Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

1 ಲಕ್ಷ ದಿನಸಿ ಕಿಟ್ ವಿತರಿಸಿದ ಭೈರತಿ ಬಸವರಾಜ್

Public TV
Last updated: June 4, 2021 6:12 pm
Public TV
Share
2 Min Read
bhairati basavaraj
SHARE

ಬೆಂಗಳೂರು: ಲಾಕ್‍ಡೌನ್ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿರುವ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಬಡವರು, ಶ್ರಮಿಕ ವರ್ಗದವರು, ಕೂಲಿ ಕಾರ್ಮಿಕರಿಗೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ತಮ್ಮ ಕ್ಷೇತ್ರದ ಒಂದು ಲಕ್ಷ ಕುಟುಂಬಗಳಿಗೆ ಆಹಾರ ಪದಾರ್ಥಗಳ ದಿನಸಿ ಕಿಟ್ ವಿವರಿಸಿದರು.

ಕೆ.ಆರ್.ಪುರ ಕ್ಷೇತ್ರದ ಕೊತ್ತನೂರಿನ ನಂಜುಂಡೇಶ್ವರ ಕಲ್ಯಾಣ ಮಂಟಪದಲ್ಲಿ ದಿನಸಿ ಕಿಟ್ ವಿತರಿಸಿ ಮಾತನಾಡಿದ ಅವರು, ಅಗತ್ಯ ಬಿದ್ದಲ್ಲಿ ಬಡಜನರಿಗೆ ಇನ್ನೂ ಸಹಾಯ ಮಾಡುವುದಾಗಿ ಭರವಸೆ ನೀಡಿದರು. ಕ್ಷೇತ್ರದ ಎಲ್ಲರಿಗೂ ಕೊರೊನಾ ಲಸಿಕೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದ್ದು, ಹಂತ ಹಂತವಾಗಿ ನೀಡಲಾಗುತ್ತದೆ ಎಂದರು. ಇದನ್ನೂ ಓದಿ: ಇನ್ಮುಂದೆ ಯಾವುದೇ ದಾನ ಸ್ವೀಕರಿಸಲ್ಲ: ಉಪೇಂದ್ರ

bhairati basavaraj 2 1 medium

ಕೃಷ್ಣರಾಜಪುರ ಸಾರ್ವಜನಿಕ ಆಸ್ಪತ್ರೆಯನ್ನು 200 ಹಾಸಿಗೆಗಳ ಆಸ್ಪತ್ರೆಗೆ ಉನ್ನತಿಕರಿಸಲು 13 ಕೋಟಿ ರೂ. ವೆಚ್ಚವಾಗಲಿದೆ. ಐಟಿಐ ಆಸ್ಪತ್ರೆಯಲ್ಲಿ ಕೋವಿಡ್ ಆರೈಕೆ ಕೇಂದ್ರ ತೆರೆಯಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕೇಂದ್ರ ಸರ್ಕಾರ ಅದಕ್ಕೆ ಒಪ್ಪಿಗೆ ನೀಡಿದೆ ಎಂದು ಹೇಳಿದರು.

ಬಳಿಕ ಮಾತನಾಡಿದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ, ಈ ವರ್ಷದ ಡಿಸೆಂಬರ್ ಅಂತ್ಯದ ವೇಳೆಗೆ ದೇಶದ 130 ಕೋಟಿ ಜನರಿಗೂ ಕೋವಿಡ್ ಲಸಿಕೆಯನ್ನು ನೀಡಲಾಗುವುದು. ಜೂನ್ ಅಂತ್ಯದ ವೇಳೆಗೆ ಕೇಂದ್ರದಿಂದ ರಾಜ್ಯಕ್ಕೆ 50 ಲಕ್ಷ ಡೋಸ್ ಲಸಿಕೆ ನೀಡಲಾಗುತ್ತದೆ. ರಾಜ್ಯ ಸರ್ಕಾರ ಸಹ 15 ಲಕ್ಷ ಡೋಸ್ ಲಸಿಕೆಯನ್ನು ಖರೀದಿಸಲು ಮುಂದಾಗಿದೆ. ಈ ತಿಂಗಳಲ್ಲಿ ಒಟ್ಟು 65 ಲಕ್ಷ ಡೋಸ್‍ನಷ್ಟು ಲಸಿಕೆ ರಾಜ್ಯಕ್ಕೆ ಲಭ್ಯವಾಗಲಿದೆ ಎಂದರು.

