Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉದ್ಯೋಗದ ಹಕ್ಕಿಗಾಗಿ ಧ್ವನಿ ಎತ್ತರಿಸಿದ ತುಳುನಾಡು – ಸಮಾನ ಮನಸ್ಕರ ಮನೆ ಮನೆ ಪ್ರತಿಭಟನೆ ಕರೆಗೆ ಅಭೂತಪೂರ್ವ ಬೆಂಬಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಉದ್ಯೋಗದ ಹಕ್ಕಿಗಾಗಿ ಧ್ವನಿ ಎತ್ತರಿಸಿದ ತುಳುನಾಡು – ಸಮಾನ ಮನಸ್ಕರ ಮನೆ ಮನೆ ಪ್ರತಿಭಟನೆ ಕರೆಗೆ ಅಭೂತಪೂರ್ವ ಬೆಂಬಲ

Dakshina Kannada

ಉದ್ಯೋಗದ ಹಕ್ಕಿಗಾಗಿ ಧ್ವನಿ ಎತ್ತರಿಸಿದ ತುಳುನಾಡು – ಸಮಾನ ಮನಸ್ಕರ ಮನೆ ಮನೆ ಪ್ರತಿಭಟನೆ ಕರೆಗೆ ಅಭೂತಪೂರ್ವ ಬೆಂಬಲ

Public TV
Last updated: June 5, 2021 11:01 pm
Public TV
Share
3 Min Read
MNG 1
SHARE

ಮಂಗಳೂರು: ಎಂಆರ್ ಪಿಎಲ್(MRPL) ಉದ್ಯೋಗ ನೇಮಕಾತಿಯಲ್ಲಿ ತುಳುನಾಡು ಸೇರಿದಂತೆ ಕನ್ನಡಿಗರನ್ನು ಹೊರಗಿಟ್ಟಿರುವುದನ್ನು ಖಂಡಿಸಿ ತುಳುನಾಡಿನ ಉದ್ಯಮಗಳಲ್ಲಿ ತುಳುವರಿಗೆ ದೊಡ್ಡ ಪಾಲು ಸಿಗಬೇಕು, ಸರೋಜಿನಿ ಮಹಿಷಿ ವರದಿ ಜಾರಿಯಾಗಬೇಕು ಎಂದು ಒತ್ತಾಯಿಸಿ ತುಳುನಾಡಿನ ಸಮಾನ ಮನಸ್ಕ ಸಂಘಟನೆಗಳು ಕರೆ ನೀಡಿದ್ದ “ಮನೆ ಮನೆ ಪ್ರತಿಭಟನೆ” ಅಭೂತಪೂರ್ವ ಯಶಸ್ಸು ಕಂಡಿದೆ.

1 3 medium

ತುಳುನಾಡಿಗೆ ಉದ್ದಿಮೆ, ಉದ್ಯೋಗದಲ್ಲಿ ಸತತವಾಗಿ ಆಗುತ್ತಿರುವ ಅನ್ಯಾಯವನ್ನು ಕಂಡು ಮೌನವಾಗಿರುವ ಜನಪ್ರತಿನಿಧಿಗಳಿಗೆ, ರಾಜಕೀಯ ಪಕ್ಷಗಳಿಗೆ, ಕಂಪೆನಿಗಳ ಆಡಳಿತಗಳಿಗೆ ಇದು ಎಚ್ಚರಿಕೆಯ ಗಂಟೆ. ಇದರ ಯಶಸ್ಸು ಇಂದಿನ ಪ್ರತಿಭಟನೆಯನ್ನು ಮನೆ ಮನೆಗಳಿಗೆ ತಲುಪಿಸಿದ, ಧ್ವನಿ ಎತ್ತರಿಸಿ ಪ್ರತಿಭಟಿಸಿದ ಜನತೆಗೆ ಸಲ್ಲುತ್ತದೆ. ಹಾಗೂ ಸಮಾನ ಮನಸ್ಕ ಸಂಘಟನೆಗಳು ಈ ಯಶಸ್ಸಿಗಾಗಿ ಜನತೆಗೆ ಅಭಿನಂದನೆ ಸಲ್ಲಿಸುತ್ತದೆ ಎಂದು ಡಿವೈಎಫ್‍ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.

