Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಂಡ ಹೆಂಡತಿ ಮಧ್ಯೆಯೇ ಅಸಮಾಧಾನ ಇರುತ್ತೆ, ಅಂಥಾದ್ರಲ್ಲಿ ಇಷ್ಟು ದೊಡ್ಡ ಪಕ್ಷದಲ್ಲಿ ಅಸಮಾಧಾನ ಸಾಮಾನ್ಯ – ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗಂಡ ಹೆಂಡತಿ ಮಧ್ಯೆಯೇ ಅಸಮಾಧಾನ ಇರುತ್ತೆ, ಅಂಥಾದ್ರಲ್ಲಿ ಇಷ್ಟು ದೊಡ್ಡ ಪಕ್ಷದಲ್ಲಿ ಅಸಮಾಧಾನ ಸಾಮಾನ್ಯ – ಸುಧಾಕರ್

Bengaluru City

ಗಂಡ ಹೆಂಡತಿ ಮಧ್ಯೆಯೇ ಅಸಮಾಧಾನ ಇರುತ್ತೆ, ಅಂಥಾದ್ರಲ್ಲಿ ಇಷ್ಟು ದೊಡ್ಡ ಪಕ್ಷದಲ್ಲಿ ಅಸಮಾಧಾನ ಸಾಮಾನ್ಯ – ಸುಧಾಕರ್

Public TV
Last updated: June 13, 2021 12:14 pm
Public TV
Share
2 Min Read
SUDAKAR 1
SHARE

ಬೆಂಗಳೂರು: ಗಂಡ ಹೆಂಡತಿ ಮಧ್ಯೆಯೇ ಅಸಮಧಾನ ಇರುತ್ತದೆ. ಅಂಥಾದ್ರಲ್ಲಿ ಇಷ್ಟು ದೊಡ್ಡ ಪಕ್ಷದಲ್ಲಿ ಅಸಮಾಧಾನ ಸಾಮಾನ್ಯ. ಯಾರ್ಯಾರಿಗೆ ಅಸಮಾಧಾನ ಇದೆಯೋ ಅವರ ಜೊತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಚರ್ಚೆ ಮಾಡುತ್ತಾರೆ ಎಂದು ಆರೋಗ್ಯ ಸಚಿವರಾದ ಡಾ.ಕೆ ಸುಧಾಕರ್ ಹೇಳಿಕೆ ನೀಡಿದ್ದಾರೆ.

arun singh bjp

ಬೆಂಗಳೂರಿನಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಸುಧಾಕರ್ ಅವರು, ಮುಂದಿನ ವಾರ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸುತ್ತಿದ್ದಾರೆ. ಅರುಣ್ ಸಿಂಗ್ ರಾಜ್ಯ ಉಸ್ತುವಾರಿಗಳು, ಹಿರಿಯ ರಾಷ್ಟ್ರೀಯ ನಾಯಕರು. ಅರುಣ್ ಸಿಂಗ್ ರಾಜ್ಯಕ್ಕೆ ಬಂದು ಗೊಂದಲಗಳಿಗೆ ತೆರೆ ಎಳೆಯುತ್ತಾರೆ. ಅಸಮಾಧಾನ ಸರಿಪಡಿಸಿ ಸಮಾಧಾನ ಮಾಡುತ್ತಾರೆ. ಆಡಳಿತಕ್ಕೆ ಇನ್ನೂ ಯಾವ ರೀತಿ ಚುರುಕು ಮುಟ್ಟಿಸಬೇಕೆಂದು ಚರ್ಚೆ ಮಾಡುತ್ತಾರೆ. ಯಡಿಯೂರಪ್ಪನವರೇ ಮುಂದಿನ ಎರಡು ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಎಲ್ಲ ಹಿರಿಯ ನಾಯಕರೂ ಇದನ್ನೇ ಹೇಳಿದ್ದಾರೆ. ನಾಯಕತ್ವದ ಚರ್ಚೆ ಅನಾವಶ್ಯಕ ಎಂದರು. ಇದನ್ನೂ ಓದಿ:ಬಿಜೆಪಿಯಲ್ಲಿ ದಿಢೀರ್ ಬೆಳವಣಿಗೆ – ಮತ್ತೆ ದೆಹಲಿಗೆ ತೆರಳಿದ ಶಾಸಕ ಬೆಲ್ಲದ್

Arun Singh 11

ಬೆಂಗಳೂರಿನಲ್ಲಿ ಸೋಂಕು ಹೆಚ್ಚಾಗುತ್ತಿರುವ ವಿಚಾರವಾಗಿ ಮಾತನಾಡಿ, ತುಂಬಾ ಜನ ಬೆಂಗಳೂರಿಗೆ ಬರುತ್ತಿದ್ದಾರೆ. ಬಂದವರು ಮುನ್ನೆಚ್ಚರಿಕೆ ಕ್ರಮ ತಗೋಬೇಕು. ಟೆಸ್ಟಿಂಗ್ ಹೆಚ್ಚು ಮಾಡಿದ್ದೇವೆ. 14ರಿಂದ ಅನ್ಲಾಕ್ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿ. ಸೋಂಕು ಇನ್ನೂ ಗಂಭೀರವಾಗಿದೆ. ನಮ್ಮ ರಕ್ಷಣೆ ನಮ್ಮ ಕೈಯಲ್ಲಿದೆ. ಜನ ಎಚ್ಚರಿಕೆಯಿಂದ ಇರಬೇಕು ಕೋವಿಡ್ ನಿಯಮವನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು.

