೆ ಫಂಡಿಂಗ್‌ ಹೇಗೆ: ಟ್ರಂಪ್‌ಗೆ ಭಾರತದ ಗುದ್ದು

Public TV
By Public TV
2 hours ago
big bulletin 04 August 2025 part 2
Big Bulletin

ಬಿಗ್‌ ಬುಲೆಟಿನ್‌ 04 August 2025 ಭಾಗ-2

Public TV
By Public TV
2 hours ago
big bulletin 04 August 2025 part 3
Big Bulletin

ಬಿಗ್‌ ಬುಲೆಟಿನ್‌ 04 August 2025 ಭಾಗ-3

Public TV
By Public TV
2 hours ago
Kolar Rain
Bidar

ಕೋಲಾರ ಜಿಲ್ಲೆಯಾದ್ಯಂತ ಉತ್ತಮ ಮಳೆ – ರೈತರ ಮೊಗದಲ್ಲಿ ಮಂದಹಾಸ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?