Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಸ್.ಟಿ.ಸೋಮಶೇಖರ್ ಕಾರ್ಯ ಶ್ಲಾಘನೀಯ: ನಟ ಉಪೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಸ್.ಟಿ.ಸೋಮಶೇಖರ್ ಕಾರ್ಯ ಶ್ಲಾಘನೀಯ: ನಟ ಉಪೇಂದ್ರ

Bengaluru City

ಎಸ್.ಟಿ.ಸೋಮಶೇಖರ್ ಕಾರ್ಯ ಶ್ಲಾಘನೀಯ: ನಟ ಉಪೇಂದ್ರ

Public TV
Last updated: May 20, 2021 6:39 pm
Public TV
Share
4 Min Read
upendra 2 1
SHARE

– ಸಚಿವರ ವೈಯಕ್ತಿಕ 1 ಲಕ್ಷ ರೂ. ಆರ್ಥಿಕ ಸಹಾಯಕ್ಕೆ ಮೆಚ್ಚುಗೆ
– ಎರಡನೇ ಅಲೆ ಬಗ್ಗೆ ಎಚ್ಚರವಹಿಸಿ- ಸೋಮಶೇಖರ್ ಕರೆ

ಬೆಂಗಳೂರು: ಕೋವಿಡ್-19ನ ಈ ಸಂದರ್ಭದಲ್ಲಿ ಜನ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಜನರಿಗೆ ಯಶವಂತಪುರ ವಿಧಾನಸಭಾ ಕ್ಷೇತ್ರದ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. ಇದು ಎಲ್ಲರಿಗೂ ಮಾದರಿಯಾಗಿದೆ ಎಂದು ಖ್ಯಾತ ನಟ, ನಿರ್ದೇಶಕರಾದ ಉಪೇಂದ್ರ ಅವರು ಹೇಳಿದರು.

upendra 4

ಕುಂಬಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೃಪಪಟ್ಟ ಕುಟುಂಬಗಳಿಗೆ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ವೈಯಕ್ತಿಕವಾಗಿ ಕೊಡಮಾಡುವ ತಲಾ ರೂ.1 ಲಕ್ಷಗಳ ಪರಿಹಾರವನ್ನು ನೀಡಿ ಮಾತನಾಡಿದ ಉಪೇಂದ್ರ ಅವರು, ಸೋಮಶೇಖರ್ ಅವರು ಕೊಟ್ಟಿದ್ದು ತನಗೆ, ಬಚ್ಚಿಟ್ಟಿದ್ದು ಪರರಿಗೆ ಎಂಬ ಮಾತನ್ನು ಸುಳ್ಳು ಮಾಡುತ್ತಿದ್ದಾರೆ. ಅವರು ಯಾವುದನ್ನೂ ಬಚ್ಚಿಡುತ್ತಿಲ್ಲ. ತಮ್ಮಲ್ಲಿರುವುದನ್ನು ಎಲ್ಲರಿಗೂ ಹಂಚುವ ಮೂಲಕ ಎಲ್ಲರಿಗೂ ಮಾದರಿಯಾಗಿ ನಡೆಯುತ್ತಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ಇಂದು ಜಗತ್ತಿಗೇ ಕೊರೋನಾ ಮಹಾಮಾರಿ ಬಂದಿದ್ದು, ಮಾನವೀಯತೆಗೆ ಮತ್ತು ಮನುಷ್ಯತ್ವಕ್ಕೆ ನಾವು ಬೆಲೆ ಕೊಡಬೇಕಿದೆ. ಮನುಷ್ಯತ್ವವನ್ನು ಪರೀಕ್ಷೆ ಮಾಡುವ ಸಮಯ ಇದಾಗಿದೆ. ಈ ನಿಟ್ಟಿನಲ್ಲಿ ಸಚಿವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಕೊರೊನಾ ಬಗ್ಗೆ ಯಾರಿಗೂ ಭಯ ಬೇಡ, ಎಲ್ಲರೂ ವ್ಯಾಕ್ಸಿನೇಶನ್ ಹಾಕಿಸಿಕೊಳ್ಳಬೇಕು. ಇದರಿಂದ ನಿಮಗೆ ಧೈರ್ಯಬರುವುದಲ್ಲದೆ, ರೋಗನಿರೋಧಕ ಶಕ್ತಿ ಹೆಚ್ಚಲಿದೆ. ಶುಚಿಯಾಗಿರುವುದಲ್ಲದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಸದಾ ಧನಾತ್ಮಕ ಚಿಂತನೆಯನ್ನು ಮಾಡಬೇಕು. ಯಾರೂ ಸಹ ಎದೆಗುಂದಬಾರದು ಎಂದು ಉಪೇಂದ್ರ ಅವರು ಸಲಹೆ ನೀಡಿದರು.