Unlock medium

ಕೆಲವು ಔಷಧ, ಮೆಡಿಕಲ್ ಪರಿಕರಗಳ ಜಿಎಸ್ಟಿಯನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಿದೆ ಇದರಿಂದ ಸ್ವಾಭಾವಿಕವಾಗಿ ದರ ಇಳಿಯುತ್ತೆ. ಸರ್ಕಾರಕ್ಕೂ ದರ ಕಮ್ಮಿಯಾಗುತ್ತದೆ. ನಿನ್ನೆ 3.5 ಲಕ್ಷ ಡೋಸ್ ಲಸಿಕೆ ಕೇಂದ್ರದಿಂದ ಬಂದಿದೆ. ಈ ತಿಂಗಳಲ್ಲೇ 80 ಲಕ್ಷ ಡೋಸ್ ಹಾಕುತ್ತೇವೆ. ಇಲ್ಲಿಯವರೆಗೆ 1.68 ಕೋಟಿ ಡೋಸ್ ಹಾಕಿದ್ದೇವೆ. ದೇಶದಲ್ಲಿ ನಮ್ಮ ರಾಜ್ಯ ಆರನೇ ಸ್ಥಾನದಲ್ಲಿದೆ. ನಮಗೆ ಬಂದ ಲಸಿಕೆ ಪೈಕಿ ಶೇ.98ರಷ್ಟು ಲಸಿಕೆ ಕೊಟ್ಟಿದ್ದೇವೆ. ಮುಂದೆ ಕೇಂದ್ರವೇ ನಮಗೆ ಲಸಿಕೆ ಕೊಡಲಿದೆ ಎಂದು ಮಾಹಿತಿ ಹಂಚಿಕೊಂಡರು.  ಇದನ್ನೂ ಓದಿ: ಜೂನ್ 16ಕ್ಕೆ ಅರುಣ್ ಸಿಂಗ್ ರಾಜ್ಯ ಪ್ರವಾಸ ಫಿಕ್ಸ್: ಮೂರು ದಿನಗಳ ಭೇಟಿ ಕುತೂಹಲ

VACCINE 4

ಅರವಿಂದ್ ಬೆಲ್ಲದ್ ದೆಹಲಿ ಭೇಟಿ ವಿಚಾರವಾಗಿ ಮಾತನಾಡಿ, ದೆಹಲಿಗೆ ಹೋಗಿ ಬರುವುದರಲ್ಲಿ ಏನು ವಿಶೇಷ ಇಲ್ಲ. ಏನೇನೋ ಕೆಲಸ ಇರುತ್ತೆ ಅಂತ ದೆಹಲಿಗೆ ಹೋಗ್ತಾರೆ. ದೆಹಲಿಗೆ ಹೋಗಿ ಬರೋದೇ ಅಪರಾಧ ಆದ್ರೆ ನಮ್ಮಂಥೋರು ದೆಹಲಿದೆ ಹೋಗೋದಾ ಬೇಡವಾ ಎಂದು ಯೋಚಿಸ್ಬೇಕಾಗುತ್ತೆ. ನಾನು ದೆಹಲಿಗೆ ಹೋಗಿ ಒಂದೂವರೆ ವರ್ಷ ಆಯ್ತು ಎಂದು ಹೇಳಿದರು.

ARAVIND BELLAD medium

ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಹಂಗಾಮಿ ಉಪಕುಲಪತಿ ನೇಮಕ ಆಗಿದೆ. ರಾಜ್ಯಪಾಲರು ರಾಜೀವ್ ಗಾಂಧಿ ವಿವಿಗೆ ಹಂಗಾಮಿ ಉಪಕುಲಪತಿ ನೇಮಿಸಿದ್ದಾರೆ. ಈ ಬಗ್ಗೆ ನಾನು ಎರಡು ಮೂರು ವಾರಗಳ ಹಿಂದೆ ಭೇಟಿ ಮಾಡಲು ರಾಜ್ಯಪಾಲರಿಗೆ ಪತ್ರ ಬರೆದಿದ್ದೆ. ಕೋವಿಡ್ ನಿಂದಾಗಿ ರಾಜ್ಯಪಾಲರು ಯಾರ ಭೇಟಿಯೂ ಮಾಡುತ್ತಿಲ್ಲ. ಮೊದಲ ಬಾರಿಗೆ ಖಾಸಗಿ ಕಾಲೇಜಿನ ಒಬ್ಬರು ರಾಜೀವ್ ಗಾಂಧಿ ವಿವಿಗೆ ಹಂಗಾಮಿ ಉಪಕುಲಪತಿಯಾಗಿ ನೇಮಕವಾಗಿದ್ದಾರೆ. ರಾಜೀವ್ ಗಾಂಧಿ ವಿವಿಯಲ್ಲಿ ಯಾರೂ ಹಂಗಾಮಿ ಉಪಕುಲಪತಿ ಇರ್ಲಿಲ್ಲ. ಇದರ ಬಗ್ಗೆ ರಾಜ್ಯಪಾಲರ ಜೊತೆ, ಸಿಎಂ ಜೊತೆ ಚರ್ಚೆ ಮಾಡುತ್ತೇನೆ. ಈ ನೇಮಕ ನನ್ನ ಗಮನಕ್ಕೆ ಬಂದಿಲ್ಲ ಎಂದು ತಿಳಿಸಿದರು.

