Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅಲೆಮಾರಿಗಳಿಗೆ ಪರಿಹಾರ, ಆಹಾರ ಪದಾರ್ಥಗಳ ಕಿಟ್ ಕೊಡುವಂತೆ ಸಿಎಂಗೆ ದ್ವಾರಕನಾಥ್ ಮನವಿ

Public TV
Last updated: June 1, 2021 4:13 pm
Public TV
Share
3 Min Read
cs dwarakanath
SHARE

ಬೆಂಗಳೂರು: ಕೊರೊನಾ ರೋಗವನ್ನು ಹತೋಟಿಗೆ ತರಲು ತಾವು ಮಾಡುತ್ತಿರುವ ಕೆಲಸದ ಬಗ್ಗೆ ನಮಗೆ ಗೌರವವಿದೆ. ಇಂತಹ ಸಂದರ್ಭದಲ್ಲಿ ತಮ್ಮ ಸರ್ಕಾರದಿಂದ ಸಂಕಷ್ಟದಲ್ಲಿ ಸಿಲುಕಿರುವ ಅಲೆಮಾರಿಗಳಿಗೆ ಪರಿಹಾರ, ಆಹಾರ ಪದಾರ್ಥಗಳ ಕಿಟ್ ಕೊಡುವಂತೆ ಸಿಎಂಗೆ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ದ್ವಾರಕನಾಥ್ ಮನವಿ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?

ಆಟೋ ಚಾಲಕರು, ವಾಹನ ಚಾಲಕರು, ಕಟ್ಟಡ ಕಾರ್ಮಿಕರಿಗೆ, ಕ್ಷೌರಿಕರು, ಮಡಿವಾಳರು, ನೇಕಾರರು ಮುಂತಾದ ಹಿಂದುಳಿದ ಸಮುದಾಯಗಳಿಗೆ, ಹಾಗೂ ಹಲವಾರು ಕಾರ್ಮಿಕ ವರ್ಗದ ಪ್ರತಿ ಕುಟುಂಬಕ್ಕೂ ನೆರವನ್ನು ಘೋಷಣೆ ಮಾಡಿರುವ ತಮ್ಮ ಕಾಳಜಿಗಾಗಿ ತಮಗೆ ವೈಯಕ್ತಿಕವಾಗಿ ರಾಜ್ಯ ಅಲೆಮಾರಿ ಬುಡಕಟ್ಟು ಮಹಾ ಸಭಾದ ವತಿಯಿಂದ ಕೃತಜ್ಞತೆಯನ್ನು ತಿಳಿಸುತ್ತೇವೆ.

corona eps

ಈ ಹಿಂದಿನ ಉಲ್ಲೇಖಿತ ಪತ್ರಗಳಲ್ಲಿ ತಿಳಿಸಿದಂತೆ ಕರ್ನಾಟಕದ ಎಲ್ಲಾ ಅಸಹಾಯಕ ಅಲೆಮಾರಿ ಸಮುದಾಯಗಳ ಪ್ರತಿನಿಧಿಯಾಗಿ ನಮ್ಮ ಅಲೆಮಾರಿಗಳ ಆಕ್ರಂದನವನ್ನು ಮತ್ತೊಮ್ಮೆ ನಿಮ್ಮ ಗಮನಕ್ಕೆ ತರುತ್ತಿದ್ದೇನೆ. ಅಲೆಮಾರಿಗಳು ಊರಾಚೆಯ ಸ್ಮಶಾನದಲ್ಲಿ, ಪಾಳುಮಂಟಪಗಳಲ್ಲಿ, ರೈಲ್ವೆ ಹಳಿಗಳ ಪಕ್ಕದಲ್ಲಿ, ಹಳೆಯ ಬಟ್ಟೆಗಳಿಂದ ಜೋಪಡಿಗಳನ್ನು ಹಾಕಿಕೊಂಡು ಊರಾಚೆ ಬದುಕುವುದರಿಂದ ಸದರಿ ಅಲೆಮಾರಿಗಳು ಯಾವ ಸರ್ಕಾರಿ ಅಧಿಕಾರಿಗಳಿಗಾಗಲಿ, ಅಥವಾ ಜನ ಪ್ರತಿನಿಧಿಗಳಿಗಾಗಲಿ ಸಾಮಾನ್ಯವಾಗಿ ಕಾಣುಸಿಗುವುದಿಲ್ಲ.

