Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಾದ್ಯಂತ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ನಿರ್ಮಿಸಲು ಸಿಎಂಗೆ ನಿರಾಣಿ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯಾದ್ಯಂತ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ನಿರ್ಮಿಸಲು ಸಿಎಂಗೆ ನಿರಾಣಿ ಮನವಿ

Bengaluru City

ರಾಜ್ಯಾದ್ಯಂತ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ನಿರ್ಮಿಸಲು ಸಿಎಂಗೆ ನಿರಾಣಿ ಮನವಿ

Public TV
Last updated: June 5, 2021 1:18 pm
Public TV
Share
2 Min Read
nirani 3
SHARE

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲಿ ಅಭಿವೃದ್ಧಿಗೆ ಹೊಸ ವ್ಯಾಖ್ಯಾನ ಬರೆದ ಮೈಸೂರು ಸಂಸ್ಥಾನದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲಿ ಕೆಲವು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ನಾಲ್ವಡಿ ಕೃಷ್ಣರಾಜ ಒಡೆಯರ್ ‌ಅವರ ಜನ್ಮದಿನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ನಿರಾಣಿ ಅವರು, ಮುಂದಿನ ಯುವಜನಾಂಗಕ್ಕೆ ಇದು ಅತ್ಯಂತ ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಹಾಗೂ ‌ಪದವಿ ಕಾಲೇಜುಗಳ ಪಠ್ಯ ಪುಸ್ತಕದಲ್ಲಿ ಅವರ ಚರಿತ್ರೆಯನ್ನು ಆಳವಡಿಸಲು ಕ್ರಮಕೈಗೊಳ್ಳಬೇಕು. ಸರ್ ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆಯನ್ನು ಎಂಜಿನಿಯರ್ ‌ ದಿನಾಚರಣೆ ಮಾಡಿದಂತೆ ಇನ್ನು ಮುಂದೆ ಜೂನ್ 4 ರಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ‌ದಿನವನ್ನು ಸರ್ಕಾರದ ವತಿಯಿಂದ ಆಚರಿಸಬೇಕು. ಅನೇಕ ಕೈಗಾರಿಕೆಗಳ ಸ್ಥಾಪನೆಗೆ ಕಾರಣೀಭೂತರಾದ ಅವರ ದಿನಾಚರಣೆಯನ್ನು ‘ಕೈಗಾರಿಕಾ ದಿನಾಚರಣೆ’ ಎಂದು ಆಚರಿಸಲು ಸೂಕ್ತವಾದ ‌ನಿರ್ಧಾರವನ್ನು ತೆಗೆದುಕೊಳ್ಳಬೇಕೆಂದು ಒತ್ತಾಯ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಶತಕದಂಚಿಗೆ ತಲುಪಿದ ಪೆಟ್ರೋಲ್ ಬೆಲೆ

Nirani Wadiyar Statue medium

ರಾಜ್ಯದ ಪ್ರಮುಖ ಸ್ಥಳಗಳಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಸ್ಥಾಪನೆ, ಪಠ್ಯಪುಸ್ತಕಗಳಲ್ಲಿ ಜೀವನ ಚರಿತ್ರೆ ಅಳವಡಿಕೆ, ಕೈಗಾರಿಕಾ ಹಾಗೂ ಪ್ರತಿ ವರ್ಷ ಜೂನ್ 4 ರಂದು ಜ‌ನ್ಮ ದಿನಾಚರಣೆಯನ್ನು ಸರ್ಕಾರದ ವತಿಯಿಂದಲೇ ಆಚರಣೆ ಮಾಡುವಂತೆ ಕೋರಿದ್ದಾರೆ.