TAGGED:bjpCentral GovernmentCoronaCovid 19gstPublic TVSudhakarvaccineಅರುಣ್ ಸಿಂಗ್ಕೇಂದ್ರ ಸರ್ಕಾರಕೊರೊನಾಕೋವಿಡ್ 19ಜಿಎಸ್‍ಟಿಪಬ್ಲಿಕ್ ಟಿವಿಬಿಜೆಪಿಲಸಿಕೆ
Share This Article
Facebook Whatsapp Whatsapp Telegram

Cinema news

Ravi Basrur
ಕಿಶೋರ್ ಮೇಗಳಮನೆ ನಿರ್ದೇಶನದ ಚಿತ್ರಕ್ಕೆ ಬಸ್ರೂರು ಸಂಗೀತ
Cinema Latest Sandalwood Top Stories
45 movie 3
`45′ ತ್ರಿಮೂರ್ತಿಗಳ ಸಂಗಮ.. ಕಣ್ತುಂಬಿಕೊಂಡ ಪ್ರೇಕ್ಷಕರ ಜೈಕಾರ..!
Cinema Latest Sandalwood Top Stories
Bigg Boss Kannada 12 Gilli Nata Parents
ಗಿಲ್ಲಿಗೆ ಕೋಲಲ್ಲಿ ಹಿಗ್ಗಾಮುಗ್ಗಾ ಬಾರಿಸಿದ ತಂದೆ
Latest Top Stories TV Shows
Radhika Pandit
ಸಾಂತಾ ಕ್ಲಾಸ್‌ಗಲ್ಲ…ಡಾಡಾ ಕ್ಲಾಸ್‌ಗಾಗಿ ಕಾಯ್ತಿರೋ ರಾಧಿಕಾ ಪಂಡಿತ್
Cinema Latest Sandalwood Top Stories

You Might Also Like

Tarique Rahmans Entry In Dhaka
Latest

ಬುಲೆಟ್‌ ಪ್ರೂಫ್‌ ವಾಹನದಲ್ಲಿ ಢಾಕಾಗೆ ರೆಹಮಾನ್‌ ಎಂಟ್ರಿ; ಲಕ್ಷಾಂತರ ಜನರಿಂದ ಅದ್ದೂರಿ ಸ್ವಾಗತ

Public TV
By Public TV
21 minutes ago
Chitradurga Fire Accident Manasa
Chitradurga

Chitradurga Bus Accident | ಲಾಕೆಟ್ ಮೂಲಕ ಮಗಳ ಗುರುತು ಪತ್ತೆಹಚ್ಚಿದ ಮಾನಸಾ ತಂದೆ

Public TV
By Public TV
53 minutes ago
Chitradurga Bus Accident Hemaraj Family Great Escape
Bengaluru City

ಚಿತ್ರದುರ್ಗ ಬಸ್ ದುರಂತ | ಬಸ್ ಕಿಟಕಿಯಿಂದ ಹಾರಿ ಪ್ರಾಣ ಉಳಿಸಿಕೊಂಡ ದಂಪತಿ

Public TV
By Public TV
55 minutes ago
Maoist Ganesh Uike Killed
Latest

ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ಗೆ ನಾಲ್ವರು ಮಾವೋವಾದಿಗಳು ಬಲಿ

Public TV
By Public TV
1 hour ago
Chitradurga Bus Accident Ramalinga Reddy
Districts

Chitradurga Bus Accident | ಲಾರಿ ಚಾಲಕನ ರ‍್ಯಾಷ್ ಡ್ರೈವ್, ಅಜಾಗರೂಕತೆಯಿಂದ ಅಪಘಾತ: ರಾಮಲಿಂಗಾ ರೆಡ್ಡಿ

Public TV
By Public TV
1 hour ago
Woman techie among three arrested for drug peddling in Hyderabad
Crime

ಗೆಳೆಯನಿಗಾಗಿ ಡ್ರಗ್ಸ್‌ ಮಾರಾಟ – ಮಹಿಳಾ ಟೆಕ್ಕಿ ಸೇರಿದಂತೆ ನಾಲ್ವರು ಅರೆಸ್ಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?