Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಂಪು ಕೋಟೆ ಮೇಲೆ ಧ್ವಜ ಹಾರಿಸಿದವರಿಗೆ 50 ಲಕ್ಷ, ಗಲಭೆ ಯೋಜಿತ ಪಿತೂರಿ- ಪೊಲೀಸರ ಚಾರ್ಜ್ ಶೀಟ್‍ನಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೆಂಪು ಕೋಟೆ ಮೇಲೆ ಧ್ವಜ ಹಾರಿಸಿದವರಿಗೆ 50 ಲಕ್ಷ, ಗಲಭೆ ಯೋಜಿತ ಪಿತೂರಿ- ಪೊಲೀಸರ ಚಾರ್ಜ್ ಶೀಟ್‍ನಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

Latest

ಕೆಂಪು ಕೋಟೆ ಮೇಲೆ ಧ್ವಜ ಹಾರಿಸಿದವರಿಗೆ 50 ಲಕ್ಷ, ಗಲಭೆ ಯೋಜಿತ ಪಿತೂರಿ- ಪೊಲೀಸರ ಚಾರ್ಜ್ ಶೀಟ್‍ನಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

Public TV
Last updated: May 27, 2021 1:18 pm
Public TV
Share
2 Min Read
Farmers protest Red Fort 1 1
SHARE

– ಸರ್ಕಾರವನ್ನು ಮುಜುಗರಕ್ಕೀಡು ಮಾಡಲು ಗಣರಾಜ್ಯೋತ್ಸವದ ದಿನ ಆಯ್ಕೆ
– ಕೆಂಪು ಕೋಟೆ ಗಲಭೆಗೆ ನವೆಂಬರ್, ಡಿಸೆಂಬರ್ ನಲ್ಲೇ ಪಿತೂರಿ
– ಪ್ರತಿಭಟನೆಗಾಗಿಯೇ ಟ್ರ್ಯಾಕ್ಟರ್ ಖರೀದಿ

ನವದೆಹಲಿ: ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದ ರೈತರ ಪ್ರತಿಭಟನೆ ವೇಳೆ ಗಣರಾಜ್ಯೋತ್ಸವದಂದು ನಡೆದ ಕೆಂಪು ಕೋಟೆ ಗಲಭೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಚಾರ್ಜ್‍ಶೀಟ್ ಸಲ್ಲಿಸಿದ್ದು, ಇದರಲ್ಲಿ ಆಘಾತಕಾರಿ ಮಾಹಿತಿ ಹೊರ ಬಿದ್ದಿದೆ.

RepublicDay KisanTractor Rally RedFort Farmers Protest 3

ನವೆಂಬರ್, ಡಿಸೆಂಬರ್‍ನಲ್ಲೇ ಕೆಂಪು ಕೋಟೆ ಗಲಭೆಗೆ ಪಿತೂರಿ ರೂಪಿಸಲಾಗಿತ್ತು. ಸರ್ಕಾರಕ್ಕೆ ಮುಜುಗರಕ್ಕೀಡು ಮಾಡುವುದು ಗಣರಾಜ್ಯೋತ್ಸವ ದಿನದ ಆಯ್ಕೆಯ ಉದ್ದೇಶವಗಿತ್ತು. ಅಲ್ಲದೆ ಕೆಂಪು ಕೋಟೆ ಮೇಲೆ ಖಲಿಸ್ತಾನಿ ಧ್ವಜ ಹಾರಿಸಿದವರಿಗೆ ಭಾರೀ ಮೊತ್ತದ ಹಣ ನೀಡಲಾಗಿದೆ ಎಂಬ ವಿಚರಗಳು ಪೊಲೀಸರು ಸಲ್ಲಿಸಿದ ಚಾರ್ಜ್‍ನಿಂದ ಬಹಿರಂಗಗೊಂಡಿವೆ. ಅಲ್ಲದೆ ಕೆಂಪು ಕೋಟೆಯನ್ನು ವಶಪಡಿಸಿಕೊಂಡು, ಪ್ರತಿಭಟನೆಗೆ ಹೊಸ ತಾಣವನ್ನಾಗಿ ಮಾಡಿಕೊಳ್ಳುವ ಕುರಿತು ಪಿತೂರಿ ನಡೆದಿತ್ತು ಎಂದು ಸಹ ತಿಳಿದಿದೆ.

