Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್‍ಗಳನ್ನು ಘೋಷಿಸುವಂತೆ ಕೇಂದ್ರ ರಕ್ಷಣಾ ಸಚಿವರಿಗೆ ಪತ್ರ: ಜಗದೀಶ್ ಶೆಟ್ಟರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್‍ಗಳನ್ನು ಘೋಷಿಸುವಂತೆ ಕೇಂದ್ರ ರಕ್ಷಣಾ ಸಚಿವರಿಗೆ ಪತ್ರ: ಜಗದೀಶ್ ಶೆಟ್ಟರ್

Bengaluru City

ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್‍ಗಳನ್ನು ಘೋಷಿಸುವಂತೆ ಕೇಂದ್ರ ರಕ್ಷಣಾ ಸಚಿವರಿಗೆ ಪತ್ರ: ಜಗದೀಶ್ ಶೆಟ್ಟರ್

Public TV
Last updated: June 17, 2021 4:50 pm
Public TV
Share
3 Min Read
shettar 2
SHARE

ಬೆಂಗಳೂರು: ದೇಶದ ಏರೋಸ್ಪೇಸ್ ಹಾಗೂ ರಕ್ಷಣಾ ಉತ್ಪನ್ನಗಳ ಕ್ಷೇತ್ರದಲ್ಲಿ ಮೂಂಚೂಣಿ ಸ್ಥಾನದಲ್ಲಿರುವ ಕರ್ನಾಟಕ ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್ ಗಳನ್ನು ಘೋಷಿಸುವ ಮೂಲಕ ರಾಜ್ಯದ ಏರೋಸ್ಪೇಸ್ ಹಾಗೂ ರಕ್ಷಣಾ ಉತ್ಪಾದನಾ ಘಟಕಗಳಿಗೆ ಉತ್ತೇಜನ ನೀಡುವಂತೆ ಕೇಂದ್ರ ರಕ್ಷಣಾ ಖಾತೆ ಸಚಿವರಾದ ರಾಜನಾಥ್ ಸಿಂಗ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್ ರೌಂಡ್ ಟೇಬಲ್ ವೆಬಿನಾರ್ ನಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ದೇಶದಲ್ಲಿ ರಕ್ಷಣಾ ಹಾಗೂ ಏರೋಸ್ಪೇಸ್ ಗೆ ಸಂಬಂಧಿಸಿದಂತಹ ಕ್ಷೇತ್ರಗಳಿಗೆ ಹಲವಾರು ಯೋಜನೆಗಳ ಮೂಲಕ ಪ್ರೋತ್ಸಾಹ ನೀಡುತ್ತಿದೆ. ರಕ್ಷಣಾ ಉತ್ಪಾದನಾ ಕಾರಿಡಾರ್ ಯೋಜನೆಯ ಮೂಲಕ ಉತ್ತರ ಪ್ರದೇಶ ಹಾಗೂ ತಮಿಳುನಾಡುಗಳಲ್ಲಿ ಕ್ರಮವಾಗಿ 6 ಮತ್ತು 5 ನೋಡ್ ಗಳನ್ನು ಉತ್ತೇಜಿಸುವ ಕಾರ್ಯಕ್ಕೆ ಮುಂದಾಗಿದೆ. ಹೊಸ ರಕ್ಷಣಾ ಕಾರಿಡಾರ್ ಗಳನ್ನು ನಿರ್ಮಿಸುವುದರ ಜೊತೆಯಲ್ಲೇ, ಈಗಾಗಲೇ ಅಸ್ತಿತ್ವದಲ್ಲಿರುವ ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನಾ ಪರಿಸರವನ್ನು ಹೊಂದಿರುವ ಪ್ರದೇಶಗಳಿಗೂ ಉತ್ತೇಜನ ನೀಡಬೇಕು ಎಂಬುದು ನಮ್ಮ ಮನವಿಯಾಗಿದೆ.

ಕರ್ನಾಟಕ ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್ ನಿರ್ಮಾಣಕ್ಕೆ ಎಲ್ಲಾ ರೀತಿಯ ಅನುಕೂಲವಿದ್ದು ಉತ್ತಮ ಪರಿಸರವಿದೆ. ರಾಜ್ಯದಲ್ಲಿ ಅತ್ಯುತ್ತಮ ಸಂಶೋಧನೆ ಮತ್ತು ಅಭಿವೃದ್ದಿಯ ಕೇಂದ್ರಗಳು ಇವೆ. ಅಲ್ಲದೆ, ಹೆಚ್‍ಎಎಲ್, ಬಿಇಎಲ್ ನಂತಹ ಸಾರ್ವಜನಿಕ ಸ್ವಾಮ್ಯದ ಕಂಪನಿಗಳು ಮತ್ತು ಡಿಆರ್‍ಡಿಓದ ಪ್ರಯೋಗಾಲಯಗಳಾದ ಡಿಏಆರ್‍ಇ ಮತ್ತು ಎಡಿಇ ಗಳಿವೆ. ಏರ್ ಬಸ್, ಬೋಯಿಂಗ್, ಜಿಈ ಏವಿಯೇಷನ್ ನಂತಹ ಪ್ರಮುಖ ಕಂಪನಿಗಳು ರಾಜ್ಯದಲ್ಲಿವೆ. ಇದು ನಮ್ಮ ರಾಜ್ಯವನ್ನು ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವಂತೆ ಮಾಡಿದೆ ಎಂದು ಹೇಳಿದರು.

