Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಸೂಚಿಸಿ: ಸ್ಪೀಕರ್​​​ಗೆ ಸಿದ್ದರಾಮಯ್ಯ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಸೂಚಿಸಿ: ಸ್ಪೀಕರ್​​​ಗೆ ಸಿದ್ದರಾಮಯ್ಯ ಪತ್ರ

Bengaluru City

ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಸೂಚಿಸಿ: ಸ್ಪೀಕರ್​​​ಗೆ ಸಿದ್ದರಾಮಯ್ಯ ಪತ್ರ

Public TV
Last updated: June 10, 2021 4:11 pm
Public TV
Share
3 Min Read
Siddu Kageri
SHARE

ಬೆಂಗಳೂರು: ಕೊರೊನಾ ವಿಚಾರದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಸೂಚಿಸಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಕೋರಿದ್ದಾರೆ.

ಈ ಸಂಬಂಧ ವಿಧಾನಸಭೆ ಅಧ್ಯಕ್ಷರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ಕೊರೊನಾ ಸಾಂಕ್ರಾಮಿಕವನ್ನು ನಿರ್ವಹಿಸಲು ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತು ಝೂಮ್ ತಂತ್ರಾಂಶದ ಮೂಲಕ ಮಾಹಿತಿ ಪಡೆಯಲು ಉದ್ದೇಶಿಸಿ ಅಧಿಕಾರಿಗಳಿಗೆ ಪತ್ರ ಬರೆದಿದ್ದೆ. ಝೂಮ್ ತಂತ್ರಾಂಶದ ಮೂಲಕ ಹಾಜರಾಗಿ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಸಹ ಪತ್ರ ಬರೆಯಲಾಗಿತ್ತು. ಮೂರು ದಿನಗಳ ನಂತರ ಮುಖ್ಯ ಕಾರ್ಯದರ್ಶಿಗಳು ನನಗೆ ಪತ್ರ ಬರೆದು ವಿರೋಧ ಪಕ್ಷದ ನಾಯಕರು ಸಭೆ ನಡೆಸಬಾರದು, ಬೇಕಿದ್ದರೆ ಪತ್ರ ಬರೆದು ಮಾಹಿತಿ ಪಡೆಯಬಹುದಾಗಿದೆ ಎಂದು ಮುಖ್ಯಮಂತ್ರಿಗಳು ಅನುಮೋದನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

Siddu Letter medium

ಕಳೆದ 21 ತಿಂಗಳಲ್ಲಿ ಸರ್ಕಾರಕ್ಕೆ ಹಲವು ಪತ್ರಗಳನ್ನು ಬರೆದಿದ್ದೇನೆ. ಕೋವಿಡ್ ಸಂದರ್ಭದಲ್ಲೂ ಸುಮಾರು 15ಕ್ಕೂ ಹೆಚ್ಚು ಪತ್ರಗಳನ್ನು ಬರೆದಿದ್ದೇನೆ. ಇವುಗಳಿಗೆ ಇದುವರೆಗೂ ಸಹ ಒಂದು ಅಕ್ಷರದ ಉತ್ತರವೂ ಬಂದಿಲ್ಲ. ಸರ್ಕಾರವೊಂದು ಜೀವಂತವಾಗಿದ್ದರೆ, ಅದಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇದ್ದರೆ ವಿರೋಧ ಪಕ್ಷದ ನಾಯಕರು ಪತ್ರ ಬರೆದ ಕೂಡಲೇ ಮಾಹಿತಿ ನೀಡುತ್ತಿತ್ತು.