bhairati basavaraj 2 2 medium

ಕೊರೊನಾ ಲಾಕ್‍ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಕೆ.ಅರ್.ಪುರ ವಿಧಾನಸಭಾ ಕ್ಷೇತ್ರದ ಜನರಿಗೆ ಒಂದು ಲಕ್ಷ ದಿನಸಿ ಕಿಟ್ ನ್ನು ಭೈರತಿ ಬಸವರಾಜ್ ವಿತರಣೆ ಮಾಡುತ್ತಿರುವುದು ಪುಣ್ಯದ ಕೆಲಸ. ಕ್ಷೇತ್ರದ ಜನ ಮತ ಹಾಕುವ ಮೂಲಕ ಅವರಿಗೆ ಆಶೀರ್ವಾದ ಮಾಡಿದ್ದೀರಿ. ಅವರು ನಿಮಗೆ ಇಂತಹ ಸಂದರ್ಭದಲ್ಲಿ ಸಹಾಯಕ್ಕೆ ಬಂದಿದ್ದಾರೆ. ಸದಾ ಜನರ ನಡುವೆ ಇರುವ ಬಸವರಾಜ್ ಅಂತಹವರು ಸಮಾಜಕ್ಕೆ ಅವಶ್ಯಕತೆ ಇದೆ. ಅವರಿಗೆ ತಮ್ಮ ಬೆಂಬಲ ಸದಾ ಇರಲಿ ಎಂದರು.

ಕೆ.ಆರ್.ಪುರ ವಿಧಾನ ಸಭಾ ಕ್ಷೇತ್ರ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿಧಾನ ಸಭಾ ಕ್ಷೇತ್ರವಾಗಿದೆ. ಇದನ್ನು ಭೈರತಿ ಬಸವರಾಜ್ ಅವರು ಮಾದರಿ ಕ್ಷೇತ್ರವನ್ನಾಗಿ ಮಾಡಿದ್ದಾರೆ. ಈ ಭಾಗದ ಲೋಕಸಭಾ ಸದಸ್ಯನಾಗಿ ಮತ್ತು ಕೇಂದ್ರ ಸಚಿವನಾಗಿ ನನ್ನ ಬೆಂಬಲ, ಸಹಕಾರ ಈ ಕ್ಷೇತ್ರಕ್ಕೆ ಯಾವಾಗಲೂ ಇರುತ್ತದೆ ಎಂದು ಹೇಳಿದರು.

bhairati basavaraj 2 4 medium

ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ನಿಯಂತ್ರಣ ಕುರಿತು ಸಭೆ ಕರೆದಾಗಲ್ಲೆಲ್ಲ ನಾನು ಕೆ.ಅರ್.ಪುರ ಕ್ಷೇತ್ರದ ಬಗ್ಗೆ ಮತ್ತು ಭೈರತಿ ಬಸವರಾಜ ಅವರು ಅಲ್ಲಿ ಕೈಗೊಂಡಿರುವ ಕೆಲಸಗಳ ಬಗ್ಗೆ ಮಾಹಿತಿ ನೀಡುತ್ತೇನೆ. ಹೀಗಾಗಿ ಬಸವರಾಜ್ ಅವರ ಕಾರ್ಯವೈಖರಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ತಿಳಿದಿದೆ ಎಂದರು.