CORONA VIRUS 4

ನಮ್ಮ ಅಲೆಮಾರಿಗಳು ಊರೂರು ಅಲೆಯುತ್ತಾ ತಮ್ಮ ಕುಲ ಕಸುಬುಗಳಾದ ತೊಗಲುಗೊಂಬೆಯಾಟ, ಬೀಗ ರಿಪೇರಿ, ಛತ್ರಿ ರಿಪೇರಿ, ಗಾರುಡಿ, ಕಸರತ್ತಿನ ಕಲೆ, ದೊಂಬರಾಟ, ನಾಟಿಮದ್ದು ಮಾರುವುದು, ಸೂಜಿದಾರ, ಪಿನ್ನಮಾರುವುದು, ಕೂದಲು ಆರಿಸುವುದು, ಹಚ್ಚೆ ಹಾಕುವುದು, ಪ್ಲಾಸ್ಟಿಕ್ ವಸ್ತುಗಳ ಮಾರಾಟ, ದೇವರ ಪೆÇೀಟೋ ಮಾರುವುದು, ಶಾಸ್ತ್ರ ಹೇಳುವುದು, ಮೋಡಿ ಆಟ ಇತ್ಯಾದಿ ಪ್ರದರ್ಶನ ಕಲೆಗಳ ಸೇವೆ ಮಾಡುತ್ತಾ ಗ್ರಾಮಾಂತರ ಪ್ರದೇಶಗಳಲ್ಲಿ ಅಲೆಮಾರಿ ಜೀವನ ನಡೆಸುತ್ತಿರುತ್ತಾರೆ. ಹೀಗೆ ಅಲೆಮಾರಿಗಳಾಗಿರುವುದರಿಂದ ಇವರಿಗಾಗಲಿ, ಇವರ ಮಕ್ಕಳಿಗಾಗಲಿ ಶಿಕ್ಷಣವೆಂಬುದು ಮರೀಚಿಕೆಯಾಗಿದೆ. ಇವರಿಗೆ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಗುರುತಿನ ಚೀಟಿಯಾಗಲಿ, ಯಾವುದೇ ದಾಖಲೆಗಳಿಲ್ಲದೆ ಇರುವುದರಿಂದ ಸರ್ಕಾರ ನೀಡುವ ಏಲ್ಲಾ ನೆರವಿನಿಂದ ಅಪಾರವಾಗಿ ವಂಚಿತರಾಗುತ್ತಿದ್ದಾರೆ.

Corona 5

ಈ ಎಲ್ಲಾ ಕಾರಣಗಳಿಂದಾಗಿ ನಮ್ಮ ಅಲೆಮಾರಿಗಳಿಗೆ ಸರ್ಕಾರದಿಂದ ನೀಡುವ ಯಾವುದೇ ಹಣಕಾಸಿನ ನೆರವಾವಾಗಲಿ, ಹಾಗು ಸರ್ಕಾರದಿಂದ ವಿತರಿಸಿದ ಪಡಿತರವಾಗಲಿ ಸಿಗದೆ ಏಲ್ಲಾ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇಂತಹ ಸೌಲಭ್ಯ ವಂಚಿತ ಅಲೆಮಾರಿಗಳು ಹಸಿವಿನಿಂದ ನರಳುತ್ತಾ ಅನ್ನಕ್ಕಾಗಿ ಪರಿತಪಿಸುತ್ತಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಅಲೆಮಾರಿಗಳ ಜೀವನ ತುಂಬಾ ದುಸ್ಥಿತಿಯಲ್ಲಿದೆ ಹಾಗೂ ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದು, ಅನೇಕ ಅಲೆಮಾರಿಗಳಿಗೆ ಒಪ್ಪತ್ತಿನ ಊಟಕ್ಕೂ ಗತಿಯಿಲ್ಲದೆ ಕೊರೊನಾದಿಂದ ಸಾಯುವುದು ಒಂದುಕಡೆಯಾದರೆ ಹಸಿವಿನಿಂದ ಕೆಲವೇ ದಿನಗಳಲ್ಲಿ ಅನೇಕರು ಸಾಯುವುದರಲ್ಲಿ ಯಾವುದೇ ಸಂಶಯವಿಲ್ಲ.

