Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಾಕ್‍ಡೌನ್ ಪೂರ್ಣಗೊಂಡ ತಕ್ಷಣ ಶಿಕ್ಷಕರ ಹಾಜರಿಗೆ ಸೂಚನೆ: ಸುರೇಶ್ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಲಾಕ್‍ಡೌನ್ ಪೂರ್ಣಗೊಂಡ ತಕ್ಷಣ ಶಿಕ್ಷಕರ ಹಾಜರಿಗೆ ಸೂಚನೆ: ಸುರೇಶ್ ಕುಮಾರ್

Bengaluru City

ಲಾಕ್‍ಡೌನ್ ಪೂರ್ಣಗೊಂಡ ತಕ್ಷಣ ಶಿಕ್ಷಕರ ಹಾಜರಿಗೆ ಸೂಚನೆ: ಸುರೇಶ್ ಕುಮಾರ್

Public TV
Last updated: June 14, 2021 4:45 pm
Public TV
Share
3 Min Read
Suresh Kumar Meeting 1
SHARE

ಬೆಂಗಳೂರು : ಶಾಲಾರಂಭದ ಕುರಿತು ಈಗಾಗಲೇ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಲಾಗಿದೆಯಾದರೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಲಾಕ್‍ಡೌನ್ ಜಾರಿಯಲ್ಲಿದ್ದು, ಶಿಕ್ಷಕರ ಚಲನವಲನಕ್ಕೆ ತೊಂದರೆಯಾಗಿರುವುದರಿಂದ ಶಿಕ್ಷಕರು ಲಾಕ್‍ಡೌನ್ ತೆರವಾದ ದಿನದಿಂದಲೇ ಶಾಲೆಗಳಿಗೆ ಭೌತಿಕವಾಗಿ ಹಾಜರಾಗಲು ಅವಕಾಶ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಂಗಳವಾರದಿಂದ ಶಾಲೆಗಳಿಗೆ ಶಿಕ್ಷಕರು ಹಾಜರಾಗಿ ಮಕ್ಕಳ ನೋಂದಣಿ ಪ್ರಾರಂಭಿಸಬೇಕಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಶಿಕ್ಷಕರ ಚಲನವಲನಕ್ಕೆ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಪೂರ್ಣಗೊಂಡ ನಂತರ ಶಿಕ್ಷಕರು ಶಾಲೆಗಳಿಗೆ ಹಾಜರಾಗುವಂತೆ ಸುತ್ತೋಲೆ ಹೊರಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

Suresh Kumar Meeting 2 medium

ಮೊದಲ ಪಿಯು ಮೌಲ್ಯಾಂಕನ ಅವಧಿ ವಿಸ್ತರಣೆ
ಹಲವು ಉಪನ್ಯಾಸಕ ಸಂಘಟನೆಗಳ ಕೋರಿಕೆಯ ಮೇರೆಗೆ ಮೊದಲ ಪಿ.ಯು.ಸಿ. ಮೌಲ್ಯಾಂಕನ ಪ್ರಕ್ರಿಯೆಯನ್ನು ಎಲ್ಲ ಜಿಲ್ಲೆಗಳ ಲಾಕ್‍ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ಸಮಯ ವಿಸ್ತರಿಸಿ ಆದೇಶವನ್ನು ಹೊರಡಿಸಲಾಗುತ್ತದೆ ಎಂದು ಸಹ ಸಚಿವರು ಹೇಳಿದ್ದಾರೆ. ಈ ಕುರಿತಂತೆ ಪದವಿಪೂರ್ವ ಶಿಕ್ಷಕರಿಗೆ ಸೂಚನೆ ನೀಡಲಾಗಿದ್ದು, ಸದ್ಯದಲ್ಲಿಯೇ ಅವರು ಕ್ರಮ ಜರುಗಿಸಲಿದ್ದಾರೆ ಎಂದು ಅವರು ಹೇಳಿದರು.

