ಬೆಂಗಳೂರು: ರಾಜ್ಯದಲ್ಲಿಂದು 24,214 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 31,459 ಜನರು ಗುಣಮುಖರಾಗಿದ್ದಾರೆ. ಇಂದು ಕೊರೊನಾಗೆ 476 ಸೋಂಕಿತರು ಪ್ರಾಣ ಕಳೆದುಕೊಂಡಿದ್ದು, ಇದುವರೆಗೂ ಮಹಾಮಾರಿ ರಾಜ್ಯದಲ್ಲಿ 27,405 ಜನ ಸಾವನ್ನಪ್ಪಿದ್ದಾರೆ.
ಸದ್ಯ 4,02,203 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.17.59 ಮತ್ತು ಮರಣ ಪ್ರಮಾಣ ಶೇ.1.96ರಷ್ಟಿದೆ. ಇಂದು 1,37,643 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.
ರಾಜಧಾನಿ ಬೆಂಗಳೂರಿನಲ್ಲಿ 5,949 ಹೊಸ ಪ್ರಕರಣಗಳು ವರದಿಯಾಗಿದ್ದು, ಸದ್ಯ 2,06,390 ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿಂದು 273 ಸೋಂಕಿತರು ಸಾವನ್ನಪ್ಪಿದ್ದು, 6,643 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 214, ಬಳ್ಳಾರಿ 725, ಬೆಳಗಾವಿ 1,147, ಬೆಂಗಳೂರು ಗ್ರಾಮಾಂತರ 623, ಬೆಂಗಳೂರು ನಗರ 5,949, ಬೀದರ್ 60, ಚಾಮರಾಜನಗರ 380, ಚಿಕ್ಕಬಳ್ಳಾಪುರ 238, ಚಿಕ್ಕಮಗಳೂರು 715, ಚಿತ್ರದುರ್ಗ 710, ದಕ್ಷಿಣ ಕನ್ನಡ 555, ದಾವಣಗೆರೆ 806, ಧಾರವಾಡ 678, ಗದಗ 370, ಹಾಸನ 1,505, ಹಾವೇರಿ 159, ಕಲಬುರಗಿ 153, ಕೊಡಗು 337, ಕೋಲಾರ 591, ಕೊಪ್ಪಳ 495, ಮಂಡ್ಯ 755, ಮೈಸೂರು 2,240, ರಾಯಚೂರು 445, ರಾಮನಗರ 263, ಶಿವಮೊಗ್ಗ 822, ತುಮಕೂರು 1,219, ಉಡುಪಿ 905, ಉತ್ತರ ಕನ್ನಡ 659, ವಿಜಯಪುರ 306 ಮತ್ತು ಯಾದಗಿರಿಯಲ್ಲಿ 190 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.