Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿತೆಗೆ ಹಚ್ಚಿದ ಜ್ವಾಲೆ ಆರಿಲ್ಲ -ಬಿಜೆಪಿ ನಾಯಕತ್ವ ಕಿತ್ತಾಟಕ್ಕೆ ಮಾಜಿ ಸಿಎಂ ಎಚ್‌ಡಿಕೆ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಿತೆಗೆ ಹಚ್ಚಿದ ಜ್ವಾಲೆ ಆರಿಲ್ಲ -ಬಿಜೆಪಿ ನಾಯಕತ್ವ ಕಿತ್ತಾಟಕ್ಕೆ ಮಾಜಿ ಸಿಎಂ ಎಚ್‌ಡಿಕೆ ಕಿಡಿ

Bengaluru City

ಚಿತೆಗೆ ಹಚ್ಚಿದ ಜ್ವಾಲೆ ಆರಿಲ್ಲ -ಬಿಜೆಪಿ ನಾಯಕತ್ವ ಕಿತ್ತಾಟಕ್ಕೆ ಮಾಜಿ ಸಿಎಂ ಎಚ್‌ಡಿಕೆ ಕಿಡಿ

Public TV
Last updated: June 9, 2021 4:52 pm
Public TV
Share
2 Min Read
hd kumaraswamy
SHARE

ಬೆಂಗಳೂರು : ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ನಡೆಯುತ್ತಿರೋ ಕಿತ್ತಾಯಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸರಣಿ ಟ್ವೀಟ್ ಮೂಲಕ ಬಿಜೆಪಿ ವಿರುದ್ದ ಆಕ್ರೋಶ ಹೊರ ಹಾಕಿರುವ ಕುಮಾರಸ್ವಾಮಿ, ಚಿತೆಗೆ ಹಚ್ಚಿದ ಜ್ವಾಲೆ ಆರಿಲ್ಲ. ಆಗಲೇ ಬಿಜೆಪಿ ಅಧಿಕಾರಕ್ಕಾಗಿ ಕಿತ್ತಾಡುತ್ತಿದೆ ಅಂತ ಆಕ್ರೋಶ ಹೊರ ಹಾಕಿದ್ದಾರೆ.

ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದೆ. ಅದು ಎಂಥಾ ಸಂದರ್ಭದಲ್ಲಿ?ಕೋವಿಡ್‌ ಅಟ್ಟಹಾಸ ಮೆರೆಯುತ್ತಿರುವ ಹೊತ್ತಿನಲ್ಲಿ, ಬ್ಲಾಕ್‌ ಫಂಗಸ್‌ ಎಂಬ ಭಯಾನಕ ರೋಗ ಜನರನ್ನು ಆಪೋಷನ ತೆಗೆದುಕೊಳ್ಳುತ್ತಿರುವ ಗಳಿಗೆಯಲ್ಲಿ, ಮಕ್ಕಳು ಪಿಡುಗಿಗೆ ಸಿಲುಕಲಿದ್ದಾರೆಂಬ ಎಚ್ಚರಿಕೆಗಳ ನಡುವಿನಲ್ಲಿ, ಕನ್ನಡದ ಅಸ್ಮಿತೆಗೆ ದಕ್ಕೆಯಾಗಿರುವ ಕಾಲಘಟ್ಟದಲ್ಲಿ.ರಾಜ್ಯ ಸಂದಿಗ್ಧತೆಗೆ ಸಿಲುಕಿರುವ ಈ ಹೊತ್ತಿನಲ್ಲಿ ಇದೆಂಥ ರಾಜಕೀಯ? ಈಗ ರಾಜ್ಯದ ಎದುರಿಗೆ ಇರುವುದು ನಾಯಕತ್ವದ ಪ್ರಶ್ನೆಯೋ? ಅಥವಾ ಜನರ ಹಿತದ ಪ್ರಶ್ನೆಯೋ? ಅಂತ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಬಿಜೆಪಿ ವರಿಷ್ಠರ ಮಧ್ಯಪ್ರವೇಶಕ್ಕೆ ನಿಷ್ಠ ಬಣ ಆಗ್ರಹ

