ರಾಮನಗರ: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಇಂದು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ, ಕುದೂರು ಹೋಬಳಿ ಮತ್ತು ತಿಪ್ಪಸಂದ್ರ ಹೋಬಳಿಯಲ್ಲಿ ಕೋವಿಡ್ ವಾರಿಯರ್ ಗಳಿಗೆ ಆಹಾರ ಕಿಟ್ ವಿತರಿಸಿದರು.
ಕೊರೊನಾ ವಾರಿಯರ್ ಗಳಾದ ಅಂಗನವಾಡಿ ಶಿಕ್ಷಕಿಯರು ಮತ್ತು ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಶುಶ್ರೂಷಕಿಯರು ಹಾಗೂ ಮಾಗಡಿ ತಾಲ್ಲೂಕಿನ ಎಲ್ಲಾ ಬಸ್ ಚಾಲಕರು, ನಿರ್ವಾಹಕರಿಗೆ ಆಹಾರ ಕಿಟ್ ವಿತರಣೆ ಮಾಡಲಾಯ್ತು.
ಈ ವೇಳೆ ನಿಖಿಲ್ ಕುಮಾರಸ್ವಾಮಿಯವರಿಗೆ ಶಾಸಕ ಎ. ಮಂಜುನಾಥ್ ಹಾಗೂ ಸಮಾಜ ಸೇವಕ ಮಹದೇವ್ ಶಾಸ್ತ್ರಿ ಸಾಥ್ ನೀಡಿದರು.