ಮಾವಿನಕಾಯಿ ಖರೀದಿಗೆ ಮುಗಿಬಿದ್ದ ಜನ್ರು- ಕೊರೊನಾ ನಿಯಮ ಮರೆತರು

Public TV
1 Min Read
Bidar corona rules break

ಬೀದರ್: ಸೋಂಕು ಇಳಿಮುಖವಾಗುತ್ತಿರುವ ಸಮಯದಲ್ಲಿ ಜನರು, ವ್ಯಾಪಾರಸ್ಥರು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ತರಕಾರಿ, ದಿನಸಿ ಹಾಗೂ ಮಾವಿನಕಾಯಿ ಮಾರುಕಟ್ಟೆಗಳಲ್ಲಿ ಕೊರೊನಾ ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಲಾಗಿದೆ. ಇದನ್ನೂ ಓದಿ: ಎಲ್ಲಿಯವರೆಗೆ ಹೈಕಮಾಂಡ್ ವಿಶ್ವಾಸ ಇರುತ್ತೋ ಅಲ್ಲಿವರೆಗೂ ನಾನು ಸಿಎಂ ಆಗಿರುತ್ತೇನೆ – ಬಿಎಸ್‍ವೈ

Bidar corona rules break2 medium

ಬೀದರ್ ನಗರದ ಅಂಬೇಡ್ಕರ್ ವೃತ್ತದ ಬಳಿ ಇರುವ ಮಾವಿನಕಾಯಿ ಮಾರುಕಟ್ಟೆಯಲ್ಲಿ ಕೊರೊನಾ ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಮಾವಿನಕಾಯಿ ಖರೀದಿಗೆ ಜನ ಮುಗಿ ಬಿದ್ದಿದ್ದರು. ಇಂದು ವೀಕ್ ಎಂಡ್ ಆಗಿರುವುದರಿಂದ ಮಾವಿನಕಾಯಿ ಮಾರುಕಟ್ಟೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದಿದ್ದಾರೆ. ಈ ವೇಳೆ ಜನರು ಸಾಮಾಜಿಕ ಅಂತರ, ಮಾಸ್ಕ್ ಹಾಕಿಕೊಳ್ಳದೆ ಮಹಾ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇದನ್ನೂ ಓದಿ: ಸಿಎಂ ನಿವಾಸಕ್ಕೆ ಆಗಮಿಸಿದ ಸಿಂಧೂರಿ – ರಿಪೋರ್ಟ್ ಮಾಡಿ ಎಂದ ಬಿಎಸ್‍ವೈ

Bidar corona rules break4 medium

ಆತಂಕದ ವಿಚಾರವೆಂದರೆ ಮಕ್ಕಳು, ವಯೋವೃದ್ಧರು, ಜನರು ಮಾವಿನಕಾಯಿ ಖರೀದಿಗೆ ಮುಗಿ ಬಿದ್ದಿರುವುದು ಕೊರೊನಾ ಸ್ಫೋಟಕ್ಕೆ ಕಾರಣವಾಗಲಿದೆ. ವ್ಯಾಪಾರಸ್ಥರು ಕೂಡಾ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಹಾಕಿಕೊಳ್ಳದೆ ವ್ಯಾಪಾರದಲ್ಲಿ ತೊಡಗಿದ್ದು ಬೀದರ್‍ಗೆ ಕಂಟಕವಾಗಲಿದೆ. ಈ ರೀತಿಯ ಜನಜಂಗುಳಿಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಬ್ರೇಕ್ ಹಾಕದೆ ಇದ್ದರೆ ಮುಂದೆ ಗಡಿ ಜಿಲ್ಲೆ ಬೀದರ್ ನಲ್ಲಿ ಮತ್ತೆ ಕೊರೊನಾ ಮಹಾಮಾರಿ ಸ್ಫೋಟವಾಗುವುದರಲ್ಲಿ ಯಾವುದೇ ಅನುಮಾನವಿಲ್ಲಾ.

Share This Article
Leave a Comment

Leave a Reply

Your email address will not be published. Required fields are marked *