ಚೈಲ್ಡ್ ಪ್ರೊಫೈಲ್ ನಿಯಮಿತ ದಾಖಲೆ:
ಈ ಬಾರಿ ನಿಗದಿತ ಅವಧಿಯ ಮೌಲ್ಯಮಾಪನ ಪ್ರಕ್ರಿಯೆಯನ್ನು ಹೆಚ್ಚು ಸಮರ್ಥವಾಗಿ ಜಾರಿಯಲ್ಲಿಡುವ ಅವಶ್ಯಕತೆ ಇದೆ. ಪ್ರತಿ ಸೂಚಿತ ಅವಧಿಗೆ ವಿದ್ಯಾರ್ಥಿಗಳ ಚೈಲ್ಡ್ ಪ್ರೊಫೈಲ್ ಗಳನ್ನು ನಿಯಮಿತವಾಗಿ ದಾಖಲಿಸುವ, ಕಲಿಕಾ ಸಾಮಥ್ರ್ಯಗಳನ್ನು ಅಳೆಯುವ ಮಾನದಂಡಗಳಾಗಿ ರೂಪಿಸುವ ಸದೃಢ ವ್ಯವಸ್ಥೆಯನ್ನು ಜಾರಿಯಲ್ಲಿಡುವ ವ್ಯವಸ್ಥೆ ರೂಪಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಅತ್ಯವಶ್ಯಕವಾಗಿದ್ದು, ಇಂಥಹ ಸಂದರ್ಭದಲ್ಲಿ ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಮಂಡಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Suresh Kumar Meeting 3 medium

ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ
ಈ ಬಾರಿಯ ಎರಡು ದಿನಗಳ ಎಸ್.ಎಸ್.ಎಲ್.ಸಿ. ಪರೀಕ್ಷೆ ನಿರ್ವಹಣೆ ಕುರಿತಂತೆ ಜೂ. 28 ರಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದ ಸಭೆ ನಡೆಯಲಿದ್ದು, ಸಭೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಇಲಾಖೆಯ ಆಯುಕ್ತರನ್ನು ಸುರಕ್ಷತಾ ವಾತಾವರಣದಲ್ಲಿ ಪರೀಕ್ಷೆ ನಡೆಸುವ ಕ್ರಮಗಳ ಕುರಿತು ವಿಸ್ತ್ರತ ಚರ್ಚೆ ನಡೆಸಿ ಮಾರ್ಗದರ್ಶನ ನೀಡಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.

ಕೊಠಡಿ ಮೇಲ್ವಿಚಾರಕ ಶಿಕ್ಷಕರಿಗೆ ಕೋವಿಡ್ ಲಸಿಕೆ
ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಕೊಠಡಿ ಮೇಲ್ವಿಚಾರಕರುಗಳಿಗೆ ಕೋವಿಡ್ – 19ರ ಲಸಿಕೆಯನ್ನು ನೀಡುವ ಪ್ರಕ್ರಿಯೆಯನ್ನು ಪರೀಕ್ಷೆಗೆ ಮುನ್ನ ಪೂರ್ಣಗೊಳಿಸುವಲ್ಲಿ ಜಿಲ್ಲಾಡಳಿತದೊಂದಿಗೆ ಸಮನ್ವಯತೆ ಸಾಧಿಸಿ ಕ್ರಮ ವಹಿಸಬೇಕೆಂದೂ ಸೂಚಿಸಲಾಗಿದೆ ಎಂದೂ ಸಚಿವರು ಹೇಳಿದರು.

schools coronavirus 1590998858 1591973086 1602736488

ಶಿಕ್ಷಕರ ವರ್ಗಾವಣಾ ವೇಳಾಪಟ್ಟಿ ಶೀಘ್ರದಲ್ಲೇ ಪ್ರಕಟ
ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಯ ಕುರಿತಂತೆ ನಿಯಮಗಳ ಆಕ್ಷೇಪಣಾ ಸಲ್ಲಿಕೆ ಅವಧಿ ಪೂರ್ಣಗೊಳ್ಳುತಿರುವ ಹಿನ್ನೆಲೆಯಲ್ಲಿ ಕೂಡಲೇ ಸರ್ಕಾರದ ಅಧಿಸೂಚನೆಯನ್ನು ಹೊರಡಿಸಿ ಸಾಧ್ಯವಾದಷ್ಟು ಶೀಘ್ರವೇ ವರ್ಗಾವಣಾ ಪ್ರಕ್ರಿಯೆ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು. ಯಾವುದೇ ಅಡೆತಡೆಗಳು ಬಾರದ ರೀತಿಯಲ್ಲಿ ತಂತ್ರಜ್ಞಾನಾಧಾರಿತ ವರ್ಗಾವಣಾ ಪ್ರಕ್ರಿಯೆ ನಡೆಸಬೇಕೆಂದು ಸೂಚಿಸಲಾಗಿದೆಯೆಂದರು.