Republic Day Kisan Tractor Rally Red Fort Protest 2

ಜನವರಿ 26ರ ಗಣರಾಜ್ಯೋತ್ಸವದಂದು ನಡೆದ ಗಲಭೆಗೆ ಸಂಬಂಧಿಸಿದಂತೆ ಈಗಾಗಲೇ ಹಲವು ಜನರನ್ನು ಬಂಧಿಸಲಾಗಿದ್ದು, ಇದೀಗ ಪೊಲೀಸರು ಸಲ್ಲಿಸಿರುವ ಚಾರ್ಜ್ ಶೀಟ್ ಹಲವು ಆಘಾತಕಾರಿ ಸತ್ಯಗಳನ್ನು ಬಹಿರಂಗಪಡಿಸಿದೆ. ಇದು ಯೋಜಿತ ಪಿತೂರಿಯ ಒಂದು ಭಾಗ, ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಲು ಕೆಂಪು ಕೋಟೆಯನ್ನು ಹೊಸ ತಾಣವನ್ನಾಗಿ ಮಾಡುವ ಪಿತೂರಿ ನಡೆದಿತ್ತು ಎಂದು ಚಾರ್ಜ್‍ಶೀಟ್‍ನಲ್ಲಿ ತಿಳಿಸಲಾಗಿದೆ.

RepublicDay KisanTractor Rally RedFort Farmers Protest 4

ಈ ಯೋಜಿತ ಪಿತೂರಿಯನ್ನು ಸಫಲಗೊಳಿಸಲು ಅನೇಕ ವೃದ್ಧ ರೈತರನ್ನು ಸಹ ಸಜ್ಜುಗೊಳಿಸಲಾಗಿತ್ತು. ಸರ್ಕಾರವನ್ನು ಮುಜುಗರಕ್ಕೀಡು ಮಾಡಲು ಗಣರಾಜ್ಯೋತ್ಸವದ ದಿನವನ್ನು ಪ್ರತಿಭಟನಾ ದಿನವನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿತ್ತು ಎಂಬ ಅಂಶ ಸಹ ಚಾರ್ಜ್‍ಶೀಟ್‍ನಲ್ಲಿ ಉಲ್ಲೇಖವಾಗಿದೆ. ಮಾತ್ರವಲ್ಲದೆ ಕೆಂಪು ಕೋಟೆ ಮೇಲೆ ತಮ್ಮ ಧ್ವಜ ಹಾರಿಸುವವರಿಗೆ ದೊಡ್ಡ ಮೊತ್ತದ ಹಣ ನೀಡುವ ಭರವಸೆ ನೀಡಲಾಗಿದೆ ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ. ಅಲ್ಲದೆ ಆರೋಪಿಯೊಬ್ಬರ ಮಗಳು ಮಾಡಿದ ಕರೆ ಚಾರ್ಜ್‍ಶೀಟ್‍ನ ಒಂದು ಭಾಗವಾಗಿದ್ದು, ಆಕೆಯ ತಂದೆಗೆ 50 ಲಕ್ಷ ರೂ. ನೀಡಿರುವುದಾಗಿ ಹೇಳಿದ್ದಾಳೆ.

RED FORT

ಚಾರ್ಜ್‍ಶೀಟ್‍ನ ಪ್ರಕಾರ, 2020ರ ನವೆಂಬರ್ ಹಾಗೂ ಡಿಸೆಂಬರ್‍ನಲ್ಲೇ ಪಿತೂರಿ ನಡೆಸಲಾಗಿದ್ದು, ಈ ಸಮಯದಲ್ಲಿ ಪಂಜಾಬ್ ಹಾಗೂ ಹರಿಯಾಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಟ್ರ್ಯಾಕ್ಟರ್ ಖರೀದಿಸಲಾಗಿತ್ತು. ಪ್ರತಿಭಟನೆಗೂ ಮುಂಚಿತವಾಗಿ ಟ್ರ್ಯಾಕ್ಟರ್‍ಗಳನ್ನು ಖರೀದಿಸಿರುವುದು ಪಂಜಾಬ್‍ನಲ್ಲಿ ಭಾರೀ ಬೆಳವಣಿಗೆಯನ್ನು ಕಂಡಿದೆ ಎಂದು ಚಾರ್ಜ್‍ಶೀಟ್‍ನಲ್ಲಿ ತಿಳಿಸಲಾಗಿದೆ.