Siddu Letter 1 medium

ವಿರೋಧ ಪಕ್ಷವಾಗಿ ನಾವೂ ಸಹ ಜನರ ಜೊತೆ ನಿಂತು ಅವರ ದುಃಖಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದೇವೆ. ಆದರೆ ರಾಜ್ಯದ ಆರೋಗ್ಯ, ಆರ್ಥಿಕ ಮತ್ತು ಕೃಷಿ ವಲಯಗಳಲ್ಲಿ ಏನಾಗುತ್ತಿದೆ? ಎಂದು ತಿಳಿದುಕೊಂಡು ಅವುಗಳ ಸಮಸ್ಯೆಗಳನ್ನು ಸರಿಪಡಿಸುವಂತೆ ಒತ್ತಾಯಿಸಬೇಕಾದುದು, ಸಲಹೆಗಳನ್ನು ನೀಡಬೇಕಾದುದು ವಿರೋಧ ಪಕ್ಷದ ನಾಯಕನ ಶಾಸನಾತ್ಮಕ ಅಧಿಕಾರ. ವಿಳಂಬ ಮಾಡದೆ ವಿರೋಧ ಪಕ್ಷದ ನಾಯಕರಿಗೆ ಸಮರ್ಪಕವಾದ ಮಾಹಿತಿಯನ್ನು ನೀಡಬೇಕಾಗಿರುವುದು ಸರ್ಕಾರದ ಸಂವಿಧಾನಾತ್ಮಕ ಜವಾಬ್ದಾರಿ. ಆದರೆ ಈ ಜವಾಬ್ಧಾರಿಗಳನ್ನು ಸರ್ಕಾರ ಸಂಪೂರ್ಣ ನಿರ್ಲಕ್ಷಿಸಿದೆ. ಹಾಗಾಗಿ ಸರ್ಕಾರವು ಉದ್ದೇಶಪೂರ್ವಕವಾಗಿ ಮಾಹಿತಿ ಕೊಡದೆ ಹಕ್ಕು ಚ್ಯುತಿಯನ್ನುಂಟು ಮಾಡಿದೆ ಎಂಬ ನಿಲುವಿಗೆ ಬರಬೇಕಾದ ಕೃತ್ಯವೆಸಗುತ್ತಿದೆ.

Siddu Letter 2 medium

ನನಗೆ ಅಧಿಕಾರಿಗಳ ಕಾರ್ಯವೈಖರಿಗಳ ಕುರಿತು ಪರಿಶೀಲನೆ ನಡೆಸುವ, ನಿರ್ದೇಶನಗಳನ್ನು ನೀಡುವ ಉದ್ದೇಶವಿಲ್ಲ. ಅಷ್ಟರಮಟ್ಟಿಗಿನ ಸಾಂವಿಧಾನಿಕ ಅರಿವು ಇದೆ. ಕೆಲವು ಮಾಹಿತಿ ಪಡೆಯುವುದಷ್ಟೇ ನನ್ನ ಉದ್ದೇಶ. ಮಾಹಿತಿ ನೀಡಬೇಕಾದ ನಮೂನೆಯನ್ನು ಸಿದ್ಧಪಡಿಸಿ ಅಧಿಕಾರಿಗಳಿಗೆ ನೀಡಲಾಗಿದೆ. ಆ ನಮೂನೆಯನ್ನು ಸಮರ್ಪಕವಾಗಿ ಅರ್ಥ ಮಾಡಿಕೊಂಡು ಭರ್ತಿ ಮಾಡುವಷ್ಟು ತಿಳಿವಳಿಕೆ ಇರುವವರೂ ಕಡಿಮೆ ಇದ್ದಾರೆ. ಕಳೆದ ಎರಡು ವರ್ಷಗಳಿಂದ ನಾವು ಕೇಳಿರುವ ಮಾಹಿತಿಯೊಂದಾದರೆ ಅಧಿಕಾರಿಗಳು ಇನ್ನೊಂದು ಮಾಹಿತಿ ನೀಡಿದ್ದಾರೆ. ಈ ಗೊಂದಲಗಳಿಗೆ ಅವಕಾಶ ನೀಡಬಾರದೆಂಬ ಉದ್ದೇಶದಿಂದಲೇ ನೇರವಾಗಿ ಮುಖತಃ ಮಾಹಿತಿ ಪಡೆಯಲು ಉದ್ದೇಶಿಸಿದ್ದೆ. ಅದಕ್ಕಾಗಿ ಒಂದು ಜಿಲ್ಲೆಗೆ ಅರ್ಧ ಗಂಟೆಯಿಂದ ಒಂದು ಗಂಟೆಯಷ್ಟು ಮಾತ್ರ ಕಾಲ ನಿಗಧಿ ಪಡಿಸಿದ್ದೆ. ಖುದ್ದು ಮಾಹಿತಿ ಪಡೆಯುವ ನನ್ನ ಹಕ್ಕನ್ನು ಸರ್ಕಾರವು ನಿರಾಕರಿಸಿರುವುದರಿಂದ ಅದು ಹಕ್ಕು ಚ್ಯುತಿಯಾಗುವುದಿಲ್ಲವೆ? ಜೊತೆಗೆ ನಾನು ಕಳುಹಿಸಿದ್ದ ನಮೂನೆಯಲ್ಲಿ ಕೇವಲ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮಾತ್ರ ಮಾಹಿತಿ ಕಳುಹಿಸಿದ್ದಾರೆ. ಉಳಿದವರು ಬೇಜವಾಬ್ಧಾರಿ ವರ್ತನೆ ತೋರಿದ್ದಾರೆ. ಅವರ ವರ್ತನೆಗೆ ಯಾವ ಶಿಕ್ಷೆ ವಿಧಿಸುತ್ತೀರಿ?