CORONA VIRUS 2

ರಾಜ್ಯದ ಕೆಲವು ಕಡೆ ಈ ಅಲೆಮಾರಿಗಳಿಗೆ ಸಂಘ ಸಂಸ್ಥೆಗಳು ಅಲ್ಪ ಸ್ವಲ್ಪ ಸಹಾಯ ಮಾಡಿರುವುದನ್ನು ಬಿಟ್ಟರೆ ಬೇರೆ ಯಾವುದೇ ಜಿಲ್ಲಾಡಳಿತಗಳಾಗಲಿ, ತಾಲ್ಲೂಕು ಆಡಳಿತಗಳಾಗಲಿ ನೆರವು ನೀಡದೇ ಮೌನವಹಿಸಿವೆ. ಅಲೆಮಾರಿಗಳ ಅಭಿವೃದ್ಧಿಗಾಗಿಯೇ ಸ್ಥಾಪನೆಯಾದ ರಾಜ್ಯ ಪ.ಜಾತಿ, ಪ.ವರ್ಗದ ಅಲೆಮಾರಿ ಅಭಿವೃದ್ಧಿ ಕೋಶದಿಂದಾಗಲಿ, ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ರಾಜ್ಯ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದಾಗಲಿ ಯಾವುದೇ ನೆರವನ್ನೂ ಸಹ ಈವರೆಗೂ ನೀಡಿಲ್ಲ. ಕೊರೊನಾದಿಂದಾಗಿ ಕಳೆದ ಒಂದು ವರ್ಷದಿಂದ ಯಾವುದೇ ಬೀದಿ ಬದಿಯ ಹಾಗು ಹಳ್ಳಿ ಹಳ್ಳಿ ಸುತ್ತಿ ಸಣ್ಣಪುಟ್ಟ ವ್ಯಾಪಾರ ಗಳನ್ನು ಮಾಡಲು ಸಾಧ್ಯವಾಗದೇ ಇರುವುದರಿಂದ ಈಗ ಮನೆಗೆ ಒಂದು ಬೆಂಕಿಪೊಟ್ಟಣವನ್ನು ಸಹ ತರಲು ಸಾಧ್ಯವಾಗದ ಸ್ಥಿತಿಯಲ್ಲಿ ತುಂಬಾ ಸಂಕಷ್ಟದಲ್ಲಿ ನರಳುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ತಾವುಗಳು ನಮ್ಮ ರಾಜ್ಯದಲ್ಲಿ ಇರುವ ಏಲ್ಲಾ SC/ST, ಹಾಗು OBC ಹಾಗೂ ಅಲ್ಪಸಂಖ್ಯಾತ ಅಲೆಮಾರಿಗಳನ್ನು ಮೊನ್ನೆ ಘೋಷಿಸಿದ ವಿಶೇಷ ಪ್ಯಾಕೇಜ್ ನಲ್ಲಿ ಸೇರಿಸದಿರುವುದು ತೀರಾ ನೋವನ್ನುಂಟು ಮಾಡಿದೆ. ತಾವುಗಳು ನಮ್ಮ ಈ ಕೋರಿಕೆ ಪತ್ರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ನಮಗೆ ಈ ಕೆಳಗಿನಂತೆ ನೆರವು ನೀಡಬೇಕೆಂದು ಕೋರುತಿದ್ದೇವೆ.

corona 2 1

* ನಮ್ಮ ರಾಜ್ಯದಲ್ಲಿ ಇರುವ ಅಲೆಮಾರಿಗಳ ಪ್ರತಿ ಕುಟುಂಬಕ್ಕೂ ಸಹ 5000 ರೂ. ಗಳ ನೆರವಿನ ಹಣವನ್ನು ಅತ್ಯಂತ ತುರ್ತಾಗಿ ಬಿಡುಗಡೆ ಮಾಡಬೇಕು.
*ಸಂಪೂರ್ಣ ಅಡುಗೆ ಪದಾರ್ಥಗಳಿರುವ ಆಹಾರ ಸಾಮಗ್ರಿಗಳ ಕಿಟ್‍ಗಳನ್ನು ಕೂಡಲೆ ವಿತರಿಸಲು ತಾವುಗಳು ಕ್ರಮ ಕೈಗೊಂಡು ನೊಂದ ಅಲೆಮಾರಿಗಳಿಗೆ ನೆರವಾಗಬೇಕೆಂದು ರಾಜ್ಯ ಅಲೆಮಾರಿ ಬುಡಕಟ್ಟು ಮಹಾ ಸಭಾ( ರಿ)ದ ವತಿಯಿಂದ ನಿವೇದಿಸುತ್ತೇನೆ.