upendra 3 1

ಎರಡನೇ ಅಲೆ ಬಗ್ಗೆ ಎಚ್ಚರವಹಿಸಿ-ಸೋಮಶೇಖರ್ ಕರೆ
ಈ ಸಂದರ್ಭದಲ್ಲಿ ಮಾತನಾಡಿದ ಎಸ್.ಟಿ. ಸೋಮಶೇಖರ್ ಅವರು, ಈ ಬಾರಿ ಕೊರೊನಾ ಎರಡನೇ ಅಲೆ ಬಹಳ ವೇಗವಾಗಿ ಬೆಳೆಯುತ್ತಿದೆ. ಮೊದಲ ಅಲೆಗಿಂತ ಹೆಚ್ಚಾಗಿ ಸಾವು-ನೋವುಗಳಾಗುತ್ತಿದೆ. ಇದಕ್ಕಾಗಿ ನಾವು ಅನೇಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ನಮ್ಮ ಕ್ಷೇತ್ರದಲ್ಲಿ ಇತ್ತೀಚೆಗೆ ಮೂರ್ನಾಲ್ಕು ಕಡೆ ಟ್ರಯಾಜ್ ಸೆಂಟರ್ ಅನ್ನು ತೆರೆದಿದ್ದೇವೆ. ಇಲ್ಲಿಗೆ ಸೋಂಕಿತರು ಭೇಟಿ ನೀಡಿದರೆ, ಅಲ್ಲಿ ವೈದ್ಯರು ಯಾವ ರೀತಿಯ ಚಿಕಿತ್ಸೆಯ ಅವಶ್ಯಕತೆ ಇದೆ ಎಂಬುದನ್ನು ಸೂಚಿಸುತ್ತಾರೆ. ಮನೆಯಲ್ಲಿದ್ದು ಚಿಕಿತ್ಸೆ ಪಡೆಯಬಹುದಾ ? ಆಸ್ಪತ್ರೆಗೆ ದಾಖಲಾಗಬೇಕಾ? ಆಕ್ಸಿಜನ್ ಅಗತ್ಯವಿದೆಯೇ? ಎಂಬಿತ್ಯಾದಿಗಳನ್ನು ಪರೀಕ್ಷಿಸಿ ಮಾಹಿತಿಯನ್ನು ಕೊಡಲಿದ್ದಾರೆ ಎಂದು ತಿಳಿಸಿದರು.

ಜನಸೇವಾ ಕೇಂದ್ರದಲ್ಲಿ ನಿರ್ಮಲ್ ಜೀ ಅವರು 100 ಬೆಡ್ ವ್ಯವಸ್ಥೆ ಮಾಡಿದ್ದು, ಮಧ್ಯಾಹ್ನದ ಊಟ, ಮೆಡಿಸಿನ್ ಸೇರಿದಂತೆ ಎಲ್ಲ ಸೌಕರ್ಯಗಳನ್ನು ಇಲ್ಲಿ ಮಾಡಲಾಗಿದ್ದು, ಇನ್ನು ಮನೆಯಲ್ಲಿ ಯಾರಾದರೊಬ್ಬರಿಗೆ ಸೋಂಕು ತಗುಲಿದರೆ, ಮನೆಯವರಿಗೆ ಬರಬಾರದು ಎಂಬ ದೃಷ್ಟಿಯಿಂದ ಇಲ್ಲಿಗೆ ಬಂದು ದಾಖಲಾಗಬಹುದು. ಇಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗಿದೆ. ಎಲ್ಲರೂ ಇಲ್ಲಿ ಗುಣಮುಖರಾಗಿ ವಾಪಸ್ ಬರುತ್ತಿದ್ದಾರೆ ಎಂದು ತಿಳಿಸಿದರು.

