Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಲ್ಲೇಶ್ವರದಲ್ಲಿ ದಲಿತರಿಗೆ ಲಸಿಕೆ ನಿರಾಕರಣೆ: ಹರಿಪ್ರಸಾದ್ ಆರೋಪ ಶುದ್ಧ ಸುಳ್ಳೆಂದ ಡಿಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಲ್ಲೇಶ್ವರದಲ್ಲಿ ದಲಿತರಿಗೆ ಲಸಿಕೆ ನಿರಾಕರಣೆ: ಹರಿಪ್ರಸಾದ್ ಆರೋಪ ಶುದ್ಧ ಸುಳ್ಳೆಂದ ಡಿಸಿಎಂ

Bengaluru City

ಮಲ್ಲೇಶ್ವರದಲ್ಲಿ ದಲಿತರಿಗೆ ಲಸಿಕೆ ನಿರಾಕರಣೆ: ಹರಿಪ್ರಸಾದ್ ಆರೋಪ ಶುದ್ಧ ಸುಳ್ಳೆಂದ ಡಿಸಿಎಂ

Public TV
Last updated: June 2, 2021 8:47 pm
Public TV
Share
2 Min Read
ashwath narayan 1
SHARE

– ಲಸಿಕೆ ಅಭಿಯಾನ ಹಳಿತಪ್ಪಿಸುವುದೇ ಅವರ ದುರುದ್ದೇಶ

ಬೆಂಗಳೂರು: ನಗರದ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಜಾತಿ ಆಧಾರದ ಮೇಲೆ ಲಸಿಕೆ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾಡಿರುವ ಆರೋಪವನ್ನು ಕ್ಷೇತ್ರದ ಶಾಸಕರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇದೊಂದು ಬೇಜವಾಬ್ದಾರಿ ಹೇಳಿಕೆ. ಅವರಿಗೆ ಜಾತಿ- ಧರ್ಮದ ಹೆಸರೇಳದಿದ್ದರೆ ನಿದ್ದೆಯೂ ಬರಲ್ಲ. ರಾಜ್ಯದಲ್ಲಿ ಯಶಸ್ವಿಯಾಗಿ ನಡೆಯುತ್ತಿರುವ ಲಸಿಕೆ ಅಭಿಯಾನವನ್ನು ಹೇಗಾದರೂ ಹಳಿತಪ್ಪಿಸಬೇಕು ಎಂಬ ಷಡ್ಯಂತ್ರ ಅವರು ಇಟ್ಟುಕೊಂಡಿರುವಂತಿದೆ ಎಂದು ತರಾಟೆಗೆ ತೆಗೆದುಕೊಂಡರು.

ಲಸಿಕೆಯ ವಿಚಾರದಲ್ಲಿ ಆರಂಭದಿಂದಲೂ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್, ಇದೀಗ ಆದ್ಯತೆಯ ಗುಂಪು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ನಡೆಸುತ್ತಿರುವ ಲಸಿಕಾಕರಣದಲ್ಲೂ ಜಾತಿಯ ಲೆಕ್ಕಾಚಾರ ಮಾಡುತ್ತಿರುವುದು ವಿಪರ್ಯಾಸ.

ಮಲ್ಲೇಶ್ವರದಲ್ಲಿ 9000ಕ್ಕೂ ಹೆಚ್ಚಿನ ಲಸಿಕಾಕರಣ ನಡೆದಿದ್ದು, ಯಾವುದೇ ವರ್ಗದ ಜಾತಿ, ಧರ್ಮದ ಪ್ರಶ್ನೆಯೇ ಎದ್ದಿಲ್ಲ.