shettar 1 medium

ದೇಶದ ಶೇಕಡಾ 25 ಕ್ಕೂ ಹೆಚ್ಚು ಏರ್ ಕ್ರಾಫ್ಟ್ ಮತ್ತು ಸ್ಪೇಸ್ ಕ್ರಾಫ್ಟ್ ಕೈಗಾರಿಕೆಗಳು ರಾಜ್ಯದಲ್ಲಿವೆ. ರಕ್ಷಣಾ ಕ್ಷೇತ್ರಕ್ಕೆ ಅಗತ್ಯವಿರುವ ಶೇಕಡಾ 67 ರಷ್ಟು ಏರ್ ಕ್ರಾಫ್ಟ್ ಮತ್ತು ಹೆಲಿಕ್ಯಾಪ್ಟರ್ ಉತ್ಪಾದನೆ ರಾಜ್ಯದಲ್ಲಿ ನಡೆಯುತ್ತದೆ. ಅಲ್ಲದೆ, ಎಫ್‍ಡಿಐ ಇಂಟಲಿಜೆನ್ಸ್ ನ ವಿಶ್ವ ಏರೋಸ್ಪೇಸ್ ನಗರಗಳ ಸೂಚ್ಯಾಂಕದ ಮೊದಲ 10 ನೇ ಸ್ಥಾನದಲ್ಲಿ ಬೆಂಗಳೂರು ನಗರ ಸ್ಥಾನ ಪಡೆದುಕೊಂಡಿದೆ. ಹಾಗೆಯೇ, ಈ ಕ್ಷೇತ್ರಕ್ಕೆ ಬಿಡಿಭಾಗಗಳನ್ನು ಪೂರೈಸುವ 2000 ಕ್ಕೂ ಹೆಚ್ಚು ಎಂಎಸ್‍ಎಂಇ ಗಳಿವೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ದೇಶದಲ್ಲೇ ಮೊದಲು ಏರೋಸ್ಪೇಸ್ ಹಾಗೂ ಡಿಫೆನ್ಸ್ ಪಾಲಿಸಿಯನ್ನು ಜಾರಿಗೊಳಿಸಿದ ರಾಜ್ಯ ನಮ್ಮದಾಗಿದೆ ಎಂದರು. ಬೆಂಗಳೂರು, ಮೈಸೂರು, ತುಮಕೂರು ಮತ್ತು ಚಾಮರಾಜನಗರ ಈ ನಾಲ್ಕೂ ನೋಡ್/ಹಬ್ ಗಳು ಏರೋಸ್ಪೇಸ್ ಮತ್ತು ಡಿಫೆನ್ಸ್ ಎಕೋಸಿಸ್ಟಮ್ ಗೆ ಈಗಾಗಲೇ ಸಿದ್ಧವಿರುವ ಮೂಲಭೂತ ಸೌಕರ್ಯಗಳನ್ನು ಹೊಂದಿವೆ. ಮುಂದಿನ ದಿನಗಳಲ್ಲೂ ಕರ್ನಾಟಕ ರಾಜ್ಯ ದೇಶದ ಏರೋಸ್ಪೇಸ್ ಮತ್ತು ಡೀಫೆನ್ಸ್ ಉತ್ಪಾದನಾ ಕ್ಷೇತ್ರದಲ್ಲಿ ಸ್ಥಳೀಯವಾಗಿ ಉತ್ಪಾದನೆಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಲಿದೆ ಎಂದರು.