MNG 1 1 medium

ಐದು ದಿನಗಳ ಹಿಂದೆ ಸಮಾನ ಮನಸ್ಕ ಸಂಘಟನೆಗಳು ಮೇಲ್ಕಂಡ ವಿಷಯಗಳನ್ನು ಮುಂದಿಟ್ಟು ಮನೆ ಮನೆ ಪ್ರತಿಭಟನೆ ಗೆ ಕರೆ ನೀಡಿದ್ದವು. ಈ ಕರೆಗೆ ಅವಳಿ ಜಿಲ್ಲೆಯಾದ್ಯಂತ ವ್ಯಾಪಕ ಬೆಂಬಲ ದೊರಕತೊಡಗಿತು. ಡಿವೈಎಫ್‍ಐ ನೇತೃತ್ವದ ಸಮಾನ ಮನಸ್ಕ ಸಂಘಟನೆಗಳ ಜೊತೆಗೆ ಯುವ ಕಾಂಗ್ರೆಸ್, ಯುವ ಜನತಾ ದಳ, ದಲಿತ ಸಂಘರ್ಷ ಸಮಿತಿಯ ವಿವಿಧ ಬಣಗಳು, ಕಾರ್ಮಿಕ, ಮಹಿಳಾ ಸಂಘಟನೆಗಳು ಮಾತ್ರ ವಲ್ಲದೆ ಜಿಲ್ಲೆಯ ವಿವಿಧ ಯುವಕ ಮಂಡಲಗಳು, ಕ್ರೀಡಾ ತಂಡಗಳು, ಸಾಮಾಜಿಕ ಜಾಲತಾಣದ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ಸೇರಿಕೊಂಡವು.

MNG 2 medium

“ತುಳುನಾಡ ಅಭಿವೃದ್ಧಿಡ್ ತುಳುವಪ್ಪೆ ಜೋಕುಲೆಗ್ ಮಲ್ಲಪಾಲ್” ಎಂಬ ಘೋಷಣೆ ಸಾಮಾನ್ಯ ಜನತೆಯನ್ನು ಆಕರ್ಷಿಸಿತು. ಈ ಎಲ್ಲರ ಒಗ್ಗಟ್ಟಿನ ಪ್ರಯತ್ನದಿಂದ ಇಂದಿನ ಪ್ರತಿಭಟನೆ ಅಭೂತಪೂರ್ವ ಜನ ಬೆಂಬಲದೊಂದಿಗೆ ಯಶಸ್ಸು ಸಾಧಿಸಿತು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಇಂದು ಪ್ರತಿಭಟನೆ ನಡೆದಿದೆ. ಬೆಳಗ್ಗೆ ಮುನೀರ್ ಕಾಟಿಪಳ್ಳ ನೇತೃತ್ವದ ತಂಡ ಎಮ್ ಆರ್ ಪಿ ಎಲ್ ಪ್ರಧಾನ ದ್ವಾರದ ಮುಂಭಾಗ ಪೋಸ್ಟರ್ ಪ್ರದರ್ಶಿಸಿ ಪ್ರತಿಭಟಿಸಿದರೆ, ಮಾಜಿ ಸಚಿವ ರಮಾನಾಥ ರೈ, ಶಾಸಕರಾದ ಯು ಟಿ ಖಾದರ್, ಹರೀಶ್ ಕುಮಾರ್, ದಲಿತ ನಾಯಕರಾದ ಎಂ ದೇವದಾಸ್, ರಘು ಎಕ್ಕಾರು, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲುಕ್ ಮಾನ್ ಬಂಟ್ವಾಳ, ಹಿರಿಯ ವಿಚಾರವಾದಿಗಳಾದ ಪ್ರೊ ನರೇಂದ್ರ ನಾಯಕ್, ಶ್ಯಾಮ ಸುಂದರ ರಾವ್, ನ್ಯಾಯವಾದಿಗಳಾದ ಯಶವಂತ ಮರೋಳಿ, ದಿನೇಶ್ ಹೆಗ್ಡೆ ಉಳೆಪಾಡಿ, ಡಿವೈಎಫ್‍ಐ ಮುಖಂಡರಾದ ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ಅಶ್ರಫ್ ಕೆಸಿ ರೋಡ್, ನವೀನ್ ಕೊಂಚಾಡಿ, ಸಿಪಿಎಂ ನಾಯಕರಾದ ವಸಂತ ಆಚಾರಿ, ಕೃಷ್ಣಪ್ಪ ಸಾಲ್ಯಾನ್, ಯಾದವ ಶೆಟ್ಟಿ, ಜಾತ್ಯಾತೀತ ಜನತಾ ದಳದ ನಾಯಕರಾದ ಎಂ ಬಿ ಸದಾಶಿವ, ಅಕ್ಷಿತ್ ಸುವರ್ಣ, ಸಾಮಾಜಿಕ ಕಾರ್ಯಕರ್ತರಾದ ಎಂ ಜಿ ಹೆಗ್ಡೆ, ದಿಲ್ ರಾಜ್ ಆಳ್ವ,ಬಿ ಎಂ ಮಾಧವ, ರಾಘವೇಂದ್ರ ರಾವ್ ಸುರತ್ಕಲ್, ಮಾಜಿ ಉಪ ಮೇಯರ್ ಗಳಾದ ಪುರುಶೋತ್ತಮ ಚಿತ್ರಾಪುರ, ಮುಹಮ್ಮದ್ ಕುಂಜತ್ ಬೈಲ್, ಹರೀಶ್ ಪುತ್ರನ್ ಮೂಲ್ಕಿ,ಶೇಖರ ಹೆಜಮಾಡಿ, ಧನಂಜಯ ಮಟ್ಟು ಮತ್ತಿತರ ಪ್ರಮುಖರು ವಿವಿದೆಡೆ ಪೋಸ್ಟರ್ ಪ್ರದರ್ಶಿಸಿ ಪ್ರತಿಭಟನೆ ನಡೆಸಿ ಗಮನ ಸೆಳೆದರು.