BJP Leaders 1

ರಾಜ್ಯದಲ್ಲಿ ಚಿತೆಗಳಿಗೆ ಹಚ್ಚಿದ ಜ್ವಾಲೆ ಇನ್ನೂ ಆರಿಲ್ಲ. ಅದು ಎಂದು ಆರುತ್ತದೆ ಎಂಬುದೇ ಯಾರಿಗೂ ತಿಳಿಯುತ್ತಿಲ್ಲ. ಇಂಥ ಸಂದರ್ಭದಲ್ಲಿ ಇಂಥ ಕ್ಷುಲ್ಲಕ ರಾಜಕಾರಣ ಅಗತ್ಯವಿದೆಯೇ? ರಾಜ್ಯ ಸರ್ಕಾರ ಕೋವಿಡ್‌ ಸ್ಥಿತಿಯನ್ನು ನಿಭಾಯಿಸಿದ ರೀತಿಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.ಸರ್ಕಾರ ಇನ್ನಾದರೂ ತಿದ್ದಿಕೊಳ್ಳಲಿದೆ ಎಂದು ನಾವು ಭಾವಿಸಿದೆವು. ಇಂಥ ಸಂದರ್ಭದಲ್ಲಿ ಸರ್ಕಾರವನ್ನು ಟೀಕಿಸಿ ರಾಜಕೀಯ ಮಾಡುವುದು ಬೇಡ ಎಂದು ಜೆಡಿಎಸ್‌ ನಿರ್ಧರಿಸಿತ್ತು.ಆದರೆ, ಬಿಜೆಪಿ ಅಧಿಕಾರದ ಲಾಲಸೆ ಪ್ರದರ್ಶಿಸಿದರೆ ಸುಮ್ಮನಿರುವುದು ಹೇಗೆ? ಬಿಎಸ್‌ ಯಡಿಯೂರಪ್ಪನವರು ತಾವು ಖರೀದಿಸಿ ತಂದ ಕುದುರೆಗಳ ಮೇಲೆ ತಾವೇ ಸವಾರಿ ಮಾಡಿದ್ದರೆ ಈ ಪರಿಸ್ಥಿತಿ ಬರುತ್ತಲೇ ಇರಲಿಲ್ಲ. ಅದರ ಬದಲಿಗೆ ಮಾಧ್ಯಮಗಳು ಬಣ್ಣಿಸುವ ‘ಸೋಕಾಲ್ಡ್‌ ಹುಲಿ, ಬಾಹುಬಲಿ‘ ಮುಂತಾದವರನ್ನು ಮುಖ್ಯಮಂತ್ರಿ ಸೀಟಿನ ಮೇಲೆ ಕೂರಿಸಿದ್ದೇ ಸದ್ಯದ ರಾಜಕೀಯ ದುಸ್ಥಿತಿಗೆ ಕಾರಣ ಎಂದು ಟೀಕಿಸಿದ್ದಾರೆ.ಇದು ಯಡಿಯೂರಪ್ಪನವರ ಸ್ವಯಂಕೃತ ಅಪರಾಧ ಅಂತ ಲೇವಡಿ ಮಾಡಿದ್ದಾರೆ.

ರಾಜ್ಯ ಸಂದಿಗ್ಧತೆಗೆ ಸಿಲುಕಿರುವ ಈ ಹೊತ್ತಿನಲ್ಲಿ ಇದೆಂಥ ರಾಜಕೀಯ? ಈಗ ರಾಜ್ಯದ ಎದುರಿಗೆ ಇರುವುದು ನಾಯಕತ್ವದ ಪ್ರಶ್ನೆಯೋ? ಅಥವಾ ಜನರ ಹಿತದ ಪ್ರಶ್ನೆಯೋ? ರಾಜ್ಯದಲ್ಲಿ ಚಿತೆಗಳಿಗೆ ಹಚ್ಚಿದ ಜ್ವಾಲೆ ಇನ್ನೂ ಆರಿಲ್ಲ. ಅದು ಎಂದು ಆರುತ್ತದೆ ಎಂಬುದೇ ಯಾರಿಗೂ ತಿಳಿಯುತ್ತಿಲ್ಲ. ಇಂಥ ಸಂದರ್ಭದಲ್ಲಿ ಇಂಥ ಕ್ಷುಲ್ಲಕ ರಾಜಕಾರಣ ಅಗತ್ಯವಿದೆಯೇ?
2/7

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 9, 2021

ಇನ್ನೊಂದು ಕಡೆ ಕಾಂಗ್ರೆಸ್ ವಿರುದ್ದವೂ ಕಿಡಿಕಾರಿದ ಅವ್ರು, ಅನ್ನ ಹಳಸಿದೆ, ನಾಯಿ ಕಾದಿದೆ ಎಂಬಂತೆ ರಾಜ್ಯದ ಮತ್ತೊಂದು ರಾಜಕೀಯ ಪಕ್ಷ ಕಾದು ಕುಳಿತಿದೆ. ರಾಜ್ಯದಲ್ಲಿ ಹೊತ್ತಿರುವ ಚಿತೆಗಳ ಬೆಂಕಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಬೆಂದು ಹೋದರೆ, ನಂತರದ ದಿನಗಳಲ್ಲಿ ತನ್ನನ್ನು ಅಧಿಕಾರದಲ್ಲಿ ಪ್ರತಿಷ್ಠಾಪಿಸಿಕೊಳ್ಳಲು ಆ ರಾಷ್ಟ್ರೀಯ ಪಕ್ಷ ಪ್ರಯತ್ನಗಳನ್ನು ಪೈಪೋಟಿಗೆ ಬಿದ್ದು ನಡೆಸುತ್ತಿದೆ ಅಂತ ಆಕ್ರೋಶ ಹೊರ ಹಾಕಿದರು.