2/4

— Dr. C.N. Ashwath Narayan (@drashwathcn) June 2, 2021

ಲಸಿಕೆಯಲ್ಲಿ ಜಾತಿ ತರುವ ಕೆಲಸವನ್ನು ನಾನಾಗಲಿ ಅಥವಾ ನಮ್ಮ ಪಕ್ಷವಾಗಲಿ ಮಾಡಿಲ್ಲ. ಅಂಥ ಯಾವುದೇ ಘಟನೆ ಕ್ಷೇತ್ರದಲ್ಲಿ ನಡೆದಿಲ್ಲ. ಯಾರಿಗೂ ಲಸಿಕೆ ನಿರಾಕರಿಸಿಲ್ಲ” ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಅಂಕಿ- ಅಂಶ ಕೊಟ್ಟ ಡಿಸಿಎಂ:
ದಾನಿಗಳ ನೆರವಿನಿಂದ ಮುಕ್ತ ಮಾರುಕಟ್ಟೆಯಲ್ಲಿ ಲಸಿಕೆ ಖರೀದಿ ಮಾಡಿ ಕೊಳೆಗೇರಿಗಳಲ್ಲಿ ವಾಸಿಸುವ 1,000ಕ್ಕೂ ಹೆಚ್ಚು ಬಡವರಿಗೆ, ಆರ್ಥಿಕ ದುರ್ಬಲರಿಗೆ ಲಸಿಕೆ ಕೊಡಿಸಿದ್ದೇನೆ. ಅಲ್ಲದೆ 9,000 ಜನರಿಗೆ ಲಸಿಕೆ ನೀಡಲಾಗಿದೆ. ಇದರಲ್ಲಿ ಕ್ಷೇತ್ರದ 7 ಸ್ಲಂಗಳ ಜನರೇ ಹೆಚ್ಚು ಇದ್ದಾರೆ. ಸತ್ಯ ಅರ್ಥ ಮಾಡಿಕೊಳ್ಳದೆ ಸುಳ್ಳು ಆರೋಪ ಮಾಡುವುದು ಎಷ್ಟು ಸರಿ ಎಂದು ಡಾ.ಅಶ್ವತ್ಥನಾರಾಯಣ ಪ್ರಶ್ನೆ ಮಾಡಿದರು.

ಸ್ವತಃ ಸ್ಲಂಗಳಿಗೆ ಭೇಟಿ ನೀಡಿ, ಮುಂಚೂಣಿ ಕಾರ್ಯಕರ್ತರಿಗೆ, ಆದ್ಯತೆಯ ಗುಂಪಿನವರಿಗೆ ಲಸಿಕೆ ನೀಡಲಾಗಿದೆ. ಕಾರ್ಮಿಕರು, ಚಾಲಕರು, ಮೆಡಿಕಲ್ ಸೇವೆಯಲ್ಲಿರುವವರು, ದಿವ್ಯಾಂಗರು, ಬೀದಿ ವ್ಯಾಪಾರಿಗಳು ಹೀಗೆ ಯಾರಿಗೆ ಸೋಂಕು ತಗುಲುವ ಸಾಧ್ಯತೆ ಜಾಸ್ತಿ ಇದೆ, ಅವರಿಗೆ ಲಸಿಕಾಕರಣ ನಡೆಸಿದ್ದೇವೆ. ಅದಕ್ಕೆ ನಮ್ಮ ಕಾರ್ಯಕರ್ತರ ಮೇಲೆ ಹೆಮ್ಮೆಯೂ ಇದೆ.

3/4

— Dr. C.N. Ashwath Narayan (@drashwathcn) June 2, 2021

ಮಲ್ಲೇಶ್ವರದ ಬಾಲಕಿಯರ ಪ್ರೌಢಶಾಲೆಯಲ್ಲಿ ಮಂಗಳವಾರ ದಲಿತರಿಗೆ ಲಸಿಕೆ ನಿರಾಕರಿಸಲಾಗಿದೆ ಎಂದು ಹರಿಪ್ರಸಾದ್ ದೂರಿದ್ದಾರೆ. ಇದು ಶುದ್ಧ ಸುಳ್ಳು. ಅಂದು, ಮುಂಚೂಣಿ ಕಾರ್ಯಕರ್ತರು ಹಾಗೂ ಆದ್ಯತಾ ಗುಂಪಿನ ಜನರೂ, ಅವರ ಆರೈಕೆ ಮಾಡುವವರಿಗೆ ಲಸಿಕೆ ನೀಡಲಾಗುತ್ತಿತ್ತು. ಸರ್ಕಾರ ಹೊರಡಿಸಿರುವ ಈ ಮಾರ್ಗಸೂಚಿ ಪ್ರಕಾರ ಯಾರೇ ಬಂದರೂ ಲಸಿಕೆ ಹಾಕಿ ಕಳಿಸಲಾಗುತ್ತಿದೆ. ಪ್ರತಿಯೊಬ್ಬರ ಆಧಾರ್ ಸಂಖ್ಯೆ ದಾಖಲಿಸಿಕೊಂಡು ವ್ಯಾಕ್ಸಿನ್ ನೀಡಲಾಗುತ್ತಿದೆ. ಇಷ್ಟಕ್ಕೂ ಆಧಾರ್ ಕಾರ್ಡ್ ಮೇಲೆ ಜಾತಿ ನಮೂದಾಗಿರುವುದಿಲ್ಲ ಎಂಬ ಅಂಶವನ್ನು ಹರಿಪ್ರಸಾದ್ ಗಮನಿಸಬೇಕು ಎಂದು ಉಪ ಮುಖ್ಯಮಂತ್ರಿ ತಿರುಗೇಟು ಕೊಟ್ಟರು.

