Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

NFSM ಅಭಿಯಾನದಡಿ 12.60 ಕೋ.ರೂ. ಮೌಲ್ಯದ ಬಿತ್ತನೆ ಬೀಜ ಮಿನಿಕಿಟ್ ವಿತರಣೆ: ಬಿ.ಸಿ.ಪಾಟೀಲ್

Public TV
Last updated: June 14, 2021 4:31 pm
Public TV
Share
3 Min Read
B C Patil 1
SHARE

ಬೆಂಗಳೂರು: ತೊಗರಿ, ಹೆಸರು, ಶೇಂಗಾ, ಸೋಯಾ, ಅವರೆ ಬೆಳೆಗಳ ವಿಸ್ತೀರ್ಣ ಹಾಗೂ ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ಉತ್ತೇಜನ ನೀಡಲು ರೈತರಿಗೆ ಪ್ರಮುಖವಾಗಿ ಬೆಳೆಯುವ 19 ಜಿಲ್ಲೆಗಳಲ್ಲಿ ಬಿತ್ತನೆ ಬೀಜಗಳ ಮಿನಿಕಿಟ್ ರೂಪದಲ್ಲಿ “ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ”(ಎನ್.ಎಫ್.ಎಸ್.ಎಂ)ಯೋಜನೆಯಡಿ ರೈತರಿಗೆ ಉಚಿತವಾಗಿ ಬಿತ್ತನೆ ಬೀಜಗಳನ್ನು ನೀಡಲಾಗುತ್ತಿದ್ದು, ಇಲ್ಲಿಯವರೆಗೆ 12.60 ಕೋ.ರೂ. ಮೌಲ್ಯದ ಮಿನಿಕಿಟ್ ಗಳನ್ನು ವಿತರಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿ.ಸಿ.ಪಾಟೀಲ್, ಎನ್.ಎಫ್.ಎಸ್.ಎಂ ಯೋಜನೆಯಡಿ 4 ಕೆಜಿ ತೊಗರಿಯನ್ನು 16 ಜಿಲ್ಲೆಗಳಿಗೆ, 4 ಕೆ.ಜಿ.ಹೆಸರು 4 ಜಿಲ್ಲೆಗಳಿಗೆ 20 ಕೆ.ಜಿಯಂತೆ 8 ಜಿಲ್ಲೆಗಳಿಗೆ ಹಾಗೂ 8 ಕೆ.ಜಿಯಂತೆ 2 ಜಿಲ್ಲೆಗಳಿಗೆ ಸೋಯಾ ಅವರೆಗಳ ಮಿನಿಕಿಟ್ ಗಳನ್ನು ವಿತರಿಸಲಾಗಿದ್ದು, ಮಿಶ್ರಬೆಳೆಗಳನ್ನು ಬೆಳೆಯಲು ಸಹ ಈ ಅಭಿಯಾನದಡಿ ರೈತರನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು.

B C Patil 2 medium

2020-21 ನೇ ಸಾಲಿನಲ್ಲಿ 153.08 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಆಹಾರ ಧಾನ್ಯಗಳ ಉತ್ಪಾದನೆಯಾಗಿದ್ದು, ದೇಶದ ಸರಾಸರಿಗೆ ಹೋಲಿಸಿದಲ್ಲಿ ಶೇ.2 ರಷ್ಟು ಹಾಗೂ ರಾಜ್ಯದ ಸರಾಸರಿಗೆ ಇದನ್ನು ಹೋಲಿಸಿದರೆ ಕರ್ನಾಟಕದಲ್ಲಿ ಶೇ.10 ರಷ್ಟು ಹೆಚ್ಚಿನ ಆಹಾರ ಧಾನ್ಯಗಳ ಉತ್ಪಾದನೆಯಾಗಿದೆ. ಕೋವಿಡ್ ಸಂಕಷ್ಟದಲ್ಲಿಯೂ ಕೂಡ ಕಳೆದ ಬಾರಿ ದಾಖಲೆಯ ಪ್ರಮಾಣದಲ್ಲಿ ಆಹಾರ ಧಾನ್ಯಗಳ ಉತ್ಪಾದನೆಯಾಗಿರುವುದನ್ನು ನೋಡಿದರೆ ಕೃಷಿಯತ್ತ ಜನರ ಒಲವು ಹಾಗೂ ಕೋವಿಡ್ ಅವಧಿಯಲ್ಲಿಯೂ ಸಹ ರೈತರ ಶ್ರಮಕ್ಕೆ ಇದು ಸಾಧನೆಯಾಗಿದೆ ಎಂದು ಬಿ.ಸಿ.ಪಾಟೀಲ್ ತಿಳಿಸಿದರು.