ರಾಜ್ಯದ ಪ್ರಮುಖ ಸ್ಥಳಗಳಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ‌ಅವರ ಪ್ರತಿಮೆಯನ್ನು ನಿರ್ಮಿಸಿರುವುದರಿಂದ ದೇಶ – ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ಅವರ ವ್ಯಕ್ತಿತ್ವವನ್ನು ಪರಿಚಯಿಸಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ಇವರ ಕಾಲದಲ್ಲಿ ಮೈಸೂರು ರಾಜ್ಯದಲ್ಲಿ ಹೆಸರಿಗೆ ಮಾತ್ರ ಇದ್ದ ‘ಪ್ರಜಾ ಪ್ರತಿನಿಧಿ ಸಭೆ’ಯು ನೂತನ ರೂಪವನ್ನು ಪಡೆದು, ನಿಜವಾದ ಜನ ಪ್ರತಿನಿಧಿ ಸಭೆಯಾಗಿ ಪರಿವರ್ತನೆಯಾಯಿತು. ಏಷ್ಯಾ ಖಂಡದಲ್ಲೇ ಮೊದಲ ಜಲ ವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದ ಕೀರ್ತಿ ನಾಲ್ವಡಿಯವರದು. ಇದರ ಫಲಿತಾಂಶವಾಗಿ 1905ರ ಆಗಸ್ಟ್ 3 ರಂದು ಪ್ರಥಮವಾಗಿ ಬೆಂಗಳೂರಿನಲ್ಲಿ ದೀಪಗಳು ಬೆಳಗಿದವು. ಮೈಸೂರು ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಿದ್ದು ಒಡೆಯರ್ ಅವರ ಮತ್ತೊಂದು ಮೈಲಿಗಲ್ಲು ಎಂದು ನಿರಾಣಿ ಅವರು ಬಣ್ಣಿಸಿದ್ದಾರೆ. ಇದನ್ನೂ ಓದಿ: ಸೋಂಕಿತ ಮಾವನನ್ನು ಹೆಗಲ ಮೇಲೆ ಹೊತ್ತು ಆಸ್ಪತ್ರೆಗೆ ಸಾಗಿದ ಸೊಸೆ 

ದೇಶದಲ್ಲೇ ಮೊಟ್ಟಮೊದಲ ಬಾರಿಗೆ ವಿಶ್ವವಿದ್ಯಾನಿಲಯವನ್ನು ಮೈಸೂರಿನಲ್ಲಿ ತೆರೆದು ದಾಖಲೆ ನಿರ್ಮಿಸಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ. ಅವರ ಕಾಲದಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ 27೦ ಉಚಿತ ಆಸ್ಪತ್ರೆಗಳು ಕಾರ್ಯಾರಂಭ ಮಾಡಿದವು. ಬೆಂಗಳೂರಿನ ಮಿಂಟೊ ಕಣ್ಣಾಸ್ಪತ್ರೆ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿತ್ತು. ಮೈಸೂರಿನ ಕ್ಷಯರೋಗ ಆಸ್ಪತ್ರೆ ಉತ್ತಮಗೊಂಡಿತು. ವಾಣಿಜ್ಯ ಕ್ಷೇತ್ರದಲ್ಲಿ ಮೈಸೂರು ಬ್ಯಾಂಕ್ ಖಾಸಗಿ ಸಹಭಾಗಿತ್ವದೊಡನೆ ಕಾರ್ಯಾರಂಭ ಮಾಡಿತು. ಈ ಎಲ್ಲಾ ಸಾಧನೆಯನ್ನು ಪರಿಗಣಿಸಿ ಸರ್ಕಾರ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ಬರೆದಿರುವ ಪತ್ರದಲ್ಲಿ ನಿರಾಣಿ ಅವರು ಮನವಿ ಮಾಡಿದ್ದಾರೆ.

TAGGED:Industries DayMurugesh niraniNalwadi Krishnaraja Wadiyarಕೈಗಾರಿಕಾ ದಿನಾಚರಣೆನಾಲ್ವಡಿ ಕೃಷ್ಣರಾಜ ಒಡೆಯರ್‌ಮುರುಗೇಶ್ ನಿರಾಣಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Delhi Police
Latest

ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು

Public TV
By Public TV
28 minutes ago
G Parameshwar
Bengaluru City

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ – ರಾಜ್ಯದಲ್ಲೂ ಹೈ ಅಲರ್ಟ್‌: ಪರಮೇಶ್ವರ್‌

Public TV
By Public TV
50 minutes ago
Yadagiri
Districts

ವೈಭವದಿಂದ ನೆರವೇರಿದ ಕಲ್ಯಾಣ ಕರ್ನಾಟಕದ ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ರಥೋತ್ಸವ

Public TV
By Public TV
56 minutes ago
MB Patil 3
Bengaluru City

ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್

Public TV
By Public TV
1 hour ago
bjp flag
Bengaluru City

ಒಳ ಮೀಸಲಾತಿಯಲ್ಲಿರೋ ಗೊಂದಲ ನಿವಾರಣೆ ಮಾಡಿ – ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

Public TV
By Public TV
1 hour ago
NAMMA METRO 5
Bengaluru City

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ – ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?