2020ರ ನವೆಂಬರ್‍ನಲ್ಲಿ ಟ್ರ್ಯಾಕ್ಟರ್ ಗಳ ಖರೀದಿ ಶೇ.43 ಹಾಗೂ ಡಿಸೆಂಬರ್‍ನಲ್ಲಿ ಶೇ.94ರಷ್ಟು ಹೆಚ್ಚಾಗಿದೆ. ಹರಿಯಾಣದಲ್ಲೂ ಮಸೂದೆಗಳನ್ನು ಪರಿಚಯಿಸಿದ ನಂತರ ಟ್ರ್ಯಾಕ್ಟರ್ ಗಳ ಖರೀದಿ ಹೆಚ್ಚಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

Farmers protest Red Fort 2

ಜನವರಿ 26ರ ಗಣರಾಜ್ಯೋತ್ಸವದಂದು ರೈತರ ಪ್ರತಿಭಟನೆ ತಾರಕಕ್ಕೇರಿತ್ತು. ಪೊಲೀಸರು ದೆಹಲಿ ಸುತ್ತುವರಿದು, ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿದರೂ ರೈತರು ಬ್ಯಾರಿಕೇಡ್‍ಗಳನ್ನು ಕಿತ್ತುಹಾಕಿ ಕೆಂಪು ಕೋಟೆ ಪ್ರವೇಶಿಸಿ, ಕೋಟೆಯನ್ನು ಸಂಪೂರ್ಣ ಧ್ವಂಸ ಮಾಡಿದ್ದರು. ಅಲ್ಲದೆ ಕೆಂಪು ಕೋಟೆ ಮೇಲಿನ ರಾಷ್ಟ್ರಧ್ವಜ ಕಿತ್ತು ಹಾಕಿ, ಖಲಿಸ್ತಾನಿ ಧ್ವಜವನ್ನು ಹಾರಿಸಿದ್ದರು. ಪೊಲೀಸರು ಲಾಠಿ ಚಾರ್ಜ್, ಟಿಯರ್ ಗ್ಯಾಸ್ ಮೂಲಕ ಗಲಭೆ ನಿಯಂತ್ರಿಸಲು ಪ್ರಯತ್ನಿಸಿದರೂ ಸಾಧ್ಯವಾಗಿರಲಿಲ್ಲ. ಪೊಲೀಸರ ಮೇಲೆಯೇ ಕಲ್ಲುಗಳನ್ನು ತೂರಲಾಗಿತ್ತು.

TAGGED:chargesheetNew DelhipolicePublic TVRed Fortrepublic dayಕೆಂಪು ಕೋಟೆಗಣರಾಜ್ಯೋತ್ಸವಚಾರ್ಜ್‍ಶೀಟ್ನವದೆಹಲಿಪಬ್ಲಿಕ್ ಟಿವಿಪೊಲೀಸರು
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
13 minutes ago
murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
19 minutes ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
47 minutes ago
Train
Bengaluru City

ಮೈಸೂರು-ಜಲ್ಪೈಗುಡಿ ಜಂಕ್ಷನ್ ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
49 minutes ago
China Xi Jinping Taiwan Opposition leader cheng Li wun
Latest

ಚೀನಾ-ತೈವಾನ್‌ ಐತಿಹಾಸಿಕ ಮಾತುಕತೆ – ಈ ಭೇಟಿಗೆ ಇಷ್ಟೊಂದು ಮಹತ್ವ ಯಾಕೆ?

Public TV
By Public TV
52 minutes ago
Rohit Sharma
Cricket

ಮುಂಬೈ ಇಂಡಿಯನ್ಸ್‌ನಲ್ಲಿ 15 ವರ್ಷ ಪೂರೈಸಿದ ರೋಹಿತ್ – ಇತಿಹಾಸ ನಿರ್ಮಿಸಿದ ಹಿಟ್‌ಮ್ಯಾನ್‌

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?