swamiji

ಕೋವಿಡ್ ಯಾರಿಗೇ ಬಂದರೂ ಮುಚ್ಚಿಡಬೇಡಿ. ಧೈರ್ಯವಾಗಿ ಹೇಳಿಕೊಳ್ಳಿ, ಕೋವಿಡ್ ಬಂದು ವಿಕೋಪಕ್ಕೆ ಹೋದರೆ ಯಾರೂ ರಕ್ಷಣೆ ಮಾಡಲಾಗದು. ಹೀಗಾಗಿ ಕೋವಿಡ್ ಕೇರ್ ಸೆಂಟರ್, ಟ್ರಯಾಜ್ ಗಳನ್ನು ಬಳಸಿಕೊಳ್ಳಬೇಕು. ಖಾಸಗಿ ಆಸ್ಪತ್ರೆಗಳಿಂದಲೂ ಸರ್ಕಾರಿ ಬೆಡ್ ಗಳನ್ನು ಪಡೆಯುತ್ತಿದ್ದೇವೆ. ಐಸಿಯುಗಳಲ್ಲಿ ವೆಂಟಿಲೇಟರ್ ಗಳು, ಆಕ್ಸಿಜನ್ ಕೊರತೆ ಇತ್ತು. ಆದಿಚುಂಚನಗಿರಿ ಮಹಾಸಂಸ್ಥಾನದ ಸ್ವಾಮೀಜಿ ಅವರ ಬಳಿ ಮನವಿ ಮಾಡಿಕೊಂಡು ಬಿಜಿಎಸ್ ಆಸ್ಪತ್ರೆಯಿಂದ 210 ಬೆಡ್ ಅನ್ನು ಹೆಚ್ಚುವರಿಯಾಗಿ ಪಡೆಯಲಾಗಿದೆ. 43 ವೆಂಟಿಲೇಟರ್ ಬೆಡ್ ಗಳ ಸೌಲಭ್ಯವೂ ಸಿಕ್ಕಿದೆ. ಹೆಚ್ಚುವರಿ ಆಕ್ಸಿಜನ್ ಸಿಲಿಂಡರ್ ಗಳ ಬೇಡಿಕೆಯನ್ನು ಇಡಲಾಗಿದ್ದು, ಅದೂ ಸಹ ಪೂರೈಕೆಯಾಗಲಿದೆ. ಖಾಸಗಿ ಆಸ್ಪತ್ರೆಯಲ್ಲಿ ದಾಖಲಾದವರಿಗೆ ನಾನು ವೈಯಕ್ತಿಕ ನೆರವು ನೀಡುತ್ತಿದ್ದೇನೆ ಎಂದು ಸಚಿವರು ತಿಳಿಸಿದರು.

ನಾವೂ ಸಹ ಮಾಸ್ಕ್, ಸ್ಯಾನಿಟೈಸರ್ ಗಳನ್ನು ಉಚಿತವಾಗಿ ಕೊಡುತ್ತಿದ್ದೇವೆ. ನಾಗರಿಕರು ಧೈರ್ಯವಾಗಿರಬೇಕು. ಸರ್ಕಾರ ಸಹ ಗ್ರಾಮ ಪಂಚಾಯಿತಿಗಳಿಗೆ 50 ಸಾವಿರ ರೂಪಾಯಿಯನ್ನು ಬಿಡುಗಡೆ ಮಾಡಿದೆ. ಇದನ್ನು ಕೋವಿಡ್ ಸಂಬಂಧಪಟ್ಟಂತೆ ಖರ್ಚು ಮಾಡಲು ಬಳಸಬಹುದಾಗಿದೆ. ಜೊತೆಗೆ ಪಂಚಾಯಿತಿ ಅಧ್ಯಕ್ಷರನ್ನೊಳಗೊಂಡ ಟಾಸ್ಕ್ ಫೋರ್ಸ್ ರಚಿಸಲು ಸಹ ಸರ್ಕಾರ ಅನುಮತಿ ನೀಡಿದೆ. ವ್ಯಾಕ್ಸಿನೇಶನ್ ಪ್ರಕ್ರಿಯೆಯನ್ನು ಸಹ ಚುರುಕುಗೊಳಿಸಲಾಗುತ್ತಿದೆ. 2 ಡೋಸ್ ಪಡೆದವರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅವರಿಗೆ ಮುಂದೆ ಅಷ್ಟಾಗಿ ಪರಿಣಾಮ ಬೀರದು. ನಮ್ಮ ಕ್ಷೇತ್ರದಲ್ಲಿ ಅಗತ್ಯ ಸೌಲಭ್ಯವನ್ನು ನೀಡಲಾಗುತ್ತಿದೆ. 45 ವರ್ಷ ಮೇಲ್ಪಟ್ಟವರಿಗೆ ಮೊದಲ ಆದ್ಯತೆ ನೀಡಿ, 2ನೇ ಡೋಸ್ ಗೆ ಪ್ರಾಧಾನ್ಯತೆ ನೀಡುತ್ತಿದ್ದೇವೆ. ಎಲ್ಲರೂ ಲಸಿಕೆ ಪಡೆಯಿರಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಗುರೂಜಿಯವರಾದ ಡಾ. ಚಂದ್ರಶೇಖರನಾಥ ಸ್ವಾಮೀಜಿ ಮತ್ತು ಜನಸೇವಾ ಕೇಂದ್ರದ ಅಧ್ಯಕ್ಷರಾದ ನಿರ್ಮಲ್ ಜೀ ಅವರು ಜೊತೆಗಿದ್ದರು.