TAGGED:BangaloreCorona. AppealCS DwarkanathhelpPublic TVಕಿಟ್ಕೊರೊನಾ. ಮನವಿದ್ವಾರಕನಾಥ್ಪಬ್ಲಿಕ್ ಟಿವಿಬೆಂಗಳೂರುಸಹಾಯ
Share This Article
Facebook Whatsapp Whatsapp Telegram

Cinema news

Sushmita Bhat
ಕರಾವಳಿ ಟೀಮ್ ಸೇರಿಕೊಂಡ ನಟಿ ಸುಷ್ಮಿತಾ ಭಟ್
Cinema Latest Sandalwood Top Stories
Nadubettu Appanna
ಕೋಲ್ಕತ್ತಾ ಸಿನಿಮೋತ್ಸವಕ್ಕೆ ನಡುಬೆಟ್ಟು ಅಪ್ಪಣ್ಣ; ಶರಧಿ ಡೈರೆಕ್ಟರ್
Cinema Latest Sandalwood Top Stories
Risha Gowda
ಗಿಲ್ಲಿಗೆ ಹೊಡೆದಿದ್ದಕ್ಕೆ ರಿಷಾಗೆ ಪಶ್ಚಾತ್ತಾಪ ಆಯ್ತಾ..?
Cinema Latest Top Stories TV Shows
bigg boss kannada 12
ಬಿಗ್‌ ಬಾಸ್‌ ಅರಮನೆಯಲ್ಲಿ ಸ್ಪೆಷಲ್‌ ಗೆಸ್ಟ್‌ಗಳ ದರ್ಬಾರ್‌; ಪಾರ್ಟಿ ಮಾಡೋಕೆ ಬಂದಿದ್ದಾರೆ ಮಾಜಿ ಸ್ಪರ್ಧಿಗಳು
Cinema Latest Top Stories TV Shows

You Might Also Like

Himanta Biswa Sarma
Latest

ಜುಬೀನ್ ಗಾರ್ಗ್ ಸಾವು – ಇದು ಆಕಸ್ಮಿಕವಲ್ಲ, ಕೊಲೆ: ಹಿಮಂತ ಬಿಸ್ವಾ ಶರ್ಮಾ ಸ್ಫೋಟಕ ಹೇಳಿಕೆ

Public TV
By Public TV
8 minutes ago
H Vishwanath
Bengaluru City

ಸಿದ್ದರಾಮಯ್ಯ ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು: ಹೆಚ್.ವಿಶ್ವನಾಥ್

Public TV
By Public TV
10 minutes ago
Siddaramaiah 15
Bengaluru City

ಶಾಸಕರು ದೆಹಲಿಗೆ ಹೋಗಿ ಅಭಿಪ್ರಾಯ ಹೇಳಲು ಸ್ವಾತಂತ್ರ್ಯವಿದೆ: ಸಿಎಂ

Public TV
By Public TV
30 minutes ago
CRIME
Latest

ಭಾರತಕ್ಕೆ ಅಕ್ರಮ ಪ್ರವೇಶ ಮಾಡಿ ಸೂಕ್ಷ್ಮ ಪ್ರದೇಶಗಳ ಚಿತ್ರೀಕರಿಸುತ್ತಿದ್ದ ಚೀನಾ ಪ್ರಜೆ ಬಂಧನ

Public TV
By Public TV
1 hour ago
Dharmasthala Chinnayya 2
Court

ಧರ್ಮಸ್ಥಳ ಬುರುಡೆ ಕೇಸ್‌ – ಚಿನ್ನಯ್ಯನಿಗೆ ಜಾಮೀನು ಮಂಜೂರು

Public TV
By Public TV
2 hours ago
Basavaraj rayreddy Siddaramaiah
Koppal

ನೀವ್ ನೀವೆ ಅಗ್ರಿಮೆಂಟ್ ಮಾಡಿಕೊಂಡರೆ ಇದೇನು ಕಾಂಟ್ರಾಕ್ಟಾ?- ಕುರ್ಚಿ ಕದನದಲ್ಲಿ ಸಿಎಂ ಪರ ರಾಯರೆಡ್ಡಿ ಬ್ಯಾಟಿಂಗ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?