ರಾಜ್ಯದಲ್ಲಿ ಘೋಷಣೆ ಆಗುವ ರಕ್ಷಣಾ ತಂತ್ರಜ್ಞಾನ ಹಬ್, ದೇಶದ ಡಿಫೆನ್ಸ್ ಆಫ್‍ಸೆಟ್ ಪಾಲಿಸಿ ಅಡಿಯಲ್ಲಿ ಡಿಫೆನ್ಸ್ ಕಾರಿಡಾರ್ ನ ವರ್ಧಿತ ಗುಣಕಗಳು (enhanced multipliers) ಹಾಗೂ ರಕ್ಷಣಾ ವೇದಿಕೆ ಮತ್ತು ಉತ್ಪನ್ನಗಳ ಪರೀಕ್ಷೆ ಮತ್ತು ಪ್ರಮಾಣ ಪತ್ರ ಮತ್ತಿತರ ವಿಶೇಷ ಸೌಲಭ್ಯಗಳಿಂದ ರಾಜ್ಯದಲ್ಲಿ ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರದ ಬೆಳವಣಿಗೆಗೆ ಮತ್ತಷ್ಟು ಪುಷ್ಟಿ ನೀಡುತ್ತದೆ. ಅಲ್ಲದೆ, ಆತ್ಮನಿರ್ಭರ ಭಾರತ ಗುರಿಗೆ ಮತ್ತಷ್ಟು ಬಲ ತುಂಬಲಿದೆ. ಈ ಹೊಸ ಉಪಕ್ರಮಗಳಿಂದ ನಮ್ಮ ರಾಜ್ಯದ ವೈಜ್ಞಾನಿಕ ನಾಯಕತ್ವ ಹಾಗೂ ಈ ಕ್ಷೇತ್ರಕ್ಕೆ ನಮ್ಮ ರಾಜ್ಯದಿಂದ ನೀಡಿರುವ ಸಂಶೋಧನೆ ಮತ್ತು ಅಭಿವೃದ್ದಿಯ ಕೊಡುಗೆಗೆ ಸ್ವೀಕೃತಿ ನೀಡಿದಂತಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದೇವೆ ಎಂದು ಹೇಳಿದರು.

ಕೈಗಾರಿಕಾ ಅಭಿವೃದ್ದಿ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣ ಮಾತನಾಡಿ, ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2021-2026 ರ ಕರಡು ಅಂಶಗಳನ್ನು ವಿವರಿಸಿದರು. ರಾಜ್ಯವನ್ನು ಏರೋಸ್ಪೇಸ್ ಮತ್ತು ಡಿಫೆನ್ಸ್ ಕೈಗಾರಿಕಾ ಕ್ಷೇತ್ರದ ಪ್ರಮುಖ ಬಂಡವಾಳ ಹೂಡಿಕೆಯ ರಾಜ್ಯವನ್ನಾಗಿಸುವುದು ಪ್ರಮುಖ ಗುರಿಯಾಗಿದೆ. ರಾಜ್ಯದಲ್ಲಿ ರಕ್ಷಣಾ ಹಬ್ ಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು. ಅಲ್ಲದೆ, ಬಂಡವಾಳ ಹೂಡಿಕೆಗೆ ಆಕರ್ಷಕವಾದ ಸೌಲಭ್ಯಗಳನ್ನು ಈ ನೀತಿ ಒಳಗೊಂಡಿರಲಿದೆ ಎಂದು ಹೇಳಿದರು. ಇದನ್ನೂ ಓದಿ: ತುರ್ತು ಅಂಬುಲೆನ್ಸ್ ಸೇವೆಗೆ ಸಚಿವ ಜಗದೀಶ್ ಶೆಟ್ಟರ್ ಚಾಲನೆ

ವೆಬಿನಾರ್ ನಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ರಾಜಕುಮಾರ್ ಖತ್ರಿ, ಕೈಗಾರಿಕಾ ಇಲಾಖೆಯ ತಾಂತ್ರಿಕ ನಿರ್ದೇಶಕರಾದ ರಮೇಶ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕರಾದ ರೇವಣ್ಣ ಗೌಡ ಸೇರಿದಂತೆ ಪ್ರಮುಖ ಕೈಗಾರಿಕೋದ್ಯಮಿಗಳು ಪಾಲ್ಗೊಂಡಿದ್ದರು. ಇದನ್ನೂ ಓದಿ: ರಾಯಚೂರಿನಲ್ಲಿ ಬೃಹತ್ ಔಷಧ ಉತ್ಪಾದನ ಪಾರ್ಕ್: ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್

TAGGED:AerospaceDefense Round Table WebinarJagadish ShetterPublic TVrajnath singhಏರೋಸ್ಪೇಸ್ಜಗದೀಶ್ ಶೆಟ್ಟರ್ಡಿಫೆನ್ಸ್ ರೌಂಡ್ ಟೇಬಲ್ ವೆಬಿನಾರ್ಪಬ್ಲಿಕ್ ಟಿವಿರಾಜನಾಥ್ ಸಿಂಗ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
4 minutes ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
11 minutes ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
12 minutes ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
13 minutes ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
22 minutes ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?