BSY B S Yediyurappa

ರಾಜ್ಯದ ಸಂಕಷ್ಟದ ಕಾಲದಲ್ಲಿ ಬಿಜೆಪಿಯಲ್ಲಿ ಉಂಟಾಗಿರುವ ಅಧಿಕಾರದ ಲಾಲಸೆ, ಅದನ್ನು ಬಳಸಿಕೊಂಡು ಅಧಿಕಾರಕ್ಕೆ ಬರಲು ಕೋವಿಡ್‌ ನಿಯಮಗಳನ್ನೆಲ್ಲ ಮೀರಿ ಬೀದಿಗೆ ಬಿದ್ದಿರುವ ಕಾಂಗ್ರೆಸ್‌ ಪಕ್ಷಗಳೆರಡೂ ಆತ್ಮಾವಲೋಕನೆ ಮಾಡಿಕೊಳ್ಳಬೇಕು. ಸಂಕಷ್ಟದ ಪರಿಸ್ಥಿತಿಯನ್ನೇ ಅಧಿಕಾರಕ್ಕೇರಲು ಏಣಿ ಮಾಡಿಕೊಳ್ಳುತ್ತಿರುವ ಈ ಪಕ್ಷಗಳ ನಡೆಯನ್ನು ಜನ ಗಮನಿಸಬೇಕು.ಆರೋಗ್ಯ ತುರ್ತು ಪರಿಸ್ಥಿತಿಯ ನಡುವೆ ಕನ್ನಡ, ಕರ್ನಾಟಕದ ಅಸ್ಮಿತೆ ಪ್ರಶ್ನೆ ಮಾಡುವಂಥ ಘಟನೆಗಳು ಒಂದರ ಹಿಂದೊಂದರಂತೆ ನಡೆದವು.ಈ ವಿಚಾರವಾಗಿ ಬಿಜೆಪಿ, ಕಾಂಗ್ರೆಸ್‌ ಏನು ಮಾಡಿದವು? ಇವರೆಲ್ಲ ರಾಜಕೀಯ ಮಾಡುತ್ತಿರುವುದು ಕರ್ನಾಟಕದಲ್ಲೇ ಅಲ್ಲವೇ?ಆದರೆ, ಕರ್ನಾಟಕದ ಸ್ವಾಭಿಮಾನಕ್ಕೆ ದಕ್ಕೆಯಾದಾಗ ಇವರೆಲ್ಲ ಅದ್ಯಾವ ಬಿಲದಲ್ಲಿ ಅಡಗಿದ್ದರು? ಎಂದು ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.

TAGGED:bjpCoronaCovid 19Kumaraswamypoliticsಎಚ್‍ಡಿಕೆಕನ್ನಡ ನ್ಯೂಸ್ಕರ್ನಾಟಕಕುಮಾರಸ್ವಾಮಿಬಿಜೆಪಿಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Latest

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Public TV
By Public TV
3 minutes ago
gas cylinder mariage commercial
Bengaluru City

ಕಲ್ಯಾಣ ಮಂಟಪಗಳಿಗೆ ಗ್ಯಾಸ್‌ ಟ್ರಬಲ್‌ – ಮದ್ವೆ ಮನೆಯರೇ ತರಬೇಕು ಸಿಲಿಂಡರ್!

Public TV
By Public TV
43 minutes ago
AI War
Latest

ಯುದ್ಧ ಭೂಮಿಯಲ್ಲಿ AI – ಇರಾನ್‌ ಮೇಲಿನ ದಾಳಿಗೆ ʻಕ್ಲಾಡ್ʼ ಸಹಾಯ ಮಾಡಿದ್ದು ಹೇಗೆ?

Public TV
By Public TV
57 minutes ago
Banashankari temple Bengaluru
Bengaluru City

ಬನಶಂಕರಿ ಅಮ್ಮನವರ ಪ್ರಸಾದಕ್ಕೂ ತಟ್ಟಿತು ಯುದ್ಧದ ಬಿಸಿ

Public TV
By Public TV
2 hours ago
Vijayapura Fire Accident
Districts

ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ – ಹೊತ್ತಿಯುರಿದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು

Public TV
By Public TV
2 hours ago
Mukesh Ambani Reliance Donald Trump
Latest

ಅಮೆರಿಕದಲ್ಲಿ ರಿಲಯನ್ಸ್‌ನಿಂದ ಹೊಸ ತೈಲ ಸಂಸ್ಕರಣಾ ಘಟಕ: ಟ್ರಂಪ್‌ ಘೋಷಣೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?