ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದಂತೆ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇರಲಿದೆ. ಉತ್ತರ ಕರ್ನಾಟಕದಲ್ಲಿ ಮಧ್ಯಾಹ್ನ ಬಿಸಿಲಿನ ತಾಪಮಾನ ಇರಲಿದ್ದು, ಸಂಜೆ ಹೊತ್ತಿಗೆ ತಂಪಿನ ವಾತಾವರಣವಿರಲಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಹೆಚ್ಚು ಸುರಿಯುವ ನಿರೀಕ್ಷೆ ಇದ್ದು, ಚಂಡಮಾರುತದ ಪ್ರಭಾವದಿಂದಾಗಿ ಮಳೆ ಬರಳಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉಳಿದಂತೆ ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಮತ್ತು ಮಡಿಕೇರಿಯಲ್ಲಿ ಗರಿಷ್ಠ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಇಂದಿನ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ ಮಾಹಿತಿ:
ಬೆಂಗಳೂರು: 32-20
ಮಂಗಳೂರು: 31-25
ಶಿವಮೊಗ್ಗ: 32-22
ಬೆಳಗಾವಿ: 30-22
ಮೈಸೂರು: 32-20
ಮಂಡ್ಯ: 33-21
ರಾಮನಗರ: 33-21
ಮಡಿಕೇರಿ: 25-18
ಹಾಸನ: 29-20
ಚಾಮರಾಜನಗರ: 33-21
ಚಿಕ್ಕಬಳ್ಳಾಪುರ: 33-21
ಕೋಲಾರ: 33-21
ತುಮಕೂರು: 33-21
ಉಡುಪಿ: 31-26
ಕಾರವಾರ: 31-27
ಚಿಕ್ಕಮಗಳೂರು: 28-19
ದಾವಣಗೆರೆ: 33-22
ಚಿತ್ರದುರ್ಗ: 33-22
ಹಾವೇರಿ: 33-22
ಗದಗ: 34-22
ಕೊಪ್ಪಳ: 36-23
ರಾಯಚೂರು: 38-26
ಯಾದಗಿರಿ: 38-27
ವಿಜಯಪುರ: 36-24
ಬೀದರ್: 36-25
ಕಲಬುರಗಿ: 37-26
ಬಾಗಲಕೋಟೆ: 36-24