ಕೂತ್ತನೂರಿನ ನಂಜುಂಡೇಶ್ವರ ಕಲ್ಯಾಣ ಮಂಟಪ, ವಿಜನಾಪುರದ ಸೈನಿಕ ಭವನ, ಕಲ್ಕರೆಯ ಎನ್.ಅರ್.ಐ ಲೇಔಟ್, ಟಿ.ಸಿ.ಪಾಳ್ಯದ ಸಂತ ಅಂತೋಣಿ ಶಾಲೆ, ಕುರುಡುಸೊಣ್ಣೆನಹಳ್ಳಿಯ ಲೇಕ್ ಮೌಂಟ್ ಶಾಲೆ, ಎಚ್.ಎ.ಎಲ್ ನ ವಿಭೂತಿಪುರ ಶಾಲೆ, ಉದಯ ನಗರದ ಜೈನ ಭವನ, ಎ.ನಾರಾಯಣಪುರದ ಎಮ್.ಇ.ಜಿ ಲೇಔಟ್, ದೇವಸಂದ್ರದ ಕೆಂಪೇಗೌಡ ಕ್ರೀಡಾಂಗಣಗಳಲ್ಲಿ ದಿನಸಿ ಕಿಟ್ ವಿತರಿಸಲಾಯಿತು.

bhairati basavaraj 2 3 medium

ದಿನಸಿ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಕೆ.ಅರ್.ಪುರ ಬಿಜೆಪಿ ಅಧ್ಯಕ್ಷ ಶಿವರಾಜ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಗೀತಾ ವಿವೇಕಾನಂದ, ಬಿಜೆಪಿ ಹಿರಿಯ ಮುಖಂಡ ಗಣೇಶ, ಬಿಬಿಎಂಪಿ ಮಾಜಿ ಸದಸ್ಯರಾದ ಶ್ರೀಕಾಂತ್, ಜಯಪ್ರಕಾಶ್, ನಾಗರಾಜ್, ಸುರೇಶ್, ರಮೇಶ್, ಅಂತೋಣಿ ಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

TAGGED:Bhairati BasavarajCorona VirusGrocery KitKR PuraLockdownPublic TVಕೆ.ಆರ್.ಪುರಕೊರೊನಾ ವೈರಸ್ದಿನಸಿ ಕಿಟ್ಪಬ್ಲಿಕ್ ಟಿವಿಭೈರತಿ ಬಸವರಾಜ್ಲಾಕ್‍ಡೌನ್
Share This Article
Facebook Whatsapp Whatsapp Telegram

You Might Also Like

Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
5 minutes ago
WTC SA 3
Cricket

ದ. ಆಫ್ರಿಕಾ ಈಗ ʻವಿಶ್ವ ಟೆಸ್ಟ್‌ ಚಾಂಪಿಯನ್‌ʼ – 27 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರ ನೀಗಿಸಿಕೊಂಡ ಹರಿಣರು

Public TV
By Public TV
9 minutes ago
Chikkodi Crime
Belgaum

ಅಣ್ಣ ಶ್ರೀಮಂತ ಆಗ್ಬಿಟ್ಟ ಅಂತ ತಮ್ಮ ಮಾಡಿದ್ದೆಂತ ನೀಚ ಕೆಲ್ಸ ಗೊತ್ತಾ? – ಹಂತಕ ಸಿಕ್ಕಿಬಿದ್ದಿದ್ದೇ ರೋಚಕ!

Public TV
By Public TV
12 minutes ago
Untitled 1 copy
Latest

11A ಸೀಟ್ ಮಿಸ್ಟರಿ – 2 ವಿಮಾನ ಪತನ, ಒಂದೇ ಕಡೆ ಕುಳಿತಿದ್ದ ಇಬ್ಬರು ಮೃತ್ಯುಂಜಯರು!

Public TV
By Public TV
41 minutes ago
Mallikarjun Kharge
Latest

ವಿಮಾನ ದುರಂತ ಸ್ಥಳಕ್ಕೆ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ ಮಲ್ಲಿಕಾರ್ಜುನ ಖರ್ಗೆ

Public TV
By Public TV
41 minutes ago
Indian Embassy Israel
Latest

ಇಸ್ರೇಲ್ – ಇರಾನ್ ಸಂಘರ್ಷ | 24×7 ಸಹಾಯವಾಣಿ ಆರಂಭಿಸಿದ ಭಾರತ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?