Speaker Kageri

ಮುಖ್ಯ ಕಾರ್ಯದರ್ಶಿಗಳು ನನಗೆ ಕಳಿಸಿರುವ ಪತ್ರದಲ್ಲಿ 2009 ರ ಸುತ್ತೋಲೆಯನ್ನು ನಮೂದಿಸಿದ್ದಾರೆ. 2009 ರ ಸುತ್ತೋಲೆಯನ್ನು 2016 ರಲ್ಲಿ ಪುನರುಚ್ಛರಿಸಲಾಗಿದೆ ಎಂದು ತಿಳಿಸಲಾಗಿದೆ. ಆದರೆ ಹಿಂದೆ ಸುತ್ತೋಲೆಗಳನ್ನು ಹೊರಡಿಸಿದಾಗ ಸರ್ಕಾರಕ್ಕೆ ತಂತ್ರಜ್ಞಾನ ಸಂಬಂಧಿ ಅನುಕೂಲಗಳಿರಲಿಲ್ಲ. ಹಾಗಾಗಿ ಸಭೆ ಕರೆದು ಮಾಹಿತಿ ಪಡೆಯಬೇಕಾಗಿತ್ತು. ಆದರೆ ಕಳೆದ ಎರಡು ವರ್ಷಗಳಿಂದ ಝೂಮ್, ಗೂಗಲ್ ಮುಂತಾದ ಅಪ್ಲಿಕೇಷನ್ನುಗಳ ಮೂಲಕ ಮಾಹಿತಿ ಪಡೆಯಬಹುದಾಗಿದೆ. ಇದಕ್ಕಾಗಿ ಸರ್ಕಾರವೇನೂ ವ್ಯವಸ್ಥೆ ಮಾಡಬೇಕಾಗಿರಲಿಲ್ಲ. ಸರ್ಕಾರ ಇದಿಷ್ಟನ್ನೂ ಅರ್ಥಮಾಡಿಕೊಳ್ಳದ ಸ್ಥಿತಿ ತಲುಪಿದೆ.