BK Hariprasad

ವೈರಸ್‍ಗೆ ಜಾತಿ- ಧರ್ಮದ ಹಂಗಿಲ್ಲ. ಅದೇ ರೀತಿ ವ್ಯಾಕ್ಸಿನ್‍ಗೆ ಇರುವುದಿಲ್ಲ. ಇದನ್ನು ಹರಿಪ್ರಸಾದ್ ಅವರು ಅರ್ಥ ಮಾಡಿಕೊಳ್ಳಬೇಕು. ಸಂಕಷ್ಟದ ಸಮಯದಲ್ಲಿ ಅವರು ಸರಕಾರಕ್ಕೆ ಸಲಹೆಗಳನ್ನು ನೀಡಿ ಉತ್ತೇಜಿಸಬೇಕೆ ಹೊರತು ಆಗುತ್ತಿರುವ ಕೆಲಸದಲ್ಲಿ ಕಲ್ಲು ಹುಡುಕಿ ನೈತಿಕ ಸ್ಥೈರ್ಯ ಕುಗ್ಗಿಸಬಾರದು. ಇಂಥ ಸೂಕ್ಷ್ಮ ವಿಷಯಗಳಲ್ಲಿ ಜಾತಿ-ಧರ್ಮದಂಥ ಸೂಕ್ಷ್ಮ ಸಂಗತಿಗಳನ್ನು ತರಬಾರದು. ಇವರಿಗೆ ನಾಚಿಕೆಯಾಗಬೇಕು. ಜನ ಪಾಠ ಕಲಿಸಿದ್ದರೂ ಇವರಿಗೆ ಬುದ್ಧಿ ಬಂದಿಲ್ಲ. ಹಾಗಾದರೆ ಇವರ ಪ್ರಕಾರ ಅರ್ಚಕರಿಗೆ ಲಸಿಕೆ ಕೊಡುವ ಹಾಗಿಲ್ಲವೆ? ಎಂದು ಡಿಸಿಎಂ ತರಾಟೆಗೆ ತೆಗೆದುಕೊಂಡರು.

TAGGED:Ashwaththa NarayanCorona VaccineCorona VirusCovid19HariprasadMalleswaraPublic TVಅಶ್ವತ್ಥ ನಾರಾಯಣ್ಕೊರೊನಾ ವೈರಸ್ಕೊರೊನಾ ವ್ಯಾಕ್ಸಿನ್ಕೋವಿಡ್ 19ಪಬ್ಲಿಕ್ ಟಿವಿಮಲ್ಲೇಶ್ವರಂಹರಿಪ್ರಸಾದ್
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Bidar Food Poison
Bidar

ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಮಂದಿ ಅಸ್ವಸ್ಥ

Public TV
By Public TV
46 seconds ago
uranium.jpg
Latest

ಇರಾನ್‌ನ ಯುರೇನಿಯಂ ಮೇಲೆ ಟ್ರಂಪ್‌ ಕಣ್ಣಿಟ್ಟಿದ್ದೇಕೆ? – 32 ವರ್ಷಗಳ ಹಿಂದಿನ ʻಸಫೈರ್ʼ ಸೀಕ್ರೆಟ್ ಆಪರೇಷನ್ ರಿಪೀಟ್ ಆಗುತ್ತಾ?

Public TV
By Public TV
4 minutes ago
Manipur Home Bomb Attack
Crime

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ, ತಾಯಿಗೆ ಗಾಯ

Public TV
By Public TV
6 minutes ago
DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆಯಿದೆ, ಇವತ್ತೇ ಆಗ್ತಾರೆ ಅಂತ ಹೇಳಿದ್ನಾ?: ಡಿಕೆಸು ತಿರುಗೇಟು

Public TV
By Public TV
8 minutes ago
2nd PUC Exam
Bagalkot

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟ

Public TV
By Public TV
20 minutes ago
Chikkamagaluru Suicide 2
Chikkamagaluru

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

Public TV
By Public TV
33 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?