ಬಿತ್ತನೆ ಗುರಿ:
ಮುಂಗಾರು ಹಂಗಾಮಿಗೆ 77 ಲಕ್ಷ ಹೆಕ್ಟೇರ್ ಬಿತ್ತನೆ ಗುರಿಯಿದ್ದು, ಇಲ್ಲಿಯವರೆಗೆ 11.73 ಲಕ್ಷ ಹೆಕ್ಟೇರ್ ಬಿತ್ತನೆ ಅಂದರೆ ಶೇ.15.23 ಬಿತ್ತನೆಯಾಗಿದೆ. ಈ ಬಾರಿ 6 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಕ್ಕೆ ಬೇಡಿಕೆಯಿದ್ದು, 7.74 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜ ಲಭ್ಯತೆಯಿದ್ದು, ಇಲ್ಲಿಯವರೆಗೆ 1.79 ಲಕ್ಷ ಕ್ವಿಂಟಾಲ್ ವಿತರಣೆಯಾಗಿದ್ದು, ರೈತ ಸಂಪರ್ಕ ಕೇಂದ್ರಗಳಲ್ಲಿ 1.15 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜ ದಾಸ್ತಾನುಯಿದೆ.

agriculture 1 2 medium

ರಸಗೊಬ್ಬರ ವಿವರ:
ಏಪ್ರಿಲ್ ನಿಂದ ಜೂನ್ ವರೆಗೆ ಡಿಎಪಿ, ಎಂಒಪಿ, ಕಾಂಪ್ಲೆಕ್ಸ್ ಹಾಗೂ ಯೂರಿಯಾ ಸೇರಿದಂತೆ ಒಟ್ಟು 12,77,815 ಮೆಟ್ರಿಕ್ ಟನ್ ರಸಗೊಬ್ಬರಕ್ಕೆ ಬೇಡಿಕೆಯಿದ್ದು, ಇದರಲ್ಲಿ ಒಟ್ಟು 8,02.504 ಮೆ.ಟನ್ ಸರಬರಾಜು, ಒಟ್ಟು 11,54,320 ಆರಂಭಿಕ ಶಿಲ್ಕು, 7,84,075 ಮಾರಾಟವಾಗಿದ್ದು, ಇನ್ನೂ 11,72,750 ದಾಸ್ತಾನು ಉಳಿದಿದೆ. ಈ ಬಾರಿ ಹಂಗಾಮಿನಲ್ಲಿ ಇಲ್ಲಿಯವರೆಗೆ 12 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದು, ಇಲ್ಲಿಯವರೆಗೆ ಎಲ್ಲಿಯೂ ರಸಗೊಬ್ಬರವಾಗಲೀ, ಬಿತ್ತನೆ ಬೀಜದ ಕೊರತೆ ಕಂಡುಬಂದಿಲ್ಲ. ಕಾಳಸಂತೆಯಲ್ಲಿ ಕೃತಕ ಅಭಾವ ಸೃಷ್ಟಿಸುವ ಮೇಲೆ ಹದ್ದಿನ ಕಣ್ಣು ಇಡಲಾಗಿದ್ದು, ಕೃಷಿ ವಿಚಕ್ಷಣಾ ದಳ ನಿರಂತರವಾಗಿ ಕಾಳಸಂತೆಕೋರರು ನಕಲಿ ಮಾರಾಟಗಾರರ ಮೇಲೆ ದಾಳಿ ಮಾಡುತ್ತಲೇ ಇದೆ. ಕಳೆದ ಬಾರಿ 1731.63 ಲಕ್ಷ ಮೌಲ್ಯದ ಕೃಷಿ ಪರಿಕರ ನಕಲಿಬಿತ್ತನೆ ಬೀಜ ರಸಗೊಬ್ಬರ ವಶಪಡಿಸಿಕೊಳ್ಳಲಾಗಿದ್ದು, 263 ಮೊಕ್ಕದ್ದಮೆಗಳನ್ನು ನ್ಯಾಯಾಲಯದಲ್ಲಿ ಹೂಡಲಾಗಿದೆ. ಈ ಬಾರಿ 2021-22 ನೇ ಸಾಲಿನಲ್ಲಿ ಏಪ್ರಿಲ್ 1 ರಿಂದ ಜೂನ್ 11 ರವರೆಗೆ 424.52 ಲಕ್ಷ ಮೌಲ್ಯದ ವಿವಿಧ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳನ್ನು ಹಾವೇರಿ, ಹುಬ್ಬಳ್ಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಜಪ್ತಿ ಮಾಡಲಾಗಿದೆ. ಇನ್ನೂ ಏಪ್ರಿಲ್ 1 ರಿಂದ ಜೂ 13 ರವರೆಗೆ ಶೇ.31 ಹೆಚ್ಚುವರಿ ಅಂದರೆ 169 ಮಿಮೀ ವಾಡಿಕೆ ಮಳೆಯಾಗಿದ್ದು, 222 ಮಿ.ಮೀ ವಾಸ್ತವಿಕ ಮಳೆಯಿತ್ತು.