ಮಠಾಧೀಶರಿಂದ ಸಿಕ್ಕಿತ್ತು ಚಾಲನೆ
ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಡಾ||ನಿರ್ಮಲಾನಂದನಾಥ ಸ್ವಾಮೀಜಿರವರು ಹಾಗೂ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸಾಮೀಜಿಗಳು ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ ಕೋವಿಡ್ 19 ನಿಂದ ಮೃತಪಟ್ಟ 83 ಕುಟುಂಬಗಳಿಗೆ ಸ್ಥಳೀಯ ಶಾಸಕರು ಹಾಗೂ ಸಹಕಾರ ಸಚಿವರಾದ ಶ್ರೀ ಎಸ್.ಟಿ. ಸೋಮಶೇಖರ್ ರವರು ವೈಯುಕ್ತಿಕವಾಗಿ ನೀಡುತ್ತಿರುವ ತಲಾ ರೂ.1 ಲಕ್ಷಗಳ ಪರಿಹಾರಧನ ಕಾರ್ಯಕ್ರಮಕ್ಕೆ ಈಗಾಗಲೇ ಚಾಲನೆ ನೀಡಿದ್ದಾರೆ.

swamiji 1

> ಕುಂಬಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 09 ಹಳ್ಳಿಗಳು ಬರುತ್ತವೆ.
> ಈಗಾಗಲೇ ಕುಂಬಳಗೋಡು ಗ್ರಾಮ ಪಂಚಾಯತಿಯಲ್ಲಿ ಕೋವಿಡ್ 19 ನಿಂದ ಮೃತಪಟ್ಟ 05 ಕುಟುಂಬಗಳಿಗೆ ತಲಾ ರೂ.1 ಲಕ್ಷಗಳ ಪರಿಹಾರವನ್ನು ನೀಡಲಾಗಿದೆ.
> ಇಂದು ಕೋವಿಡ್ 19 ನಿಂದ ಮೃತಪಟ್ಟ 08 ಕುಟುಂಬಗಳಿಗೆ ತಲಾ ರೂ.1 ಲಕ್ಷ ಗಳ ವಿತರಣೆ ಮಾಡಲಾಗಿದೆ.
> ಆಶಾ ಕಾರ್ಯಕರ್ತರಿಗೆ, ವಾಟರ್‍ಮನ್‍ಗಳಿಗೆ ಹಾಗೂ ಕುಂಬಳಗೋಡು ಗ್ರಾಮ ಪಂಚಾಂತಿಯಲ್ಲಿ “ಡಿ”ಗ್ರೂಪ್ ನೌಕರರಿಗೆ ಇಂದು ಫುಡ್ ಕಿಟ್ ವಿತರಣೆ ಮಾಡಲಾಗುತ್ತಿದೆ.
> ಈಗಾಗಲೇ ಹೋಂ ಐಸೋಲೇಷನ್‍ನಲ್ಲಿರುವ 250 ಕುಟುಂಬಗಳಿಗೆ ಫುಡ್ ಕಿಟ್ ವಿತರಿಸಲಾಗಿದೆ.
> ಹಳ್ಳಿಗಳಲ್ಲಿ ಕೊರೊನಾ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
> ಸ್ಯಾನಿಟೈಸರ್, ಮಾಸ್ಕ್ ಹಾಗೂ ಸಾಮಾಜಿಕ ಅಂತರ ಇವುಗಳ ಬಗ್ಗೆ ಇಲವು ಮೂಡಿಸಲಾಗುತ್ತಿದೆ
> ಕೊರೊನಾ ಬಗ್ಗೆ ಜನರಲ್ಲಿ ಧೈರ್ಯ ತುಂಬುವ ಮೂಲಕ ನಾವಿದ್ದೇವೆ ಎಂದು ಭರವಸೆ ನೀಡುವುದರ ಜೊತೆ ವೈಯಕ್ತಿಕ ನೆರವು ನೀಡುತ್ತಿದ್ದೇವೆ
>  ವಯಸ್ಕರು ಮುನ್ನೆಚ್ಚರಿಕೆ ವಹಿಸುವ ಸಂಬಂಧ ಅರಿವು ಮೂಡಿಸಲಾಗುತ್ತಿದೆ
> ಮಹಿಳೆಯರು, ಯುವಜನರು ಹಾಗೂ ಜನಪ್ರತಿನಿಧಿಗಳು ಕೊರೊನಾ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಬಗ್ಗೆ ಜನಾಂದೋಲನ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆ

TAGGED:CoronaCoronavirusCovid 19Public TVsandalwoodST Somashekarupendraಉಪೇಂದ್ರಎಸ್ ಟಿ ಸೋಮಶೇಖರ್ಕೊರೊನಾಕೋವಿಡ್ 19ಪಬ್ಲಿಕ್ ಟಿವಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Israel Iran airstrikes
Latest

ಇಸ್ರೇಲ್‌ ಏರ್‌ಸ್ಪೇಸ್‌ ಬಂದ್‌; ಏರ್‌ ಇಂಡಿಯಾ, ಇಂಡಿಗೋ ವಿಮಾನಗಳು ತುರ್ತು ಯೂ-ಟರ್ನ್‌

Public TV
By Public TV
13 minutes ago
West Bengal Pink Booth SHINING Patrol
Latest

ಚುನಾವಣೆ ಹೊತ್ತಲ್ಲೇ ಮಹಿಳಾ ಸುರಕ್ಷತೆಗೆ ಒತ್ತು – ಪ.ಬಂಗಾಳದಲ್ಲಿ ಪಿಂಕ್ ಬೂತ್, ಶೈನಿಂಗ್ ಹೆಸರಿನ ಮಹಿಳಾ ಗಸ್ತು ತಂಡಗಳ ಸ್ಥಾಪನೆ

Public TV
By Public TV
18 minutes ago
Bahrain 2
Latest

ಸೌದಿ, ಯುಎಇ, ಕತಾರ್‌ ಮೇಲೂ ಇರಾನ್‌ ಆಕ್ರಮಣ – ಗಲ್ಫ್‌ ರಾಷ್ಟ್ರಗಳಲ್ಲಿ ಎಷ್ಟು ಭಾರತೀಯರಿದ್ದಾರೆ?

Public TV
By Public TV
18 minutes ago
Iran Israel Strike
Latest

ಇರಾನ್ ಪ್ರತಿದಾಳಿ – ಇಸ್ರೇಲ್‌ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿ ಬಿಡುಗಡೆ

Public TV
By Public TV
38 minutes ago
Bahrain
Latest

Iran-Israel War | ಅಮೆರಿಕದ ನೌಕಾ ನೆಲೆಯ ಮೇಲೆ ಇರಾನ್‌ ಬ್ಯಾಲಿಸ್ಟಿಕ್ ಮಿಸೈಲ್‌ ದಾಳಿ

Public TV
By Public TV
1 hour ago
donald trump 2
Latest

ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಇಲ್ಲವೇ ಸಾವನ್ನು ಎದುರಿಸಿ: ಇರಾನ್‌ ಸೈನಿಕರಿಗೆ ಟ್ರಂಪ್‌ ವಾರ್ನಿಂಗ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?