ಪ್ಯಾಕೇಜ್ ಪರಿಹಾರ ನೇರ ಶಿಕ್ಷಕರ ಖಾತೆಗೆ
ಖಾಸಗಿ ಖಾಸಗಿ ಶಾಲಾ ಶಿಕ್ಷಕರಿಗೆ ಮುಖ್ಯಮಂತ್ರಿಗಳು ಘೋಷಿಸಿರುವ ಪ್ಯಾಕೇಜ್ ಪರಿಹಾರವನ್ನು ಕ್ಲಪ್ತ ಸಮಯದಲ್ಲಿ ಫಲಾನುಭವಿಗಳಿಗೆ ನೇರವಾಗಿ ವಿತರಿಸುವ ಪ್ರಕ್ರಿಯೆಯನ್ನು ಕ್ಷಿಪ್ರಗೊಳಿಸಬೇಕೆಂದೂ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶಿಕ್ಷಕರ, ಶಿಕ್ಷಕೇತರರ ಹಾಗೂ ಅತಿಥಿ ಶಿಕ್ಷಕರ ಬ್ಯಾಂಕ್‍ಖಾತೆಗಳ ವಿವರಗಳನ್ನು ಶೀಘ್ರ ಸಂಗ್ರಹಿಸಿ ಅನುದಾನವನ್ನು ನೇರ ಶಿಕ್ಷಕರ ಖಾತೆಗಳಿಗೆ ವರ್ಗಾಯಿಸಬೇಕು. ಅತ್ಯಂತ ಸಮರ್ಪಕವಾಗಿ ಈ ಪ್ರಕ್ರಿಯೆ ನಿರ್ವಹಣೆಯಾಗಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

dvg schools shoe 1 medium

ಸಭೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನಕಾರ್ಯದರ್ಶಿಎಸ್.ಆರ್.ಉಮಾಶಂಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್, ಪದವಿಪೂರ್ವ ಶಿಕ್ಷಣ ನಿರ್ದೇಶಕಿ ಸ್ನೇಹಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Corona VirusDepartment of EducationLockdownPublic TVsuresh kumarteachersಕೊರೊನಾ ವೈರಸ್ಪಬ್ಲಿಕ್ ಟಿವಿಲಾಕ್‍ಡೌನ್ಶಿಕ್ಷಕರುಶಿಕ್ಷಣ ಇಲಾಖೆಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories
Koragajja Kannada Film 1
ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್
Cinema Latest TV Shows
Ranya Rao 1
ಕಾಫಿಪೋಸಾ ಆದೇಶ ಪ್ರಶ್ನಿಸಿದ್ದ ರನ್ಯಾಗೆ ಮತ್ತೆ ಶಾಕ್ – ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru City Cinema Court Districts Karnataka Latest Top Stories
Vijay Deverakonda
ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಅಪ್‌ಡೇಟ್‌
Cinema Latest South cinema

You Might Also Like

CET Exam
Bengaluru City

ಸಿಸಿಟಿವಿ ಕಣ್ಗಾವಲಿನಲ್ಲಿ ನೇಮಕಾತಿ ಪರೀಕ್ಷೆ: ಕೆಇಎ

Public TV
By Public TV
27 minutes ago
SUPREME COURT
Court

ಕೇಂದ್ರದ ಪೂರ್ವಾನುಮತಿ ಇಲ್ಲದೆ ಅರಣ್ಯಭೂಮಿ ಗುತ್ತಿಗೆ ನೀಡಲು ಸಾಧ್ಯವಿಲ್ಲ: ಸುಪ್ರೀಂ

Public TV
By Public TV
40 minutes ago
GBA
Bengaluru City

ಜಿಬಿಎ 5 ಪಾಲಿಕೆ ಚುನಾವಣೆ – ಸರ್ಕಾರದಿಂದ ಮೀಸಲಾತಿ ಮಾರ್ಗಸೂಚಿ ಪ್ರಕಟ

Public TV
By Public TV
43 minutes ago
kea
Bengaluru City

ಪಿಜಿ/ಯುಜಿ ಆಯುಷ್ ಫಲಿತಾಂಶ ಪ್ರಕಟ: ಕೆಇಎ

Public TV
By Public TV
44 minutes ago
Raichuru Fire Accident
Districts

ಬಣವೆಗೆ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂ. ಮೌಲ್ಯದ ಹತ್ತಿ ಬೆಳೆ, ಮೇವು ಭಸ್ಮ

Public TV
By Public TV
1 hour ago
Hardik Pandya 1 1
Cricket

ಭಾರತದ ಪರ ಎರಡನೇ ವೇಗದ ಫಿಫ್ಟಿ ಹೊಡೆದ ಪಾಂಡ್ಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?