agriculture 4 medium

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ:
2021-22 ನೇ ಸಾಲಿನಲ್ಲಿ 53,35.967 ಕೇಂದ್ರ ಸರ್ಕಾರದಿಂದ ರೈತ ಫಲಾನುಭವಿಯಾಗಿದ್ದು, ಇದರಲ್ಲಿ 1067.1934 ಕೋ.ರೂ.ಆರ್ಥಿಕ ನೆರವು ನೀಡಲಾಗಿದ್ದು, 55,07,256 ಫಲಾನುಭವಿಗಳಿಗೆ ಇಲ್ಲಿಯವರೆಗೆ 7017.1520 ಕೋ.ರೂ. ಆರ್ಥಿಕ ನೆರವು ನೀಡಲಾಗಿದೆ.ರಾಜ್ಯ ಸರ್ಕಾರ 47,98.095 ರೈ ಫಲಾನುಭವಿಗಳಿಗೆ 2849.1632 ಕೋ.ರೂ. ಆರ್ಥಿಕ ನೆರವು ನೀಡಲಾಗಿದೆ. ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಈಗಾಗಲೇ ಶೇಕಡಾ 85 ರಷ್ಟು ಆಧಾರ್ ಲಿಂಕ್ ಮಾಡಿದ್ದೇವೆ. ಶೇಕಡ 15 ರಷ್ಟು ಅಕೌಂಟ್ ಮೂಲಕ ನೀಡಲಾಗುತ್ತಿದೆ. 2020-21 ನೇ ಸಾಲಿನಲ್ಲಿ ಹೆಚ್ಚುವರಿಯಾಗಿ 5.01 ಲಕ್ಷ ಟಾರ್ಪಲಿನ್ ಗಳನ್ನು ವಿತರಿಸಲಾಗಿದೆ. ರಾಜ್ಯದಲ್ಲಿ 690 ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸ್ಥಾಪಿಸಿದ್ದು, 210 ಕೃಷಿ ಯಂತ್ರೋಪಕರಣಗಳ ಬ್ಯಾಂಕ್ ಗಳ ಸ್ಥಾಪನೆ ಮಾಡಲಾಗಿದೆ.

TAGGED:agriculturefarmersFertilizerKarnataka RainMonsoon rainPublic TVSowing Seedಕರ್ನಾಟಕ ಮಳೆಕೃಷಿಪಬ್ಲಿಕ್ ಟಿವಿಬಿತ್ತನೆ ಬೀಜಮಾನ್ಸೂನ್ ಮಳೆರಸ ಗೊಬ್ಬರರೈತರು
Share This Article
Facebook Whatsapp Whatsapp Telegram

Cinema Updates

Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
3 hours ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
4 hours ago
Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
8 hours ago
Chethan and Kamal hassan
ಕಮಲ್ ಹಾಸನ್ ಸಣ್ಣತನದ ಹೇಳಿಕೆ ನೀಡಿ, ಕನ್ನಡಿಗರಿಗೆ ಕ್ಷಮೆ ಕೇಳದೇ ಮೊಂಡುತನ: ಚೇತನ್
9 hours ago

You Might Also Like

Rajnath Singh
Latest

ಪಿಒಕೆ ನಮ್ಮದೇ, ಅಲ್ಲಿನ ಜನ ಅವರಾಗಿಯೇ ಭಾರತಕ್ಕೆ ಬರುತ್ತಾರೆ: ರಾಜನಾಥ್ ಸಿಂಗ್

Public TV
By Public TV
3 minutes ago
RCB vs PBKS 1
Cricket

ಐಪಿಎಲ್‌ ಇತಿಹಾಸದಲ್ಲಿ ಆರ್‌ಸಿಬಿ ವಿರುದ್ಧ ಮತ್ತೊಂದು ಕೆಟ್ಟ ದಾಖಲೆ ಬರೆದ ಪಂಜಾಬ್‌

Public TV
By Public TV
8 minutes ago
mangaluru police commissioner and dakshina kannada sp transferred
Dakshina Kannada

ಮಂಗಳೂರಲ್ಲಿ ಸಾಲು ಸಾಲು ಹತ್ಯೆ ಬೆನ್ನಲ್ಲೇ ಇಬ್ಬರು ಐಪಿಎಸ್‌ ಅಧಿಕಾರಿಗಳ ಎತ್ತಂಗಡಿ

Public TV
By Public TV
39 minutes ago
RCB 23
Cricket

RCB vs PBKS | 101 ರನ್‌ಗಳಿಗೆ ಪಂಜಾಬ್‌ ಆಲೌಟ್‌ – ಆರ್‌ಸಿಬಿ ಫೈನಲ್‌ಗೇರಲು 102 ರನ್‌ ಗುರಿ

Public TV
By Public TV
57 minutes ago
Haribhau Bagade
Latest

ಮೊಘಲ್‌ ಚಕ್ರವರ್ತಿ ಅಕ್ಬರ್‌, ಜೋಧಾ ಬಾಯಿರನ್ನ ಮದುವೆ ಆಗಿದ್ದರು ಅನ್ನೋದು ಸುಳ್ಳು: ರಾಜಸ್ಥಾನ ರಾಜ್ಯಪಾಲ

Public TV
By Public TV
1 hour ago
Rekha Gupta
Latest

ದೆಹಲಿ ಸಿಎಂ ಆಗಿ 100 ದಿನ ಪೂರೈಸಿದ ರೇಖಾ ಗುಪ್ತಾ – ಇನ್ನೂ ಸಿಗದ ಅಧಿಕೃತ ನಿವಾಸ!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?