33886c1b 6e4a 4bda 98f3 b55eaae8e9ed medium

ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ಸೇರಿಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಮೂಲೆ ಮೂಲೆಗಳಲ್ಲೂ ಪ್ರತಿಭಟನೆ ನಡೆದಿದ್ದರೂ, ಮಂಗಳೂರು ನಗರ, ಉಳ್ಳಾಲ, ಮೂಡಬಿದ್ರೆ ಭಾಗಗಳಲ್ಲಿ ವ್ಯಾಪಕವಾಗಿ ಪ್ರತಿಭಟನೆಗಳು ಮನೆ ಮನೆಯಲ್ಲಿ ನಡೆದವು. ಅದರಲ್ಲೂ ಎಂ ಆರ್ ಪಿ ಎಲ್ ಹಾಗೂ ಕೈಗಾರಿಕಾ ಕೇಂದ್ರಗಳಿಗೆ ಹತ್ತಿರ ಇರುವ ಕಂಪೆನಿಯ ಸುತ್ತಲಿನ ಸುರತ್ಕಲ್,ಬಜಪೆ, ಕಾವೂರು, ಕಟೀಲು ಹೋಬಳಿಗಳಲ್ಲಿ ಮತ್ತಷ್ಟು ತೀವ್ರವಾಗಿ ಪ್ರತಿಭಟನೆಗಳು ನಡೆದಿದ್ದು ಸಾವಿರಾರು ಜನ ಮನೆಮನೆ ಪ್ರತಿಭಟನೆ ನಡೆಸಿದ್ರು.

