ಸಿದ್ದರಾಮಯ್ಯಗೆ ಬುದ್ಧಿ ಇಲ್ಲ, ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲಿರಲು ವಿಫಲ: ಈಶ್ವರಪ್ಪ

Public TV
1 Min Read
eshwarappa 3

ಶಿವಮೊಗ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬುದ್ಧಿಯೇ ಇಲ್ಲ. ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲಿ ಇರಲು ಸಹ ವಿಫಲವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

siddaramaiah 4 medium

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಚಿವರು ನಮ್ಮ ವಿರುದ್ದ ಆರೋಪ ಮಾಡಲು ಸಹ ಕಾಂಗ್ರೆಸ್ ವಿಫಲವಾಗಿದೆ. ಕೋವಿಡ್‍ಗೆ ದೇಶದಲ್ಲಿ ಲಸಿಕೆ ಬಂದ ಆರಂಭದಲ್ಲಿ ಲಸಿಕೆ ತೆಗೆದುಕೊಳ್ಳಬೇಡಿ ಎಂದು ಇಡೀ ದೇಶದಲ್ಲಿ ಅಪಪ್ರಚಾರ ಮಾಡಿದವರೇ ಕಾಂಗ್ರೆಸ್ಸಿಗರು. ಆದರೆ ಈಗ ಲಸಿಕೆ ಪಡೆದುಕೊಳ್ಳಲು ಅವರೇ ಕ್ಯೂನಲ್ಲಿ ನಿಂತಿದ್ದಾರೆ. ಜೊತೆಗೆ ಲಸಿಕೆ ಸಿಗುತ್ತಿಲ್ಲ ಎಂದು ಆರೋಪ ಮಾಡುತ್ತಿದ್ದಾರೆ ಕಿಡಿಕಾರಿದ್ದಾರೆ. ಇದನ್ನೂ ಓದಿ: 100 ನಾಟೌಟ್, ಕಾಂಗ್ರೆಸ್ ಪ್ರತಿಭಟನೆ – ಸಿದ್ದರಾಮಯ್ಯ, ಡಿಕೆಶಿ ವಶಕ್ಕೆ

vaccine pakistan

ಇಡೀ ಪ್ರಪಂಚದಲ್ಲಿ ಆಗದಿರುವ ಒಳ್ಳೆಯ ಕೆಲಸವನ್ನು ನಮ್ಮ ದೇಶದಲ್ಲಿ ನರೇಂದ್ರ ಮೋದಿಯವರು ಮಾಡಿದ್ದಾರೆ. ಇಡೀ ದೇಶದ ಜನರಿಗೆ ಲಸಿಕೆ ಪಡೆದುಕೊಳ್ಳಿ ಎಂದು ಮೋದಿಯವರು ಮನವಿ ಮಾಡಿದರೆ, ಕಾಂಗ್ರೆಸ್ ನಾಯಕರು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಿದರು. ಲಸಿಕೆ ಹಾಕಿಸಿಕೊಳ್ಳಬೇಡಿ ಎಂದು ದೇಶದಲ್ಲಿ ಸಾರಿದರು. ಮೋದಿ ಹಾಗೂ ಬಿಜೆಪಿ ಲಸಿಕೆ ಎಂದು ದಿಕ್ಕು ತಪ್ಪಿಸುವ ಕೆಲಸ ಮಾಡಿದರು ಎಂದು ಸಚಿವ ಈಶ್ವರಪ್ಪ ಕಾಂಗ್ರೆಸ್ ನಾಯಕರ ವಿರುದ್ದ ಹರಿಹಾಯಿದ್ದಾರೆ. ಇದನ್ನೂ ಓದಿ: ಜಮೀರ್ ಅಹ್ಮದ್ ವಿರುದ್ಧ ಸವಿತಾ ಸಮಾಜ ಆಕ್ರೋಶ

Share This Article
Leave a Comment

Leave a Reply

Your email address will not be published. Required fields are marked *