ಕೊರೊನಾ ವಿಚಾರದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಸೂಚಿಸಬೇಕು ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಕೋರುತ್ತೇನೆ. pic.twitter.com/MW9qw9FNtC

— Siddaramaiah (@siddaramaiah) June 10, 2021

ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರು ಜಿಲ್ಲಾಧಿಕಾರಿಗಳ ಕಛೇರಿಗೆ ಹೋಗಿ ಬರ ಮುಂತಾದ ವಿಚಾರಗಳ ಕುರಿತು ಖುದ್ದು ಮಾಹಿತಿ ಪಡೆದಿದ್ದರು. ಅದಕ್ಕೆ ನನ್ನ ಸರ್ಕಾರ ವಿರೋಧ ವ್ಯಕ್ತಪಡಿಸಿರಲಿಲ್ಲ. ಆದರೆ ಈಗ ಅದೇ ರೀತಿಯಲ್ಲಿ ತಂತ್ರಜ್ಞಾನದ ನೆರವು ಪಡೆದು ಮಾಹಿತಿ ಸಂಗ್ರಹಿಸುವುದನ್ನು ನಿರಾಕರಿಸಲಾಗುತ್ತಿದೆ. ಸರ್ಕಾರದ ಈ ಕ್ರಮವು ಸಂವಿಧಾನದ ಹಲವು ಅನುಚ್ಛೇದಗಳ ಪ್ರಕಾರ ಹಕ್ಕುಚ್ಯುತಿಯಾಗುತ್ತದೆ ಎಂದು ಸಿದ್ದರಾಮಯ್ಯ ಅವರು ಸ್ಪೀಕರ್ ಅವರಿಗೆ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.

TAGGED:bjpcongresskannada newsPublic TVsiddaramaiahSpeaker Vishweshwara Hegde Kageriಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿವಿಶ್ವೇಶ್ವರ ಹೆಗಡೆ ಕಾಗೇರಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Indian Origin Men Fined Rs 1.7 Lakh Each In for Spitting Paan On Streets
Latest

ಲಂಡನ್‌ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರಿಗೆ ತಲಾ 1.7 ಲಕ್ಷ ದಂಡ

Public TV
By Public TV
8 minutes ago
Pralhad Joshi 1
Latest

ನವೀಕರಿಸಬಹುದಾದ ಇಂಧನದಲ್ಲಿ ಭಾರತ 3ನೇ ಅತಿದೊಡ್ಡ ರಾಷ್ಟ್ರ: ಪ್ರಹ್ಲಾದ್ ಜೋಶಿ

Public TV
By Public TV
45 minutes ago
Droupadi Murmu Ram Temple
Ayodhya Ram Mandir

ಅಯೋಧ್ಯೆ ರಾಮಮಂದಿರಕ್ಕೆ ದ್ರೌಪದಿ ಮುರ್ಮು ಭೇಟಿ – 150 ಕೆಜಿ ತೂಕದ ಚಿನ್ನ ಲೇಪಿತ ಲೋಹದ ತಟ್ಟೆ ಪ್ರತಿಷ್ಠಾಪನೆ

Public TV
By Public TV
45 minutes ago
Ras Laffan
Latest

ವಿಶ್ವದ ಅತಿ ದೊಡ್ಡ LNG ಸ್ಥಾವರದ ಮೇಲೆ ಇರಾನ್‌ ದಾಳಿ- ಭಾರತದ ಮೇಲೆ ಪರಿಣಾಮ ಏನು?

Public TV
By Public TV
45 minutes ago
Yatnal
Davanagere

ದಾವಣಗೆರೆ ಬಿಜೆಪಿ ಟಿಕೆಟ್ ಬದಲಾದ್ರೂ ಆಶ್ಚರ್ಯ ಇಲ್ಲ: ಯತ್ನಾಳ್‌ ಹೊಸ ಬಾಂಬ್‌

Public TV
By Public TV
1 hour ago
Mantralayam Sri Raghavendra Swamy Matha
Districts

ಮಂತ್ರಾಲಯದಲ್ಲಿ ಯುಗಾದಿ ಸಂಭ್ರಮ – ಮೂಲ ರಾಮದೇವರಿಗೆ ತೈಲ ಅಭ್ಯಂಗನ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?