ಇಂದಿನ ಪ್ರತಿಭಟನೆಗೆ ದೊರಕಿರುವ ಅಭೂತಪೂರ್ವ ಜನಬೆಂಬಲ ಬೃಹತ್ ಕಂಪೆನಿಗಳ ಹಾಗೂ ಬೇಜವಾಬ್ದಾರಿ ಜನಪ್ರತಿನಿಧಿಗಳ ವಿರುದ್ಧ ಜನತೆಯಲ್ಲಿ ಮಡುಗಟ್ಟಿರುವ ಆಕ್ರೋಶದ ಪ್ರತಿಫಲನ. ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕರು ಮಾತು ಕೊಟ್ಟಂತೆ ಎಮ್ ಆರ್ ಪಿ ಎಲ್ ನೇಮಕಾತಿಯನ್ನು ರದ್ದುಗೊಳಿಸಿ, ಸ್ಥಳೀಯರಿಗೆ ಆದ್ಯತೆ ಒದಗಿಸಿ ಮರು ಪ್ರಕ್ರಿಯೆ ನಡೆಸಬೇಕು, ಸರೋಜಿನಿ ಮಹಿಷಿ ವರದಿಯ ಆಧಾರದಲ್ಲಿ ರಾಜ್ಯ ಸರಕಾರ ಕಾಯ್ದೆ ರಚಿಸಬೇಕು, ತುಳುನಾಡಿನ ಸಾರ್ವಜನಿಕ ವಲಯ ಹಾಗೂ ಖಾಸಗಿ ಉದ್ಯಮಗಳಲ್ಲಿ ಸ್ಥಳೀಯರಿಗೆ ಎಲ್ಲಾ ಹಂತಗಳಲ್ಲಿ ನ್ಯಾಯೋಚಿತ ಪಾಲು ದೊರಕಬೇಕು. ಈ ಎಲ್ಲಾ ಬೇಡಿಕೆಗಳಿಗೆ ಸ್ಪಂದನೆ ದೊರಕದಿದ್ದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರತರದ ಪ್ರತಿಭಟನೆಗಳು ಎದ್ದು ಬರಲಿವೆ. ಇಂದಿನ ಪ್ರತಿಕ್ರಿಯೆ ಎಚ್ಚರಿಕೆಯ ಘಂಟೆ, ಬೇಡಿಕೆ ಈಡೇರದೆ ವಿರಮಿಸುವುದಿಲ್ಲ, ಮತ್ತಷ್ಟು ಒಗ್ಗಟ್ಟಿನಿಂದ ಹೋರಾಟವನ್ಜು ಸಮಾನ ಮನಸ್ಕ ಸಂಘಟನೆಗಳು ಮುಂದಕ್ಕೊಯ್ಯಲಿವೆ ಎಂದು ಮುನೀರ್ ಕಾಟಿಪಳ್ಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

TAGGED:MangaluruMRPLprotestPublic TVಎಂಆರ್‌ಪಿಎಲ್ಪಬ್ಲಿಕ್ ಟಿವಿಪ್ರತಿಭಟನೆಮಂಗಳೂರು
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

British Flight Attendant Arrest
Latest

ಡ್ರೋನ್ ದಾಳಿಯ ಪೋಟೊ ಹಂಚಿಕೊಂಡಿದ್ದಕ್ಕೆ ಬ್ರಿಟಿಷ್ ಫ್ಲೈಟ್ ಅಟೆಂಡೆಂಟ್ ದುಬೈನಲ್ಲಿ ಅರೆಸ್ಟ್‌

Public TV
By Public TV
5 minutes ago
f 15e strike eagle how rescued
Latest

ಫೈಟರ್‌ ಜೆಟ್‌ನಿಂದ ಬಿದ್ದ ಪೈಲಟ್‌ನನ್ನು ಅಮೆರಿಕ ನಿಖರವಾಗಿ ಇರಾನ್‌ ನೆಲದಲ್ಲಿ ಪತ್ತೆ ಹಚ್ಚಿ ರಕ್ಷಿಸಿದ್ದು ಹೇಗೆ?

Public TV
By Public TV
20 minutes ago
Mohsin Naqvi
Cricket

ಐಪಿಎಲ್‌ ಅನ್ನು ಪಿಎಸ್‌ಎಲ್‌ ಹಿಂದಿಕ್ಕಿ ವಿಶ್ವದ ನಂ.1 ಲೀಗ್‌ ಆಗುತ್ತೆ: ಮೊಹ್ಸಿನ್‌ ನಖ್ವಿ

Public TV
By Public TV
44 minutes ago
Siddaganga Mutt
Districts

ಸಿದ್ದಗಂಗಾ ಮಠದಲ್ಲಿ 119 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು ನಾಮಕರಣ

Public TV
By Public TV
1 hour ago
zameer ahmed s.s.mallikarjun
Davanagere

ಎಷ್ಟೇ ಒತ್ತಾಯ ಮಾಡಿದ್ರೂ ದಾವಣಗೆರೆಯಲ್ಲಿ ಪ್ರಚಾರಕ್ಕೆ ಒಪ್ಪದೇ ತೆರಳಿದ ಜಮೀರ್

Public TV
By Public TV
1 hour ago
Hyderabad truck accident
Crime

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿಮೀ ಎಳೆದೊಯ್ದ ಟ್ರಕ್‌ – ಮಹಿಳೆ ಸಾವು, ಪತಿಗೆ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?